AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಫ್ತಿಗೆ ಪ್ರೀಕ್ವೆಲ್ ಮಾತ್ರವಲ್ಲ ಸೀಕ್ವೆಲ್ ಕೂಡ ಬರುತ್ತೆ’; ಸರ್​ಪ್ರೈಸ್ ನೀಡಿದ ಶಿವರಾಜ್​ಕುಮಾರ್

‘ಭೈರತಿ ರಣಗಲ್ ಸಿನಿಮಾ ರಿಲೀಸ್ ಆಗುವುದಕ್ಕೂ ಮೊದಲು ಮಫ್ತಿ ಚಿತ್ರವನ್ನು ರೀ ರಿಲೀಸ್ ಮಾಡಬೇಕು ಎಂಬುದು ನಮ್ಮ ಆಲೋಚನೆ. ಈ ಬಗ್ಗೆ ಜಯಣ್ಣ ಬಳಿ ಮಾತಾಡ್ತೀನಿ’ ಎಂದರು ಶಿವಣ್ಣ.

‘ಮಫ್ತಿಗೆ ಪ್ರೀಕ್ವೆಲ್ ಮಾತ್ರವಲ್ಲ ಸೀಕ್ವೆಲ್ ಕೂಡ ಬರುತ್ತೆ’; ಸರ್​ಪ್ರೈಸ್ ನೀಡಿದ ಶಿವರಾಜ್​ಕುಮಾರ್
ಶಿವಣ್ಣ
ರಾಜೇಶ್ ದುಗ್ಗುಮನೆ
|

Updated on: May 26, 2023 | 12:32 PM

Share

ಶಿವರಾಜ್​ಕುಮಾರ್ (Shivarajkumar) ನಟನೆಯ, ನರ್ತನ್ ನಿರ್ದೇಶನದ ‘ಭೈರತಿ ರಣಗಲ್’ ಸಿನಿಮಾ ಇಂದು (ಮೇ 26) ಸೆಟ್ಟೇರಿದೆ. ಬೆಂಗಳೂರಿನ ಬಂಡೆಮಹಾಕಾಳಿ ದೇವಸ್ಥಾನದಲ್ಲಿ ಈ ಕಾರ್ಯಕ್ರಮ ನಡೆಯಿತು. ‘ಗೀತಾ  ಪಿಕ್ಷರ್ಸ್​​’ ಬ್ಯಾನರ್ ಮೂಲಕ ಈ ಚಿತ್ರ ನಿರ್ಮಾಣ ಆಗುತ್ತಿದೆ. ಈ ಚಿತ್ರದ ಮುಹೂರ್ತದ ವೇಳೆ ಶಿವಣ್ಣ ಅವರು ಫ್ಯಾನ್ಸ್​ಗಳಿಗೆ ಒಂದು ಸರ್​ಪ್ರೈಸ್ ನೀಡಿದ್ದಾರೆ. ಈ ಚಿತ್ರದ ಮೊದಲ ಭಾಗ ‘ಮಫ್ತಿ’ ರೀ-ರಿಲೀಸ್​ಗೆ ಪ್ಲ್ಯಾನ್ ಮಾಡಿಕೊಂಡಿದ್ದಾರೆ ಶಿವಣ್ಣ. ಅಷ್ಟೇ ಅಲ್ಲ ‘ಮಫ್ತಿ’ಗೆ (Mufti Movie) ಸೀಕ್ವೆಲ್ ಕೂಡ ಬರಲಿದೆ. ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

‘ಭೈರತಿ ರಣಗಲ್ ಪ್ಯಾನ್ ಇಂಡಿಯಾ ಸಿನಿಮಾನ’ ಎನ್ನುವ ಪ್ರಶ್ನೆ ಇಡಲಾಯಿತು. ಇದಕ್ಕೆ ಉತ್ತರಿಸಿದ ಶಿವಣ್ಣ, ‘ಪ್ಯಾನ್ ಇಂಡಿಯಾ ಸಿನಿಮಾ ಆಗಬೇಕು ಎಂದಿದ್ದರೆ ಅದು ಆಗಿಯೇ ಆಗುತ್ತದೆ. ಮಫ್ತಿ ಸಿನಿಮಾ ಹಿಂದಿಯಲ್ಲಿ ಡಬ್ ಆಗಿತ್ತು. ತಮಿಳಿನಲ್ಲೂ ಈ ಚಿತ್ರ ಬಂದಿದೆ. ಭೈರತಿ ರಣಗಲ್ ಸಿನಿಮಾ ರಿಲೀಸ್ ಆಗುವುದಕ್ಕೂ ಮೊದಲು ಮಫ್ತಿ ಚಿತ್ರವನ್ನು ರೀ ರಿಲೀಸ್ ಮಾಡಬೇಕು ಎಂಬುದು ನಮ್ಮ ಆಲೋಚನೆ. ಈ ಬಗ್ಗೆ ಜಯಣ್ಣ ಬಳಿ ಮಾತಾಡ್ತೀನಿ’ ಎಂದರು ಶಿವಣ್ಣ.

ಇದನ್ನೂ ಓದಿ: ‘ನಾನು ನಟ ಮಾತ್ರ.. ರಾಜಕೀಯದ ಬಗ್ಗೆ ನನಗೆ ಗೊತ್ತಿಲ್ಲ’: ಚುನಾವಣಾ ಪ್ರಚಾರದ ವೇಳೆ ಶಿವಣ್ಣನ ನೇರ ಮಾತು

‘ಮಫ್ತಿ’ ಸಿನಿಮಾದ ಕಥೆ ಕೇಳಿದಾಗ ಶಿವಣ್ಣನಿಗೆ ಒಂದು ಅಳುಕಿತ್ತು. ಆ ಬಳಿಕ ಅವರು ಪಾತ್ರವನ್ನು ಇಷ್ಟಪಟ್ಟರು. ‘ನರ್ತನ್ ಸಿನಿಮಾ ಬಗ್ಗೆ ಹೇಳಿದಾಗ ಒಂದು ಗೊಂದಲ ಹಾಗೂ ಅಳುಕಿತ್ತು. ನಾನಿದ್ದೇನೆ ಎಂದು ಅವರು ಹೇಳಿದರು. ಶೂಟಿಂಗ್​ನಲ್ಲಿ ಭಾಗಿ ಆದ ಬಳಿಕ ಪಾತ್ರ ಇಷ್ಟವಾಗುತ್ತಾ ಹೋಯಿತು. ಈಗ ಇದಕ್ಕೆ ಪ್ರೀಕ್ವೆಲ್ ಬರುತ್ತಿದೆ. ಸಿನಿಮಾದಲ್ಲಿ ಭಾವನೆಗಳಿಗೆ ಸಾಕಷ್ಟು ಅರ್ಥ ಇದೆ. ಶ್ರೀಮುರಳಿ ಪಾತ್ರ ಕೂಡ ಉತ್ತಮವಾಗಿತ್ತು. ಭೈರತಿ ರಣಗಲ್ ಚಿತ್ರ ಮಫ್ತಿಯ ಪ್ರೀಕ್ವೆಲ್. ಬಳಿಕ ಸೀಕ್ವೆಲ್ ಕೂಡ ಬರುತ್ತೆ’ ಎಂದರು ಶಿವಣ್ಣ.

‘ಮಫ್ತಿ’ ಸಿನಿಮಾ ರಿಲೀಸ್ ಆದ ಬಳಿಕ ನರ್ತನ್ ದೊಡ್ಡ ಗ್ಯಾಪ್ ತೆಗೆದುಕೊಂಡರು. ಶೀಘ್ರದಲ್ಲೇ ಸಿನಿಮಾ ಶೂಟಿಂಗ್ ಆರಂಭ ಆಗಲಿದೆ. ‘ಸಿನಿಮಾ ಇಷ್ಟು ವಿಳಂಬ ಆಗೋಕೆ ನನ್ನ ತಪ್ಪೂ ಇಲ್ಲ ಅವರ (ನರ್ತನ್​) ತಪ್ಪೂ ಇಲ್ಲ’ ಎಂದರು ಶಿವಣ್ಣ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್