AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖೈದಿ ನಂ. 6106 ಹಾಕಿಕೊಂಡು ಆಟೋ ಚಾಲಕನ ಹುಚ್ಚಾಟ; ಬುದ್ಧಿ ಕಲಿಸಿದ ಪೊಲೀಸರು

ಅತಿರೇಕದಿಂದ ವರ್ತಿಸುವ ಮೂಲಕ ದರ್ಶನ್ ಅಭಿಮಾನಿಗಳು ಸುದ್ದಿ ಆಗುತ್ತಿದ್ದಾರೆ. ನ್ಯಾಯಾಂಗ ಬಂಧನದಲ್ಲಿ ಇರುವ ದರ್ಶನ್​ಗೆ 6106 ಖೈದಿ ಸಂಖ್ಯೆ ನೀಡಲಾಗಿದೆ. ಹಲವು ವಾಹನಗಳ ಮೇಲೆ ಈ ಸಂಖ್ಯೆಯ ಸ್ಟಿಕ್ಕರ್​ಗಳನ್ನು ಕೆಲವರು ಹಾಕಿಸಿದ್ದಾರೆ. ಬೆಂಗಳೂರಿನ ಆಟೋ ಚಾಲಕನೊಬ್ಬ ಈ ಸ್ಟಿಕ್ಕರ್​ ಹಾಕಿಸಿಕೊಂಡಿದ್ದೂ ಅಲ್ಲದೇ, ಅಪಾಯಕಾರಿಯಾಗಿ ಆಟೋ ಚಲಾಯಿಸಿದ್ದಾನೆ.

ಖೈದಿ ನಂ. 6106 ಹಾಕಿಕೊಂಡು ಆಟೋ ಚಾಲಕನ ಹುಚ್ಚಾಟ; ಬುದ್ಧಿ ಕಲಿಸಿದ ಪೊಲೀಸರು
ಆಟೋ ಚಾಲಕನ ಬಂಧನ
ಮದನ್​ ಕುಮಾರ್​
|

Updated on: Jul 09, 2024 | 6:47 PM

Share

ಕೊಲೆ ಆರೋಪದಲ್ಲಿ ನಟ ದರ್ಶನ್​ ಅರೆಸ್ಟ್​ ಆದ ಬಳಿಕ ಅವರ ಅಭಿಮಾನಿಗಳಲ್ಲಿ ಕೆಲವರು ಅತಿಯಾಗಿ ವರ್ತಿಸುತ್ತಿದ್ದಾರೆ. ದರ್ಶನ್​ಗೆ ಜೈಲಿನಲ್ಲಿ ನೀಡಿದ ಖೈದಿ ನಂಬರ್​ ಅನ್ನು ಹೆಮ್ಮೆಯ ರೀತಿಯಲ್ಲಿ ಫ್ಯಾನ್ಸ್​ ಬಳಸುತ್ತಿದ್ದಾರೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಎಂಬಂತೆ ಬೆಂಗಳೂರಿನಲ್ಲಿ ಆಟೋ ಚಾಲಕನೊಬ್ಬ ಹುಚ್ಚಾಟ ಪ್ರದರ್ಶಿಸಿದ್ದಾನೆ. ತನ್ನ ಆಟೋ ಮೇಲೆ ‘ಡಿ ಬಾಸ್​ 6106’ ಎಂದು ಸ್ಟಿಕ್ಕರ್​ ಅಂಟಿಸಿಕೊಂಡು ವೀಲ್ಹಿಂಗ್​ ಮಾಡಿದ್ದಾನೆ. ಪೊಲೀಸರು ಆತನನ್ನು ಬಂಧಿಸಿ ಖಡಕ್​ ಎಚ್ಚರಿಕೆ ನೀಡಿದ್ದಾರೆ.

ಜಗದೀಶ್ ಅಲಿಯಾಸ್ ಜಗ್ಗ ಎಂಬ ಆಟೋ ಚಾಲಕನು ಈ ರೀತಿ ಅಪಾಯಕಾರಿಯಾಗಿ ಆಟೋ ಚಾಲನೆ ಮಾಡಿದ್ದಾನೆ. ವಾಹನ ದಟ್ಟಣೆ ಇರುವ ರಸ್ತೆಗಳಲ್ಲಿ ಆಟೋ ವೀಲ್ಹಿಂಗ್​ ಮಾಡಿದ್ದಾನೆ. ಸೋಶಿಯಲ್​ ಮೀಡಿಯಾದಲ್ಲಿ ಆತನ ಹುಚ್ಚಾಟದ ವಿಡಿಯೋ ವೈರಲ್​ ಆಗಿದೆ. ಅದನ್ನು ನೋಡಿದ ಕಾಮಾಕ್ಷಿಪಾಳ್ಯ ಟ್ರಾಫಿಕ್​ ಪೊಲೀಸರು ಆಟೋ ಚಾಲಕನನ್ನು ಬಂಧಿಸಿದ್ದಾರೆ.

ಆಟೋ ಚಾಲಕ ವೀಲ್ಹಿಂಗ್​ ಮಾಡಿದ ದೃಶ್ಯ ವೈರಲ್​ ಆದ ಬಳಿಕ ಜನರಿಂದ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ವಾಹನದ ಸಂಖ್ಯೆಯನ್ನು ಆಧರಿಸಿ ಆರೋಪಿಯ ಪತ್ತೆ ಹಚ್ಚಿದ ಪೊಲೀಸರು ಕೂಡಲೇ ಆತನನ್ನು ಬಂಧಿಸಿದರು. ಆತನಿಗೆ ಎಚ್ಚರಿಕೆ ಕೊಟ್ಟು, ಸ್ಪೇಷನ್​ ಬೇಲ್​ ಮೇಲೆ ಬಿಡುಗಡೆ ಮಾಡಿದ್ದಾರೆ. ಅಲ್ಲದೇ, ಆಟೋ ಹಿಂದೆ ಹಾಕಿಸಿದ್ದ ‘ಡಿ ಬಾಸ್​ 6106’ ಎಂಬ ಸ್ಟಿಕ್ಕರ್ ಅನ್ನು ಪೊಲೀಸರು ತೆಗೆಸಿದ್ದಾರೆ.

ಇದನ್ನೂ ಓದಿ: ಇಡೀ ಪ್ರಕರಣದಲ್ಲಿ ದರ್ಶನ್​ ಎಡವಿದ್ದು ಎಲ್ಲಿ? ಎಳೆಎಳೆಯಾಗಿ ವಿವರಿಸಿದ ಮುಖ್ಯಮಂತ್ರಿ ಚಂದ್ರು

‘ಖೈದಿ ನಂಬರ್​ 6106’ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವೇ ದಿನಗಳ ಹಿಂದೆ ಇನ್ನೊಂದು ಅತಿರೇಕದ ಘಟನೆ ವರದಿ ಆಗಿತ್ತು. ಪುಟ್ಟ ಮಗುವಿಗೆ ಈ ನಂಬರ್​ನ ಬಟ್ಟೆ ಹಾಕಿಸಿ ಫೋಟೋಶೂಟ್​ ಮಾಡಿಸಲಾಗಿತ್ತು. ಅದನ್ನು ಕಂಡು ನೆಟ್ಟಿಗರು ತೀವ್ರ ಟೀಕೆ ವ್ಯಕ್ತಪಡಿಸಿದ್ದರು. ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ದರ್ಶನ್​ ಜೈಲು ವಾಸು ಅನುಭವಿಸುತ್ತಿದ್ದಾರೆ. ಅವರ ಜೊತೆ ಪವಿತ್ರಾ ಗೌಡ ಮುಂತಾದವರು ಕೂಡ ನ್ಯಾಯಾಂಗ ಬಂಧನದಲ್ಲಿದ್ದಾರೆ. ಜೈಲಿನಲ್ಲಿ ಇರುವ ದರ್ಶನ್​ ಆರೋಗ್ಯ ಹದಗೆಡುತ್ತಿದೆ ಎಂಬ ಮಾಹಿತಿ ಕೇಳಿಬರುತ್ತಿದೆ.

ವರದಿ: ಪ್ರದೀಪ್

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ
ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು
ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು
ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂ. ಹಣ ಜಪ್ತಿ!
ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂ. ಹಣ ಜಪ್ತಿ!