Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷಕ್ಕೊಬ್ಬರು; ನಟನೆ ಮಾತ್ರವಲ್ಲ ಈ ವಿಶೇಷ ವಿದ್ಯೆ ಕಲಿತಿದ್ದಾರೆ ಅಜಯ್ ರಾವ್  

ಪ್ರಸಿದ್ಧ ಕನ್ನಡ ನಟ ಅಜಯ್ ರಾವ್ ಅವರು ತಮ್ಮ ನಟನಾ ಕೌಶಲ್ಯದ ಜೊತೆಗೆ ಒಂದು ವಿಶೇಷ ಶಾಸ್ತ್ರ ಕಲಿತಿದ್ದಾರೆ. ಇದನ್ನು ಶ್ರದ್ಧೇಯಿಂದ ಅಧ್ಯಯನ ಮಾಡಿದ್ದಾರೆ. ಅವರ ನಟನೆಯ ‘ಯುದ್ಧಕಾಂಡ’ ಚಿತ್ರದ ಪ್ರಚಾರದಲ್ಲಿರುವ ಅಜಯ್ ರಾವ್ ಈ ಬಗ್ಗೆ ಹೇಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಲಕ್ಷಕ್ಕೊಬ್ಬರು; ನಟನೆ ಮಾತ್ರವಲ್ಲ ಈ ವಿಶೇಷ ವಿದ್ಯೆ ಕಲಿತಿದ್ದಾರೆ ಅಜಯ್ ರಾವ್  
ಅಜಯ್ ರಾವ್
Follow us
ರಾಜೇಶ್ ದುಗ್ಗುಮನೆ
|

Updated on:Apr 02, 2025 | 7:04 AM

ನಟ ಅಜಯ್ ರಾವ್ (Ajay Rao) ಅವರು ‘ಯುದ್ಧಕಾಂಡ’ ಸಿನಿಮಾ ಬಿಡುಗಡೆಗಾಗಿ ಕಾದಿದ್ದಾರೆ. ಈ ಚಿತ್ರದ ಪ್ರಚಾರದಲ್ಲಿ ಅಜಯ್ ರಾವ್ ಬ್ಯುಸಿ ಇದ್ದಾರೆ. ಈ ಮೊದಲು ಅವರು ಸಿನಿಮಾ ನಿರ್ಮಾಣವನ್ನು ಕೂಡ ಮಾಡಿದ್ದರು. ಅಜಯ್ ರಾವ್ ಅವರಿಗೆ ಒಂದು ವಿಶೇಷ ವಿದ್ಯೆ ಬರುತ್ತದೆ. ಈ ಬಗ್ಗೆ ಅಜಯ್ ರಾವ್ ರ‍್ಯಾಪಿಡ್ ರಶ್ಮಿ ಅವರಿಗೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆಯುತ್ತಾ ಇದೆ.

ಅಜಯ್ ರಾವ್ ಅವರು ಉತ್ತಮವಾಗಿ ನಟಿಸುತ್ತಾರೆ. ಇದರ ಜೊತೆಗೆ ಅವರಿಗೆ ಜ್ಯೋತಿಷ್ಯ ಶಾಸ್ತ್ರ ಬರುತ್ತದೆ. ಇದನ್ನು ಅವರು ಅಧ್ಯಯನ ಮಾಡಿದ್ದಾರೆ ಅನ್ನೋದು ವಿಶೇಷ. ಹಾಗಂತ ಅವರು ಇದರಲ್ಲಿ ಪಂಡಿತರೇನು ಅಲ್ಲ. ಬೇಸಿಕ್ ವಿಚಾರಗಳನ್ನು ಅವರು ಕಲಿತುಕೊಂಡಿದ್ದಾರೆ. ಈ ಬಗ್ಗೆ ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ
Image
‘ಲೇ ಕಳಸ್ರಯ್ಯ ಇವಳನ್ನ’; ಸುಕೃತಾ ಮೇಲೆ ರವಿಚಂದ್ರನ್ ಸಿಟ್ಟಾಗಿದ್ದೇಕೆ?
Image
‘ನಿಂದು ಒಂದೇ ವರ್ಷಕ್ಕೆ ಡಿವೋರ್ಸ್ ಕಣೋ’; ವಿವಾಹದ ಬಳಿಕ ಅಜಯ್ ಕೇಳಿದ ಮಾತಿದು
Image
ಸಿಕಂದರ್ ಗಳಿಕೆಯಲ್ಲಿ ಏರಿಕೆ; ಆದರೂ ನಿಂತಿಲ್ಲ ಸಲ್ಮಾನ್ ಖಾನ್ ಸಿನಿಮಾ ಪರದಾಟ
Image
ಚಿತ್ರರಂಗದ ಕರಾಳ ಮುಖ ತೆರೆದಿಟ್ಟ ಅಜಯ್ ರಾವ್; ಎದುರಿಸುವ ಸಮಸ್ಯೆಗಳೇನು?

‘ನಾನು ಜ್ಯೋತಿಷ್ಯದಲ್ಲಿ ಬೇಸಿಕ್ ಕಲಿತಿದ್ದೇನೆ. ತುಂಬಾ ಮೇಧಾವಿ ಅಲ್ಲ. ಇದು ಆಸಕ್ತಿದಾಯಕ ವಿಜ್ಞಾನ. ಆದರೆ, ಅದನ್ನು ಫಾಲೋ ಮಾಡಬಾರದು’ ಎಂದು ಅಜಯ್ ರಾವ್ ಅವರು ಹೇಳಿದ್ದಾರೆ. ಈ ಮಾತನ್ನು ಕೇಳಿ ರ‍್ಯಾಪಿಡ್ ರಶ್ಮಿ ಶಾಕ್ ಆದರು. ಆದರೆ, ಅಜಯ್ ರಾವ್ ಅವರು ಇದಕ್ಕೆ ಸ್ಪಷ್ಟನೆ ಕೊಟ್ಟರು. ಏಕೆ ಅದನ್ನು ಫಾಲೋ ಮಾಡಬಾರದು ಎಂಬುದನ್ನು ವಿವರಿಸಿದರು.

‘ಮಳೆ ಬರುತ್ತಿದೆ. ನಿಮ್ಮ ಪರಿಹಾರಗಳಿಗೆ ಶಾಸ್ತ್ರಿಗಳ ಹತ್ತಿರ ಹೋಗುತ್ತೀರಿ. ಪರಿಹಾರ-ಪೂಜೆಗಳನ್ನು ಅವರು ಹೇಳುತ್ತಾರೆ. ಆ ಬಳಿಕ ಒಂದು ಛತ್ರಿ ಸಿಗಬಹುದೇ ಹೊರತು, ಮಳೆಯಿಂದ ತಪ್ಪಿಸಿಕೊಳ್ಳೋಕೆ ಸಾಧ್ಯವಿಲ್ಲ. ಜ್ಯೋತಿಷ್ಯ ಎಂಬುದು ಸಣ್ಣ ಬೆಂಬಲ. ಕಷ್ಟದ ಸಮಯದಲ್ಲಿ ಒಂದು ಕವಚ ಬರುತ್ತದೆ. ಆ ಕಾಲವನ್ನು ಯಾವಾಗಲೂ ಬದಲಾಯಿಸೋಕೆ ಸಾಧ್ಯವಿಲ್ಲ’ ಎಂದು ಅಜಯ್ ರಾವ್ ಅವರು ಹೇಳಿದ್ದಾರೆ.

ಇದನ್ನೂ ಓದಿ:  ‘ನಿಂದು ಒಂದೇ ವರ್ಷಕ್ಕೆ ಡಿವೋರ್ಸ್ ಕಣೋ’; ವಿವಾಹದ ಬಳಿಕ ಅಜಯ್ ರಾವ್ ಕೇಳಿದ ಮಾತಿದು

ಅಜಯ್ ರಾವ್ ಅವರು ಚಿತ್ರರಂಗದಲ್ಲಿ ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ‘ಎಕ್ಸ್​ಕ್ಯೂಸ್ ಮಿ’, ‘ತಾಜ್ ಮಹಲ್’ ಮೊದಲಾದ ಸಿನಿಮಾಗಳನ್ನು ನೀಡಿದ್ದಾರೆ. ಈಗ ಅವರು ‘ಯುದ್ಧಕಾಂಡ’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಾ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:00 am, Wed, 2 April 25

ಕುಟುಂಬ ರಾಜಕಾರಣದಿಂದ ಹೊರಬರುವ ವರೆಗೂ ಮತ್ತೆ ಬಿಜೆಪಿಗೆ ಬರಲ್ಲ: ಯತ್ನಾಳ್
ಕುಟುಂಬ ರಾಜಕಾರಣದಿಂದ ಹೊರಬರುವ ವರೆಗೂ ಮತ್ತೆ ಬಿಜೆಪಿಗೆ ಬರಲ್ಲ: ಯತ್ನಾಳ್
ಬ್ರಹ್ಮೋತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾರಿಗೆ ಮೊದಲಬಾರಿಗೆ ದಾಸೋಹ ವ್ಯವಸ್ಥೆ
ಬ್ರಹ್ಮೋತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾರಿಗೆ ಮೊದಲಬಾರಿಗೆ ದಾಸೋಹ ವ್ಯವಸ್ಥೆ
ಕೇಂದ್ರ ರೂಪಿಸುವ ಕಾನೂನನ್ನು ರಾಜ್ಯಗಳು ಜಾರಿಮಾಡಬೇಕು: ಪ್ರಲ್ಹಾದ್ ಜೋಶಿ
ಕೇಂದ್ರ ರೂಪಿಸುವ ಕಾನೂನನ್ನು ರಾಜ್ಯಗಳು ಜಾರಿಮಾಡಬೇಕು: ಪ್ರಲ್ಹಾದ್ ಜೋಶಿ
ಬ್ರೆಜಿಲ್​ನಲ್ಲಿ ಆಕಾಶದಿಂದ ನೇರವಾಗಿ ರಸ್ತೆಗೆ ಇಳಿದ ವಿಮಾನ
ಬ್ರೆಜಿಲ್​ನಲ್ಲಿ ಆಕಾಶದಿಂದ ನೇರವಾಗಿ ರಸ್ತೆಗೆ ಇಳಿದ ವಿಮಾನ
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್, ವಿಡಿಯೋ ವೈರಲ್
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್, ವಿಡಿಯೋ ವೈರಲ್
ಉತ್ತರಾಖಂಡ: ಹೊತ್ತಿ ಉರಿದ ರಾಸಾಯನಿಕ ಕಾರ್ಖಾನೆ, ಹಲವರು ಸಿಲುಕಿರುವ ಶಂಕೆ
ಉತ್ತರಾಖಂಡ: ಹೊತ್ತಿ ಉರಿದ ರಾಸಾಯನಿಕ ಕಾರ್ಖಾನೆ, ಹಲವರು ಸಿಲುಕಿರುವ ಶಂಕೆ
ಅಕ್ಷರಾಭ್ಯಾಸಕ್ಕೆ ಯಾವ ದಿನ ಶುಭ ಮತ್ತು ಹೇಗೆ ಮಾಡಿಸಬೇಕು?
ಅಕ್ಷರಾಭ್ಯಾಸಕ್ಕೆ ಯಾವ ದಿನ ಶುಭ ಮತ್ತು ಹೇಗೆ ಮಾಡಿಸಬೇಕು?
Daily Horoscope: ರಾಜಕೀಯ ವ್ಯಕ್ತಿಗಳಿಗೆ ಇಂದು ಉತ್ತಮ ದಿನ
Daily Horoscope: ರಾಜಕೀಯ ವ್ಯಕ್ತಿಗಳಿಗೆ ಇಂದು ಉತ್ತಮ ದಿನ
ಧ್ರುವ ಸರ್ಜಾ ಫ್ಯಾನ್ಸ್ ರೀತಿಯೇ ಪ್ರಥಮ್ ಅಭಿಮಾನಿಗಳಿಂದ ವಿಚಿತ್ರ ಹಾಡು
ಧ್ರುವ ಸರ್ಜಾ ಫ್ಯಾನ್ಸ್ ರೀತಿಯೇ ಪ್ರಥಮ್ ಅಭಿಮಾನಿಗಳಿಂದ ವಿಚಿತ್ರ ಹಾಡು
ಮೆಟ್ರೋ ಕಂಬಗಳು, ಐತಿಹಾಸಿಕ ಕಟ್ಟಡಗಳಿಗೂ ದೀಪಾಲಂಕಾರ: ಡಿಕೆ ಶಿವಕುಮಾರ್
ಮೆಟ್ರೋ ಕಂಬಗಳು, ಐತಿಹಾಸಿಕ ಕಟ್ಟಡಗಳಿಗೂ ದೀಪಾಲಂಕಾರ: ಡಿಕೆ ಶಿವಕುಮಾರ್