AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಮನೆಯವರ ಗುಣವನ್ನು ಬಾಯ್ತುಂಬ ಹೊಗಳಿದ ಧ್ರುವ; ‘ಮಾರ್ಟಿನ್​’ಗಾಗಿ ಮುಂದಕ್ಕೆ ಹೋದ ‘ಭೈರತಿ’

ಧ್ರುವ ಸರ್ಜಾ ಅವರು ಜೀ ಕನ್ನಡದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆ ಏರಿದ್ದಾರೆ. ಇದರಲ್ಲಿ ಶಿವರಾಜ್​ಕುಮಾರ್ ಮುಖ್ಯ ಜಡ್ಜ್ ಆಗಿದ್ದಾರೆ. ‘ಮಾರ್ಟಿನ್’ ಸಿನಿಮಾ ಪ್ರಮೋಷನ್​ಗೆ ಧ್ರುವ ಸರ್ಜಾ ಅವರು ‘ಡಿಕೆಡಿ’ ವೇದಿಕೆ ಏರಿದ್ದಾರೆ. ವೇದಿಕೆಗೆ ಬರುವಾಗ ಅವರು ಮಸ್ತ್​ ಆಗಿ ಡ್ಯಾನ್ಸ್ ಮಾಡಿಕೊಂಡೇ ಬಂದಿದ್ದಾರೆ. ಅವರ ಬಗ್ಗೆ ಶಿವಣ್ಣ ಮೆಚ್ಚುಗೆಯ ಮಾತುಗಳನ್ನು ಆಡಿದರು.

ದೊಡ್ಮನೆಯವರ ಗುಣವನ್ನು ಬಾಯ್ತುಂಬ ಹೊಗಳಿದ ಧ್ರುವ; ‘ಮಾರ್ಟಿನ್​’ಗಾಗಿ ಮುಂದಕ್ಕೆ ಹೋದ ‘ಭೈರತಿ’
ದೊಡ್ಮನೆನ ಬಾಯ್ತುಂಬ ಹೊಗಳಿದ ಧ್ರುವ; ಮಾರ್ಟಿನ್​ಗಾಗಿ ‘ಭೈರತಿ’ಯ ತ್ಯಾಗ
ರಾಜೇಶ್ ದುಗ್ಗುಮನೆ
|

Updated on:Oct 04, 2024 | 9:00 AM

Share

ದೊಡ್ಮನೆಯ ಬಗ್ಗೆ ಸ್ಯಾಂಡಲ್​ವುಡ್​ನಲ್ಲಿರುವ ಬಹುತೇಕರಿಗೆ ಗೌರವ ಇದೆ. ಅವರ ಬೆಂಬಲದಿಂದ ಅನೇಕರು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ರಾಜ್​ಕುಮಾರ್ ಹಾಗೂ ಪಾರ್ವತಮ್ಮ ನೀಡಿದ ಅವಕಾಶದಿಂದ ಚಿತ್ರರಂಗದಲ್ಲಿ ನೆಲೆಕಂಡುಕೊಂಡ ಅನೇಕರು ಇದ್ದಾರೆ. ಅವರ ಅನೇಕರನ್ನು ಬೆಳೆಸಿದ್ದಾರೆ. ಶಿವಣ್ಣ ಕೂಡ ಇದನ್ನು ಮುಂದುವರಿಸಿಕೊಂಡು ಬಂದಿದ್ದಾರೆ. ಈಗ ‘ಮಾರ್ಟಿನ್ ಚಿತ್ರಕ್ಕಾಗಿ ಶಿವರಾಜ್​ಕುಮಾರ್ ಅವರು ‘ಭೈರತಿ ರಣಗಲ್’ ಚಿತ್ರದ ರಿಲೀಸ್​ನ ಒಂದು ತಿಂಗಳು ಮುಂದಕ್ಕೆ ಹಾಕಿಕೊಂಡಿದ್ದರು ಎನ್ನುವ ವಿಚಾರ ರಿವೀಲ್ ಆಗಿದೆ. ಈ ಬಗ್ಗೆ ಧ್ರುವ ಸರ್ಜಾ ಮಾತನಾಡಿದ್ದಾರೆ.

ಧ್ರುವ ಸರ್ಜಾ ಅವರು ಜೀ ಕನ್ನಡದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆ ಏರಿದ್ದಾರೆ. ಇದರಲ್ಲಿ ಶಿವರಾಜ್​ಕುಮಾರ್ ಮುಖ್ಯ ಜಡ್ಜ್ ಆಗಿದ್ದಾರೆ. ‘ಮಾರ್ಟಿನ್’ ಸಿನಿಮಾ ಪ್ರಮೋಷನ್​ಗೆ ಧ್ರುವ ಸರ್ಜಾ ಅವರು ‘ಡಿಕೆಡಿ’ ವೇದಿಕೆ ಏರಿದ್ದಾರೆ. ವೇದಿಕೆಗೆ ಬರುವಾಗ ಅವರು ಮಸ್ತ್​ ಆಗಿ ಡ್ಯಾನ್ಸ್ ಮಾಡಿಕೊಂಡೇ ಬಂದಿದ್ದಾರೆ. ಅವರ ಬಗ್ಗೆ ಶಿವಣ್ಣ ಮೆಚ್ಚುಗೆಯ ಮಾತುಗಳನ್ನು ಆಡಿದರು. ಶಿವರಾಜ್​ಕುಮಾರ್ ಒಳ್ಳೆತನವನ್ನು ಧ್ರುವ ಕೊಂಡಾಡಿದರು.

ಇದನ್ನೂ ಓದಿ: ಮಾರ್ಟಿನ್​ ಟ್ರೇಲರ್​ ಕೊನೆಯಲ್ಲಿ ಇಂಥ ಡೈಲಾಗ್ ಬೇಕಿತ್ತಾ? ನೇರವಾಗಿ ಉತ್ತರ ನೀಡಿದ ಧ್ರುವ ಸರ್ಜಾ

‘ಹಾರ್ಡ್​ವರ್ಕರ್, ಡ್ಯಾನ್ಸ್, ಆ್ಯಕ್ಷನ್ ಒಳ್ಳೆಯದಾಗಿ ಮಾಡ್ತಾರೆ. ಯಂಗ್​ಸ್ಟರ್ಸ್​ನಲ್ಲಿ ಧ್ರುವ, ಅಪ್ಪು ಒಳ್ಳೆಯ ಡ್ಯಾನ್ಸರ್ಸ್ ಅನ್ನೋ ಖುಷಿ ನನಗೆ ಇದೆ’ ಎಂದರು ಶಿವಣ್ಣ. ‘ಭೈರತಿ ರಣಗಲ್ ಅಕ್ಟೋಬರ್ 4ಕ್ಕೆ ರಿಲೀಸ್ ಆಗಬೇಕಿತ್ತು. ನಾನು ಕರೆ ಮಾಡಿ ಅಣ್ಣ ನಮ್ಮ ಸಿನಿಮಾಗೆ ಥಿಯೇಟರ್ ಸಮಸ್ಯೆ ಆಗುತ್ತದೆ ಎಂದೆ. ನಾನು ಕಾಲ್ ಮಾಡ್ತೀನಿ ಎಂದರು’ ಎಂದು ಧ್ರುವ ಸರ್ಜಾ ಹೇಳಿದ್ದಾರೆ.

View this post on Instagram

A post shared by Zee Kannada (@zeekannada)

‘ಶಿವಣ್ಣನೇ ಮತ್ತೆ ಕರೆ ಮಾಡಿದರು. ನೀವು ನನ್ನ ಕುಟುಂಬ. ಒಂದು ತಿಂಗಳು ಮುಂದಕ್ಕೆ ಹೋಗುತ್ತೇವೆ. ನಿಮ್ಮ ಸಿನಿಮಾಗೆ ಒಳ್ಳೆಯದಾಗಲಿ ಎಂದರು. ನಾವು ಇಂಡಸ್ಟ್ರಿನ ಮುಂದಕ್ಕೆ ತೆಗೆದುಕೊಂಡು ಹೋಗುತ್ತಿದ್ದೇವೆ ಎಂದುಕೊಳ್ಳುತ್ತೇವೆ. ಅವರು ಇಂಡಸ್ಟ್ರಿನ ಮೇಲಕ್ಕೆ ತೆಗೆದುಕೊಂಡು ಹೋಗಿ ಇಟ್ಟಿದ್ದಾರೆ. ಇದನ್ನು ನಾವು ಹತ್ತಿಕೊಂಡು ಹೋದರೆ ಸಾಕಾಗಿದೆ’ ಎಂದರು ಧ್ರುವ. ಆ ಬಳಿಕ ಶಿವಣ್ಣನ ಕಾಲಿಗೆ ಅವರು ನಮಸ್ಕರಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:59 am, Fri, 4 October 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು