AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿರೋ ದರ್ಶನ್​ಗೆ ಒಂದು ನ್ಯಾಯ ಇತರ ಬಂಧಿಗಳಿಗೊಂದು ನ್ಯಾಯ?

ವಾರದಲ್ಲಿ ಎರಡು ದಿನ ಜೈಲು ಬಂಧಿ ತನ್ನ ಸ್ನೇಹಿತರು ಹಾಗೂ ಕುಟುಂಬಸ್ಥರನ್ನ ಭೇಟಿ ಮಾಡಬಹುದು. ಅಲ್ಲದೆ ವಿಡೀಯೋ ಕಾನ್ಪರೆನ್ಸ್ ಮುಖಾಂತರವೂ ಜೈಲು ಬಂಧಿಗಳು ವಾರದಲ್ಲಿ ಎರಡು ಬಾರಿ ಕುಟುಂಬಸ್ಥರು ಅಥವಾ ಸ್ನೇಹಿತರ ಜೊತೆ ಮಾತನಾಡಲು ಅವಕಾಶ ಇದೆ. ಆದರೆ ದರ್ಶನ್ ವಿಚಾರದಲ್ಲಿ ಇದ್ಯಾವುದೂ ಲೆಕ್ಕಕ್ಕೇ ಇಲ್ಲ.

ಜೈಲಿನಲ್ಲಿರೋ ದರ್ಶನ್​ಗೆ ಒಂದು ನ್ಯಾಯ ಇತರ ಬಂಧಿಗಳಿಗೊಂದು ನ್ಯಾಯ?
ದರ್ಶನ್
Shivaprasad B
| Edited By: |

Updated on: Jul 03, 2024 | 11:40 AM

Share

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಅವರ ಗೆಳತಿ ಪವಿತ್ರಾ ಗೌಡ ಅವರು ಎ1 ಆರೋಪಿ ಆದರೆ, ದರ್ಶನ್ ಎ2 ಆರೋಪಿ ಆಗಿದ್ದಾರೆ. ಇದರ ಜೊತೆಗೆ ಹಲವರು ಈ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ದರ್ಶನ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈ ಮಧ್ಯೆ ದರ್ಶನ್ ಅವರಿಗಾಗಿ ಜೈಲಿನ ನಿಯಮಗಳನ್ನು ತೂರಲಾಯಿತೇ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಕಾರಾಗೃಹ ಕಾಯ್ದೆ 1894 ಸೆಕ್ಷನ್ 56 ಅಡಿಯಲ್ಲಿ ಓರ್ವ ಜೈಲು ಬಂಧಿಯು ವಾರದಲ್ಲಿ ಒಮ್ಮೆ ಸ್ನೇಹಿತರು ಹಾಗೂ ಕುಟುಂಬಸ್ಥರನ್ನ ಭೇಟಿ ಮಾಡಬಹುದು. ಕಾರಾಗೃಹ ಕಾಯ್ದೆ 1894 ಸೆಕ್ಷನ್ 57 ಅಡಿಯಲ್ಲಿ ಜೈಲಿನ ಸೂಪರಿಂಡೆಂಟ್ ವಿಶೇಷ ಹಾಗೂ ಅವಶ್ಯಕ ಸಂದರ್ಭದಲ್ಲಿ ಹೆಚ್ಚಿನ ಬಾರಿ ಭೇಟಿಗೆ ಅವಕಾಶ ನೀಡಬಹುದು. ಕಾರಾಗೃಹ ಕಾಯ್ದೆ 1894 ಸೆಕ್ಷನ್ 58 ಅಡಿಯಲ್ಲಿ ಜೈಲು ಬಂಧಿ ಪತ್ರ ಬರೆಯಲು, ಪತ್ರ ಸ್ವೀಕರಿಸಲು ಅನುಮತಿ ಹೊಂದಿರುತ್ತಾರೆ. ರಜಾ ದಿನಗಳಲ್ಲಿ ಯಾರಿಗೂ ಭೇಟಿಗೆ ಅವಕಾಶ ಇರುವುದಿಲ್ಲ.

ವಾರದಲ್ಲಿ ಎರಡು ದಿನ ಜೈಲು ಬಂಧಿ ತನ್ನ ಸ್ನೇಹಿತರು ಹಾಗೂ ಕುಟುಂಬಸ್ಥರನ್ನ ಭೇಟಿ ಮಾಡಬಹುದು. ಅಲ್ಲದೆ ವಿಡೀಯೋ ಕಾನ್ಪರೆನ್ಸ್ ಮುಖಾಂತರವೂ ಜೈಲು ಬಂಧಿಗಳು ವಾರದಲ್ಲಿ ಎರಡು ಬಾರಿ ಕುಟುಂಬಸ್ಥರು ಅಥವಾ ಸ್ನೇಹಿತರ ಜೊತೆ ಮಾತನಾಡಲು ಅವಕಾಶ ಇದೆ. ಆದರೆ ದರ್ಶನ್ ವಿಚಾರದಲ್ಲಿ ಇದ್ಯಾವುದೂ ಲೆಕ್ಕಕ್ಕೇ ಇಲ್ಲ. ಜೈಲು ಸೇರಿ ಕೆಲವೇ ದಿನಗಳಲ್ಲಿ ಹಲವರ ಭೇಟಿಗೆ ಅವಕಾಶ ನೀಡಲಾಗಿದೆ. ಈಗಾಗಲೇ ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್, ತಾಯಿ ಮೀನಾ ತೂಗುದೀಪ, ಸೋದರ ದಿನಕರ್, ನಟ ವಿನೋದ್ ಪ್ರಭಾಕರ್, ರಕ್ಷಿತಾ ಪ್ರೇಮ್, ಪ್ರೇಮ್ ಭೇಟಿಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಜೈಲಿನಿಂದ ಹಗಲು-ರಾತ್ರಿ ನಿರ್ಮಾಪಕರಿಗೆ ಕರೆ ಮಾಡಿ ಜಾಮೀನಿಗೆ ಬೇಡಿಕೆ ಇಡುತ್ತಿರುವ ದರ್ಶನ್

ದರ್ಶನ್ ಅವರನ್ನು ಭೇಟಿ ಮಾಡಲು ಜೈಲು ಅಧಿಕಾರಿಗಳು ಹೀಗೆ ಅವಕಾಶ ನೀಡುತ್ತಿರುವುದು ಎಷ್ಟು ಸರಿ ಅನ್ನೋದು ಅನೇಕರ ಪ್ರಶ್ನೆ. ದರ್ಶನ್​ಗೆ ಒಂದು ನ್ಯಾಯ, ಉಳಿದ ಬಂಧಿಗಳಿಗೆ ಒಂದು ನ್ಯಾಯ ಏಕೆ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಸದ್ಯ ಜೈಲು ಅಧಿಕಾರಿಗಳ ನಡೆ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್