AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ದಿನ ಭರ್ಜರಿ ಗಳಿಕೆ ಮಾಡಿದ ‘ಭೈರತಿ ರಣಗಲ್’; ರೇಟಿಂಗ್​ನಲ್ಲೂ ಫುಲ್ ಮಾರ್ಕ್ಸ್

ಶಿವರಾಜ್ ಕುಮಾರ್ ಅಭಿನಯದ ‘ಭೈರತಿ ರಣಗಲ್’ ಚಿತ್ರ ಮೊದಲ ದಿನವೇ ಭರ್ಜರಿ ಗಳಿಕೆಯನ್ನು ಮಾಡಿದೆ. ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮೊದಲ ದಿನ ಭರ್ಜರಿ ಗಳಿಕೆ ಮಾಡಿದ ‘ಭೈರತಿ ರಣಗಲ್’; ರೇಟಿಂಗ್​ನಲ್ಲೂ ಫುಲ್ ಮಾರ್ಕ್ಸ್
Follow us
ರಾಜೇಶ್ ದುಗ್ಗುಮನೆ
|

Updated on: Nov 16, 2024 | 6:58 AM

ಶಿವರಾಜ್​ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ಮೊದಲ ದಿನವೇ ಭರ್ಜರಿ ಗಳಿಕೆ ಮಾಡಿದೆ. ಶಿವಣ್ಣನನ್ನು ಭೈರತಿ ರಣಗಲ್ ಅವತಾರದಲ್ಲಿ ನೋಡಿ ಫ್ಯಾನ್ಸ್ ಖುಷಿ ಪಟ್ಟಿದ್ದಾರೆ. ಮೊದಲ ದಿನ ಸಾರ್ವಜನಿಕರಿಗೆ ಮುಂಜಾನೆ ಶೋ ಇರಲಿಲ್ಲ. ಒಂದೊಮ್ಮೆ ಈ ಶೋಗಳನ್ನು ಇಟ್ಟಿದ್ದರೆ ಹೌಸ್​ಫುಲ್ ಪ್ರದರ್ಶನ ಕಂಡು ಸಿನಿಮಾದ ಗಳಿಕೆ ಮತ್ತಷ್ಟು ಹೆಚ್ಚುತ್ತಿತ್ತು. ಚಿತ್ರದ ಗಳಿಕೆ ಹಾಗೂ ರೇಟಿಂಗ್ ತಿಳಿಯಲು ಈ ಸ್ಟೋರಿ ಓದಿ.

‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿ ‘ಭೈರತಿ ರಣಗಲ್’ ಸಿನಿಮಾ ಮೂಡಿಬಂದಿದೆ. ಈ ಮೊದಲು ‘ಭೈರತಿ ರಣಗಲ್’ ಸಿನಿಮಾ ಮಾಡುವ ಆಲೋಚನೆ ನರ್ತನ್ ಅವರಿಗೆ ಇರಲಿಲ್ಲ. ‘ಮಫ್ತಿ’ ಹಿಟ್ ಆದ ಬಳಿಕ ಅವರಿಗೆ ಆ ರೀತಿಯ ಐಡಿಯಾ ಬಂತು. ಅದಕ್ಕೆ ತಕ್ಕಂತೆ ಉತ್ತಮ ರೀತಿಯಲ್ಲಿ ಕಥೆಯನ್ನು ಹೆಣೆದಿದ್ದಾರೆ. ಈ ಕಾರಣಕ್ಕೆ ಸಿನಿಮಾ ಪ್ರೇಕ್ಷಕರಿಗೆ ಇಷ್ಟ ಆಗಿದೆ.

ಕೆಲವು ವರದಿಗಳ ಪ್ರಕಾರ ‘ಭೈರತಿ ರಣಗಲ್’ ಸಿನಿಮಾ ಮೊದಲ ದಿನ ಎರಡರಿಂದ ಐದು ಕೋಟಿ ರೂಪಾಯಿ ಗಳಿಕೆ ಮಾಡಿದೆಯಂತೆ. ಕೇವಲ ಕನ್ನಡದಲ್ಲಿ ಮಾತ್ರ ರಿಲೀಸ್ ಆಗಿರುವುದರಿಂದ ಇದನ್ನು ಭರ್ಜರಿ ಗಳಿಕೆ ಎಂದೇ ಹೇಳಬಹುದು. ಸಿನಿಮಾಗೆ ಪಾಸಿಟಿವ್ ಪ್ರತಿಕ್ರಿಯೆ ಸಿಕ್ಕಿದ್ದು, ಇಂದು (ನವೆಂಬರ್ 16) ಹಾಗೂ ನಾಳೆ (ನವೆಂಬರ್ 17) ಸಿನಿಮಾ ಉತ್ತಮ ಗಳಿಕೆ ಮಾಡುವುದರಲ್ಲಿ ಯಾವುದೇ ಅನುಮಾನ ಇಲ್ಲ. ಚಿತ್ರಕ್ಕೆ ಉತ್ತಮ ರೇಟಿಂಗ್ ಕೂಡ ಸಿಕ್ಕಿದೆ. ಈವರೆಗೆ (ನವೆಂಬರ್ 16ರ ಬೆಳಿಗ್ಗೆ 7 ಗಂಟೆ) ಎರಡು ಸಾವಿರ ಜನ ರೇಟಿಂಗ್ ನೀಡಿದ್ದು, 9.6 ರೇಟಿಂಗ್ ಸಿಕ್ಕಿದೆ.

‘ಪುಷ್ಪ 2’ ಚಿತ್ರದವರೆಗೆ ಯಾವುದೇ ದೊಡ್ಡ ಸಿನಿಮಾಗಳು ರಿಲೀಸ್ ಆಗುತ್ತಿಲ್ಲ. ಇದು ಚಿತ್ರಕ್ಕೆ ವರದಾನ ಆಗಲಿದೆ. ಅಲ್ಲಿಯವರೆಗೆ ಸಿನಿಮಾ ಉತ್ತಮ ಪ್ರದರ್ಶನ ಕಾಣಲಿದೆ. ನರ್ತನ್ ಅವರ ನಿರ್ದೇಶನದಲ್ಲಿ ‘ಭೈರತಿ ರಣಗಲ್’ ಮೂಡಿ ಬಂದಿದೆ. ಸಿನಿಮಾ ಕೊನೆಯಲ್ಲಿ ‘ಮಫ್ತಿ’ ಚಿತ್ರದಲ್ಲಿ ಏನಾಗಿತ್ತು ಎಂಬುದರ ಝಲಕ್ ತೋರಿಸಲಾಗುತ್ತದೆ.

ಇದನ್ನೂ ಓದಿ: Bhairathi Ranagal Review: ರಣಗಲ್ ಸಾಮ್ರಾಜ್ಯವನ್ನು ಪೂರ್ತಿಯಾಗಿ ಆವರಿಸಿಕೊಂಡ ಶಿವಣ್ಣ

ಳಿರುವ ಪ್ರಕಾರ ಮುಂದಿನ ದಿನಗಳಲ್ಲಿ ‘ಮಫ್ತಿ’ ಚಿತ್ರಕ್ಕೆ ಸೀಕ್ವೆಲ್ ಬರಲಿದೆ. ‘ಮಫ್ತಿ’ ಚಿತ್ರದಲ್ಲಿ ಮಾಡಿದ ತಪ್ಪಿಗೆ ರಣಗಲ್ ಜೈಲು ಸೇರಿದ್ದಾನೆ. ನಂತರ ಏನಾಗುತ್ತದೆ ಎಂಬುದರ ಕಥೆ ‘ಮಫ್ತಿ’ ಸೀಕ್ವೆಲ್​ನಲ್ಲಿ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ