AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಕನ್ನಡ ಬಾವುಟದಲ್ಲಿ ಪುನೀತ್​ ಫೋಟೋ ಹಾಕಿದ್ದಕ್ಕೆ ಕಿರಿಕ್​ ಮಾಡಿದ್ದ ಮಹಿಳೆಯಿಂದ ಕ್ಷಮಾಪಣೆ

Puneeth Rajkumar Fans: ‘ಅಭಿಮಾನಿಗಳು ತಪ್ಪಾಗಿ ಭಾವಿಸಿದ್ದರೆ ಮತ್ತು ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಇರಲಿ’ ಎಂದು ಮಹಿಳೆಯು ಕ್ಷಮೆ ಕೇಳಿದ್ದಾರೆ. ಪುನೀತ್ ರಾಜ್​ಕುಮಾರ್​ ಫೋಟೋಗೆ ನಮಿಸಿದ್ದಾರೆ.

Puneeth Rajkumar: ಕನ್ನಡ ಬಾವುಟದಲ್ಲಿ ಪುನೀತ್​ ಫೋಟೋ ಹಾಕಿದ್ದಕ್ಕೆ ಕಿರಿಕ್​ ಮಾಡಿದ್ದ ಮಹಿಳೆಯಿಂದ ಕ್ಷಮಾಪಣೆ
ಅಪ್ಪು ಫೋಟೋಗೆ ಕೈಮುಗಿದು ಕ್ಷಮೆ ಕೇಳಿದ ಮಹಿಳೆ
TV9 Web
| Edited By: |

Updated on:Nov 06, 2022 | 11:16 PM

Share

ಇತ್ತೀಚೆಗೆ ಬೆಂಗಳೂರಿನಲ್ಲಿ ಮಹಿಳೆಯೊಬ್ಬರು ಪುನೀತ್​ ರಾಜ್​ಕುಮಾರ್ (Puneeth Rajkumar)​ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು. ಕರ್ನಾಟಕದ ಬಾವುಟದಲ್ಲಿ (Karnataka Flag) ಪುನೀತ್​ ಫೋಟೋ ಹಾಕಿದ್ದು ಸರಿಯಲ್ಲ ಎಂದು ಅವರು ಕೂಗಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಅಭಿಮಾನಿಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆ ಮಹಿಳೆಯು ಇಂದು (ನ.6) ಕ್ಷಮಾಪಣೆ ಕೇಳಿದ್ದಾರೆ. ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳ (Puneeth Rajkumar Fans) ಸಮ್ಮುಖದಲ್ಲಿ ಅವರು ಅಪ್ಪು ಫೋಟೋಗೆ ಕೈ ಮುಗಿದು ‘ನನ್ನಿಂದ ತಪ್ಪಾಗಿದೆ’ ಎಂದು ಕ್ಷಮೆ ಕೇಳಿದ್ದಾರೆ.

ಪೊಲೀಸ್​ ಠಾಣೆಯಲ್ಲಿ ಮಹಿಳೆ ಹೇಳಿದ್ದೇನು?

‘ನಾನು ಕನ್ನಡಿಗಳು. ನನಗೂ ಕರ್ನಾಟಕದ ಬಗ್ಗೆ ಹೆಮ್ಮೆ ಇದೆ. ನಾವು ಕನ್ನಡದ ಅಭಿವೃದ್ಧಿ ಕೈಗೂಡಿದ್ದೇವೆ. ನಾನು ಡಾ. ರಾಜ್​ಕುಮಾರ್​ ಅಭಿಮಾನಿ. ಪುನೀತ್​ ರಾಜ್​ಕುಮಾರ್​ ಬಗ್ಗೆ ನಾನು ತಪ್ಪು ಅಭಿಪ್ರಾಯ ಹೇಳಿಲ್ಲ. ಕನ್ನಡದ ಬಾವುಟ ವ್ಯಕ್ತಿಗತ ಆಗಬಾರದು ಅಂತ ನಾನು ನನ್ನ ಅಭಿಪ್ರಾಯ ಹೇಳಿದ್ದೇನೆ. ಆದರೆ ಬಾವುಟದಲ್ಲಿ ಪುನೀತ್​ ಭಾವಚಿತ್ರ ಇದ್ದಿದ್ದಕ್ಕೆ ಅವರ ಹೆಸರು ಬಂತು. ಅಭಿಮಾನಿಗಳು ತಪ್ಪಾಗಿ ಭಾವಿಸಿದ್ದರೆ ಅಥವಾ ಯಾರಗಾದರೂ ನೋವಾಗಿದ್ದರೆ ಕ್ಷಮೆ ಇರಲಿ. ಇದೇ ಎನರ್ಜಿಯನ್ನು ಕರ್ನಾಟಕದ ಅಭಿವೃದ್ಧಿಗೆ ತೊಡಗಿಸಿ ಎಂಬುದು ನಮ್ಮ ಆಶಯ’ ಎಂದು ಆ ಮಹಿಳೆಯು ಎಲ್ಲರ ಎದುರು ಓದಿ ಹೇಳಿದ್ದಾರೆ.

ಇದನ್ನೂ ಓದಿ
Image
Puneeth Rajkumar: ಪುನೀತ್​ ರಾಜ್​ಕುಮಾರ್ ಇಲ್ಲದೇ ಕಳೆಯಿತು 11 ತಿಂಗಳು; ಸಮಾಧಿ ಬಳಿ ಕಣ್ಣೀರು ಹಾಕಿದ ಫ್ಯಾನ್ಸ್​
Image
ಹೊಸಪೇಟೆ ಪುನೀತ್ ಪುತ್ಥಳಿಗೆ ವಿನಯ್ ರಾಜ್​ಕುಮಾರ್ ಮಾಲಾರ್ಪಣೆ
Image
Kantara: ‘ಕಾಂತಾರ’ ಚಿತ್ರಕ್ಕೆ ಪುನೀತ್​ ಹೀರೋ ಆಗ್ಬೇಕಿತ್ತು; ಆ ಸ್ಥಾನಕ್ಕೆ ರಿಷಬ್ ಶೆಟ್ಟಿ ಬಂದಿದ್ದು ಹೇಗೆ? ಇಲ್ಲಿದೆ ಉತ್ತರ
Image
ಪುನೀತ್ ಜನ್ಮದಿನ ಇನ್ಮುಂದೆ ‘ಸ್ಫೂರ್ತಿ ದಿನ’; ಸಚಿವ ಸುನೀಲ್ ಕುಮಾರ್ ಮನವಿ ಪುರಸ್ಕರಿಸಿದ ಸಿಎಂ ಬೊಮ್ಮಾಯಿ

ವಿವಾದ ಆಗಿದ್ದು ಹೇಗೆ?

ಪುನೀತ್​ ರಾಜ್​ಕುಮಾರ್​ ಅವರ ಭಾವಚಿತ್ರ ಇರುವ ಕನ್ನಡದ ಬಾವುಟ ಹಲವು ಕಡೆಗಳಲ್ಲಿ ಹಾರಾಡುತ್ತಿದೆ. ಆ ಮೂಲಕ ಅಭಿಮಾನಿಗಳು ಅಪ್ಪುಗೆ ನಮನ ಸಲ್ಲಿಸುತ್ತಿದ್ದಾರೆ. ಆದರೆ ಇದರ ವಿರುದ್ಧ ನವೆಂಬರ್​ 3ರಂದು ಬೆಂಗಳೂರಿನ ಮಲ್ಲೇಶ್ವರದಲ್ಲಿ ಮಹಿಳೆ ಕಿರಿಕ್​ ಮಾಡಿದ್ದರು. ‘ನಾವು ಕೂಡ ಕನ್ನಡವರೇ. ನಮ್ಮ ಫೋಟೋ ಬಾವುಟದಲ್ಲಿ ಯಾಕೆ ಇಲ್ಲ? ಪುನೀತ್​ ಅಂದ್ರೆ ಕನ್ನಡಾಂಬೆ ಅಲ್ಲ. ಪುನೀತ್​ ಚಿತ್ರ ಬಾವುಟದಲ್ಲಿ ಬರಬಾರದು’ ಎಂದು ಮಹಿಳೆಯು ಕೂಗಾಡಿದ್ದರು. ಈ ಘಟನೆಯನ್ನು ಅಪ್ಪು ಅಭಿಮಾನಿಗಳು ಖಂಡಿಸಿದ್ದರು. ಮಹಿಳೆ ಹೇಳಿದ ಮಾತುಗಳನ್ನು ಸ್ಥಳದಲ್ಲೇ ಇದ್ದ ಆಟೋ ಚಾಲಕರು ವಿರೋಧಿಸಿದ್ದರು. ಆ ಸಂದರ್ಭದ ವಿಡಿಯೋ ವೈರಲ್​ ಆಗಿತ್ತು.

ಆ ಘಟನೆ ಕುರಿತು ಅಪ್ಪು ಅಭಿಮಾನಿಯೊಬ್ಬರು ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದರು. ‘ಆಕೆ ಕ್ಷಮೆ ಕೇಳಬೇಕು. ಪ್ರತಿ ಮನೆಯಲ್ಲೂ ಪುನೀತ್ ರಾಜ್​ಕುಮಾರ್​ ಅವರ ಫೋಟೋ ಇಟ್ಟು ಪೂಜೆ ಮಾಡಲಾಗುತ್ತಿದೆ. ಅಂಥವರ ಬಗ್ಗೆ ಈ ರೀತಿ ಮಾತಾಡಿದ್ದು ಸರಿಯಲ್ಲ. ಬಾವುಟದಲ್ಲಿ ಅಪ್ಪು ಫೋಟೋ ಹಾಕಿದ್ದಕ್ಕೆ ಸರ್ಕಾರವೇ ಆಕ್ಷೇಪಿಸಿಲ್ಲ. ನಿಧನರಾದ ವ್ಯಕ್ತಿ ಬಗ್ಗೆ ಈ ಮಹಿಳೆ ಈ ರೀತಿ ಮಾತನಾಡಿದ್ದು ತಪ್ಪು. ಲೈವ್​ನಲ್ಲಿ ಬಂದು ಅವರು ಕ್ಷಮೆ ಕೇಳಬೇಕು’ ಎಂದು ಪುನೀತ್​ ಅಭಿಮಾನಿ ಹೇಳಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:16 pm, Sun, 6 November 22

Follow Us
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?