AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭೈರಾ’ ಸಿನಿಮಾ ಮುಹೂರ್ತ; ಶುಭ ಕೋರಿದ ಲವ್ಲಿ ಸ್ಟಾರ್ ಪ್ರೇಮ್

ಚಿತ್ರೀಕರಣಕ್ಕೆ ‘ಭೈರಾ’ ಚಿತ್ರತಂಡ ಸಕಲ ಸಿದ್ಧತೆ ಮಾಡಿಕೊಂಡಿದೆ. ಇತ್ತೀಚೆಗೆ ಮುಹೂರ್ತ ನೆರವೇರಿದೆ. ಅಮಿತ್ ಪೂಜಾರಿ ನಿರ್ಮಾಣ ಮಾಡುತ್ತಿರುವ ಈ ಸಿನಿಮಾಗೆ ಅಕುಲ್ ಎನ್. ಅವರು ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಮಹೇಶ್ ಸಿದ್ದು, ಶ್ವೇತಾ ಸುರೇಂದ್ರ ಅವರು ‘ಭೈರಾ’ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ.

‘ಭೈರಾ’ ಸಿನಿಮಾ ಮುಹೂರ್ತ; ಶುಭ ಕೋರಿದ ಲವ್ಲಿ ಸ್ಟಾರ್ ಪ್ರೇಮ್
Bhairaa Movie Team
ಮದನ್​ ಕುಮಾರ್​
|

Updated on: Aug 22, 2025 | 10:43 PM

Share

ಇತ್ತೀಚೆಗೆ ಕನ್ನಡದ ‘ಭೈರಾ’ (Bhairaa) ಸಿನಿಮಾಗೆ ಮುಹೂರ್ತ ಸಮಾರಂಭ ಮಾಡಲಾಯಿತು. ಬೆಂಗಳೂರಿನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಚಿತ್ರತಂಡ ಮುಹೂರ್ತ ಆಚರಿಸಿಕೊಂಡಿತು. ‘ಲವ್ಲಿ ಸ್ಟಾರ್’ ಪ್ರೇಮ್ (Nenapirali Prem) ಅವರು ಈ ಸಿನಿಮಾದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದರು. ಬಳಿಕ ಅವರು ಚಿತ್ರತಂಡಕ್ಕೆ ಶುಭ ಕೋರಿದರು. ಈ ಸಿನಿಮಾದಲ್ಲಿ ಮಹೇಶ್ ಸಿದ್ದು ಅವರು ಹೀರೋ ಆಗಿ ನಟಿಸುತ್ತಿದ್ದಾರೆ. ಅವರಿಗೆ ಜೋಡಿಯಾಗಿ ಶ್ವೇತಾ ಸುರೇಂದ್ರ ಅವರು ಅಭಿನಯಿಸುತ್ತಿದ್ದಾರೆ. ಚಿತ್ರತಂಡದ ಬಗ್ಗೆ ಇಲ್ಲಿದೆ ಮಾಹಿತಿ..

ಮಹೇಶ್ ಸಿದ್ದು ಅವರು ಈ ಮೊದಲು ‘ಗೂಳಿಹಟ್ಟಿ’, ‘ಸಾಗುತ ದೂರ ದೂರ’ ಮುಂತಾದ ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಈಗ ಅವರು ಒಂದು ಗ್ಯಾಪ್ ಬಳಿಕ ಹೀರೋ ಆಗಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. 200ಕ್ಕೂ ಅಧಿಕ ಸಿನಿಮಾಗಳಿಗೆ ನೃತ್ಯ ಸಂಯೋಜಕರಾಗಿ ಕೆಲಸ ಮಾಡಿದ ಅನುಭವ ಹೊಂದಿರುವ ಅಕುಲ್ ಎನ್. ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಕಥೆ ಕೂಡ ಅವರೇ ಬರೆದಿದ್ದಾರೆ.

‘ಖುಷಿ ಕನಸು ಕ್ರಿಯೇಶನ್ಸ್’ ಮೂಲಕ ಅಮಿತ್ ಪೂಜಾರಿ ಅವರು ‘ಭೈರಾ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅಶೋಕ್ ಡಿಡಿಎನ್ ಅವರು ಸಹ ನಿರ್ಮಾಪಕರಾಗಿದ್ದಾರೆ. ಮಂಜು ಮಹದೇವ್ ಅವರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಎಸ್. ಹಾಲೇಶ್ ಅವರು ಛಾಯಾಗ್ರಹಣದ ಜವಾಬ್ದಾರಿ ಹೊತ್ತಿದ್ದಾರೆ. ಕೆ.ಎಂ. ಪ್ರಕಾಶ್ ಅವರು ಸಂಕಲನ ಮಾಡಲಿದ್ದಾರೆ.

ಯಾವುದೇ ಕೆಲಸಕ್ಕೂ ಸೈ ಎನ್ನುವ ಹುಡುಗನ ಪಾತ್ರದಲ್ಲಿ ಮಹೇಶ್‌ ಸಿದ್ದು ಅವರು ಕಾಣಿಸಿಕೊಳ್ಳಲಿದ್ದಾರೆ. ನಾಯಕಿ ಶ್ವೇತಾ ಸುರೇಂದ್ರ ಅವರು ಬಜಾರಿ ಹುಡುಗಿಯ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಜಾಕ್ ಜಾಲಿಜಾಲಿ, ರವಿಕಾಳೆ, ವರ್ಧನ್, ಯಶ್‌ ಶೆಟ್ಟಿ, ಸಂಪತ್‌ ಕುಮಾರ್, ಕಾಕ್ರೋಚ್ ಸುಧಿ, ವೀಣಾ ಶೆಟ್ಟಿ, ಬಿ. ಚಂದಿರಧರ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಇದನ್ನೂ ಓದಿ: 27 ವರ್ಷದ ಹಿಂದೆ ‘ನೆನಪಿರಲಿ’ ಪ್ರೇಮ್​​ಗೆ ಪ್ರೀತಿ ಚಿಗುರಿದ ಜಾಗ ಇದು

‘ಭೈರಾ’ ಚಿತ್ರದ ಹಾಡುಗಳಿಗೆ ಭರ್ಜರಿ ಚೇತನ್, ನಾಗಾರ್ಜುನ ಶರ್ಮ, ಅನಿರುದ್ದ್ ಶಾಸ್ತ್ರೀ ಸಾಹಿತ್ಯ ಬರೆದಿದ್ದಾರೆ. ವಿಕ್ರಂ ಮೋರ್ ಹಾಗೂ ವಿನೋದ್ ಅವರು ಸಾಹಸ ನಿರ್ದೇಶನ ಮಾಡಲಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾಗೆ ಶೂಟಿಂಗ್ ಆರಂಭ ಆಗಲಿದೆ. ಬೆಂಗಳೂರಿನ ಓಕಳಿಪುರ, ಕಲಾಸಿಪಾಳ್ಯ ಮುಂತಾದ ಕಡೆ ಹೆಚ್ಚಿನ ಭಾಗದ ಶೂಟಿಂಗ್ ಆಗಲಿದೆ ಎಂದು ನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್