AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಮನೆಯವರ ಗುಣವನ್ನು ಬಾಯ್ತುಂಬ ಹೊಗಳಿದ ಧ್ರುವ; ‘ಮಾರ್ಟಿನ್​’ಗಾಗಿ ಮುಂದಕ್ಕೆ ಹೋದ ‘ಭೈರತಿ’

ಧ್ರುವ ಸರ್ಜಾ ಅವರು ಜೀ ಕನ್ನಡದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆ ಏರಿದ್ದಾರೆ. ಇದರಲ್ಲಿ ಶಿವರಾಜ್​ಕುಮಾರ್ ಮುಖ್ಯ ಜಡ್ಜ್ ಆಗಿದ್ದಾರೆ. ‘ಮಾರ್ಟಿನ್’ ಸಿನಿಮಾ ಪ್ರಮೋಷನ್​ಗೆ ಧ್ರುವ ಸರ್ಜಾ ಅವರು ‘ಡಿಕೆಡಿ’ ವೇದಿಕೆ ಏರಿದ್ದಾರೆ. ವೇದಿಕೆಗೆ ಬರುವಾಗ ಅವರು ಮಸ್ತ್​ ಆಗಿ ಡ್ಯಾನ್ಸ್ ಮಾಡಿಕೊಂಡೇ ಬಂದಿದ್ದಾರೆ. ಅವರ ಬಗ್ಗೆ ಶಿವಣ್ಣ ಮೆಚ್ಚುಗೆಯ ಮಾತುಗಳನ್ನು ಆಡಿದರು.

ದೊಡ್ಮನೆಯವರ ಗುಣವನ್ನು ಬಾಯ್ತುಂಬ ಹೊಗಳಿದ ಧ್ರುವ; ‘ಮಾರ್ಟಿನ್​’ಗಾಗಿ ಮುಂದಕ್ಕೆ ಹೋದ ‘ಭೈರತಿ’
ದೊಡ್ಮನೆನ ಬಾಯ್ತುಂಬ ಹೊಗಳಿದ ಧ್ರುವ; ಮಾರ್ಟಿನ್​ಗಾಗಿ ‘ಭೈರತಿ’ಯ ತ್ಯಾಗ
ರಾಜೇಶ್ ದುಗ್ಗುಮನೆ
|

Updated on:Oct 04, 2024 | 9:00 AM

Share

ದೊಡ್ಮನೆಯ ಬಗ್ಗೆ ಸ್ಯಾಂಡಲ್​ವುಡ್​ನಲ್ಲಿರುವ ಬಹುತೇಕರಿಗೆ ಗೌರವ ಇದೆ. ಅವರ ಬೆಂಬಲದಿಂದ ಅನೇಕರು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ರಾಜ್​ಕುಮಾರ್ ಹಾಗೂ ಪಾರ್ವತಮ್ಮ ನೀಡಿದ ಅವಕಾಶದಿಂದ ಚಿತ್ರರಂಗದಲ್ಲಿ ನೆಲೆಕಂಡುಕೊಂಡ ಅನೇಕರು ಇದ್ದಾರೆ. ಅವರ ಅನೇಕರನ್ನು ಬೆಳೆಸಿದ್ದಾರೆ. ಶಿವಣ್ಣ ಕೂಡ ಇದನ್ನು ಮುಂದುವರಿಸಿಕೊಂಡು ಬಂದಿದ್ದಾರೆ. ಈಗ ‘ಮಾರ್ಟಿನ್ ಚಿತ್ರಕ್ಕಾಗಿ ಶಿವರಾಜ್​ಕುಮಾರ್ ಅವರು ‘ಭೈರತಿ ರಣಗಲ್’ ಚಿತ್ರದ ರಿಲೀಸ್​ನ ಒಂದು ತಿಂಗಳು ಮುಂದಕ್ಕೆ ಹಾಕಿಕೊಂಡಿದ್ದರು ಎನ್ನುವ ವಿಚಾರ ರಿವೀಲ್ ಆಗಿದೆ. ಈ ಬಗ್ಗೆ ಧ್ರುವ ಸರ್ಜಾ ಮಾತನಾಡಿದ್ದಾರೆ.

ಧ್ರುವ ಸರ್ಜಾ ಅವರು ಜೀ ಕನ್ನಡದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆ ಏರಿದ್ದಾರೆ. ಇದರಲ್ಲಿ ಶಿವರಾಜ್​ಕುಮಾರ್ ಮುಖ್ಯ ಜಡ್ಜ್ ಆಗಿದ್ದಾರೆ. ‘ಮಾರ್ಟಿನ್’ ಸಿನಿಮಾ ಪ್ರಮೋಷನ್​ಗೆ ಧ್ರುವ ಸರ್ಜಾ ಅವರು ‘ಡಿಕೆಡಿ’ ವೇದಿಕೆ ಏರಿದ್ದಾರೆ. ವೇದಿಕೆಗೆ ಬರುವಾಗ ಅವರು ಮಸ್ತ್​ ಆಗಿ ಡ್ಯಾನ್ಸ್ ಮಾಡಿಕೊಂಡೇ ಬಂದಿದ್ದಾರೆ. ಅವರ ಬಗ್ಗೆ ಶಿವಣ್ಣ ಮೆಚ್ಚುಗೆಯ ಮಾತುಗಳನ್ನು ಆಡಿದರು. ಶಿವರಾಜ್​ಕುಮಾರ್ ಒಳ್ಳೆತನವನ್ನು ಧ್ರುವ ಕೊಂಡಾಡಿದರು.

ಇದನ್ನೂ ಓದಿ: ಮಾರ್ಟಿನ್​ ಟ್ರೇಲರ್​ ಕೊನೆಯಲ್ಲಿ ಇಂಥ ಡೈಲಾಗ್ ಬೇಕಿತ್ತಾ? ನೇರವಾಗಿ ಉತ್ತರ ನೀಡಿದ ಧ್ರುವ ಸರ್ಜಾ

‘ಹಾರ್ಡ್​ವರ್ಕರ್, ಡ್ಯಾನ್ಸ್, ಆ್ಯಕ್ಷನ್ ಒಳ್ಳೆಯದಾಗಿ ಮಾಡ್ತಾರೆ. ಯಂಗ್​ಸ್ಟರ್ಸ್​ನಲ್ಲಿ ಧ್ರುವ, ಅಪ್ಪು ಒಳ್ಳೆಯ ಡ್ಯಾನ್ಸರ್ಸ್ ಅನ್ನೋ ಖುಷಿ ನನಗೆ ಇದೆ’ ಎಂದರು ಶಿವಣ್ಣ. ‘ಭೈರತಿ ರಣಗಲ್ ಅಕ್ಟೋಬರ್ 4ಕ್ಕೆ ರಿಲೀಸ್ ಆಗಬೇಕಿತ್ತು. ನಾನು ಕರೆ ಮಾಡಿ ಅಣ್ಣ ನಮ್ಮ ಸಿನಿಮಾಗೆ ಥಿಯೇಟರ್ ಸಮಸ್ಯೆ ಆಗುತ್ತದೆ ಎಂದೆ. ನಾನು ಕಾಲ್ ಮಾಡ್ತೀನಿ ಎಂದರು’ ಎಂದು ಧ್ರುವ ಸರ್ಜಾ ಹೇಳಿದ್ದಾರೆ.

View this post on Instagram

A post shared by Zee Kannada (@zeekannada)

‘ಶಿವಣ್ಣನೇ ಮತ್ತೆ ಕರೆ ಮಾಡಿದರು. ನೀವು ನನ್ನ ಕುಟುಂಬ. ಒಂದು ತಿಂಗಳು ಮುಂದಕ್ಕೆ ಹೋಗುತ್ತೇವೆ. ನಿಮ್ಮ ಸಿನಿಮಾಗೆ ಒಳ್ಳೆಯದಾಗಲಿ ಎಂದರು. ನಾವು ಇಂಡಸ್ಟ್ರಿನ ಮುಂದಕ್ಕೆ ತೆಗೆದುಕೊಂಡು ಹೋಗುತ್ತಿದ್ದೇವೆ ಎಂದುಕೊಳ್ಳುತ್ತೇವೆ. ಅವರು ಇಂಡಸ್ಟ್ರಿನ ಮೇಲಕ್ಕೆ ತೆಗೆದುಕೊಂಡು ಹೋಗಿ ಇಟ್ಟಿದ್ದಾರೆ. ಇದನ್ನು ನಾವು ಹತ್ತಿಕೊಂಡು ಹೋದರೆ ಸಾಕಾಗಿದೆ’ ಎಂದರು ಧ್ರುವ. ಆ ಬಳಿಕ ಶಿವಣ್ಣನ ಕಾಲಿಗೆ ಅವರು ನಮಸ್ಕರಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:59 am, Fri, 4 October 24

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ