AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಚಿತ್ರೋತ್ಸವಕ್ಕೆ ಸರ್ಕಾರದ ದುಂದು ವೆಚ್ಚ! ಸ್ಯಾಂಡಲ್​ವುಡ್​ ಮಂದಿ ಏನ್​ ಹೇಳ್ತಾರೆ?

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ವಿರುದ್ದ ಕೆಲವು ಆಕ್ಷೇಪಗಳು ಕೇಳಿಬರುತ್ತಿವೆ. ಚಿತ್ರೋತ್ಸವದ ಹೆಸರಲ್ಲಿ ರಾಜ್ಯ ಸರ್ಕಾರ ಮಾಡುವ ದುಂದು ವೆಚ್ಚದ ಬಗ್ಗೆಯೂ ಈಗ ಚರ್ಚೆ ಆರಂಭ ಆಗಿದೆ.

ಬೆಂಗಳೂರು ಚಿತ್ರೋತ್ಸವಕ್ಕೆ ಸರ್ಕಾರದ ದುಂದು ವೆಚ್ಚ! ಸ್ಯಾಂಡಲ್​ವುಡ್​ ಮಂದಿ ಏನ್​ ಹೇಳ್ತಾರೆ?
ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ
ಮದನ್​ ಕುಮಾರ್​
|

Updated on: Mar 16, 2021 | 1:44 PM

Share

13ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ಅನೇಕ ವಿಘ್ನಗಳು ಎದುರಾಗುತ್ತಿವೆ. ಕೊರೊನಾ ವೈರಸ್​ ಕಾರಣ ನೀಡಿ ಚಿತ್ರೋತ್ಸವದ ದಿನಾಂಕವನ್ನು ಮುಂದೂಡಲಾಗಿದೆ. ಜೊತೆಗೆ ಸಿನಿಮೋತ್ಸವದ ದುಂದುವೆಚ್ಚಗಳ ಬಗ್ಗೆ ವಿಧಾನ ಪರಿಷತ್​ ಕಲಾಪದಲ್ಲೂ ಪ್ರಶ್ನೆ ಎದ್ದಿದೆ.

‘ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ದುಂದುವೆಚ್ಚ ಮಾಡಲಾಗುತ್ತಿದೆ. ಹೊರಗುತ್ತಿಗೆ ನೀಡುವುದರಿಂದ ಅನಗತ್ಯವಾಗಿ ವೆಚ್ಚ ಮಾಡಲಾಗುತ್ತದೆ. ಈ ಅದ್ಧೂರಿ ಕಾರ್ಯಕ್ರಮಕ್ಕೆ ಕೋಟ್ಯಂತರ ರೂ. ಸಂಭಾವನೆ ನೀಡಿ ಬಾಲಿವುಡ್ ಕಲಾವಿದರನ್ನು ಕರೆಸಲಾಗುತ್ತದೆ. ಈ ರೀತಿ ಕಲಾವಿದರಿಗೆ ಕೋಟಿಗಟ್ಟಲೆ ನೀಡುವ ಅಗತ್ಯವೇನಿದೆ? ವಿಧಾನಸೌಧದಲ್ಲಿ ಸರಳವಾಗಿ ಕಾರ್ಯಕ್ರಮ ಆಯೋಜಿಸಿ’ ಎಂದು ವಿಧಾನ ಪರಿಷತ್​ ಸದಸ್ಯ ಮೋಹನ್‌ ಕುಮಾರ್ ಕೊಂಡಜ್ಜಿ ಹೇಳಿದ್ದಾರೆ.

ಮೋಹನ್‌ ಕುಮಾರ್ ಪ್ರಶ್ನೆಗೆ ಸಚಿವ ಜಗದೀಶ್ ಶೆಟ್ಟರ್ ಉತ್ತರ ನೀಡಿದ್ದಾರೆ. ಕೆಲವು ಕಾರ್ಯಕ್ರಮಗಳನ್ನು ಅವುಗಳ ಗುಣಮಟ್ಟಕ್ಕೆ ತಕ್ಕಂತೆ ಮಾಡಬೇಕಾಗುತ್ತದೆ. ಆದರೂ ಸದಸ್ಯರು ಎತ್ತಿದ ಈ ಪ್ರಶ್ನೆ ಬಗ್ಗೆ ಸರ್ಕಾರ ಪರಿಶೀಲಿಸುತ್ತದೆ’ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈ ಚರ್ಚೆ ಬಗ್ಗೆ ಸ್ಯಾಂಡಲ್​ವುಡ್​ನ ಸೆಲೆಬ್ರಿಟಿಗಳು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ದುಂದುವೆಚ್ಚ ಮಾಡಬಾರದು ಎಂಬ ಮಾತನ್ನು ನಿರ್ದೇಶಕ ಮಂಸೋರೆ ಒತ್ತಿ ಹೇಳಿದ್ದಾರೆ. ‘ಮೋಹನ್​ಕುಮಾರ್​ ಕೊಂಡಜ್ಜಿ ಎತ್ತಿರುವ ಪ್ರಶ್ನೆ ಸರಿ. ಆದರೆ ತುಂಬ ಹಿಂದೆಯೇ ಈ ಮಾತನ್ನು ಅವರು ಹೇಳಬೇಕಿತ್ತು. ಜಗದೀಶ್​ ಶೆಟ್ಟರ್​ ಹೇಳಿರುವಂತೆ ಕಾರ್ಯಕ್ರಮದ ಗುಣಮಟ್ಟಕ್ಕೆ ಬೆಲೆ ಕೊಡುವುದೇ ಹೌದಾದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿನಿಮಾ ಕ್ಷೇತ್ರಕ್ಕೆ ಕೊಡುಗೆ ನೀಡಿದ ನಿರ್ದೇಶಕರನ್ನು, ತಂತ್ರಜ್ಱರನ್ನು ಬೆಂಗಳೂರು ಸಿನಿಮೋತ್ಸವಕ್ಕೆ ಕರೆಸಲಿ. ಬರೀ ಬಾಲಿವುಡ್​ ಸೆಲೆಬ್ರಿಟಿಗಳನ್ನು ಕರೆಸಬೇಕಿಲ್ಲ’ ಎಂದು ಮಂಸೋರೆ ಹೇಳಿದ್ದಾರೆ.

‘ದುಂದುವೆಚ್ಚದ ವಿಚಾರ ಮಾತ್ರವಲ್ಲದೆ ಚಿತ್ರೋತ್ಸವಕ್ಕೆ ಸಂಬಂಧಪಟ್ಟಂತೆ ಅಗತ್ಯವಾಗಿ ಬಗೆಹರಿಯಬೇಕಾದ ಸಮಸ್ಯೆಗಳು ಸಾಕಷ್ಟು ಇವೆ. ಸಿನಿಮಾಗಳ ಆಯ್ಕೆಯಲ್ಲಿ ಪಾರದರ್ಶಕತೆ ಬೇಕು. ಕನ್ನಡದ ‘ತಲೆದಂಡ’ ಚಿತ್ರಕ್ಕೆ ಈ ಬಾರಿ ಅವಕಾಶ ನೀಡಿಲ್ಲ. ಯಾಕೆ ಎಂಬುದನ್ನು ಆಯೋಜಕರು ಮೊದಲು ಸ್ಪಷ್ಟಪಡಿಸಬೇಕು. ಕಳೆದ ವರ್ಷವೂ ಕೆಲವು ಸಿನಿಮಾಗಳಿಗೆ ಹೀಗೆಯೇ ಆಗಿತ್ತು’ ಎಂದಿದ್ದಾರೆ ಮಂಸೋರೆ.

ಇದನ್ನೂ ಓದಿ: ಹೆಚ್ಚಿದ ಕೊರೊನಾ ಪ್ರಕರಣ; ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮುಂದೂಡಿಕೆ

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!