AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗಾಲದಲ್ಲೇ ಆಗಲಿದೆ ‘ಭಗೀರಥ’ನ ಎಂಟ್ರಿ; ಮಂಡಳಿ ಅಧ್ಯಕ್ಷರಿಂದ ಟೀಸರ್​ ಬಿಡುಗಡೆ

ಜಯಪ್ರಕಾಶ್, ಶ್ರೀಯಾ ಪಾವನಿ ಮುಂತಾದವರು ‘ಭಗೀರಥ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಟೀಸರ್​ ಬಿಡುಗಡೆ ಮಾಡಲಾಗಿದೆ. ಮಳೆಗಾಲದಲ್ಲೇ ಸಿನಿಮಾ ರಿಲೀಸ್​ ಮಾಡಲು ನಿರ್ಮಾಪಕರು ತೀರ್ಮಾನಿಸಿದ್ದಾರೆ. ರಾಮ್​ ಜನಾರ್ದನ್​ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬಂದಿದೆ.

ಮಳೆಗಾಲದಲ್ಲೇ ಆಗಲಿದೆ ‘ಭಗೀರಥ’ನ ಎಂಟ್ರಿ; ಮಂಡಳಿ ಅಧ್ಯಕ್ಷರಿಂದ ಟೀಸರ್​ ಬಿಡುಗಡೆ
‘ಭಗೀರಥ’ ಸಿನಿಮಾ ತಂಡ
ಮದನ್​ ಕುಮಾರ್​
|

Updated on: May 09, 2024 | 10:56 PM

Share

ಭೂಮಿಗೆ ಗಂಗೆಯನ್ನು ಕರೆತಂದ ಭಗೀರಥನು ಬಹಳ ಅಸಾಧ್ಯವಾದ ಕೆಲಸವನ್ನು ಮಾಡಿ ತೋರಿಸಿದ. ಅಂಥ ಪ್ರಯತ್ನವನ್ನು ಭಗೀರಥ ಪ್ರಯತ್ನ ಎನ್ನುತ್ತೇವೆ. ಈಗ ‘ಭಗೀರಥ’ ಎಂಬ ಶೀರ್ಷಿಕೆಯಲ್ಲೇ ಹೊಸ ಕನ್ನಡ ಸಿನಿಮಾ (Kannada Movie) ಮೂಡಿಬಂದಿದೆ. ವಿಶೇಷ ಎಂದರೆ, ಈ ಸಿನಿಮಾ ಮಳೆಗಾಲದಲ್ಲೇ ಬಿಡುಗಡೆ ಆಗಲಿದೆ. ಜೂನ್​ನಲ್ಲಿ ಸಿನಿಮಾವನ್ನು ಬಿಡುಗಡೆ ಮಾಡಲು ತಂಡ ಸಿದ್ಧತೆ ಮಾಡಿಕೊಂಡಿದೆ. ‘ಸಾಯಿ ರಮೇಶ್ ಪ್ರೊಡಕ್ಷನ್’ ಸಂಸ್ಥೆ ಮೂಲಕ ಕೆ. ರಮೇಶ್ ಮತ್ತು ಬಿ.ಭೈರಪ್ಪ ಮೈಸೂರು ಅವರು ‘ಭಗೀರಥ’ (Bhageeratha) ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರಾಮ್ ಜನಾರ್ದನ್ ಅವರು ನಿರ್ದೇಶನ ಮಾಡಿದ್ದಾರೆ.

ಇತ್ತೀಚೆಗೆ ‘ಭಗೀರಥ’ ಸಿನಿಮಾದ ಟೀಸರ್ ಅನ್ನು ಬಿಡುಗಡೆ ಮಾಡಲಾಯಿತು‌. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ. ಸುರೇಶ್ ಅವರು ಟೀಸರ್ ಅನಾವರಣ ಮಾಡಿ ಶುಭ ಹಾರೈಸಿದರು. ‘ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ನಮ್ಮ ಸಿನಿಮಾದ ಮುಹೂರ್ತ ಆಗಿತ್ತು. ಈಗ ಶೂಟಿಂಗ್​ ಮುಕ್ತಾಯ ಆಗಿದೆ. ತೆರೆಗೆ ಬರಲು ಸಿನಿಮಾ ಸಿದ್ಧವಾಗಿದೆ. ಮಂದಿನ ತಿಂಗಳಲ್ಲಿ ಬಿಡುಗಡೆ ಮಾಡಲು ಪ್ರಯತ್ನ ನಡೆಯುತ್ತಿದೆ‌’ ಎಂದು ನಿರ್ದೇಶಕ ರಾಮ್​ ಜನಾರ್ದನ್​ ಹೇಳಿದ್ದಾರೆ.

‘ಚಿತ್ರತಂಡದ ಎಲ್ಲರ ಸಹಕಾರದಿಂದ ಈ ಸಿನಿಮಾ ಉತ್ತಮವಾಗಿ ಮೂಡಿಬಂದಿದೆ. ನಾನು ‘ಬಾಯ್ ಫ್ರೆಂಡ್’ ಸಿನಿಮಾದಿಂದ ನಿರ್ದೇಶಕನಾದೆ. ‘ಭಗೀರಥ’ ನಾನು ನಿರ್ದೇಶನ ಮಾಡಿದ 5ನೇ ಸಿನಿಮಾ. ಇದರಲ್ಲಿ ಪ್ರಸ್ತುತ ರಾಜಕಾರಣದ ಕಥಾಹಂದರ ಇದೆ. ಪತ್ರಕರ್ತರೊಬ್ಬರ ಸುತ್ತ ಕಥೆ ಸಾಗುತ್ತದೆ’ ಎಂದು ರಾಮ್ ಜನಾರ್ದನ್‌ ಹೇಳಿದ್ದಾರೆ. ಪತ್ರಕರ್ತನಾಗಿದ್ದ ಜಯಪ್ರಕಾಶ್​ ಅವರು ಈ ಸಿನಿಮಾಗೆ ಹೀರೋ ಆಗಿದ್ದಾರೆ. ಇದು ಅವರ ಮೂರನೇ ಸಿನಿಮಾ.

ಇದನ್ನೂ ಓದಿ: ‘ಕಣ್ಣಪ್ಪ’ ಶೂಟಿಂಗ್​ ಸೆಟ್​ಗೆ ಬಂದ ಪ್ರಭಾಸ್​; ಪೋಸ್ಟರ್​ ಮೂಲಕ ಗುಡ್​ ನ್ಯೂಸ್​

ಕೆ. ರಮೇಶ್ ಮತ್ತು ಬಿ. ಭೈರಪ್ಪ ಅವರು ಮಾತನಾಡಿ, ‘ನಿರ್ದೇಶಕರು ಹೇಳಿದ ಕಥೆ ನಮಗೆ ತುಂಬ ಇಷ್ಟ ಆಯಿತು. ಆದ್ದರಿಂದ ನಿರ್ಮಾಣ ಮಾಡಿದೆವು. ಸದ್ಯದಲ್ಲೇ ಸಿನಿಮಾ ರಿಲೀಸ್ ಮಾಡುತ್ತೇವೆ. ನಿಮ್ಮೆಲ್ಲರ ಪ್ರೋತ್ಸಾಹ ಇರಲಿ’ ಎಂದು ಹೇಳಿದ್ದಾರೆ. ನಟಿ ಶ್ರೀಯಾ ಪಾವನಿ ಅವರು ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಪ್ರದೀಪ್ ವರ್ಮ ಅವರ ಸಂಗೀತ ನಿರ್ದೇಶನ ಈ ಸಿನಿಮಾಗಿದೆ. ಸೂರಿ ಚಿತ್ತೂರು ಅವರ ಛಾಯಾಗ್ರಹಣ ಮಾಡಿದ್ದಾರೆ. ಜಯಪ್ರಕಾಶ್, ಶ್ರೀಯಾ ಪಾವನಿ ಜೊತೆ ಚಂದನಾ ರಾಘವೇಂದ್ರ, ಶಿವರಾಜ್ ಕೆ.ಆರ್ ಪೇಟೆ, ಸುಧಾ ಬೆಳವಾಡಿ, ರವಿಕಾಳೆ, ಬಾಲರಾಜ್​ ವಾಡಿ, ಶ್ರೀನಿವಾಸ್​ ಪ್ರಭು, ನಯನಾ, ಸುರಭಿ ರವಿ ಮುಂತಾದವರು ‘ಭಗೀರಥ’ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು