AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭೈರತಿ ರಣಗಲ್‍’ ಬಿಡುಗಡೆಗೆ ದಿನಾಂಕ ಫಿಕ್ಸ್; ನವೆಂಬರ್ 15ಕ್ಕೆ ಅದ್ದೂರಿ ರಿಲೀಸ್​

‘ಭೈರತಿ ರಣಗಲ್‍’ ಸಿನಿಮಾವನ್ನು ಗೀತಾ ಶಿವರಾಜ್​ಕುಮಾರ್​ ಅವರು ನಿರ್ಮಾಣ ಮಾಡಿದ್ದಾರೆ. ಶಿವರಾಜ್​ಕುಮಾರ್​ ಜೊತೆ ರುಕ್ಮಿಣಿ ವಸಂತ್‍, ಅವಿನಾಶ್, ರಾಹುಲ್ ಬೋಸ್‍, ದೇವರಾಜ್‍, ಛಾಯಾ ಸಿಂಗ್‍, ಮಧು ಗುರುಸ್ವಾಮಿ, ಬಾಬು ಹಿರಣ್ಣಯ್ಯ ಮುಂತಾದ ಕಲಾವಿದರು ನಟಿಸಿದ್ದಾರೆ. ನವೀನ್ ಕುಮಾರ್ ಅವರ ಛಾಯಾಗ್ರಹಣ, ರವಿ ಬಸ್ರೂರು ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ನರ್ತನ್​ ಆ್ಯಕ್ಷನ್​-ಕಟ್​ ಹೇಳಿದ್ದಾರೆ.

‘ಭೈರತಿ ರಣಗಲ್‍’ ಬಿಡುಗಡೆಗೆ ದಿನಾಂಕ ಫಿಕ್ಸ್; ನವೆಂಬರ್ 15ಕ್ಕೆ ಅದ್ದೂರಿ ರಿಲೀಸ್​
ಶಿವರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​, ನರ್ತನ್​
ಮದನ್​ ಕುಮಾರ್​
|

Updated on: Aug 26, 2024 | 10:58 PM

Share

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಶಿವರಾಜ್​ಕುಮಾರ್​ ನಟನೆಯ ‘ಭೈರತಿ ರಣಗಲ್​’ ಸಿನಿಮಾ ಆ.15ರಂದು ತೆರೆಕಾಣಬೇಕಿತ್ತು. ಕಾರಣಾಂತರಗಳಿಂದ ಸಿನಿಮಾದ ರಿಲೀಸ್​ ದಿನಾಂಕವನ್ನು ಮುಂದೂಡಲಾಗಿತ್ತು. ಈ ಸಿನಿಮಾ ಯಾವಾಗ ಬರಲಿದೆ ಎಂಬ ಕಾತರದ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಇತ್ತು. ಉತ್ತರ ತಿಳಿಯಲು ಫ್ಯಾನ್ಸ್​ ಕಾದಿದ್ದರು. ಆ ಕಾಯುವಿಕೆಗೆ ಈಗ ಪೂರ್ಣವಿರಾಮ ಬಿದ್ದಿದೆ. ನವೆಂಬರ್​ 15ರಂದು ಸಿನಿಮಾ ರಿಲೀಸ್​ ಆಗಲಿದೆ ಎಂದು ‘ಭೈರತಿ ರಣಗಲ್​’ ಚಿತ್ರತಂಡ ತಿಳಿಸಿದೆ. ಇಂದು (ಆಗಸ್ಟ್​ 26) ಬೆಂಗಳೂರಿನಲ್ಲಿ ರಿಲೀಸ್​ ಡೇಟ್​ ಅನೌನ್ಸ್​ ಮಾಡಲಾಗಿದೆ.

ಯಲಹಂಕದ ಗೆಲರಿಯಾ ಮಾಲ್‍ನಲ್ಲಿ ಇದೇ ಮೊದಲ ಬಾರಿಗೆ ಹೊಸದಾಗಿ ನಿರ್ಮಿಸಲಾಗಿದ್ದ ಅತೀ ದೊಡ್ಡ ಗ್ರ್ಯಾಫಿಟಿ ಆರ್ಟ್​ ಅನಾವರಣಗೊಳಿಸುವ ಮೂಲಕ ‘ಭೈರತಿ ರಣಗಲ್’ ಸಿನಿಮಾದ ರಿಲೀಸ್​ ಡೇಟ್​ ಘೋಷಣೆ ಮಾಡಲಾಯ್ತು. ಈ ಸಿನಿಮಾವನ್ನು ಗೀತಾ ಶಿವರಾಜ್​ಕುಮಾರ್ ಅವರು ನಿರ್ಮಿಸಿದ್ದಾರೆ. ನರ್ತನ್ ಅವರು ನಿರ್ದೇಶನ ಮಾಡಿದ್ದಾರೆ. ಬಿಡುಗಡೆ ದಿನಾಂಕ ಘೋಷಿಸುವಾಗ ನಿವೇದಿತಾ ಶಿವರಾಜ್​ಕುಮಾರ್ ಕೂಡ ಹಾಜರಿದ್ದರು. ಈ ಇವೆಂಟ್​ ಅನ್ನು ಅಪಾರ ಸಂಖ್ಯೆಯ ಅಭಿಮಾನಿಗಳು ಕಣ್ತುಂಬಿಕೊಂಡರು.

ಸಾವಿರಾರು ಅಭಿಮಾನಿಗಳ ಎದುರಿನಲ್ಲಿ ರಿಲೀಸ್​ ಡೇಟ್​ ಘೋಷಣೆ ಮಾಡಿದ್ದಕ್ಕೆ ನಿರ್ದೇಶಕ ನರ್ತನ್​ ಅವರಿಗೆ ಖುಷಿ ಆಗಿದೆ. ನ.15ರಂದು ಚಿತ್ರಮಂದಿರದಲ್ಲಿ ಸಿನಿಮಾ ನೋಡುವ ಮೂಲಕ ಜನರು ಪ್ರೋತ್ಸಾಹ ನೀಡಬೇಕು ಎಂದು ಅವರು ಪ್ರೇಕ್ಷಕರಲ್ಲಿ ವಿನಂತಿಸಿಕೊಂಡರು. ಈ ಮೊದಲು ‘ಮಫ್ತಿ’ ಸಿನಿಮಾದಲ್ಲಿ ನರ್ತನ್​ ಅವರು ಕಸುಬುದಾರಿಕೆ ತೋರಿದ್ದರು. ಆ ಸಿನಿಮಾದ ಪ್ರೀಕ್ಚೆಲ್​ ಆಗಿ ‘ಭೈರತಿ ರಣಗಲ್​’ ಸಿನಿಮಾ ಸಿದ್ಧವಾಗಿದೆ.

ಇದನ್ನೂ ಓದಿ: ‘ಭೈರತಿ ರಣಗಲ್​’ ಗುಣಗಾನ ಮಾಡುವ ಟೈಟಲ್​ ಸಾಂಗ್​ ರಿಲೀಸ್​; ಶಿವಣ್ಣ ಫ್ಯಾನ್ಸ್​ ಖುಷ್​

ರಿಲೀಸ್​ ಡೇಟ್​ ಘೋಷಿಸಿದ ನಂತರ ಗೀತಾ ಶಿವರಾಜ್​ಕುಮಾರ್ ಮಾತಾಡಿದರು. ‘ಇದು ನಮ್ಮ ಗೀತಾ ಪಿಕ್ಚರ್ಸ್​ ಮೂಲಕ ನಿರ್ಮಾಣ ಆಗಿರುವ 2ನೇ ಸಿನಿಮಾ. ಮೊದಲ ಚಿತ್ರ ‘ವೇದ’ಗೆ ನೀವು ನೀಡಿದ ಪ್ರೋತ್ಸಾಹ, ಬೆಂಬಲಕ್ಕೆ ಧನ್ಯವಾದಗಳು. ಈಗ ಈ ಸಿನಿಮಾಗೂ ನಿಮ್ಮೆಲ್ಲರ ಪ್ರೋತ್ಸಾಹ ಇರಲಿ. ಬೆಳಗಾವಿಯಲ್ಲೂ ಈ ಸಿನಿಮಾ ಕುರಿತಾದ ಕಾರ್ಯಕ್ರಮ ಮಾಡುತ್ತೇವೆ’ ಎಂದು ಗೀತಾ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ