AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭೈರತಿ ರಣಗಲ್‍’ ಬಿಡುಗಡೆಗೆ ದಿನಾಂಕ ಫಿಕ್ಸ್; ನವೆಂಬರ್ 15ಕ್ಕೆ ಅದ್ದೂರಿ ರಿಲೀಸ್​

‘ಭೈರತಿ ರಣಗಲ್‍’ ಸಿನಿಮಾವನ್ನು ಗೀತಾ ಶಿವರಾಜ್​ಕುಮಾರ್​ ಅವರು ನಿರ್ಮಾಣ ಮಾಡಿದ್ದಾರೆ. ಶಿವರಾಜ್​ಕುಮಾರ್​ ಜೊತೆ ರುಕ್ಮಿಣಿ ವಸಂತ್‍, ಅವಿನಾಶ್, ರಾಹುಲ್ ಬೋಸ್‍, ದೇವರಾಜ್‍, ಛಾಯಾ ಸಿಂಗ್‍, ಮಧು ಗುರುಸ್ವಾಮಿ, ಬಾಬು ಹಿರಣ್ಣಯ್ಯ ಮುಂತಾದ ಕಲಾವಿದರು ನಟಿಸಿದ್ದಾರೆ. ನವೀನ್ ಕುಮಾರ್ ಅವರ ಛಾಯಾಗ್ರಹಣ, ರವಿ ಬಸ್ರೂರು ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ನರ್ತನ್​ ಆ್ಯಕ್ಷನ್​-ಕಟ್​ ಹೇಳಿದ್ದಾರೆ.

‘ಭೈರತಿ ರಣಗಲ್‍’ ಬಿಡುಗಡೆಗೆ ದಿನಾಂಕ ಫಿಕ್ಸ್; ನವೆಂಬರ್ 15ಕ್ಕೆ ಅದ್ದೂರಿ ರಿಲೀಸ್​
ಶಿವರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​, ನರ್ತನ್​
Follow us
ಮದನ್​ ಕುಮಾರ್​
|

Updated on: Aug 26, 2024 | 10:58 PM

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಶಿವರಾಜ್​ಕುಮಾರ್​ ನಟನೆಯ ‘ಭೈರತಿ ರಣಗಲ್​’ ಸಿನಿಮಾ ಆ.15ರಂದು ತೆರೆಕಾಣಬೇಕಿತ್ತು. ಕಾರಣಾಂತರಗಳಿಂದ ಸಿನಿಮಾದ ರಿಲೀಸ್​ ದಿನಾಂಕವನ್ನು ಮುಂದೂಡಲಾಗಿತ್ತು. ಈ ಸಿನಿಮಾ ಯಾವಾಗ ಬರಲಿದೆ ಎಂಬ ಕಾತರದ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಇತ್ತು. ಉತ್ತರ ತಿಳಿಯಲು ಫ್ಯಾನ್ಸ್​ ಕಾದಿದ್ದರು. ಆ ಕಾಯುವಿಕೆಗೆ ಈಗ ಪೂರ್ಣವಿರಾಮ ಬಿದ್ದಿದೆ. ನವೆಂಬರ್​ 15ರಂದು ಸಿನಿಮಾ ರಿಲೀಸ್​ ಆಗಲಿದೆ ಎಂದು ‘ಭೈರತಿ ರಣಗಲ್​’ ಚಿತ್ರತಂಡ ತಿಳಿಸಿದೆ. ಇಂದು (ಆಗಸ್ಟ್​ 26) ಬೆಂಗಳೂರಿನಲ್ಲಿ ರಿಲೀಸ್​ ಡೇಟ್​ ಅನೌನ್ಸ್​ ಮಾಡಲಾಗಿದೆ.

ಯಲಹಂಕದ ಗೆಲರಿಯಾ ಮಾಲ್‍ನಲ್ಲಿ ಇದೇ ಮೊದಲ ಬಾರಿಗೆ ಹೊಸದಾಗಿ ನಿರ್ಮಿಸಲಾಗಿದ್ದ ಅತೀ ದೊಡ್ಡ ಗ್ರ್ಯಾಫಿಟಿ ಆರ್ಟ್​ ಅನಾವರಣಗೊಳಿಸುವ ಮೂಲಕ ‘ಭೈರತಿ ರಣಗಲ್’ ಸಿನಿಮಾದ ರಿಲೀಸ್​ ಡೇಟ್​ ಘೋಷಣೆ ಮಾಡಲಾಯ್ತು. ಈ ಸಿನಿಮಾವನ್ನು ಗೀತಾ ಶಿವರಾಜ್​ಕುಮಾರ್ ಅವರು ನಿರ್ಮಿಸಿದ್ದಾರೆ. ನರ್ತನ್ ಅವರು ನಿರ್ದೇಶನ ಮಾಡಿದ್ದಾರೆ. ಬಿಡುಗಡೆ ದಿನಾಂಕ ಘೋಷಿಸುವಾಗ ನಿವೇದಿತಾ ಶಿವರಾಜ್​ಕುಮಾರ್ ಕೂಡ ಹಾಜರಿದ್ದರು. ಈ ಇವೆಂಟ್​ ಅನ್ನು ಅಪಾರ ಸಂಖ್ಯೆಯ ಅಭಿಮಾನಿಗಳು ಕಣ್ತುಂಬಿಕೊಂಡರು.

ಸಾವಿರಾರು ಅಭಿಮಾನಿಗಳ ಎದುರಿನಲ್ಲಿ ರಿಲೀಸ್​ ಡೇಟ್​ ಘೋಷಣೆ ಮಾಡಿದ್ದಕ್ಕೆ ನಿರ್ದೇಶಕ ನರ್ತನ್​ ಅವರಿಗೆ ಖುಷಿ ಆಗಿದೆ. ನ.15ರಂದು ಚಿತ್ರಮಂದಿರದಲ್ಲಿ ಸಿನಿಮಾ ನೋಡುವ ಮೂಲಕ ಜನರು ಪ್ರೋತ್ಸಾಹ ನೀಡಬೇಕು ಎಂದು ಅವರು ಪ್ರೇಕ್ಷಕರಲ್ಲಿ ವಿನಂತಿಸಿಕೊಂಡರು. ಈ ಮೊದಲು ‘ಮಫ್ತಿ’ ಸಿನಿಮಾದಲ್ಲಿ ನರ್ತನ್​ ಅವರು ಕಸುಬುದಾರಿಕೆ ತೋರಿದ್ದರು. ಆ ಸಿನಿಮಾದ ಪ್ರೀಕ್ಚೆಲ್​ ಆಗಿ ‘ಭೈರತಿ ರಣಗಲ್​’ ಸಿನಿಮಾ ಸಿದ್ಧವಾಗಿದೆ.

ಇದನ್ನೂ ಓದಿ: ‘ಭೈರತಿ ರಣಗಲ್​’ ಗುಣಗಾನ ಮಾಡುವ ಟೈಟಲ್​ ಸಾಂಗ್​ ರಿಲೀಸ್​; ಶಿವಣ್ಣ ಫ್ಯಾನ್ಸ್​ ಖುಷ್​

ರಿಲೀಸ್​ ಡೇಟ್​ ಘೋಷಿಸಿದ ನಂತರ ಗೀತಾ ಶಿವರಾಜ್​ಕುಮಾರ್ ಮಾತಾಡಿದರು. ‘ಇದು ನಮ್ಮ ಗೀತಾ ಪಿಕ್ಚರ್ಸ್​ ಮೂಲಕ ನಿರ್ಮಾಣ ಆಗಿರುವ 2ನೇ ಸಿನಿಮಾ. ಮೊದಲ ಚಿತ್ರ ‘ವೇದ’ಗೆ ನೀವು ನೀಡಿದ ಪ್ರೋತ್ಸಾಹ, ಬೆಂಬಲಕ್ಕೆ ಧನ್ಯವಾದಗಳು. ಈಗ ಈ ಸಿನಿಮಾಗೂ ನಿಮ್ಮೆಲ್ಲರ ಪ್ರೋತ್ಸಾಹ ಇರಲಿ. ಬೆಳಗಾವಿಯಲ್ಲೂ ಈ ಸಿನಿಮಾ ಕುರಿತಾದ ಕಾರ್ಯಕ್ರಮ ಮಾಡುತ್ತೇವೆ’ ಎಂದು ಗೀತಾ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

VIDEO: ರೂಟ್ ಅತ್ಯುತ್ತಮ ಫೀಲ್ಡಿಂಗ್: ಭಾರತಕ್ಕೆ ಬಿಟ್ಟಿಯಾಗಿ ಸಿಕ್ತು 5 ರನ್
VIDEO: ರೂಟ್ ಅತ್ಯುತ್ತಮ ಫೀಲ್ಡಿಂಗ್: ಭಾರತಕ್ಕೆ ಬಿಟ್ಟಿಯಾಗಿ ಸಿಕ್ತು 5 ರನ್
ಹೆಣ್ಮಕ್ಕಳಲ್ಲಿ ಕಾಡುವ ಈ ಎರಡು ರೋಗಕ್ಕೆ ಯೋಗವೇ ಮುಕ್ತಿ, ಅದು ಹೇಗೆ?
ಹೆಣ್ಮಕ್ಕಳಲ್ಲಿ ಕಾಡುವ ಈ ಎರಡು ರೋಗಕ್ಕೆ ಯೋಗವೇ ಮುಕ್ತಿ, ಅದು ಹೇಗೆ?
ಕಷ್ಟಗಳನ್ನ ದೇವರೇ ಕಲ್ಪಿಸುವುದಾ ಅಥವಾ ಸ್ವಯಂಕೃತ ತಪ್ಪಾ?
ಕಷ್ಟಗಳನ್ನ ದೇವರೇ ಕಲ್ಪಿಸುವುದಾ ಅಥವಾ ಸ್ವಯಂಕೃತ ತಪ್ಪಾ?
Daily horoscope: ಇಂದು ಯಾವೆಲ್ಲಾ ರಾಶಿಗಳ ‘ಯೋಗ’ಬಲ ಹೇಗಿದೆ ತಿಳಿಯಿರಿ
Daily horoscope: ಇಂದು ಯಾವೆಲ್ಲಾ ರಾಶಿಗಳ ‘ಯೋಗ’ಬಲ ಹೇಗಿದೆ ತಿಳಿಯಿರಿ
Yoga Live: ವಿಶಾಖಪಟ್ಟಣಂನಲ್ಲಿ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
Yoga Live: ವಿಶಾಖಪಟ್ಟಣಂನಲ್ಲಿ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ