AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಕಳೆದಂತೆ ಹೆಚ್ಚಿತು ‘ಭೈರತಿ ರಣಗಲ್’ ಕಲೆಕ್ಷನ್; ಇಲ್ಲಿದೆ ಮೂರು ದಿನಗಳ ಗಳಿಕೆ ಲೆಕ್ಕ

ಶಿವರಾಜ್ ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಮೂರು ದಿನಗಳಲ್ಲಿ ಸಿನಿಮಾ ದೊಡ್ಡ ಗಳಿಕೆ ಮಾಡಿದೆ. ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದ ಈ ಚಿತ್ರದ ಯಶಸ್ಸು ಶಿವರಾಜ್ ಕುಮಾರ್ ಅವರಿಗೆ ಖುಷಿ ನೀಡಿದೆ.

ದಿನ ಕಳೆದಂತೆ ಹೆಚ್ಚಿತು ‘ಭೈರತಿ ರಣಗಲ್’ ಕಲೆಕ್ಷನ್; ಇಲ್ಲಿದೆ ಮೂರು ದಿನಗಳ ಗಳಿಕೆ ಲೆಕ್ಕ
ಶಿವರಾಜ್​ಕುಮಾರ್​
ರಾಜೇಶ್ ದುಗ್ಗುಮನೆ
|

Updated on: Nov 18, 2024 | 10:36 AM

Share

ಶಿವರಾಜ್​ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ನವೆಂಬರ್ 15 (ಶುಕ್ರವಾರ) ರಿಲೀಸ್ ಆಯಿತು. ಈ ಚಿತ್ರ ವಿಮರ್ಶಕರಿಂದ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ಮೂರು ದಿನಗಳಲ್ಲಿ ಭರ್ಜರಿ ಗಳಿಕೆ ಮಾಡಿದೆ. ಇದು ಶಿವರಾಜ್​ಕುಮಾರ್ ಅವರ ಖುಷಿ ಹೆಚ್ಚಿಸಿದೆ. ನಿರ್ಮಾಪಕನಾಗಿ ಹಾಗೂ ನಟನಾಗಿ ಅವರು ಗೆಲುವು ಕಂಡಿದ್ದಾರೆ. ಈ ಚಿತ್ರದ ಕಲೆಕ್ಷನ್ ಬಗ್ಗೆ ಇಲ್ಲಿದೆ ವಿವರ.

‘ಮಫ್ತಿ’ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಯಶಸ್ಸು ಪಡೆದ ಸಿನಿಮಾ. ಅದರ ಪ್ರೀಕ್ವೆಲ್ ಆಗಿ ‘ಭೈರತಿ ರಣಗಲ್’ ಸಿನಿಮಾ ಮೂಡಿ ಬಂದಿದೆ. ಈ ಚಿತ್ರವನ್ನು ನೋಡಿದವರು ಪಾಸಿಟಿವ್ ಆಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾನ್ಯ ಲಾಯರ್ ಆಗಿದ್ದ ರಣಗಲ್ ನಂತರ ಲಾಂಗ್ ಹಿಡಿಯೋದು ಹೇಗೆ ಎಂಬ ಕಥೆ ‘ಭೈರತಿ ರಣಗಲ್’ ಸಿನಿಮಾದಲ್ಲಿ ಹೇಳಲಾಗಿದೆ. ನರ್ತನ್ ಅವರ ಕಾರ್ಯಕ್ಷಮತೆಯನ್ನು ಎಲ್ಲರೂ ಮೆಚ್ಚಿದ್ದಾರೆ.

‘ಭೈರತಿ ರಣಗಲ್’ ಸಿನಿಮಾ ಮೂರು ದಿನಕ್ಕೆ 7.25 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು sacnilk ವರದಿ ಮಾಡಿದೆ. ಮೊದಲ ದಿನ 2.1 ಕೋಟಿ ರೂಪಾಯಿ, ಎರಡನೇ ದಿನ 2.3 ಕೋಟಿ ರೂಪಾಯಿ ಹಾಗೂ ಮೂರನೇ ದಿನ 2.85 ಕೋಟಿ ರೂಪಾಯಿನ ಚಿತ್ರ ಗಳಿಸಿದೆ. ಈ ಮೂಲಕ ಒಟ್ಟಾರೆ ಗಳಿಕ 10 ಕೋಟಿ ರೂಪಾಯಿ ಸಮೀಪಿಸಿದೆ. ದಿನ ಕಳೆದಂತೆ ಸಿನಿಮಾದ ಕಲೆಕ್ಷನ್ ಹೆಚ್ಚಿದೆ.

ಇದನ್ನೂ ಓದಿ: ಮೊದಲ ದಿನ ಭರ್ಜರಿ ಗಳಿಕೆ ಮಾಡಿದ ‘ಭೈರತಿ ರಣಗಲ್’; ರೇಟಿಂಗ್​ನಲ್ಲೂ ಫುಲ್ ಮಾರ್ಕ್ಸ್

‘ಭೈರತಿ ರಣಗಲ್’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಮುಖ್ಯಭೂಮಿಕೆ ನಿರ್ವಹಿಸಿದರೆ ರುಕ್ಮಿಣಿ ವಸಂತ್ ಈ ಚಿತ್ರದ ನಾಯಕಿ. ರಾಹುಲ್ ಬೋಸ್ ವಿಲನ್ ಪಾತ್ರ ಮಾಡಿದ್ದಾರೆ. ಗೀತಾ ಶಿವರಾಜ್​ಕುಮಾರ್ ನಿರ್ಮಾಣ ಈ ಚಿತ್ರಕ್ಕೆ ಇದೆ. ಈ ಚಿತ್ರವನ್ನು ನರ್ತನ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಗೆ ಸದ್ಯ ಯಾವುದೇ ಸ್ಪರ್ಧಿಗಳಿಲ್ಲ. ಹೀಗಾಗಿ, ಹಲವು ದಿನಗಳ ಕಾಲ ಚಿತ್ರ ಉತ್ತಮ ಪ್ರದರ್ಶನ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?