AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಫ್ತಿಗೆ ಪ್ರೀಕ್ವೆಲ್ ಮಾತ್ರವಲ್ಲ ಸೀಕ್ವೆಲ್ ಕೂಡ ಬರುತ್ತೆ’; ಸರ್​ಪ್ರೈಸ್ ನೀಡಿದ ಶಿವರಾಜ್​ಕುಮಾರ್

‘ಭೈರತಿ ರಣಗಲ್ ಸಿನಿಮಾ ರಿಲೀಸ್ ಆಗುವುದಕ್ಕೂ ಮೊದಲು ಮಫ್ತಿ ಚಿತ್ರವನ್ನು ರೀ ರಿಲೀಸ್ ಮಾಡಬೇಕು ಎಂಬುದು ನಮ್ಮ ಆಲೋಚನೆ. ಈ ಬಗ್ಗೆ ಜಯಣ್ಣ ಬಳಿ ಮಾತಾಡ್ತೀನಿ’ ಎಂದರು ಶಿವಣ್ಣ.

‘ಮಫ್ತಿಗೆ ಪ್ರೀಕ್ವೆಲ್ ಮಾತ್ರವಲ್ಲ ಸೀಕ್ವೆಲ್ ಕೂಡ ಬರುತ್ತೆ’; ಸರ್​ಪ್ರೈಸ್ ನೀಡಿದ ಶಿವರಾಜ್​ಕುಮಾರ್
ಶಿವಣ್ಣ
Follow us
ರಾಜೇಶ್ ದುಗ್ಗುಮನೆ
|

Updated on: May 26, 2023 | 12:32 PM

ಶಿವರಾಜ್​ಕುಮಾರ್ (Shivarajkumar) ನಟನೆಯ, ನರ್ತನ್ ನಿರ್ದೇಶನದ ‘ಭೈರತಿ ರಣಗಲ್’ ಸಿನಿಮಾ ಇಂದು (ಮೇ 26) ಸೆಟ್ಟೇರಿದೆ. ಬೆಂಗಳೂರಿನ ಬಂಡೆಮಹಾಕಾಳಿ ದೇವಸ್ಥಾನದಲ್ಲಿ ಈ ಕಾರ್ಯಕ್ರಮ ನಡೆಯಿತು. ‘ಗೀತಾ  ಪಿಕ್ಷರ್ಸ್​​’ ಬ್ಯಾನರ್ ಮೂಲಕ ಈ ಚಿತ್ರ ನಿರ್ಮಾಣ ಆಗುತ್ತಿದೆ. ಈ ಚಿತ್ರದ ಮುಹೂರ್ತದ ವೇಳೆ ಶಿವಣ್ಣ ಅವರು ಫ್ಯಾನ್ಸ್​ಗಳಿಗೆ ಒಂದು ಸರ್​ಪ್ರೈಸ್ ನೀಡಿದ್ದಾರೆ. ಈ ಚಿತ್ರದ ಮೊದಲ ಭಾಗ ‘ಮಫ್ತಿ’ ರೀ-ರಿಲೀಸ್​ಗೆ ಪ್ಲ್ಯಾನ್ ಮಾಡಿಕೊಂಡಿದ್ದಾರೆ ಶಿವಣ್ಣ. ಅಷ್ಟೇ ಅಲ್ಲ ‘ಮಫ್ತಿ’ಗೆ (Mufti Movie) ಸೀಕ್ವೆಲ್ ಕೂಡ ಬರಲಿದೆ. ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

‘ಭೈರತಿ ರಣಗಲ್ ಪ್ಯಾನ್ ಇಂಡಿಯಾ ಸಿನಿಮಾನ’ ಎನ್ನುವ ಪ್ರಶ್ನೆ ಇಡಲಾಯಿತು. ಇದಕ್ಕೆ ಉತ್ತರಿಸಿದ ಶಿವಣ್ಣ, ‘ಪ್ಯಾನ್ ಇಂಡಿಯಾ ಸಿನಿಮಾ ಆಗಬೇಕು ಎಂದಿದ್ದರೆ ಅದು ಆಗಿಯೇ ಆಗುತ್ತದೆ. ಮಫ್ತಿ ಸಿನಿಮಾ ಹಿಂದಿಯಲ್ಲಿ ಡಬ್ ಆಗಿತ್ತು. ತಮಿಳಿನಲ್ಲೂ ಈ ಚಿತ್ರ ಬಂದಿದೆ. ಭೈರತಿ ರಣಗಲ್ ಸಿನಿಮಾ ರಿಲೀಸ್ ಆಗುವುದಕ್ಕೂ ಮೊದಲು ಮಫ್ತಿ ಚಿತ್ರವನ್ನು ರೀ ರಿಲೀಸ್ ಮಾಡಬೇಕು ಎಂಬುದು ನಮ್ಮ ಆಲೋಚನೆ. ಈ ಬಗ್ಗೆ ಜಯಣ್ಣ ಬಳಿ ಮಾತಾಡ್ತೀನಿ’ ಎಂದರು ಶಿವಣ್ಣ.

ಇದನ್ನೂ ಓದಿ: ‘ನಾನು ನಟ ಮಾತ್ರ.. ರಾಜಕೀಯದ ಬಗ್ಗೆ ನನಗೆ ಗೊತ್ತಿಲ್ಲ’: ಚುನಾವಣಾ ಪ್ರಚಾರದ ವೇಳೆ ಶಿವಣ್ಣನ ನೇರ ಮಾತು

‘ಮಫ್ತಿ’ ಸಿನಿಮಾದ ಕಥೆ ಕೇಳಿದಾಗ ಶಿವಣ್ಣನಿಗೆ ಒಂದು ಅಳುಕಿತ್ತು. ಆ ಬಳಿಕ ಅವರು ಪಾತ್ರವನ್ನು ಇಷ್ಟಪಟ್ಟರು. ‘ನರ್ತನ್ ಸಿನಿಮಾ ಬಗ್ಗೆ ಹೇಳಿದಾಗ ಒಂದು ಗೊಂದಲ ಹಾಗೂ ಅಳುಕಿತ್ತು. ನಾನಿದ್ದೇನೆ ಎಂದು ಅವರು ಹೇಳಿದರು. ಶೂಟಿಂಗ್​ನಲ್ಲಿ ಭಾಗಿ ಆದ ಬಳಿಕ ಪಾತ್ರ ಇಷ್ಟವಾಗುತ್ತಾ ಹೋಯಿತು. ಈಗ ಇದಕ್ಕೆ ಪ್ರೀಕ್ವೆಲ್ ಬರುತ್ತಿದೆ. ಸಿನಿಮಾದಲ್ಲಿ ಭಾವನೆಗಳಿಗೆ ಸಾಕಷ್ಟು ಅರ್ಥ ಇದೆ. ಶ್ರೀಮುರಳಿ ಪಾತ್ರ ಕೂಡ ಉತ್ತಮವಾಗಿತ್ತು. ಭೈರತಿ ರಣಗಲ್ ಚಿತ್ರ ಮಫ್ತಿಯ ಪ್ರೀಕ್ವೆಲ್. ಬಳಿಕ ಸೀಕ್ವೆಲ್ ಕೂಡ ಬರುತ್ತೆ’ ಎಂದರು ಶಿವಣ್ಣ.

‘ಮಫ್ತಿ’ ಸಿನಿಮಾ ರಿಲೀಸ್ ಆದ ಬಳಿಕ ನರ್ತನ್ ದೊಡ್ಡ ಗ್ಯಾಪ್ ತೆಗೆದುಕೊಂಡರು. ಶೀಘ್ರದಲ್ಲೇ ಸಿನಿಮಾ ಶೂಟಿಂಗ್ ಆರಂಭ ಆಗಲಿದೆ. ‘ಸಿನಿಮಾ ಇಷ್ಟು ವಿಳಂಬ ಆಗೋಕೆ ನನ್ನ ತಪ್ಪೂ ಇಲ್ಲ ಅವರ (ನರ್ತನ್​) ತಪ್ಪೂ ಇಲ್ಲ’ ಎಂದರು ಶಿವಣ್ಣ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?