AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಕಳೆದಂತೆ ಹೆಚ್ಚಿತು ‘ಭೈರತಿ ರಣಗಲ್’ ಕಲೆಕ್ಷನ್; ಇಲ್ಲಿದೆ ಮೂರು ದಿನಗಳ ಗಳಿಕೆ ಲೆಕ್ಕ

ಶಿವರಾಜ್ ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಮೂರು ದಿನಗಳಲ್ಲಿ ಸಿನಿಮಾ ದೊಡ್ಡ ಗಳಿಕೆ ಮಾಡಿದೆ. ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದ ಈ ಚಿತ್ರದ ಯಶಸ್ಸು ಶಿವರಾಜ್ ಕುಮಾರ್ ಅವರಿಗೆ ಖುಷಿ ನೀಡಿದೆ.

ದಿನ ಕಳೆದಂತೆ ಹೆಚ್ಚಿತು ‘ಭೈರತಿ ರಣಗಲ್’ ಕಲೆಕ್ಷನ್; ಇಲ್ಲಿದೆ ಮೂರು ದಿನಗಳ ಗಳಿಕೆ ಲೆಕ್ಕ
ಶಿವರಾಜ್​ಕುಮಾರ್​
ರಾಜೇಶ್ ದುಗ್ಗುಮನೆ
|

Updated on: Nov 18, 2024 | 10:36 AM

Share

ಶಿವರಾಜ್​ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ನವೆಂಬರ್ 15 (ಶುಕ್ರವಾರ) ರಿಲೀಸ್ ಆಯಿತು. ಈ ಚಿತ್ರ ವಿಮರ್ಶಕರಿಂದ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ಮೂರು ದಿನಗಳಲ್ಲಿ ಭರ್ಜರಿ ಗಳಿಕೆ ಮಾಡಿದೆ. ಇದು ಶಿವರಾಜ್​ಕುಮಾರ್ ಅವರ ಖುಷಿ ಹೆಚ್ಚಿಸಿದೆ. ನಿರ್ಮಾಪಕನಾಗಿ ಹಾಗೂ ನಟನಾಗಿ ಅವರು ಗೆಲುವು ಕಂಡಿದ್ದಾರೆ. ಈ ಚಿತ್ರದ ಕಲೆಕ್ಷನ್ ಬಗ್ಗೆ ಇಲ್ಲಿದೆ ವಿವರ.

‘ಮಫ್ತಿ’ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಯಶಸ್ಸು ಪಡೆದ ಸಿನಿಮಾ. ಅದರ ಪ್ರೀಕ್ವೆಲ್ ಆಗಿ ‘ಭೈರತಿ ರಣಗಲ್’ ಸಿನಿಮಾ ಮೂಡಿ ಬಂದಿದೆ. ಈ ಚಿತ್ರವನ್ನು ನೋಡಿದವರು ಪಾಸಿಟಿವ್ ಆಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾನ್ಯ ಲಾಯರ್ ಆಗಿದ್ದ ರಣಗಲ್ ನಂತರ ಲಾಂಗ್ ಹಿಡಿಯೋದು ಹೇಗೆ ಎಂಬ ಕಥೆ ‘ಭೈರತಿ ರಣಗಲ್’ ಸಿನಿಮಾದಲ್ಲಿ ಹೇಳಲಾಗಿದೆ. ನರ್ತನ್ ಅವರ ಕಾರ್ಯಕ್ಷಮತೆಯನ್ನು ಎಲ್ಲರೂ ಮೆಚ್ಚಿದ್ದಾರೆ.

‘ಭೈರತಿ ರಣಗಲ್’ ಸಿನಿಮಾ ಮೂರು ದಿನಕ್ಕೆ 7.25 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು sacnilk ವರದಿ ಮಾಡಿದೆ. ಮೊದಲ ದಿನ 2.1 ಕೋಟಿ ರೂಪಾಯಿ, ಎರಡನೇ ದಿನ 2.3 ಕೋಟಿ ರೂಪಾಯಿ ಹಾಗೂ ಮೂರನೇ ದಿನ 2.85 ಕೋಟಿ ರೂಪಾಯಿನ ಚಿತ್ರ ಗಳಿಸಿದೆ. ಈ ಮೂಲಕ ಒಟ್ಟಾರೆ ಗಳಿಕ 10 ಕೋಟಿ ರೂಪಾಯಿ ಸಮೀಪಿಸಿದೆ. ದಿನ ಕಳೆದಂತೆ ಸಿನಿಮಾದ ಕಲೆಕ್ಷನ್ ಹೆಚ್ಚಿದೆ.

ಇದನ್ನೂ ಓದಿ: ಮೊದಲ ದಿನ ಭರ್ಜರಿ ಗಳಿಕೆ ಮಾಡಿದ ‘ಭೈರತಿ ರಣಗಲ್’; ರೇಟಿಂಗ್​ನಲ್ಲೂ ಫುಲ್ ಮಾರ್ಕ್ಸ್

‘ಭೈರತಿ ರಣಗಲ್’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಮುಖ್ಯಭೂಮಿಕೆ ನಿರ್ವಹಿಸಿದರೆ ರುಕ್ಮಿಣಿ ವಸಂತ್ ಈ ಚಿತ್ರದ ನಾಯಕಿ. ರಾಹುಲ್ ಬೋಸ್ ವಿಲನ್ ಪಾತ್ರ ಮಾಡಿದ್ದಾರೆ. ಗೀತಾ ಶಿವರಾಜ್​ಕುಮಾರ್ ನಿರ್ಮಾಣ ಈ ಚಿತ್ರಕ್ಕೆ ಇದೆ. ಈ ಚಿತ್ರವನ್ನು ನರ್ತನ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಗೆ ಸದ್ಯ ಯಾವುದೇ ಸ್ಪರ್ಧಿಗಳಿಲ್ಲ. ಹೀಗಾಗಿ, ಹಲವು ದಿನಗಳ ಕಾಲ ಚಿತ್ರ ಉತ್ತಮ ಪ್ರದರ್ಶನ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?