AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ದಿನ ಭರ್ಜರಿ ಗಳಿಕೆ ಮಾಡಿದ ‘ಭೈರತಿ ರಣಗಲ್’; ರೇಟಿಂಗ್​ನಲ್ಲೂ ಫುಲ್ ಮಾರ್ಕ್ಸ್

ಶಿವರಾಜ್ ಕುಮಾರ್ ಅಭಿನಯದ ‘ಭೈರತಿ ರಣಗಲ್’ ಚಿತ್ರ ಮೊದಲ ದಿನವೇ ಭರ್ಜರಿ ಗಳಿಕೆಯನ್ನು ಮಾಡಿದೆ. ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮೊದಲ ದಿನ ಭರ್ಜರಿ ಗಳಿಕೆ ಮಾಡಿದ ‘ಭೈರತಿ ರಣಗಲ್’; ರೇಟಿಂಗ್​ನಲ್ಲೂ ಫುಲ್ ಮಾರ್ಕ್ಸ್
ರಾಜೇಶ್ ದುಗ್ಗುಮನೆ
|

Updated on: Nov 16, 2024 | 6:58 AM

Share

ಶಿವರಾಜ್​ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ಮೊದಲ ದಿನವೇ ಭರ್ಜರಿ ಗಳಿಕೆ ಮಾಡಿದೆ. ಶಿವಣ್ಣನನ್ನು ಭೈರತಿ ರಣಗಲ್ ಅವತಾರದಲ್ಲಿ ನೋಡಿ ಫ್ಯಾನ್ಸ್ ಖುಷಿ ಪಟ್ಟಿದ್ದಾರೆ. ಮೊದಲ ದಿನ ಸಾರ್ವಜನಿಕರಿಗೆ ಮುಂಜಾನೆ ಶೋ ಇರಲಿಲ್ಲ. ಒಂದೊಮ್ಮೆ ಈ ಶೋಗಳನ್ನು ಇಟ್ಟಿದ್ದರೆ ಹೌಸ್​ಫುಲ್ ಪ್ರದರ್ಶನ ಕಂಡು ಸಿನಿಮಾದ ಗಳಿಕೆ ಮತ್ತಷ್ಟು ಹೆಚ್ಚುತ್ತಿತ್ತು. ಚಿತ್ರದ ಗಳಿಕೆ ಹಾಗೂ ರೇಟಿಂಗ್ ತಿಳಿಯಲು ಈ ಸ್ಟೋರಿ ಓದಿ.

‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿ ‘ಭೈರತಿ ರಣಗಲ್’ ಸಿನಿಮಾ ಮೂಡಿಬಂದಿದೆ. ಈ ಮೊದಲು ‘ಭೈರತಿ ರಣಗಲ್’ ಸಿನಿಮಾ ಮಾಡುವ ಆಲೋಚನೆ ನರ್ತನ್ ಅವರಿಗೆ ಇರಲಿಲ್ಲ. ‘ಮಫ್ತಿ’ ಹಿಟ್ ಆದ ಬಳಿಕ ಅವರಿಗೆ ಆ ರೀತಿಯ ಐಡಿಯಾ ಬಂತು. ಅದಕ್ಕೆ ತಕ್ಕಂತೆ ಉತ್ತಮ ರೀತಿಯಲ್ಲಿ ಕಥೆಯನ್ನು ಹೆಣೆದಿದ್ದಾರೆ. ಈ ಕಾರಣಕ್ಕೆ ಸಿನಿಮಾ ಪ್ರೇಕ್ಷಕರಿಗೆ ಇಷ್ಟ ಆಗಿದೆ.

ಕೆಲವು ವರದಿಗಳ ಪ್ರಕಾರ ‘ಭೈರತಿ ರಣಗಲ್’ ಸಿನಿಮಾ ಮೊದಲ ದಿನ ಎರಡರಿಂದ ಐದು ಕೋಟಿ ರೂಪಾಯಿ ಗಳಿಕೆ ಮಾಡಿದೆಯಂತೆ. ಕೇವಲ ಕನ್ನಡದಲ್ಲಿ ಮಾತ್ರ ರಿಲೀಸ್ ಆಗಿರುವುದರಿಂದ ಇದನ್ನು ಭರ್ಜರಿ ಗಳಿಕೆ ಎಂದೇ ಹೇಳಬಹುದು. ಸಿನಿಮಾಗೆ ಪಾಸಿಟಿವ್ ಪ್ರತಿಕ್ರಿಯೆ ಸಿಕ್ಕಿದ್ದು, ಇಂದು (ನವೆಂಬರ್ 16) ಹಾಗೂ ನಾಳೆ (ನವೆಂಬರ್ 17) ಸಿನಿಮಾ ಉತ್ತಮ ಗಳಿಕೆ ಮಾಡುವುದರಲ್ಲಿ ಯಾವುದೇ ಅನುಮಾನ ಇಲ್ಲ. ಚಿತ್ರಕ್ಕೆ ಉತ್ತಮ ರೇಟಿಂಗ್ ಕೂಡ ಸಿಕ್ಕಿದೆ. ಈವರೆಗೆ (ನವೆಂಬರ್ 16ರ ಬೆಳಿಗ್ಗೆ 7 ಗಂಟೆ) ಎರಡು ಸಾವಿರ ಜನ ರೇಟಿಂಗ್ ನೀಡಿದ್ದು, 9.6 ರೇಟಿಂಗ್ ಸಿಕ್ಕಿದೆ.

‘ಪುಷ್ಪ 2’ ಚಿತ್ರದವರೆಗೆ ಯಾವುದೇ ದೊಡ್ಡ ಸಿನಿಮಾಗಳು ರಿಲೀಸ್ ಆಗುತ್ತಿಲ್ಲ. ಇದು ಚಿತ್ರಕ್ಕೆ ವರದಾನ ಆಗಲಿದೆ. ಅಲ್ಲಿಯವರೆಗೆ ಸಿನಿಮಾ ಉತ್ತಮ ಪ್ರದರ್ಶನ ಕಾಣಲಿದೆ. ನರ್ತನ್ ಅವರ ನಿರ್ದೇಶನದಲ್ಲಿ ‘ಭೈರತಿ ರಣಗಲ್’ ಮೂಡಿ ಬಂದಿದೆ. ಸಿನಿಮಾ ಕೊನೆಯಲ್ಲಿ ‘ಮಫ್ತಿ’ ಚಿತ್ರದಲ್ಲಿ ಏನಾಗಿತ್ತು ಎಂಬುದರ ಝಲಕ್ ತೋರಿಸಲಾಗುತ್ತದೆ.

ಇದನ್ನೂ ಓದಿ: Bhairathi Ranagal Review: ರಣಗಲ್ ಸಾಮ್ರಾಜ್ಯವನ್ನು ಪೂರ್ತಿಯಾಗಿ ಆವರಿಸಿಕೊಂಡ ಶಿವಣ್ಣ

ಳಿರುವ ಪ್ರಕಾರ ಮುಂದಿನ ದಿನಗಳಲ್ಲಿ ‘ಮಫ್ತಿ’ ಚಿತ್ರಕ್ಕೆ ಸೀಕ್ವೆಲ್ ಬರಲಿದೆ. ‘ಮಫ್ತಿ’ ಚಿತ್ರದಲ್ಲಿ ಮಾಡಿದ ತಪ್ಪಿಗೆ ರಣಗಲ್ ಜೈಲು ಸೇರಿದ್ದಾನೆ. ನಂತರ ಏನಾಗುತ್ತದೆ ಎಂಬುದರ ಕಥೆ ‘ಮಫ್ತಿ’ ಸೀಕ್ವೆಲ್​ನಲ್ಲಿ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?