AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಕಳೆದಂತೆ ಹೆಚ್ಚಿತು ‘ಭೈರತಿ ರಣಗಲ್’ ಕಲೆಕ್ಷನ್; ಇಲ್ಲಿದೆ ಮೂರು ದಿನಗಳ ಗಳಿಕೆ ಲೆಕ್ಕ

ಶಿವರಾಜ್ ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಮೂರು ದಿನಗಳಲ್ಲಿ ಸಿನಿಮಾ ದೊಡ್ಡ ಗಳಿಕೆ ಮಾಡಿದೆ. ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದ ಈ ಚಿತ್ರದ ಯಶಸ್ಸು ಶಿವರಾಜ್ ಕುಮಾರ್ ಅವರಿಗೆ ಖುಷಿ ನೀಡಿದೆ.

ದಿನ ಕಳೆದಂತೆ ಹೆಚ್ಚಿತು ‘ಭೈರತಿ ರಣಗಲ್’ ಕಲೆಕ್ಷನ್; ಇಲ್ಲಿದೆ ಮೂರು ದಿನಗಳ ಗಳಿಕೆ ಲೆಕ್ಕ
ಶಿವರಾಜ್​ಕುಮಾರ್​
ರಾಜೇಶ್ ದುಗ್ಗುಮನೆ
|

Updated on: Nov 18, 2024 | 10:36 AM

Share

ಶಿವರಾಜ್​ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ನವೆಂಬರ್ 15 (ಶುಕ್ರವಾರ) ರಿಲೀಸ್ ಆಯಿತು. ಈ ಚಿತ್ರ ವಿಮರ್ಶಕರಿಂದ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ಮೂರು ದಿನಗಳಲ್ಲಿ ಭರ್ಜರಿ ಗಳಿಕೆ ಮಾಡಿದೆ. ಇದು ಶಿವರಾಜ್​ಕುಮಾರ್ ಅವರ ಖುಷಿ ಹೆಚ್ಚಿಸಿದೆ. ನಿರ್ಮಾಪಕನಾಗಿ ಹಾಗೂ ನಟನಾಗಿ ಅವರು ಗೆಲುವು ಕಂಡಿದ್ದಾರೆ. ಈ ಚಿತ್ರದ ಕಲೆಕ್ಷನ್ ಬಗ್ಗೆ ಇಲ್ಲಿದೆ ವಿವರ.

‘ಮಫ್ತಿ’ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಯಶಸ್ಸು ಪಡೆದ ಸಿನಿಮಾ. ಅದರ ಪ್ರೀಕ್ವೆಲ್ ಆಗಿ ‘ಭೈರತಿ ರಣಗಲ್’ ಸಿನಿಮಾ ಮೂಡಿ ಬಂದಿದೆ. ಈ ಚಿತ್ರವನ್ನು ನೋಡಿದವರು ಪಾಸಿಟಿವ್ ಆಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾನ್ಯ ಲಾಯರ್ ಆಗಿದ್ದ ರಣಗಲ್ ನಂತರ ಲಾಂಗ್ ಹಿಡಿಯೋದು ಹೇಗೆ ಎಂಬ ಕಥೆ ‘ಭೈರತಿ ರಣಗಲ್’ ಸಿನಿಮಾದಲ್ಲಿ ಹೇಳಲಾಗಿದೆ. ನರ್ತನ್ ಅವರ ಕಾರ್ಯಕ್ಷಮತೆಯನ್ನು ಎಲ್ಲರೂ ಮೆಚ್ಚಿದ್ದಾರೆ.

‘ಭೈರತಿ ರಣಗಲ್’ ಸಿನಿಮಾ ಮೂರು ದಿನಕ್ಕೆ 7.25 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು sacnilk ವರದಿ ಮಾಡಿದೆ. ಮೊದಲ ದಿನ 2.1 ಕೋಟಿ ರೂಪಾಯಿ, ಎರಡನೇ ದಿನ 2.3 ಕೋಟಿ ರೂಪಾಯಿ ಹಾಗೂ ಮೂರನೇ ದಿನ 2.85 ಕೋಟಿ ರೂಪಾಯಿನ ಚಿತ್ರ ಗಳಿಸಿದೆ. ಈ ಮೂಲಕ ಒಟ್ಟಾರೆ ಗಳಿಕ 10 ಕೋಟಿ ರೂಪಾಯಿ ಸಮೀಪಿಸಿದೆ. ದಿನ ಕಳೆದಂತೆ ಸಿನಿಮಾದ ಕಲೆಕ್ಷನ್ ಹೆಚ್ಚಿದೆ.

ಇದನ್ನೂ ಓದಿ: ಮೊದಲ ದಿನ ಭರ್ಜರಿ ಗಳಿಕೆ ಮಾಡಿದ ‘ಭೈರತಿ ರಣಗಲ್’; ರೇಟಿಂಗ್​ನಲ್ಲೂ ಫುಲ್ ಮಾರ್ಕ್ಸ್

‘ಭೈರತಿ ರಣಗಲ್’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಮುಖ್ಯಭೂಮಿಕೆ ನಿರ್ವಹಿಸಿದರೆ ರುಕ್ಮಿಣಿ ವಸಂತ್ ಈ ಚಿತ್ರದ ನಾಯಕಿ. ರಾಹುಲ್ ಬೋಸ್ ವಿಲನ್ ಪಾತ್ರ ಮಾಡಿದ್ದಾರೆ. ಗೀತಾ ಶಿವರಾಜ್​ಕುಮಾರ್ ನಿರ್ಮಾಣ ಈ ಚಿತ್ರಕ್ಕೆ ಇದೆ. ಈ ಚಿತ್ರವನ್ನು ನರ್ತನ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಗೆ ಸದ್ಯ ಯಾವುದೇ ಸ್ಪರ್ಧಿಗಳಿಲ್ಲ. ಹೀಗಾಗಿ, ಹಲವು ದಿನಗಳ ಕಾಲ ಚಿತ್ರ ಉತ್ತಮ ಪ್ರದರ್ಶನ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್