AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್​ನಲ್ಲಿ ‘ಭೈರತಿ ರಣಗಲ್’ ಮಾತ್ರವಲ್ಲ ‘UI’ ರಿಲೀಸ್​ಗೂ ಮುಹೂರ್ತ ಫಿಕ್ಸ್

ಇತ್ತೀಚೆಗೆ ಕನ್ನಡದಲ್ಲಿ ಯಾವುದೇ ದೊಡ್ಡ ಸಿನಿಮಾ ರಿಲೀಸ್ ಆಗಿಲ್ಲ. ಹೀಗಾಗಿ, ಕನ್ನಡಿಗರ ಪಾಲಿಗೆ ಸೆಪ್ಟೆಂಬರ್ ವಿಶೇಷ ಎನಿಸಿಕೊಳ್ಳಲಿದೆ. ಒಂದೇ ತಿಂಗಳಲ್ಲಿ ಎರಡು ದೊಡ್ಡ ಸಿನಿಮಾಗಳು ರಿಲೀಸ್ ಆಗುತ್ತಿರುವುದರಿಂದ ಫ್ಯಾನ್ಸ್ ನಿಜಕ್ಕೂ ಖುಷಿಯಾಗಿದ್ದಾರೆ.

ಸೆಪ್ಟೆಂಬರ್​ನಲ್ಲಿ ‘ಭೈರತಿ ರಣಗಲ್’ ಮಾತ್ರವಲ್ಲ ‘UI’ ರಿಲೀಸ್​ಗೂ ಮುಹೂರ್ತ ಫಿಕ್ಸ್
ಉಪೇಂದ್ರ-ಶಿವಣ್ಣ
ರಾಜೇಶ್ ದುಗ್ಗುಮನೆ
|

Updated on:Jul 17, 2024 | 12:35 PM

Share

ಸೆಪ್ಟೆಂಬರ್​ನಲ್ಲಿ ಕನ್ನಡ ಸಿನಿಮಾ ಪ್ರಿಯರಿಗೆ ಹಬ್ಬದ ವಾತಾವರಣ ನಿರ್ಮಾಣ ಆಗಲಿದೆ. ಇದಕ್ಕೆ ಕಾರಣ ‘ಭೈರತಿ ರಣಗಲ್’ ಹಾಗೂ ‘ಯುಐ’ ಸಿನಿಮಾಗಳು ಇದೇ ತಿಂಗಳಲ್ಲಿ ರಿಲೀಸ್ ಆಗುತ್ತಿರುವುದು. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಕನಿಷ್ಠ 15 ದಿನ ಅಂತರಗಳಲ್ಲಿ ಈ ಸಿನಿಮಾಗಳು ರಿಲೀಸ್ ಆಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಎರಡೂ ಸಿನಿಮಾಗಳ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಕಮಾಯಿ ಮಾಡೋ ಸಾಧ್ಯತೆ ಇದೆ.

‘ಭೈರತಿ ರಣಗಲ್’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಇದು ‘ಮಫ್ತಿ’ ಚಿತ್ರದ ಪ್ರೀಕ್ವೆಲ್. ಈ ಕಾರಣಕ್ಕೆ ಸಿನಿಮಾ ಬಗ್ಗೆ ಭರ್ಜರಿ ನಿರೀಕ್ಷೆ ಸೃಷ್ಟಿ ಆಗಿದೆ. ನರ್ತನ್ ನಿರ್ದೇಶನದ ಈ ಚಿತ್ರ ಆಗಸ್ಟ್ 15ರಂದು ತೆರೆಮೇಲೆ ಬರಲಿದೆ ಎಂದು ಹೇಳಲಾಗಿತ್ತು. ಇತ್ತೀಚೆಗೆ ರಿಲೀಸ್ ಆದ ಟೀಸರ್​ನಲ್ಲಿ ಸಿನಿಮಾನ ಸೆಪ್ಟೆಂಬರ್​ನಲ್ಲಿ ರಿಲೀಸ್ ಮಾಡೋದಾಗಿ ಮಾಹಿತಿ ನೀಡಿದ್ದಾರೆ. ಈ ಚಿತ್ರವನ್ನು ಗೀತಾ ಶಿವರಾಜ್​ಕುಮಾರ್ ನಿರ್ಮಾಣ ಮಾಡಿದ್ದಾರೆ.

ಈಗ ಉಪೇಂದ್ರ ನಟಿಸಿ, ನಿರ್ದೇಶಿಸುತ್ತಿರುವ ‘UI’ ಸಿನಿಮಾ ತಂಡಕ್ಕೂ ಸೆಪ್ಟೆಂಬರ್​ನಲ್ಲೇ ಬಿಡುಗಡೆ ಮಾಡುವ ಆಲೋಚನೆ ಇದೆಯಂತೆ. ಸದ್ಯದ ಪ್ಲ್ಯಾನ್ ಪ್ರಕಾರ ಸೆಪ್ಟೆಂಬರ್ 9ರಂದು ಚಿತ್ರವನ್ನು ತೆರೆಮೇಲೆ ತರುವ ಪ್ರಯತ್ನ ನಡೆದಿದೆ. ಉಪೇಂದ್ರ ಅವರಿಗೆ ಸೆಪ್ಟೆಂಬರ್​ ವಿಶೇಷ. ಇದಕ್ಕೆ ಕಾರಣ ಅವರ ಜನ್ಮದಿನ. ಸೆಪ್ಟೆಂಬರ್ 18 ಅವರ ಬರ್ತ್​ಡೇ. ಹೀಗಾಗಿ, ಇದಕ್ಕೂ ಕೆಲವು ದಿನ ಮೊದಲು ಸಿನಿಮಾನ ರಿಲೀಸ್ ಮಾಡೋ ಆಲೋಚನೆ ತಂಡಕ್ಕೆ ಬಂದಿದೆ.

ಇದನ್ನೂ ಓದಿ: ಆನಂದ್ ಆಡಿಯೋ ಕೈ ಸೇರಿದ ‘ಭೈರತಿ ರಣಗಲ್’ ಆಡಿಯೋ ಹಕ್ಕು

ಒಂದೇ ತಿಂಗಳಲ್ಲಿ ಎರಡು ದೊಡ್ಡ ಸಿನಿಮಾಗಳು ರಿಲೀಸ್ ಆಗುತ್ತಿರುವುದರಿಂದ ಫ್ಯಾನ್ಸ್ ನಿಜಕ್ಕೂ ಖುಷಿಯಾಗಿದ್ದಾರೆ. ಇತ್ತೀಚೆಗೆ ಕನ್ನಡದಲ್ಲಿ ಯಾವುದೇ ದೊಡ್ಡ ಸಿನಿಮಾ ರಿಲೀಸ್ ಆಗಿಲ್ಲ. ಹೀಗಾಗಿ, ಕನ್ನಡಿಗರ ಪಾಲಿಗೆ ಸೆಪ್ಟೆಂಬರ್ ವಿಶೇಷ ಎನಿಸಿಕೊಳ್ಳಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:31 pm, Wed, 17 July 24

Follow Us
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ನಾಗೇಂದ್ರಗೆ ಮಂತ್ರಿ ಸ್ಥಾನ ಹೈಕಮಾಂಡ್ ತೀರ್ಮಾನ
ನಾಗೇಂದ್ರಗೆ ಮಂತ್ರಿ ಸ್ಥಾನ ಹೈಕಮಾಂಡ್ ತೀರ್ಮಾನ
ಸಚಿವರ ಪ್ರಮಾಣವಚನಕ್ಕೆ ಸಿದ್ದು ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?
ಸಚಿವರ ಪ್ರಮಾಣವಚನಕ್ಕೆ ಸಿದ್ದು ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?
ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್
ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ