AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಚಿತ್ರೋತ್ಸವಕ್ಕೆ ಸರ್ಕಾರದ ದುಂದು ವೆಚ್ಚ! ಸ್ಯಾಂಡಲ್​ವುಡ್​ ಮಂದಿ ಏನ್​ ಹೇಳ್ತಾರೆ?

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ವಿರುದ್ದ ಕೆಲವು ಆಕ್ಷೇಪಗಳು ಕೇಳಿಬರುತ್ತಿವೆ. ಚಿತ್ರೋತ್ಸವದ ಹೆಸರಲ್ಲಿ ರಾಜ್ಯ ಸರ್ಕಾರ ಮಾಡುವ ದುಂದು ವೆಚ್ಚದ ಬಗ್ಗೆಯೂ ಈಗ ಚರ್ಚೆ ಆರಂಭ ಆಗಿದೆ.

ಬೆಂಗಳೂರು ಚಿತ್ರೋತ್ಸವಕ್ಕೆ ಸರ್ಕಾರದ ದುಂದು ವೆಚ್ಚ! ಸ್ಯಾಂಡಲ್​ವುಡ್​ ಮಂದಿ ಏನ್​ ಹೇಳ್ತಾರೆ?
ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ
ಮದನ್​ ಕುಮಾರ್​
|

Updated on: Mar 16, 2021 | 1:44 PM

Share

13ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ಅನೇಕ ವಿಘ್ನಗಳು ಎದುರಾಗುತ್ತಿವೆ. ಕೊರೊನಾ ವೈರಸ್​ ಕಾರಣ ನೀಡಿ ಚಿತ್ರೋತ್ಸವದ ದಿನಾಂಕವನ್ನು ಮುಂದೂಡಲಾಗಿದೆ. ಜೊತೆಗೆ ಸಿನಿಮೋತ್ಸವದ ದುಂದುವೆಚ್ಚಗಳ ಬಗ್ಗೆ ವಿಧಾನ ಪರಿಷತ್​ ಕಲಾಪದಲ್ಲೂ ಪ್ರಶ್ನೆ ಎದ್ದಿದೆ.

‘ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ದುಂದುವೆಚ್ಚ ಮಾಡಲಾಗುತ್ತಿದೆ. ಹೊರಗುತ್ತಿಗೆ ನೀಡುವುದರಿಂದ ಅನಗತ್ಯವಾಗಿ ವೆಚ್ಚ ಮಾಡಲಾಗುತ್ತದೆ. ಈ ಅದ್ಧೂರಿ ಕಾರ್ಯಕ್ರಮಕ್ಕೆ ಕೋಟ್ಯಂತರ ರೂ. ಸಂಭಾವನೆ ನೀಡಿ ಬಾಲಿವುಡ್ ಕಲಾವಿದರನ್ನು ಕರೆಸಲಾಗುತ್ತದೆ. ಈ ರೀತಿ ಕಲಾವಿದರಿಗೆ ಕೋಟಿಗಟ್ಟಲೆ ನೀಡುವ ಅಗತ್ಯವೇನಿದೆ? ವಿಧಾನಸೌಧದಲ್ಲಿ ಸರಳವಾಗಿ ಕಾರ್ಯಕ್ರಮ ಆಯೋಜಿಸಿ’ ಎಂದು ವಿಧಾನ ಪರಿಷತ್​ ಸದಸ್ಯ ಮೋಹನ್‌ ಕುಮಾರ್ ಕೊಂಡಜ್ಜಿ ಹೇಳಿದ್ದಾರೆ.

ಮೋಹನ್‌ ಕುಮಾರ್ ಪ್ರಶ್ನೆಗೆ ಸಚಿವ ಜಗದೀಶ್ ಶೆಟ್ಟರ್ ಉತ್ತರ ನೀಡಿದ್ದಾರೆ. ಕೆಲವು ಕಾರ್ಯಕ್ರಮಗಳನ್ನು ಅವುಗಳ ಗುಣಮಟ್ಟಕ್ಕೆ ತಕ್ಕಂತೆ ಮಾಡಬೇಕಾಗುತ್ತದೆ. ಆದರೂ ಸದಸ್ಯರು ಎತ್ತಿದ ಈ ಪ್ರಶ್ನೆ ಬಗ್ಗೆ ಸರ್ಕಾರ ಪರಿಶೀಲಿಸುತ್ತದೆ’ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈ ಚರ್ಚೆ ಬಗ್ಗೆ ಸ್ಯಾಂಡಲ್​ವುಡ್​ನ ಸೆಲೆಬ್ರಿಟಿಗಳು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ದುಂದುವೆಚ್ಚ ಮಾಡಬಾರದು ಎಂಬ ಮಾತನ್ನು ನಿರ್ದೇಶಕ ಮಂಸೋರೆ ಒತ್ತಿ ಹೇಳಿದ್ದಾರೆ. ‘ಮೋಹನ್​ಕುಮಾರ್​ ಕೊಂಡಜ್ಜಿ ಎತ್ತಿರುವ ಪ್ರಶ್ನೆ ಸರಿ. ಆದರೆ ತುಂಬ ಹಿಂದೆಯೇ ಈ ಮಾತನ್ನು ಅವರು ಹೇಳಬೇಕಿತ್ತು. ಜಗದೀಶ್​ ಶೆಟ್ಟರ್​ ಹೇಳಿರುವಂತೆ ಕಾರ್ಯಕ್ರಮದ ಗುಣಮಟ್ಟಕ್ಕೆ ಬೆಲೆ ಕೊಡುವುದೇ ಹೌದಾದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿನಿಮಾ ಕ್ಷೇತ್ರಕ್ಕೆ ಕೊಡುಗೆ ನೀಡಿದ ನಿರ್ದೇಶಕರನ್ನು, ತಂತ್ರಜ್ಱರನ್ನು ಬೆಂಗಳೂರು ಸಿನಿಮೋತ್ಸವಕ್ಕೆ ಕರೆಸಲಿ. ಬರೀ ಬಾಲಿವುಡ್​ ಸೆಲೆಬ್ರಿಟಿಗಳನ್ನು ಕರೆಸಬೇಕಿಲ್ಲ’ ಎಂದು ಮಂಸೋರೆ ಹೇಳಿದ್ದಾರೆ.

‘ದುಂದುವೆಚ್ಚದ ವಿಚಾರ ಮಾತ್ರವಲ್ಲದೆ ಚಿತ್ರೋತ್ಸವಕ್ಕೆ ಸಂಬಂಧಪಟ್ಟಂತೆ ಅಗತ್ಯವಾಗಿ ಬಗೆಹರಿಯಬೇಕಾದ ಸಮಸ್ಯೆಗಳು ಸಾಕಷ್ಟು ಇವೆ. ಸಿನಿಮಾಗಳ ಆಯ್ಕೆಯಲ್ಲಿ ಪಾರದರ್ಶಕತೆ ಬೇಕು. ಕನ್ನಡದ ‘ತಲೆದಂಡ’ ಚಿತ್ರಕ್ಕೆ ಈ ಬಾರಿ ಅವಕಾಶ ನೀಡಿಲ್ಲ. ಯಾಕೆ ಎಂಬುದನ್ನು ಆಯೋಜಕರು ಮೊದಲು ಸ್ಪಷ್ಟಪಡಿಸಬೇಕು. ಕಳೆದ ವರ್ಷವೂ ಕೆಲವು ಸಿನಿಮಾಗಳಿಗೆ ಹೀಗೆಯೇ ಆಗಿತ್ತು’ ಎಂದಿದ್ದಾರೆ ಮಂಸೋರೆ.

ಇದನ್ನೂ ಓದಿ: ಹೆಚ್ಚಿದ ಕೊರೊನಾ ಪ್ರಕರಣ; ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮುಂದೂಡಿಕೆ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ