‘ಭೈರಾ’ ಸಿನಿಮಾ ಮುಹೂರ್ತ; ಶುಭ ಕೋರಿದ ಲವ್ಲಿ ಸ್ಟಾರ್ ಪ್ರೇಮ್

ಚಿತ್ರೀಕರಣಕ್ಕೆ ‘ಭೈರಾ’ ಚಿತ್ರತಂಡ ಸಕಲ ಸಿದ್ಧತೆ ಮಾಡಿಕೊಂಡಿದೆ. ಇತ್ತೀಚೆಗೆ ಮುಹೂರ್ತ ನೆರವೇರಿದೆ. ಅಮಿತ್ ಪೂಜಾರಿ ನಿರ್ಮಾಣ ಮಾಡುತ್ತಿರುವ ಈ ಸಿನಿಮಾಗೆ ಅಕುಲ್ ಎನ್. ಅವರು ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಮಹೇಶ್ ಸಿದ್ದು, ಶ್ವೇತಾ ಸುರೇಂದ್ರ ಅವರು ‘ಭೈರಾ’ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ.

‘ಭೈರಾ’ ಸಿನಿಮಾ ಮುಹೂರ್ತ; ಶುಭ ಕೋರಿದ ಲವ್ಲಿ ಸ್ಟಾರ್ ಪ್ರೇಮ್
Bhairaa Movie Team

Updated on: Aug 22, 2025 | 10:43 PM

ಇತ್ತೀಚೆಗೆ ಕನ್ನಡದ ‘ಭೈರಾ’ (Bhairaa) ಸಿನಿಮಾಗೆ ಮುಹೂರ್ತ ಸಮಾರಂಭ ಮಾಡಲಾಯಿತು. ಬೆಂಗಳೂರಿನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಚಿತ್ರತಂಡ ಮುಹೂರ್ತ ಆಚರಿಸಿಕೊಂಡಿತು. ‘ಲವ್ಲಿ ಸ್ಟಾರ್’ ಪ್ರೇಮ್ (Nenapirali Prem) ಅವರು ಈ ಸಿನಿಮಾದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದರು. ಬಳಿಕ ಅವರು ಚಿತ್ರತಂಡಕ್ಕೆ ಶುಭ ಕೋರಿದರು. ಈ ಸಿನಿಮಾದಲ್ಲಿ ಮಹೇಶ್ ಸಿದ್ದು ಅವರು ಹೀರೋ ಆಗಿ ನಟಿಸುತ್ತಿದ್ದಾರೆ. ಅವರಿಗೆ ಜೋಡಿಯಾಗಿ ಶ್ವೇತಾ ಸುರೇಂದ್ರ ಅವರು ಅಭಿನಯಿಸುತ್ತಿದ್ದಾರೆ. ಚಿತ್ರತಂಡದ ಬಗ್ಗೆ ಇಲ್ಲಿದೆ ಮಾಹಿತಿ..

ಮಹೇಶ್ ಸಿದ್ದು ಅವರು ಈ ಮೊದಲು ‘ಗೂಳಿಹಟ್ಟಿ’, ‘ಸಾಗುತ ದೂರ ದೂರ’ ಮುಂತಾದ ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಈಗ ಅವರು ಒಂದು ಗ್ಯಾಪ್ ಬಳಿಕ ಹೀರೋ ಆಗಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. 200ಕ್ಕೂ ಅಧಿಕ ಸಿನಿಮಾಗಳಿಗೆ ನೃತ್ಯ ಸಂಯೋಜಕರಾಗಿ ಕೆಲಸ ಮಾಡಿದ ಅನುಭವ ಹೊಂದಿರುವ ಅಕುಲ್ ಎನ್. ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಕಥೆ ಕೂಡ ಅವರೇ ಬರೆದಿದ್ದಾರೆ.

‘ಖುಷಿ ಕನಸು ಕ್ರಿಯೇಶನ್ಸ್’ ಮೂಲಕ ಅಮಿತ್ ಪೂಜಾರಿ ಅವರು ‘ಭೈರಾ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅಶೋಕ್ ಡಿಡಿಎನ್ ಅವರು ಸಹ ನಿರ್ಮಾಪಕರಾಗಿದ್ದಾರೆ. ಮಂಜು ಮಹದೇವ್ ಅವರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಎಸ್. ಹಾಲೇಶ್ ಅವರು ಛಾಯಾಗ್ರಹಣದ ಜವಾಬ್ದಾರಿ ಹೊತ್ತಿದ್ದಾರೆ. ಕೆ.ಎಂ. ಪ್ರಕಾಶ್ ಅವರು ಸಂಕಲನ ಮಾಡಲಿದ್ದಾರೆ.

ಯಾವುದೇ ಕೆಲಸಕ್ಕೂ ಸೈ ಎನ್ನುವ ಹುಡುಗನ ಪಾತ್ರದಲ್ಲಿ ಮಹೇಶ್‌ ಸಿದ್ದು ಅವರು ಕಾಣಿಸಿಕೊಳ್ಳಲಿದ್ದಾರೆ. ನಾಯಕಿ ಶ್ವೇತಾ ಸುರೇಂದ್ರ ಅವರು ಬಜಾರಿ ಹುಡುಗಿಯ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಜಾಕ್ ಜಾಲಿಜಾಲಿ, ರವಿಕಾಳೆ, ವರ್ಧನ್, ಯಶ್‌ ಶೆಟ್ಟಿ, ಸಂಪತ್‌ ಕುಮಾರ್, ಕಾಕ್ರೋಚ್ ಸುಧಿ, ವೀಣಾ ಶೆಟ್ಟಿ, ಬಿ. ಚಂದಿರಧರ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಇದನ್ನೂ ಓದಿ: 27 ವರ್ಷದ ಹಿಂದೆ ‘ನೆನಪಿರಲಿ’ ಪ್ರೇಮ್​​ಗೆ ಪ್ರೀತಿ ಚಿಗುರಿದ ಜಾಗ ಇದು

‘ಭೈರಾ’ ಚಿತ್ರದ ಹಾಡುಗಳಿಗೆ ಭರ್ಜರಿ ಚೇತನ್, ನಾಗಾರ್ಜುನ ಶರ್ಮ, ಅನಿರುದ್ದ್ ಶಾಸ್ತ್ರೀ ಸಾಹಿತ್ಯ ಬರೆದಿದ್ದಾರೆ. ವಿಕ್ರಂ ಮೋರ್ ಹಾಗೂ ವಿನೋದ್ ಅವರು ಸಾಹಸ ನಿರ್ದೇಶನ ಮಾಡಲಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾಗೆ ಶೂಟಿಂಗ್ ಆರಂಭ ಆಗಲಿದೆ. ಬೆಂಗಳೂರಿನ ಓಕಳಿಪುರ, ಕಲಾಸಿಪಾಳ್ಯ ಮುಂತಾದ ಕಡೆ ಹೆಚ್ಚಿನ ಭಾಗದ ಶೂಟಿಂಗ್ ಆಗಲಿದೆ ಎಂದು ನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us