AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿರೋ ದರ್ಶನ್​ಗೆ ಒಂದು ನ್ಯಾಯ ಇತರ ಬಂಧಿಗಳಿಗೊಂದು ನ್ಯಾಯ?

ವಾರದಲ್ಲಿ ಎರಡು ದಿನ ಜೈಲು ಬಂಧಿ ತನ್ನ ಸ್ನೇಹಿತರು ಹಾಗೂ ಕುಟುಂಬಸ್ಥರನ್ನ ಭೇಟಿ ಮಾಡಬಹುದು. ಅಲ್ಲದೆ ವಿಡೀಯೋ ಕಾನ್ಪರೆನ್ಸ್ ಮುಖಾಂತರವೂ ಜೈಲು ಬಂಧಿಗಳು ವಾರದಲ್ಲಿ ಎರಡು ಬಾರಿ ಕುಟುಂಬಸ್ಥರು ಅಥವಾ ಸ್ನೇಹಿತರ ಜೊತೆ ಮಾತನಾಡಲು ಅವಕಾಶ ಇದೆ. ಆದರೆ ದರ್ಶನ್ ವಿಚಾರದಲ್ಲಿ ಇದ್ಯಾವುದೂ ಲೆಕ್ಕಕ್ಕೇ ಇಲ್ಲ.

ಜೈಲಿನಲ್ಲಿರೋ ದರ್ಶನ್​ಗೆ ಒಂದು ನ್ಯಾಯ ಇತರ ಬಂಧಿಗಳಿಗೊಂದು ನ್ಯಾಯ?
ದರ್ಶನ್
Shivaprasad B
| Edited By: |

Updated on: Jul 03, 2024 | 11:40 AM

Share

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಅವರ ಗೆಳತಿ ಪವಿತ್ರಾ ಗೌಡ ಅವರು ಎ1 ಆರೋಪಿ ಆದರೆ, ದರ್ಶನ್ ಎ2 ಆರೋಪಿ ಆಗಿದ್ದಾರೆ. ಇದರ ಜೊತೆಗೆ ಹಲವರು ಈ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ದರ್ಶನ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈ ಮಧ್ಯೆ ದರ್ಶನ್ ಅವರಿಗಾಗಿ ಜೈಲಿನ ನಿಯಮಗಳನ್ನು ತೂರಲಾಯಿತೇ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಕಾರಾಗೃಹ ಕಾಯ್ದೆ 1894 ಸೆಕ್ಷನ್ 56 ಅಡಿಯಲ್ಲಿ ಓರ್ವ ಜೈಲು ಬಂಧಿಯು ವಾರದಲ್ಲಿ ಒಮ್ಮೆ ಸ್ನೇಹಿತರು ಹಾಗೂ ಕುಟುಂಬಸ್ಥರನ್ನ ಭೇಟಿ ಮಾಡಬಹುದು. ಕಾರಾಗೃಹ ಕಾಯ್ದೆ 1894 ಸೆಕ್ಷನ್ 57 ಅಡಿಯಲ್ಲಿ ಜೈಲಿನ ಸೂಪರಿಂಡೆಂಟ್ ವಿಶೇಷ ಹಾಗೂ ಅವಶ್ಯಕ ಸಂದರ್ಭದಲ್ಲಿ ಹೆಚ್ಚಿನ ಬಾರಿ ಭೇಟಿಗೆ ಅವಕಾಶ ನೀಡಬಹುದು. ಕಾರಾಗೃಹ ಕಾಯ್ದೆ 1894 ಸೆಕ್ಷನ್ 58 ಅಡಿಯಲ್ಲಿ ಜೈಲು ಬಂಧಿ ಪತ್ರ ಬರೆಯಲು, ಪತ್ರ ಸ್ವೀಕರಿಸಲು ಅನುಮತಿ ಹೊಂದಿರುತ್ತಾರೆ. ರಜಾ ದಿನಗಳಲ್ಲಿ ಯಾರಿಗೂ ಭೇಟಿಗೆ ಅವಕಾಶ ಇರುವುದಿಲ್ಲ.

ವಾರದಲ್ಲಿ ಎರಡು ದಿನ ಜೈಲು ಬಂಧಿ ತನ್ನ ಸ್ನೇಹಿತರು ಹಾಗೂ ಕುಟುಂಬಸ್ಥರನ್ನ ಭೇಟಿ ಮಾಡಬಹುದು. ಅಲ್ಲದೆ ವಿಡೀಯೋ ಕಾನ್ಪರೆನ್ಸ್ ಮುಖಾಂತರವೂ ಜೈಲು ಬಂಧಿಗಳು ವಾರದಲ್ಲಿ ಎರಡು ಬಾರಿ ಕುಟುಂಬಸ್ಥರು ಅಥವಾ ಸ್ನೇಹಿತರ ಜೊತೆ ಮಾತನಾಡಲು ಅವಕಾಶ ಇದೆ. ಆದರೆ ದರ್ಶನ್ ವಿಚಾರದಲ್ಲಿ ಇದ್ಯಾವುದೂ ಲೆಕ್ಕಕ್ಕೇ ಇಲ್ಲ. ಜೈಲು ಸೇರಿ ಕೆಲವೇ ದಿನಗಳಲ್ಲಿ ಹಲವರ ಭೇಟಿಗೆ ಅವಕಾಶ ನೀಡಲಾಗಿದೆ. ಈಗಾಗಲೇ ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್, ತಾಯಿ ಮೀನಾ ತೂಗುದೀಪ, ಸೋದರ ದಿನಕರ್, ನಟ ವಿನೋದ್ ಪ್ರಭಾಕರ್, ರಕ್ಷಿತಾ ಪ್ರೇಮ್, ಪ್ರೇಮ್ ಭೇಟಿಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಜೈಲಿನಿಂದ ಹಗಲು-ರಾತ್ರಿ ನಿರ್ಮಾಪಕರಿಗೆ ಕರೆ ಮಾಡಿ ಜಾಮೀನಿಗೆ ಬೇಡಿಕೆ ಇಡುತ್ತಿರುವ ದರ್ಶನ್

ದರ್ಶನ್ ಅವರನ್ನು ಭೇಟಿ ಮಾಡಲು ಜೈಲು ಅಧಿಕಾರಿಗಳು ಹೀಗೆ ಅವಕಾಶ ನೀಡುತ್ತಿರುವುದು ಎಷ್ಟು ಸರಿ ಅನ್ನೋದು ಅನೇಕರ ಪ್ರಶ್ನೆ. ದರ್ಶನ್​ಗೆ ಒಂದು ನ್ಯಾಯ, ಉಳಿದ ಬಂಧಿಗಳಿಗೆ ಒಂದು ನ್ಯಾಯ ಏಕೆ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಸದ್ಯ ಜೈಲು ಅಧಿಕಾರಿಗಳ ನಡೆ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ