AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭೈರತಿ ರಣಗಲ್‍’ ಬಿಡುಗಡೆಗೆ ದಿನಾಂಕ ಫಿಕ್ಸ್; ನವೆಂಬರ್ 15ಕ್ಕೆ ಅದ್ದೂರಿ ರಿಲೀಸ್​

‘ಭೈರತಿ ರಣಗಲ್‍’ ಸಿನಿಮಾವನ್ನು ಗೀತಾ ಶಿವರಾಜ್​ಕುಮಾರ್​ ಅವರು ನಿರ್ಮಾಣ ಮಾಡಿದ್ದಾರೆ. ಶಿವರಾಜ್​ಕುಮಾರ್​ ಜೊತೆ ರುಕ್ಮಿಣಿ ವಸಂತ್‍, ಅವಿನಾಶ್, ರಾಹುಲ್ ಬೋಸ್‍, ದೇವರಾಜ್‍, ಛಾಯಾ ಸಿಂಗ್‍, ಮಧು ಗುರುಸ್ವಾಮಿ, ಬಾಬು ಹಿರಣ್ಣಯ್ಯ ಮುಂತಾದ ಕಲಾವಿದರು ನಟಿಸಿದ್ದಾರೆ. ನವೀನ್ ಕುಮಾರ್ ಅವರ ಛಾಯಾಗ್ರಹಣ, ರವಿ ಬಸ್ರೂರು ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ನರ್ತನ್​ ಆ್ಯಕ್ಷನ್​-ಕಟ್​ ಹೇಳಿದ್ದಾರೆ.

‘ಭೈರತಿ ರಣಗಲ್‍’ ಬಿಡುಗಡೆಗೆ ದಿನಾಂಕ ಫಿಕ್ಸ್; ನವೆಂಬರ್ 15ಕ್ಕೆ ಅದ್ದೂರಿ ರಿಲೀಸ್​
ಶಿವರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​, ನರ್ತನ್​
ಮದನ್​ ಕುಮಾರ್​
|

Updated on: Aug 26, 2024 | 10:58 PM

Share

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಶಿವರಾಜ್​ಕುಮಾರ್​ ನಟನೆಯ ‘ಭೈರತಿ ರಣಗಲ್​’ ಸಿನಿಮಾ ಆ.15ರಂದು ತೆರೆಕಾಣಬೇಕಿತ್ತು. ಕಾರಣಾಂತರಗಳಿಂದ ಸಿನಿಮಾದ ರಿಲೀಸ್​ ದಿನಾಂಕವನ್ನು ಮುಂದೂಡಲಾಗಿತ್ತು. ಈ ಸಿನಿಮಾ ಯಾವಾಗ ಬರಲಿದೆ ಎಂಬ ಕಾತರದ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಇತ್ತು. ಉತ್ತರ ತಿಳಿಯಲು ಫ್ಯಾನ್ಸ್​ ಕಾದಿದ್ದರು. ಆ ಕಾಯುವಿಕೆಗೆ ಈಗ ಪೂರ್ಣವಿರಾಮ ಬಿದ್ದಿದೆ. ನವೆಂಬರ್​ 15ರಂದು ಸಿನಿಮಾ ರಿಲೀಸ್​ ಆಗಲಿದೆ ಎಂದು ‘ಭೈರತಿ ರಣಗಲ್​’ ಚಿತ್ರತಂಡ ತಿಳಿಸಿದೆ. ಇಂದು (ಆಗಸ್ಟ್​ 26) ಬೆಂಗಳೂರಿನಲ್ಲಿ ರಿಲೀಸ್​ ಡೇಟ್​ ಅನೌನ್ಸ್​ ಮಾಡಲಾಗಿದೆ.

ಯಲಹಂಕದ ಗೆಲರಿಯಾ ಮಾಲ್‍ನಲ್ಲಿ ಇದೇ ಮೊದಲ ಬಾರಿಗೆ ಹೊಸದಾಗಿ ನಿರ್ಮಿಸಲಾಗಿದ್ದ ಅತೀ ದೊಡ್ಡ ಗ್ರ್ಯಾಫಿಟಿ ಆರ್ಟ್​ ಅನಾವರಣಗೊಳಿಸುವ ಮೂಲಕ ‘ಭೈರತಿ ರಣಗಲ್’ ಸಿನಿಮಾದ ರಿಲೀಸ್​ ಡೇಟ್​ ಘೋಷಣೆ ಮಾಡಲಾಯ್ತು. ಈ ಸಿನಿಮಾವನ್ನು ಗೀತಾ ಶಿವರಾಜ್​ಕುಮಾರ್ ಅವರು ನಿರ್ಮಿಸಿದ್ದಾರೆ. ನರ್ತನ್ ಅವರು ನಿರ್ದೇಶನ ಮಾಡಿದ್ದಾರೆ. ಬಿಡುಗಡೆ ದಿನಾಂಕ ಘೋಷಿಸುವಾಗ ನಿವೇದಿತಾ ಶಿವರಾಜ್​ಕುಮಾರ್ ಕೂಡ ಹಾಜರಿದ್ದರು. ಈ ಇವೆಂಟ್​ ಅನ್ನು ಅಪಾರ ಸಂಖ್ಯೆಯ ಅಭಿಮಾನಿಗಳು ಕಣ್ತುಂಬಿಕೊಂಡರು.

ಸಾವಿರಾರು ಅಭಿಮಾನಿಗಳ ಎದುರಿನಲ್ಲಿ ರಿಲೀಸ್​ ಡೇಟ್​ ಘೋಷಣೆ ಮಾಡಿದ್ದಕ್ಕೆ ನಿರ್ದೇಶಕ ನರ್ತನ್​ ಅವರಿಗೆ ಖುಷಿ ಆಗಿದೆ. ನ.15ರಂದು ಚಿತ್ರಮಂದಿರದಲ್ಲಿ ಸಿನಿಮಾ ನೋಡುವ ಮೂಲಕ ಜನರು ಪ್ರೋತ್ಸಾಹ ನೀಡಬೇಕು ಎಂದು ಅವರು ಪ್ರೇಕ್ಷಕರಲ್ಲಿ ವಿನಂತಿಸಿಕೊಂಡರು. ಈ ಮೊದಲು ‘ಮಫ್ತಿ’ ಸಿನಿಮಾದಲ್ಲಿ ನರ್ತನ್​ ಅವರು ಕಸುಬುದಾರಿಕೆ ತೋರಿದ್ದರು. ಆ ಸಿನಿಮಾದ ಪ್ರೀಕ್ಚೆಲ್​ ಆಗಿ ‘ಭೈರತಿ ರಣಗಲ್​’ ಸಿನಿಮಾ ಸಿದ್ಧವಾಗಿದೆ.

ಇದನ್ನೂ ಓದಿ: ‘ಭೈರತಿ ರಣಗಲ್​’ ಗುಣಗಾನ ಮಾಡುವ ಟೈಟಲ್​ ಸಾಂಗ್​ ರಿಲೀಸ್​; ಶಿವಣ್ಣ ಫ್ಯಾನ್ಸ್​ ಖುಷ್​

ರಿಲೀಸ್​ ಡೇಟ್​ ಘೋಷಿಸಿದ ನಂತರ ಗೀತಾ ಶಿವರಾಜ್​ಕುಮಾರ್ ಮಾತಾಡಿದರು. ‘ಇದು ನಮ್ಮ ಗೀತಾ ಪಿಕ್ಚರ್ಸ್​ ಮೂಲಕ ನಿರ್ಮಾಣ ಆಗಿರುವ 2ನೇ ಸಿನಿಮಾ. ಮೊದಲ ಚಿತ್ರ ‘ವೇದ’ಗೆ ನೀವು ನೀಡಿದ ಪ್ರೋತ್ಸಾಹ, ಬೆಂಬಲಕ್ಕೆ ಧನ್ಯವಾದಗಳು. ಈಗ ಈ ಸಿನಿಮಾಗೂ ನಿಮ್ಮೆಲ್ಲರ ಪ್ರೋತ್ಸಾಹ ಇರಲಿ. ಬೆಳಗಾವಿಯಲ್ಲೂ ಈ ಸಿನಿಮಾ ಕುರಿತಾದ ಕಾರ್ಯಕ್ರಮ ಮಾಡುತ್ತೇವೆ’ ಎಂದು ಗೀತಾ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?