AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬದುಕಿದ್ದರೆ ಇನ್ಯಾವಗೋ ನನ್ನ ನೋಡ್ತೀರಾ’; ಕಾಲ್ತುಳಿತ ಘಟನೆ ಬಳಿಕ ದರ್ಶನ್ ಹಳೆಯ ವಿಡಿಯೋ ವೈರಲ್

Darshan: ಬೆಂಗಳೂರಿನಲ್ಲಿ ಆರ್‌ಸಿಬಿ ಗೆಲುವಿನ ಸಂಭ್ರಮದ ವೇಳೆ ನಡೆದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದಾರೆ. 47ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಘಟನೆಯ ಬಳಿಕ ದರ್ಶನ್ ಅವರ ಹಳೆಯ ವೀಡಿಯೋ ವೈರಲ್ ಆಗಿದ್ದು, ಅತಿಯಾದ ಅಭಿಮಾನದಿಂದ ಉಂಟಾಗುವ ಅಪಾಯಗಳ ಬಗ್ಗೆ ಎಚ್ಚರಿಸುತ್ತದೆ.

‘ಬದುಕಿದ್ದರೆ ಇನ್ಯಾವಗೋ ನನ್ನ ನೋಡ್ತೀರಾ’; ಕಾಲ್ತುಳಿತ ಘಟನೆ ಬಳಿಕ ದರ್ಶನ್ ಹಳೆಯ ವಿಡಿಯೋ ವೈರಲ್
ದರ್ಶನ್
ರಾಜೇಶ್ ದುಗ್ಗುಮನೆ
|

Updated on:Jun 05, 2025 | 9:34 AM

Share

ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟು, 47ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಆತಂಕ ಇದೆ. ಇದಕ್ಕೆಲ್ಲ ಕಾರಣ ಆಗಿದ್ದು ಅತಿಯಾದ ಅಭಿಮಾನ. ಐಪಿಎಲ್ ಕಪ್ ಗೆದ್ದ ಖುಷಿಯಲ್ಲಿ ಬೆಂಗಳೂರಿಗೆ ಬಂದ ಆರ್​ಸಿಬಿ ತಂಡವನ್ನು ನೋಡುವ ಭರದಲ್ಲಿ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ದರ್ಶನ್ (Darshan) ಹಳೆಯ ವಿಡಿಯೋ ವೈರಲ್ ಆಗಿದೆ. ಈ ಸಂದರ್ಭಕ್ಕೆ ವಿಡಿಯೋ ಸೂಕ್ತವಾಗಿದೆ.

ದರ್ಶನ್ ಅವರು ಅಭಿಮಾನಿಗಳನ್ನು ತುಂಬಾನೇ ಪ್ರೀತಿಸುತ್ತಾರೆ. ಇನ್ನು ಅವರ ಅಭಿಮಾನಿಗಳು ಕೂಡ ದರ್ಶನ್ ಬೆಂಬಲಕ್ಕೆ ಸದಾ ನಿಲ್ಲುತ್ತಾರೆ. ಕೆಲವೊಮ್ಮೆ ಸಾರ್ವಜನಿಕವಾಗಿ ದರ್ಶನ್ ಕಾಣಿಸಿದಾಗ ಅವರನ್ನು ನೋಡಬೇಕು ಎನ್ನುವ ತವಕದಲ್ಲಿ ಅಭಿಮಾನಿಗಳು ಪ್ರಾಣವನ್ನು ಲೆಕ್ಕಿಸದೆ ನಡೆದುಕೊಳ್ಳೋದು ಇದೆ. ದರ್ಶನ್ ಕಾರು ತೆರಳುತ್ತಿದ್ದರೆ ಫ್ಯಾನ್ಸ್ ವೇಗವಾಗಿ ಬಂದು ಅವರ ಕಾರನ್ನು ಚೇಸ್ ಮಾಡಲು ಪ್ರಯತ್ನಿಸುತ್ತಾರೆ. ಆ ರೀತಿ ಆಗಬಾರದು ಎಂಬುದು ದರ್ಶನ್ ಕೋರಿಕೆ. ಕಾರ್ಯಕ್ರಮ ಒಂದರಲ್ಲಿ ದರ್ಶನ್ ಈ ಬಗ್ಗೆ ಮಾತನಾಡಿದ್ದರು.

ಇದನ್ನೂ ಓದಿ
Image
ಸೋಶಿಯಲ್ ಮೀಡಿಯಾಗೆ ಶೋಭಾ ಶೆಟ್ಟಿ ಗುಡ್​ ಬೈ; ಖಿನ್ನತೆಗೊಳಗಾದ್ರಾ ನಟಿ?
Image
‘ಅಭಿಮಾನ, ಪ್ರೀತಿ ಕುಟುಂಬದ ನೋವಿಗೆ ಕಾರಣವಾಗಬಾರದು’; ಶಿವಣ್ಣ ಭಾವುಕ ಪೋಸ್ಟ್
Image
‘ಥಗ್ ಲೈಫ್’ ಸಿನಿಮಾ ರಿಲೀಸ್ ವೇಳೆ ಬೆಂಗಳೂರಿಗರ ನೆನೆದು ಮರುಗಿದ ಕಮಲ್ ಹಾಸನ್
Image
ತಮಿಳಿಗರಿಗೆ ಕಮಲ್ ಅಭಿಮಾನಿಗಳಿಂದ ಓಪನ್ ಪತ್ರ; ಎಚ್ಚರಿಕೆಯ ಸಂದೇಶ ರವಾನೆ

‘ಬದುಕಿದ್ದರೆ ಮತ್ತೊಂದ ಸಲ ನನ್ನ ನೋಡ್ತೀರಾ. ನನ್ನ ನೋಡದೇ ಇದ್ದರೂ ತೊಂದರೆ ಇಲ್ಲ. ಮನೆಯಲ್ಲಿ ವಯಸ್ಸಾದ ತಂದೆ-ತಾಯಿ ಇರುತ್ತಾರೆ. ಆಗತಾನೇ ಮದುವೆ ಮಾಡಿಕೊಂಡ ಗಂಡ-ಹೆಂಡತಿ ನೀವಾಗಿರುತ್ತೀರಿ. ಆಗತಾನೇ ಹುಟ್ಟಿದ ಮಗು ಇರುತ್ತದೆ. ನಿಮಗೇನಾದರೂ ಹೆಚ್ಚು ಕಮ್ಮಿ ಆದರೆ ಸಾಯೋತನಕ ನಮ್ಮನ್ನು ದೂಷಿಸುತ್ತಾರೆ. ಇದು ನಿಮಗೆ ಇಷ್ಟನಾ’ ಎಂದು ದರ್ಶನ್ ಪ್ರಶ್ನೆ ಮಾಡಿದ್ದರು.

ಇದನ್ನೂ ಓದಿ: ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ

ದರ್ಶನ್ ಹೇಳಿದ ಮಾತು ಈ ಸಂದರ್ಭಕ್ಕೆ ಸರಿಯಾಗಿ ಹೊಂದಿಕೆ ಆಗುತ್ತಿದೆ ಎಂದು ಅನೇಕರು ಹೇಳಿದ್ದಾರೆ. ಅಭಿಮಾನದ ಹುಮ್ಮಸಿನಲ್ಲಿ ಈ ರೀತಿ ಪ್ರಾಣಕ್ಕೆ ಹಾನಿ ಮಾಡಿಕೊಳ್ಳಬಾರದು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಈ ಮಾತು ಕೇವಲ ದರ್ಶನ್ ಹಾಗೂ ಆರ್​ಸಿಬಿ ಅಭಿಮಾನಿಗಳಿಗೆ ಮಾತ್ರವಲ್ಲ ಅಂಧಾಭಿಮಾನ ತೋರಿಸುವ ಎಲ್ಲರಿಗೂ ಹೋಲುತ್ತದೆ ಎನ್ನುವ ಅಭಿಪ್ರಾಯವೂ ವ್ಯಕ್ತವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:53 am, Thu, 5 June 25

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ