ದೊಡ್ಮನೆಯವರ ಗುಣವನ್ನು ಬಾಯ್ತುಂಬ ಹೊಗಳಿದ ಧ್ರುವ; ‘ಮಾರ್ಟಿನ್​’ಗಾಗಿ ಮುಂದಕ್ಕೆ ಹೋದ ‘ಭೈರತಿ’

ಧ್ರುವ ಸರ್ಜಾ ಅವರು ಜೀ ಕನ್ನಡದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆ ಏರಿದ್ದಾರೆ. ಇದರಲ್ಲಿ ಶಿವರಾಜ್​ಕುಮಾರ್ ಮುಖ್ಯ ಜಡ್ಜ್ ಆಗಿದ್ದಾರೆ. ‘ಮಾರ್ಟಿನ್’ ಸಿನಿಮಾ ಪ್ರಮೋಷನ್​ಗೆ ಧ್ರುವ ಸರ್ಜಾ ಅವರು ‘ಡಿಕೆಡಿ’ ವೇದಿಕೆ ಏರಿದ್ದಾರೆ. ವೇದಿಕೆಗೆ ಬರುವಾಗ ಅವರು ಮಸ್ತ್​ ಆಗಿ ಡ್ಯಾನ್ಸ್ ಮಾಡಿಕೊಂಡೇ ಬಂದಿದ್ದಾರೆ. ಅವರ ಬಗ್ಗೆ ಶಿವಣ್ಣ ಮೆಚ್ಚುಗೆಯ ಮಾತುಗಳನ್ನು ಆಡಿದರು.

ದೊಡ್ಮನೆಯವರ ಗುಣವನ್ನು ಬಾಯ್ತುಂಬ ಹೊಗಳಿದ ಧ್ರುವ; ‘ಮಾರ್ಟಿನ್​’ಗಾಗಿ ಮುಂದಕ್ಕೆ ಹೋದ ‘ಭೈರತಿ’
ದೊಡ್ಮನೆನ ಬಾಯ್ತುಂಬ ಹೊಗಳಿದ ಧ್ರುವ; ಮಾರ್ಟಿನ್​ಗಾಗಿ ‘ಭೈರತಿ’ಯ ತ್ಯಾಗ
Follow us
|

Updated on:Oct 04, 2024 | 9:00 AM

ದೊಡ್ಮನೆಯ ಬಗ್ಗೆ ಸ್ಯಾಂಡಲ್​ವುಡ್​ನಲ್ಲಿರುವ ಬಹುತೇಕರಿಗೆ ಗೌರವ ಇದೆ. ಅವರ ಬೆಂಬಲದಿಂದ ಅನೇಕರು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ರಾಜ್​ಕುಮಾರ್ ಹಾಗೂ ಪಾರ್ವತಮ್ಮ ನೀಡಿದ ಅವಕಾಶದಿಂದ ಚಿತ್ರರಂಗದಲ್ಲಿ ನೆಲೆಕಂಡುಕೊಂಡ ಅನೇಕರು ಇದ್ದಾರೆ. ಅವರ ಅನೇಕರನ್ನು ಬೆಳೆಸಿದ್ದಾರೆ. ಶಿವಣ್ಣ ಕೂಡ ಇದನ್ನು ಮುಂದುವರಿಸಿಕೊಂಡು ಬಂದಿದ್ದಾರೆ. ಈಗ ‘ಮಾರ್ಟಿನ್ ಚಿತ್ರಕ್ಕಾಗಿ ಶಿವರಾಜ್​ಕುಮಾರ್ ಅವರು ‘ಭೈರತಿ ರಣಗಲ್’ ಚಿತ್ರದ ರಿಲೀಸ್​ನ ಒಂದು ತಿಂಗಳು ಮುಂದಕ್ಕೆ ಹಾಕಿಕೊಂಡಿದ್ದರು ಎನ್ನುವ ವಿಚಾರ ರಿವೀಲ್ ಆಗಿದೆ. ಈ ಬಗ್ಗೆ ಧ್ರುವ ಸರ್ಜಾ ಮಾತನಾಡಿದ್ದಾರೆ.

ಧ್ರುವ ಸರ್ಜಾ ಅವರು ಜೀ ಕನ್ನಡದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆ ಏರಿದ್ದಾರೆ. ಇದರಲ್ಲಿ ಶಿವರಾಜ್​ಕುಮಾರ್ ಮುಖ್ಯ ಜಡ್ಜ್ ಆಗಿದ್ದಾರೆ. ‘ಮಾರ್ಟಿನ್’ ಸಿನಿಮಾ ಪ್ರಮೋಷನ್​ಗೆ ಧ್ರುವ ಸರ್ಜಾ ಅವರು ‘ಡಿಕೆಡಿ’ ವೇದಿಕೆ ಏರಿದ್ದಾರೆ. ವೇದಿಕೆಗೆ ಬರುವಾಗ ಅವರು ಮಸ್ತ್​ ಆಗಿ ಡ್ಯಾನ್ಸ್ ಮಾಡಿಕೊಂಡೇ ಬಂದಿದ್ದಾರೆ. ಅವರ ಬಗ್ಗೆ ಶಿವಣ್ಣ ಮೆಚ್ಚುಗೆಯ ಮಾತುಗಳನ್ನು ಆಡಿದರು. ಶಿವರಾಜ್​ಕುಮಾರ್ ಒಳ್ಳೆತನವನ್ನು ಧ್ರುವ ಕೊಂಡಾಡಿದರು.

ಇದನ್ನೂ ಓದಿ: ಮಾರ್ಟಿನ್​ ಟ್ರೇಲರ್​ ಕೊನೆಯಲ್ಲಿ ಇಂಥ ಡೈಲಾಗ್ ಬೇಕಿತ್ತಾ? ನೇರವಾಗಿ ಉತ್ತರ ನೀಡಿದ ಧ್ರುವ ಸರ್ಜಾ

‘ಹಾರ್ಡ್​ವರ್ಕರ್, ಡ್ಯಾನ್ಸ್, ಆ್ಯಕ್ಷನ್ ಒಳ್ಳೆಯದಾಗಿ ಮಾಡ್ತಾರೆ. ಯಂಗ್​ಸ್ಟರ್ಸ್​ನಲ್ಲಿ ಧ್ರುವ, ಅಪ್ಪು ಒಳ್ಳೆಯ ಡ್ಯಾನ್ಸರ್ಸ್ ಅನ್ನೋ ಖುಷಿ ನನಗೆ ಇದೆ’ ಎಂದರು ಶಿವಣ್ಣ. ‘ಭೈರತಿ ರಣಗಲ್ ಅಕ್ಟೋಬರ್ 4ಕ್ಕೆ ರಿಲೀಸ್ ಆಗಬೇಕಿತ್ತು. ನಾನು ಕರೆ ಮಾಡಿ ಅಣ್ಣ ನಮ್ಮ ಸಿನಿಮಾಗೆ ಥಿಯೇಟರ್ ಸಮಸ್ಯೆ ಆಗುತ್ತದೆ ಎಂದೆ. ನಾನು ಕಾಲ್ ಮಾಡ್ತೀನಿ ಎಂದರು’ ಎಂದು ಧ್ರುವ ಸರ್ಜಾ ಹೇಳಿದ್ದಾರೆ.

View this post on Instagram

A post shared by Zee Kannada (@zeekannada)

‘ಶಿವಣ್ಣನೇ ಮತ್ತೆ ಕರೆ ಮಾಡಿದರು. ನೀವು ನನ್ನ ಕುಟುಂಬ. ಒಂದು ತಿಂಗಳು ಮುಂದಕ್ಕೆ ಹೋಗುತ್ತೇವೆ. ನಿಮ್ಮ ಸಿನಿಮಾಗೆ ಒಳ್ಳೆಯದಾಗಲಿ ಎಂದರು. ನಾವು ಇಂಡಸ್ಟ್ರಿನ ಮುಂದಕ್ಕೆ ತೆಗೆದುಕೊಂಡು ಹೋಗುತ್ತಿದ್ದೇವೆ ಎಂದುಕೊಳ್ಳುತ್ತೇವೆ. ಅವರು ಇಂಡಸ್ಟ್ರಿನ ಮೇಲಕ್ಕೆ ತೆಗೆದುಕೊಂಡು ಹೋಗಿ ಇಟ್ಟಿದ್ದಾರೆ. ಇದನ್ನು ನಾವು ಹತ್ತಿಕೊಂಡು ಹೋದರೆ ಸಾಕಾಗಿದೆ’ ಎಂದರು ಧ್ರುವ. ಆ ಬಳಿಕ ಶಿವಣ್ಣನ ಕಾಲಿಗೆ ಅವರು ನಮಸ್ಕರಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:59 am, Fri, 4 October 24

Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?