AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷಕ್ಕೊಬ್ಬರು; ನಟನೆ ಮಾತ್ರವಲ್ಲ ಈ ವಿಶೇಷ ವಿದ್ಯೆ ಕಲಿತಿದ್ದಾರೆ ಅಜಯ್ ರಾವ್  

ಪ್ರಸಿದ್ಧ ಕನ್ನಡ ನಟ ಅಜಯ್ ರಾವ್ ಅವರು ತಮ್ಮ ನಟನಾ ಕೌಶಲ್ಯದ ಜೊತೆಗೆ ಒಂದು ವಿಶೇಷ ಶಾಸ್ತ್ರ ಕಲಿತಿದ್ದಾರೆ. ಇದನ್ನು ಶ್ರದ್ಧೇಯಿಂದ ಅಧ್ಯಯನ ಮಾಡಿದ್ದಾರೆ. ಅವರ ನಟನೆಯ ‘ಯುದ್ಧಕಾಂಡ’ ಚಿತ್ರದ ಪ್ರಚಾರದಲ್ಲಿರುವ ಅಜಯ್ ರಾವ್ ಈ ಬಗ್ಗೆ ಹೇಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಲಕ್ಷಕ್ಕೊಬ್ಬರು; ನಟನೆ ಮಾತ್ರವಲ್ಲ ಈ ವಿಶೇಷ ವಿದ್ಯೆ ಕಲಿತಿದ್ದಾರೆ ಅಜಯ್ ರಾವ್  
ಅಜಯ್ ರಾವ್
ರಾಜೇಶ್ ದುಗ್ಗುಮನೆ
|

Updated on:Apr 02, 2025 | 7:04 AM

Share

ನಟ ಅಜಯ್ ರಾವ್ (Ajay Rao) ಅವರು ‘ಯುದ್ಧಕಾಂಡ’ ಸಿನಿಮಾ ಬಿಡುಗಡೆಗಾಗಿ ಕಾದಿದ್ದಾರೆ. ಈ ಚಿತ್ರದ ಪ್ರಚಾರದಲ್ಲಿ ಅಜಯ್ ರಾವ್ ಬ್ಯುಸಿ ಇದ್ದಾರೆ. ಈ ಮೊದಲು ಅವರು ಸಿನಿಮಾ ನಿರ್ಮಾಣವನ್ನು ಕೂಡ ಮಾಡಿದ್ದರು. ಅಜಯ್ ರಾವ್ ಅವರಿಗೆ ಒಂದು ವಿಶೇಷ ವಿದ್ಯೆ ಬರುತ್ತದೆ. ಈ ಬಗ್ಗೆ ಅಜಯ್ ರಾವ್ ರ‍್ಯಾಪಿಡ್ ರಶ್ಮಿ ಅವರಿಗೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆಯುತ್ತಾ ಇದೆ.

ಅಜಯ್ ರಾವ್ ಅವರು ಉತ್ತಮವಾಗಿ ನಟಿಸುತ್ತಾರೆ. ಇದರ ಜೊತೆಗೆ ಅವರಿಗೆ ಜ್ಯೋತಿಷ್ಯ ಶಾಸ್ತ್ರ ಬರುತ್ತದೆ. ಇದನ್ನು ಅವರು ಅಧ್ಯಯನ ಮಾಡಿದ್ದಾರೆ ಅನ್ನೋದು ವಿಶೇಷ. ಹಾಗಂತ ಅವರು ಇದರಲ್ಲಿ ಪಂಡಿತರೇನು ಅಲ್ಲ. ಬೇಸಿಕ್ ವಿಚಾರಗಳನ್ನು ಅವರು ಕಲಿತುಕೊಂಡಿದ್ದಾರೆ. ಈ ಬಗ್ಗೆ ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ
Image
‘ಲೇ ಕಳಸ್ರಯ್ಯ ಇವಳನ್ನ’; ಸುಕೃತಾ ಮೇಲೆ ರವಿಚಂದ್ರನ್ ಸಿಟ್ಟಾಗಿದ್ದೇಕೆ?
Image
‘ನಿಂದು ಒಂದೇ ವರ್ಷಕ್ಕೆ ಡಿವೋರ್ಸ್ ಕಣೋ’; ವಿವಾಹದ ಬಳಿಕ ಅಜಯ್ ಕೇಳಿದ ಮಾತಿದು
Image
ಸಿಕಂದರ್ ಗಳಿಕೆಯಲ್ಲಿ ಏರಿಕೆ; ಆದರೂ ನಿಂತಿಲ್ಲ ಸಲ್ಮಾನ್ ಖಾನ್ ಸಿನಿಮಾ ಪರದಾಟ
Image
ಚಿತ್ರರಂಗದ ಕರಾಳ ಮುಖ ತೆರೆದಿಟ್ಟ ಅಜಯ್ ರಾವ್; ಎದುರಿಸುವ ಸಮಸ್ಯೆಗಳೇನು?

‘ನಾನು ಜ್ಯೋತಿಷ್ಯದಲ್ಲಿ ಬೇಸಿಕ್ ಕಲಿತಿದ್ದೇನೆ. ತುಂಬಾ ಮೇಧಾವಿ ಅಲ್ಲ. ಇದು ಆಸಕ್ತಿದಾಯಕ ವಿಜ್ಞಾನ. ಆದರೆ, ಅದನ್ನು ಫಾಲೋ ಮಾಡಬಾರದು’ ಎಂದು ಅಜಯ್ ರಾವ್ ಅವರು ಹೇಳಿದ್ದಾರೆ. ಈ ಮಾತನ್ನು ಕೇಳಿ ರ‍್ಯಾಪಿಡ್ ರಶ್ಮಿ ಶಾಕ್ ಆದರು. ಆದರೆ, ಅಜಯ್ ರಾವ್ ಅವರು ಇದಕ್ಕೆ ಸ್ಪಷ್ಟನೆ ಕೊಟ್ಟರು. ಏಕೆ ಅದನ್ನು ಫಾಲೋ ಮಾಡಬಾರದು ಎಂಬುದನ್ನು ವಿವರಿಸಿದರು.

‘ಮಳೆ ಬರುತ್ತಿದೆ. ನಿಮ್ಮ ಪರಿಹಾರಗಳಿಗೆ ಶಾಸ್ತ್ರಿಗಳ ಹತ್ತಿರ ಹೋಗುತ್ತೀರಿ. ಪರಿಹಾರ-ಪೂಜೆಗಳನ್ನು ಅವರು ಹೇಳುತ್ತಾರೆ. ಆ ಬಳಿಕ ಒಂದು ಛತ್ರಿ ಸಿಗಬಹುದೇ ಹೊರತು, ಮಳೆಯಿಂದ ತಪ್ಪಿಸಿಕೊಳ್ಳೋಕೆ ಸಾಧ್ಯವಿಲ್ಲ. ಜ್ಯೋತಿಷ್ಯ ಎಂಬುದು ಸಣ್ಣ ಬೆಂಬಲ. ಕಷ್ಟದ ಸಮಯದಲ್ಲಿ ಒಂದು ಕವಚ ಬರುತ್ತದೆ. ಆ ಕಾಲವನ್ನು ಯಾವಾಗಲೂ ಬದಲಾಯಿಸೋಕೆ ಸಾಧ್ಯವಿಲ್ಲ’ ಎಂದು ಅಜಯ್ ರಾವ್ ಅವರು ಹೇಳಿದ್ದಾರೆ.

ಇದನ್ನೂ ಓದಿ:  ‘ನಿಂದು ಒಂದೇ ವರ್ಷಕ್ಕೆ ಡಿವೋರ್ಸ್ ಕಣೋ’; ವಿವಾಹದ ಬಳಿಕ ಅಜಯ್ ರಾವ್ ಕೇಳಿದ ಮಾತಿದು

ಅಜಯ್ ರಾವ್ ಅವರು ಚಿತ್ರರಂಗದಲ್ಲಿ ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ‘ಎಕ್ಸ್​ಕ್ಯೂಸ್ ಮಿ’, ‘ತಾಜ್ ಮಹಲ್’ ಮೊದಲಾದ ಸಿನಿಮಾಗಳನ್ನು ನೀಡಿದ್ದಾರೆ. ಈಗ ಅವರು ‘ಯುದ್ಧಕಾಂಡ’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಾ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:00 am, Wed, 2 April 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು