AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನು ನಿಗಂ ವಿಚಾರೆಣೆಗೆ ಮುಂಬೈಗೆ ಹೊರಟ ಬೆಂಗಳೂರು ಪೊಲೀಸರು

Sonu Nigam: ಕನ್ನಡಿಗರ ಭಾಷಾಭಿಮಾನವನ್ನು ಭಯೋತ್ಪಾದನೆಗೆ ಹೋಲಿಸಿದ್ದ ಗಾಯಕ ಸೋನು ನಿಗಂಗೆ ಪೊಲೀಸರು ಈಗಾಗಲೇ ನೊಟೀಸ್ ನೀಡಿದ್ದಾರೆ. ಇದೀಗ ಬೆಂಗಳೂರು ಪೊಲೀಸರು ಮುಂಬೈಗೆ ತೆರಳಿದ್ದು, ಸೋನು ನಿಗಂ ಅನ್ನು ಭೇಟಿಯಾಗಿ ಖುದ್ದಾಗಿ ವಿಚಾರಣೆ ನಡೆಸಲಿದ್ದಾರೆ. ಸೋನು ನಿಗಂ ವಿಚಾರಣೆಯನ್ನು ರೆಕಾರ್ಡ್ ಮಾಡಿಕೊಂಡು ಬರಲಿದ್ದಾರೆ.

ಸೋನು ನಿಗಂ ವಿಚಾರೆಣೆಗೆ ಮುಂಬೈಗೆ ಹೊರಟ ಬೆಂಗಳೂರು ಪೊಲೀಸರು
Sonu Nigam
ಮಂಜುನಾಥ ಸಿ.
|

Updated on: May 17, 2025 | 4:57 PM

Share

ಕನ್ನಡಿಗರ ಕನ್ನಡಾಭಿಮಾನವನ್ನು ಭಯೋತ್ಪಾದನೆಗೆ ಹೋಲಿಸಿದ ಗಾಯಕ ಸೋನು ನಿಗಂಗೆ (Sonu Nigam) ಈಗಾಲಗೇ ಕನ್ನಡಪರ ಸಂಘಟನೆಗಳು, ಕನ್ನಡಿಗರು ಛೀಮಾರಿ ಹಾಕಿದ್ದಾರೆ. ಚಿತ್ರರಂಗದ ಸಹ ಸೋನು ನಿಗಂಗೆ ಅಸಹಕಾರ ತೋರುವುದಾಗಿ ಹೇಳಿದೆ. ಘಟನೆಯನ್ನು ಬೆಂಗಳೂರು ಪೊಲೀಸರು ಸಹ ಗಂಭೀರವಾಗಿ ತೆಗೆದುಕೊಂಡಿದ್ದು, ಇತ್ತೀಚೆಗೆ ಬಂದ ಹೈಕೋರ್ಟ್ ಆದೇಶದ ಬಳಿಕ ಸ್ವತಃ ಮುಂಬೈಗೆ ಹೋಗಿ ಸೋನು ನಿಗಂ ಅವರ ವಿಚಾರಣೆ ಮಾಡಲು ಮುಂದಾಗಿದ್ದಾರೆ.

ಸೋನು ನಿಗಂ, ಕನ್ನಡಿಗರ ಕನ್ನಡಾಭಿಮಾನವನ್ನು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಹೋಲಿಸಿದ ಘಟನೆಗೆ ಸಂಬಂಧಿಸಿದಂತೆ ಕನ್ನಡಪರ ಹೋರಾಟಗಾರರು ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಸೋನು ನಿಗಂ ವಿರುದ್ಧ ದೂರು ದಾಖಲಿಸಿದ್ದರು. ಈ ಸಂಬಂಧ ಎಫ್​ಐಆರ್ ಸಹ ದಾಖಲಾಗಿದ್ದು, ಪೊಲೀಸರು ಸೋನು ನಿಗಂಗೆ ಇ-ಮೇಲ್ ಮೂಲಕ ನೊಟೀಸ್ ಕಳಿಸಿದ್ದರು. ನೊಟೀಸ್​ಗೆ ಉತ್ತರ ನೀಡದಿದ್ದ ಸೋನು ನಿಗಂ, ಹೈಕೋರ್ಟ್ ಮೊರೆ ಹೋಗಿ ತಮ್ಮ ಮೇಲೆ ದಾಖಲಾಗಿರುವ ಎಫ್​ಐಆರ್ ರದ್ದು ಮಾಡುವಂತೆ ಮನವಿ ಮಾಡಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯವು, ಸೋನು ನಿಗಂ ಇದ್ದಲ್ಲಿಗೇ ಹೋಗಿ ವಿಚಾರಣೆ ನಡೆಸಬೇಕು ಅಥವಾ ವಿಡಿಯೋ ಕಾಲ್ ಮೂಲಕ ವಿಚಾರಣೆ ಮಾಡಬೇಕು ಎಂದಿತ್ತು. ಅಲ್ಲದೆ ಬಲವಂತದ ಕ್ರಮವನ್ನು ಸೋನು ನಿಗಂ ವಿರುದ್ಧ ಕೈಗೊಳ್ಳುವಂತಿಲ್ಲ ಎಂದಿತ್ತು ನ್ಯಾಯಾಲಯ. ಅದರಂತೆ ಆವಲಹಳ್ಳಿ ಪೊಲೀಸರು ಇದೀಗ ವಿಡಿಯೋ ಕಾಲ್ ಬದಲಿಗೆ ನೇರವಾಗಿ ಮುಂಬೈಗೆ ಹೋಗಿ ಸೋನು ನಿಗಂ ಅವರನ್ನು ವಿಚಾರಣೆ ಮಾಡಲು ಮುಂದಾಗಿದ್ದಾರೆ.

ಇದನ್ನೂ ಓದಿ:ಸೋನು ನಿಗಂ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್

ಆವಲಹಳ್ಳಿ ಪೊಲೀಸ್ ಠಾಣೆಯ ಸಬ್​ ಇನ್ಸ್​ಪೆಕ್ಟರ್​​ ಮತ್ತು ಇಬ್ಬರು ಸಿಬ್ಬಂದಿ ಮುಂಬೈಗೆ ಹೋಗುತ್ತಿದ್ದು, ಗಾಯಕ ಸೋನು‌ ನಿಗಮ್‌ ವಿಚಾರಣೆ ನಡೆಸಲಿದ್ದಾರೆ. ವಿಚಾರನೆ ವೇಳೆ ಹೇಳಿಕೆ ರೆಕಾರ್ಡ್ ಮಾಡಿಕೊಳ್ಳಲಿದ್ದಾರೆ. ವಿಡಿಯೋ ಹಾಗೂ ಬರವಣಿಗೆಯಲ್ಲಿ ಹೇಳಿಕೆಯನ್ನು ದಾಖಲಿಸಿಕೊಳ್ಳಲಿದ್ದಾರೆ ಪೊಲೀಸರು. ಸೋನು ನಿಗಂ ವಿಚಾರಣೆಗೆ ತೆರಳುತ್ತಿರುವ ಪೊಲೀಸರಿಗೆ ಹಿರಿಯ ಅಧಿಕಾರಿಗಳು ಸೂಚನೆಗಳನ್ನು ನೀಡಿದ್ದು, ನ್ಯಾಯಾಲಯದ ಆದೇಶದ ಮಿತಿಯಲ್ಲಿ ಹಾಗೂ ನಿಯಮಗಳ ಮಿತಿಯಲ್ಲಿಯೇ ವಿಚಾರಣೆ ನಡೆಸುವಂತೆ ಸೂಚಿಸಿದ್ದಾರೆ.

ಇತ್ತೀಚೆಗೆ ಸೋನು ನಿಗಂ ಬೆಂಗಳೂರಿನ ಕಾಲೇಜೊಂದರಲ್ಲಿ ಲೈವ್ ಶೋ ನೀಡುತ್ತಿದ್ದರು. ಈ ವೇಳೆ ಹಿಂದಿ ಹಾಡು ಹಾಡುತ್ತಿದ್ದರು. ಆಗ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿದ. ಇದರಿಂದ ಸಿಟ್ಟಾದ ಸೋನು ನಿಗಂ, ‘ಕನ್ನಡ, ಕನ್ನಡ, ಇಂಥಹುದರಿಂದಲೇ ಪಹಲ್ಗಾಮ್ ಘಟನೆ ನಡೆದಿರುವುದು’ ಎಂದರು. ಕನ್ನಡಾಭಿಮಾನವನ್ನು ಭಯೋತ್ಪಾದನೆಗೆ ಹೋಲಿಸಿದ ಸೋನು ನಿಗಂ ವಿರುದ್ಧ ಕನ್ನಡಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಕನ್ನಡಪರ ಸಂಘಟನೆಗಳು ಸೋನು ನಿಗಂ ವಿರುದ್ಧ ದೂರು ನೀಡಿದರು. ಫಿಲಂ ಚೇಂಬರ್​ಗೂ ದೂರು ನೀಡಿದರು. ಘಟನೆ ಬಳಿಕ ಗಾಯಕ ಸೋನು ನಿಗಂ ಮೊದಲು ಸ್ಪಷ್ಟನೆ ನೀಡಿದರು. ಆಗಲೂ ಟೀಕೆ ಹೆಚ್ಚಾದ ಬಳಿಕ ಅಂತಿಮವಾಗಿ ಕ್ಷಮೆ ಕೇಳಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ