AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾತ್ರಿಗೆ ನರ್ತನ್ ಹೊಸ ಸಿನಿಮಾ ಘೋಷಣೆ; ‘ಭೈರತಿ ರಣಗಲ್’ ಆಗಿ ಬಂದ ಶಿವರಾಜ್​ಕುಮಾರ್

ಪಂಚೆ, ಶರ್ಟ್​ ಗೆಟಪ್​ನಲ್ಲಿ ಅವರು ಹೆಚ್ಚು ಅಂಕ ಗಿಟ್ಟಿಸಿಕೊಂಡಿದ್ದರು. ‘ಭೈರತಿ ರಣಗಲ್​’ ಸಿನಿಮಾದಲ್ಲೂ ಈ ಗೆಟಪ್ ಮುಂದುವರಿಯಲಿದೆ.

ಶಿವರಾತ್ರಿಗೆ ನರ್ತನ್ ಹೊಸ ಸಿನಿಮಾ ಘೋಷಣೆ; ‘ಭೈರತಿ ರಣಗಲ್’ ಆಗಿ ಬಂದ ಶಿವರಾಜ್​ಕುಮಾರ್
ಶಿವರಾಜ್​ಕುಮಾರ್
ರಾಜೇಶ್ ದುಗ್ಗುಮನೆ
|

Updated on: Feb 18, 2023 | 1:30 PM

Share

ಶಿವರಾಜ್​ಕುಮಾರ್ (Shivarajkumar) ಅವರು ‘ಮಫ್ತಿ’ ಸಿನಿಮಾದಲ್ಲಿ ಭೈರತಿ ರಣಗಲ್ ಆಗಿ ಮಿಂಚಿದ್ದರು. ಈ ಪಾತ್ರ ಸಾಕಷ್ಟು ಗಮನಸೆಳೆದಿತ್ತು. ಇದೇ ಹೆಸರಲ್ಲಿ ಸಿನಿಮಾ ಬರಲಿದೆ ಎಂಬುದು ಈ ಮೊದಲೇ ಸುದ್ದಿ ಆಗಿತ್ತು. ಇಂದು (ಫೆಬ್ರವರಿ 18) ಶಿವರಾತ್ರಿ ಪ್ರಯುಕ್ತ ಈ ಸಿನಿಮಾ ಘೋಷಣೆ ಆಗಿದೆ. ಶಿವರಾಜ್​ಕುಮಾರ್ ಅವರ ಲುಕ್ ಗಮನ ಸೆಳೆದಿದೆ. ಈ ಸಿನಿಮಾದ ಕಥೆ ಹೇಗಿರಲಿದೆ ಅನ್ನೋದು ಸದ್ಯದ ಕೂತೂಹಲ. ನರ್ತನ್ ಅವರ ಎರಡನೇ ಸಿನಿಮಾ ಇದಾಗಿದ್ದು, ಈ ಕಾರಣದಿಂದಲೂ ಚಿತ್ರ ಗಮನ ಸೆಳೆದಿದೆ.

‘ಮಫ್ತಿ’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಬರೋದು ದ್ವಿತೀಯಾರ್ಧದಲ್ಲಿ. ಅಲ್ಲಿವರೆಗೆ ಕಥೆ ಶ್ರೀಮುರಳಿ ಮೇಲೆ ಸಾಗುತ್ತದೆ. ದ್ವಿತೀಯಾರ್ಧದಲ್ಲಿ ಬಂದರೂ ಭೈರತಿ ರಣಗಲ್ ಆಗಿ ಸಾಕಷ್ಟು ಗಮನ ಸೆಳೆದಿದ್ದರು ಶಿವಣ್ಣ. ಪಂಚೆ, ಶರ್ಟ್​ ಗೆಟಪ್​ನಲ್ಲಿ ಅವರು ಹೆಚ್ಚು ಅಂಕ ಗಿಟ್ಟಿಸಿಕೊಂಡಿದ್ದರು. ‘ಭೈರತಿ ರಣಗಲ್​’ ಸಿನಿಮಾದಲ್ಲೂ ಈ ಗೆಟಪ್ ಮುಂದುವರಿಯಲಿದೆ. ಇದಕ್ಕೆ ಇಂದು ರಿಲೀಸ್ ಆದ ಪೋಸ್ಟರ್ ಸಾಕ್ಷ್ಯ ನೀಡಿದೆ.

‘ಭೈರತಿ ರಣಗಲ್’ ಚಿತ್ರಕ್ಕೆ ಈ ಮೊದಲು ಕೆವಿಎನ್ ಪ್ರೊಡಕ್ಷನ್ಸ್ ಬಂಡವಾಳ ಹೂಡಲಿದೆ ಎನ್ನಲಾಗಿತ್ತು. ಆದರೆ, ಅದು ಸುಳ್ಳಾಗಿದೆ. ಶಿವಣ್ಣ ಅವರ ಹೋಂ ಬ್ಯಾನರ್​ನಲ್ಲಿ ಚಿತ್ರ ಮೂಡಿ ಬರುತ್ತಿದೆ. ‘ಗೀತಾ ಪಿಕ್ಚರ್ಸ್​’ನಲ್ಲಿ ಮೂಡಿ ಬರುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಈ ಮೊದಲು ‘ವೇದ’ ಚಿತ್ರ ‘ಗೀತಾ ಪಿಕ್ಚರ್ಸ್​’ ಮೂಲಕ ಮೂಡಿ ಬಂದಿತ್ತು.

‘ಮಫ್ತಿ’ ಸಿನಿಮಾ ತೆರೆಗೆ ಬಂದಿದ್ದು 2017ರಲ್ಲಿ. ಅಲ್ಲಿಂದ ಇಲ್ಲಿಯವರೆಗೆ ನರ್ತನ್ ಅವರು ಯಾವುದೇ ಸಿನಿಮಾ ಘೋಷಣೆ ಆಗಿಲ್ಲರಲಿಲ್ಲ. ‘ಭೈರತಿ ರಣಗಲ್’ ಸಿನಿಮಾ ಕಾರಣಾಂತರಗಳಿಂದ ವಿಳಂಬ ಆಯಿತು. ಈಗ ಆರು ವರ್ಷಗಳ ಬಳಿಕ ನರ್ತನ್ ಕಡೆಯಿಂದ ಗುಡ್​ನ್ಯೂಸ್ ಸಿಕ್ಕಿದೆ.

ಯಶ್ ಸಿನಿಮಾ ಯಾವಾಗ?

ಯಶ್ ಅವರ 19ನೇ ಚಿತ್ರಕ್ಕೆ ನಿರ್ದೇಶನ ಮಾಡೋದು ಯಾರು ಎನ್ನುವುದು ಯಕ್ಷ ಪ್ರಶ್ನೆ ಆಗಿದೆ. ಈ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಯಶ್ 19ನೇ ಚಿತ್ರಕ್ಕೆ ನರ್ತನ್ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ, ಅದು ಸಾಧ್ಯವಾಗುತ್ತಿಲ್ಲ. ಮೂಲಗಳ ಪ್ರಕಾರ ಯಶ್ ಅವರ 20ನೇ ಸಿನಿಮಾಗೆ ನರ್ತನ್ ಆ್ಯಕ್ಷನ್ ಕಟ್ ಹೇಳಲಿದ್ದಾರಂತೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?