AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖೈದಿ ನಂ. 6106 ಹಾಕಿಕೊಂಡು ಆಟೋ ಚಾಲಕನ ಹುಚ್ಚಾಟ; ಬುದ್ಧಿ ಕಲಿಸಿದ ಪೊಲೀಸರು

ಅತಿರೇಕದಿಂದ ವರ್ತಿಸುವ ಮೂಲಕ ದರ್ಶನ್ ಅಭಿಮಾನಿಗಳು ಸುದ್ದಿ ಆಗುತ್ತಿದ್ದಾರೆ. ನ್ಯಾಯಾಂಗ ಬಂಧನದಲ್ಲಿ ಇರುವ ದರ್ಶನ್​ಗೆ 6106 ಖೈದಿ ಸಂಖ್ಯೆ ನೀಡಲಾಗಿದೆ. ಹಲವು ವಾಹನಗಳ ಮೇಲೆ ಈ ಸಂಖ್ಯೆಯ ಸ್ಟಿಕ್ಕರ್​ಗಳನ್ನು ಕೆಲವರು ಹಾಕಿಸಿದ್ದಾರೆ. ಬೆಂಗಳೂರಿನ ಆಟೋ ಚಾಲಕನೊಬ್ಬ ಈ ಸ್ಟಿಕ್ಕರ್​ ಹಾಕಿಸಿಕೊಂಡಿದ್ದೂ ಅಲ್ಲದೇ, ಅಪಾಯಕಾರಿಯಾಗಿ ಆಟೋ ಚಲಾಯಿಸಿದ್ದಾನೆ.

ಖೈದಿ ನಂ. 6106 ಹಾಕಿಕೊಂಡು ಆಟೋ ಚಾಲಕನ ಹುಚ್ಚಾಟ; ಬುದ್ಧಿ ಕಲಿಸಿದ ಪೊಲೀಸರು
ಆಟೋ ಚಾಲಕನ ಬಂಧನ
ಮದನ್​ ಕುಮಾರ್​
|

Updated on: Jul 09, 2024 | 6:47 PM

Share

ಕೊಲೆ ಆರೋಪದಲ್ಲಿ ನಟ ದರ್ಶನ್​ ಅರೆಸ್ಟ್​ ಆದ ಬಳಿಕ ಅವರ ಅಭಿಮಾನಿಗಳಲ್ಲಿ ಕೆಲವರು ಅತಿಯಾಗಿ ವರ್ತಿಸುತ್ತಿದ್ದಾರೆ. ದರ್ಶನ್​ಗೆ ಜೈಲಿನಲ್ಲಿ ನೀಡಿದ ಖೈದಿ ನಂಬರ್​ ಅನ್ನು ಹೆಮ್ಮೆಯ ರೀತಿಯಲ್ಲಿ ಫ್ಯಾನ್ಸ್​ ಬಳಸುತ್ತಿದ್ದಾರೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಎಂಬಂತೆ ಬೆಂಗಳೂರಿನಲ್ಲಿ ಆಟೋ ಚಾಲಕನೊಬ್ಬ ಹುಚ್ಚಾಟ ಪ್ರದರ್ಶಿಸಿದ್ದಾನೆ. ತನ್ನ ಆಟೋ ಮೇಲೆ ‘ಡಿ ಬಾಸ್​ 6106’ ಎಂದು ಸ್ಟಿಕ್ಕರ್​ ಅಂಟಿಸಿಕೊಂಡು ವೀಲ್ಹಿಂಗ್​ ಮಾಡಿದ್ದಾನೆ. ಪೊಲೀಸರು ಆತನನ್ನು ಬಂಧಿಸಿ ಖಡಕ್​ ಎಚ್ಚರಿಕೆ ನೀಡಿದ್ದಾರೆ.

ಜಗದೀಶ್ ಅಲಿಯಾಸ್ ಜಗ್ಗ ಎಂಬ ಆಟೋ ಚಾಲಕನು ಈ ರೀತಿ ಅಪಾಯಕಾರಿಯಾಗಿ ಆಟೋ ಚಾಲನೆ ಮಾಡಿದ್ದಾನೆ. ವಾಹನ ದಟ್ಟಣೆ ಇರುವ ರಸ್ತೆಗಳಲ್ಲಿ ಆಟೋ ವೀಲ್ಹಿಂಗ್​ ಮಾಡಿದ್ದಾನೆ. ಸೋಶಿಯಲ್​ ಮೀಡಿಯಾದಲ್ಲಿ ಆತನ ಹುಚ್ಚಾಟದ ವಿಡಿಯೋ ವೈರಲ್​ ಆಗಿದೆ. ಅದನ್ನು ನೋಡಿದ ಕಾಮಾಕ್ಷಿಪಾಳ್ಯ ಟ್ರಾಫಿಕ್​ ಪೊಲೀಸರು ಆಟೋ ಚಾಲಕನನ್ನು ಬಂಧಿಸಿದ್ದಾರೆ.

ಆಟೋ ಚಾಲಕ ವೀಲ್ಹಿಂಗ್​ ಮಾಡಿದ ದೃಶ್ಯ ವೈರಲ್​ ಆದ ಬಳಿಕ ಜನರಿಂದ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ವಾಹನದ ಸಂಖ್ಯೆಯನ್ನು ಆಧರಿಸಿ ಆರೋಪಿಯ ಪತ್ತೆ ಹಚ್ಚಿದ ಪೊಲೀಸರು ಕೂಡಲೇ ಆತನನ್ನು ಬಂಧಿಸಿದರು. ಆತನಿಗೆ ಎಚ್ಚರಿಕೆ ಕೊಟ್ಟು, ಸ್ಪೇಷನ್​ ಬೇಲ್​ ಮೇಲೆ ಬಿಡುಗಡೆ ಮಾಡಿದ್ದಾರೆ. ಅಲ್ಲದೇ, ಆಟೋ ಹಿಂದೆ ಹಾಕಿಸಿದ್ದ ‘ಡಿ ಬಾಸ್​ 6106’ ಎಂಬ ಸ್ಟಿಕ್ಕರ್ ಅನ್ನು ಪೊಲೀಸರು ತೆಗೆಸಿದ್ದಾರೆ.

ಇದನ್ನೂ ಓದಿ: ಇಡೀ ಪ್ರಕರಣದಲ್ಲಿ ದರ್ಶನ್​ ಎಡವಿದ್ದು ಎಲ್ಲಿ? ಎಳೆಎಳೆಯಾಗಿ ವಿವರಿಸಿದ ಮುಖ್ಯಮಂತ್ರಿ ಚಂದ್ರು

‘ಖೈದಿ ನಂಬರ್​ 6106’ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವೇ ದಿನಗಳ ಹಿಂದೆ ಇನ್ನೊಂದು ಅತಿರೇಕದ ಘಟನೆ ವರದಿ ಆಗಿತ್ತು. ಪುಟ್ಟ ಮಗುವಿಗೆ ಈ ನಂಬರ್​ನ ಬಟ್ಟೆ ಹಾಕಿಸಿ ಫೋಟೋಶೂಟ್​ ಮಾಡಿಸಲಾಗಿತ್ತು. ಅದನ್ನು ಕಂಡು ನೆಟ್ಟಿಗರು ತೀವ್ರ ಟೀಕೆ ವ್ಯಕ್ತಪಡಿಸಿದ್ದರು. ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ದರ್ಶನ್​ ಜೈಲು ವಾಸು ಅನುಭವಿಸುತ್ತಿದ್ದಾರೆ. ಅವರ ಜೊತೆ ಪವಿತ್ರಾ ಗೌಡ ಮುಂತಾದವರು ಕೂಡ ನ್ಯಾಯಾಂಗ ಬಂಧನದಲ್ಲಿದ್ದಾರೆ. ಜೈಲಿನಲ್ಲಿ ಇರುವ ದರ್ಶನ್​ ಆರೋಗ್ಯ ಹದಗೆಡುತ್ತಿದೆ ಎಂಬ ಮಾಹಿತಿ ಕೇಳಿಬರುತ್ತಿದೆ.

ವರದಿ: ಪ್ರದೀಪ್

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ