AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮ್ಮಾವ್ರ ಗಂಡ’ ಚಿತ್ರದ ನಟಿ ಭಾಗ್ಯಶ್ರೀ ಹಣೆಗೆ ಗಾಯ, 13 ಹೊಲಿಗೆ: ಫೋಟೋ ವೈರಲ್

ಶಿವರಾಜ್​ಕುಮಾರ್​ ಜೊತೆ ‘ಅಮ್ಮಾವ್ರ ಗಂಡ’ ಚಿತ್ರದಲ್ಲಿ ನಟಿಸಿದ್ದ ಭಾಗ್ಯಶ್ರೀ ಅವರು ಪೆಟ್ಟು ಮಾಡಿಕೊಂಡಿದ್ದಾರೆ. ಆಪರೇಷನ್​ ಥಿಯೇಟರ್​​ನಲ್ಲಿ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡುತ್ತಿರುವ ಫೋಟೋ ವೈರಲ್ ಆಗಿದೆ. ಭಾಗ್ಯಶ್ರೀ ಅವರ ಹೆಲ್ತ್ ಅಪ್​ಡೇಟ್ ತಿಳಿಯಲು ಫ್ಯಾನ್ಸ್ ಕಾದಿದ್ದಾರೆ. ಆ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

‘ಅಮ್ಮಾವ್ರ ಗಂಡ’ ಚಿತ್ರದ ನಟಿ ಭಾಗ್ಯಶ್ರೀ ಹಣೆಗೆ ಗಾಯ, 13 ಹೊಲಿಗೆ: ಫೋಟೋ ವೈರಲ್
Bhagyashree
ಮದನ್​ ಕುಮಾರ್​
|

Updated on: Mar 13, 2025 | 6:02 PM

Share

ಒಂದು ಕಾಲದಲ್ಲಿ ಸೂಪರ್ ಹಿಟ್ ಸಿನಿಮಾಗಳ ಮೂಲಕ ಮಿಂಚಿದ ನಟಿ ಭಾಗ್ಯಶ್ರೀ (Bhagyashree) ಅವರ ಬಗ್ಗೆ ಈಗ ಒಂದು ಕಹಿ ಸುದ್ದಿ ಕೇಳಿಬಂದಿದೆ. ಅವರ ಹಣೆಗೆ ತೀವ್ರವಾಗಿ ಪೆಟ್ಟಾಗಿದೆ. ಅದರ ಫೋಟೋ ಕೂಡ ವೈರಲ್ ಆಗುತ್ತಿದೆ. ಗಾಯ ಆದ ಕೂಡಲೇ ಭಾಗ್ಯಶ್ರೀ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರು ಸರ್ಜರಿ (Surgery) ಮಾಡಿದ್ದು, ಭಾಗ್ಯಶ್ರೀ ಹಣೆಗೆ 13 ಹೊಲಿಗೆ ಹಾಕಿದ್ದಾರೆ. ಈ ಬಗ್ಗೆ ಭಾಗ್ಯಶ್ರೀ ಅವರು ಇನ್ನೂ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಅವರ ಹೆಲ್ತ್ ಅಪ್​ಡೇಟ್​ ತಿಳಿಯಲು ಅಭಿಮಾನಿಗಳು ಕಾದಿದ್ದಾರೆ. ಆದಷ್ಟು ಬೇಗ ಭಾಗ್ಯಶ್ರೀ ಅವರು ಚೇತರಿಸಿಕೊಳ್ಳಲಿ ಎಂದು ಜನರು ಪ್ರಾರ್ಥಿಸುತ್ತಿದ್ದಾರೆ.

ಭಾಗ್ಯಶ್ರೀ ಅವರು ಚಿತ್ರರಂಗದಲ್ಲಿ ಈಗ ಅಷ್ಟೇನೂ ಆ್ಯಕ್ಟೀವ್ ಆಗಿಲ್ಲ. ಅಲ್ಲೊಂದು ಇಲ್ಲೊಂದು ಸಿನಿಮಾಗಳನ್ನು ಮಾತ್ರ ಅವರು ಒಪ್ಪಿಕೊಳ್ಳುತ್ತಿದ್ದಾರೆ. 90ರ ದಶಕದಲ್ಲಿ ಸಲ್ಮಾನ್ ಖಾನ್, ಶಿವರಾಜ್​ಕುಮಾರ್​ ಮುಂತಾದ ನಟರಿಗೆ ಜೋಡಿಯಾಗಿ ನಟಿಸಿದ್ದ ಅವರಿಗೆ ಈಗ 56 ವರ್ಷ ವಯಸ್ಸು. ಶೂಟಿಂಗ್ ವೇಳೆ ಅವರಿಗೆ ಪೆಟ್ಟಾಗಿರಬಹುದಾ ಎಂಬ ಪ್ರಶ್ನೆ ಹಲವರಿಗೆ ಮೂಡಿದೆ. ಆದರೆ ಅದು ನಿಜವಲ್ಲ. ಭಾಗ್ಯಶ್ರೀ ಅವರು ಆಟ ಆಡುವಾಗ ಈ ಘಟನೆ ನಡೆದಿದೆ.

ಪಿಕಲ್​ಬಾಲ್​ ಆಟದ ಬಗ್ಗೆ ಭಾಗ್ಯಶ್ರೀ ಅವರು ಆಸಕ್ತಿ ಹೊಂದಿದ್ದಾರೆ. ಇತ್ತೀಚೆಗೆ ಅವರು ಪಿಕಲ್​ಬಾಲ್ ಆಡುವಾಗ ಪೆಟ್ಟು ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆಪರೇಷನ್​ ಥಿಯೇಟರ್​ನಲ್ಲಿ ಭಾಗ್ಯಶ್ರೀ ಅವರು ಮಲಗಿರುವ ಫೋಟೋ ವೈರಲ್ ಆಗುತ್ತಿದೆ. ಇದನ್ನು ನೋಡಿ ಅಭಿಮಾನಿಗಳಿಗೆ ಗಾಬರಿ ಆಗಿದೆ. ಆದರೆ ಆತಂಕಪಡುವಂಥದ್ದು ಏನೂ ಇಲ್ಲ. ಸರ್ಜರಿ ಬಳಿಕ ಅವರು ಚೇತರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ
Image
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
Image
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
Image
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
Image
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

ಇದನ್ನೂ ಓದಿ: ‘ಅಮ್ಮಾವ್ರ ಗಂಡ’ ಚಿತ್ರದ ನಟಿ ಭಾಗ್ಯಶ್ರೀ ಪುತ್ರಿಯ ಸಿನಿಮಾಗೆ ನಾಗಶೇಖರ್​ ನಿರ್ದೇಶನ

1989ರಲ್ಲಿ ಭಾಗ್ಯಶ್ರೀ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಅವರು ನಟಿಸಿದ ಮೊದಲ ಸಿನಿಮಾ ‘ಮೈನೆ ಪ್ಯಾರ್​ ಕಿಯಾ’. ಆ ಸಿನಿಮಾದಲ್ಲಿ ಅವರು ಸಲ್ಮಾನ್ ಖಾನ್ ಜೊತೆ ತೆರೆ ಹಂಚಿಕೊಂಡರು. ಮೊದಲ ಚಿತ್ರವೇ ಸೂಪರ್ ಹಿಟ್ ಆಯಿತು. ಆ ಚಿತ್ರದಲ್ಲಿನ ನಟನೆಗೆ ಭಾಗ್ಯಶ್ರೀ ಅವರಿಗೆ ಫಿಲ್ಮ್​ಫೇರ್​ ಪ್ರಶಸ್ತಿ ಕೂಡ ಸಿಕ್ಕಿತು. 1997ರಲ್ಲಿ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ಶಿವರಾಜ್​​ಕುಮಾರ್​ ಜೊತೆ ‘ಅಮ್ಮಾವ್ರ ಗಂಡ’ ಸಿನಿಮಾದಲ್ಲಿ ಭಾಗ್ಯಶ್ರೀ ನಟಿಸಿದರು. ಕನ್ನಡ, ಹಿಂದಿ ಮಾತ್ರವಲ್ಲದೇ ತೆಲುಗು, ಬೆಂಗಾಲಿ, ಭೋಜ್​ಪುರಿ, ಮರಾಠಿ ಮುಂತಾದ ಭಾಷೆಯ ಸಿನಿಮಾಗಳಲ್ಲಿ ಕೂಡ ಭಾಗ್ಯಶ್ರೀ ಅವರು ಅಭಿನಯಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ