AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhajarangi 2: ಶಿವಣ್ಣನ ಭಜರಂಗಿ 2 ಚಿತ್ರಕ್ಕೆ ಅಲ್ಲು ಅರ್ಜುನ್​ ವಿಶ್​; ವಿಡಿಯೋ ವೈರಲ್​

Allu Arjun: ಶಿವರಾಜ್​ಕುಮಾರ್​ ನಟನೆಯ ‘ಭಜರಂಗಿ 2’ ಸಿನಿಮಾ ಬಗ್ಗೆ ‘ಸ್ಟೈಲಿಶ್​ ಸ್ಟಾರ್​’ ಅಲ್ಲು ಅರ್ಜುನ್​ ಮಾತನಾಡಿರುವ ವಿಡಿಯೋ ಸಖತ್​ ವೈರಲ್​ ಆಗುತ್ತಿವೆ. ಶಿವಣ್ಣನ​ ಅಭಿಮಾನಿಗಳು ಇದನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿ ಸಂಭ್ರಮಿಸುತ್ತಿದ್ದಾರೆ.

Bhajarangi 2: ಶಿವಣ್ಣನ ಭಜರಂಗಿ 2 ಚಿತ್ರಕ್ಕೆ ಅಲ್ಲು ಅರ್ಜುನ್​ ವಿಶ್​; ವಿಡಿಯೋ ವೈರಲ್​
ಅಲ್ಲು ಅರ್ಜುನ್​, ಶಿವರಾಜ್​ಕುಮಾರ್​
TV9 Web
| Updated By: Digi Tech Desk|

Updated on:Oct 28, 2021 | 2:44 PM

Share

ಶಿವರಾಜ್​ಕುಮಾರ್​ ಅಭಿನಯದ ‘ಭಜರಂಗಿ 2’ ಸಿನಿಮಾ ನಾಳೆ (ಅ.29) ಅದ್ದೂರಿಯಾಗಿ ಬಿಡುಗಡೆ ಆಗುತ್ತಿದೆ. ಎ. ಹರ್ಷ ನಿರ್ದೇಶನದ ಈ ಸಿನಿಮಾ ಈಗಾಗಲೇ ಟ್ರೇಲರ್​ ಮೂಲಕ ಭಾರಿ ನಿರೀಕ್ಷೆ ಮೂಡಿಸಿದೆ. ಶಿವಣ್ಣನ ಅಭಿಮಾನಿಗಳು ಈ ಸಿನಿಮಾಗಾಗಿ ಕಾದುಕುಳಿತಿದ್ದಾರೆ. ಅಷ್ಟೇ ಅಲ್ಲ, ಪರಭಾಷೆಯ ಸ್ಟಾರ್​ ನಟರು ಕೂಡ ‘ಭಜರಂಗಿ 2’ ಸಿನಿಮಾ ಮೇಲೆ ಭರವಸೆ ಇಟ್ಟುಕೊಂಡಿದ್ದಾರೆ. ಟಾಲಿವುಡ್​ ಸ್ಟಾರ್​ ನಟ ಅಲ್ಲು ಅರ್ಜುನ್​ ಅವರು ಈ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಆ ವಿಡಿಯೋ ಈಗ ಸಖತ್​ ವೈರಲ್​ ಆಗಿದೆ.

‘ವರುಡು ಕಾವಲೇನು’ ಚಿತ್ರದ ಪ್ರೀ-ರಿಲೀಸ್​ ಕಾರ್ಯಕ್ರಮದಲ್ಲಿ ಅಲ್ಲು ಅರ್ಜುನ್​ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ವೇದಿಕೆಯ ಮೇಲೆ ಅವರು ‘ಭಜರಂಗಿ 2’ ಚಿತ್ರದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಕೊರೊನಾ ಎರಡನೇ ಅಲೆ ಬಳಿಕ ಅನೇಕ ಸಿನಿಮಾಗಳು ರಿಲೀಸ್​ ಆಗುತ್ತಿವೆ. ಇದು ಇಡೀ ಭಾರತೀಯ ಚಿತ್ರರಂಗಕ್ಕೆ ತುಂಬ ಕಷ್ಟದ ಕಾಲಘಟ್ಟ ಎಂದು ಅಲ್ಲು ಅರ್ಜುನ್​ ಹೇಳಿದ್ದಾರೆ.

ಕೊರೊನಾ ಹೊಡೆತಕ್ಕೆ ಸಿಕ್ಕ ಚಿತ್ರೋದ್ಯಮ ಈಗತಾನೇ ಚೇತರಿಸಿಕೊಳ್ಳುತ್ತಿದೆ. ಇಂಥ ಸಂದರ್ಭದಲ್ಲಿ ಬಿಡುಗಡೆ ಆಗುತ್ತಿರುವ ಚಿತ್ರಗಳ ಬಗ್ಗೆ ಅಲ್ಲು ಅರ್ಜುನ್​ ಮಾತನಾಡಿದ್ದು, ಈ ವೇಳೆ ಅವರು ‘ಭಜರಂಗಿ 2’ ಚಿತ್ರಕ್ಕೆ ವಿಶ್​ ಮಾಡಿದ್ದಾರೆ. ‘ಕರ್ನಾಟಕದಲ್ಲಿ ಚಿತ್ರಮಂದಿರಗಳು ಶೇ.100 ಆಕ್ಯುಪೆನ್ಸಿಯಲ್ಲಿ ಓಪನ್​ ಆಗಿವೆ. ‘ಭಜರಂಗಿ 2’ ಚಿತ್ರ ಬಿಡುಗಡೆ ಆಗುತ್ತಿದೆ. ನಾನು ಹೃತ್ಪೂರ್ವಕವಾಗಿ ಶುಭಾಶಯ ತಿಳಿಸುತ್ತೇನೆ. ಇಡೀ ಕನ್ನಡ ಚಿತ್ರರಂಗಕ್ಕೆ ವಿಶ್​ ಮಾಡುತ್ತೇನೆ. ಈಗತಾನೇ ಎಲ್ಲ ವಿಘ್ನಗಳು ನಿವಾರಣೆಯಾಗಿ ಜನರು ಚಿತ್ರಮಂದಿರಕ್ಕೆ ಬರಲು ಆರಂಭಿಸಿದ್ದಾರೆ. ಈ ಪಾಸಿಟಿವಿಟಿ ಹೀಗೆಯೇ ಮುಂದುವರಿಯಲಿ’ ಎಂದು ಅಲ್ಲು ಅರ್ಜುನ್​ ಶುಭ ಕೋರಿದ್ದಾರೆ.

‘ಹ್ಯಾಟ್ರಿಕ್​ ಹೀರೋ’ ಸಿನಿಮಾ ಬಗ್ಗೆ ‘ಸ್ಟೈಲಿಶ್​ ಸ್ಟಾರ್​’ ಮಾತನಾಡಿರುವ ಈ ವಿಡಿಯೋ ಸಖತ್​ ವೈರಲ್​ ಆಗುತ್ತಿವೆ. ಶಿವರಾಜ್​ಕುಮಾರ್​ ಅಭಿಮಾನಿಗಳು ಶೇರ್​ ಮಾಡಿ ಸಂಭ್ರಮಿಸುತ್ತಿದ್ದಾರೆ. ಅದೇ ರೀತಿ ಅಕ್ಷಯ್​ಕುಮಾರ್​ ನಟನೆಯ ‘ಸೂರ್ಯವಂಶಿ’, ರಜನಿಕಾಂತ್​ ನಟನೆಯ ‘ಅಣ್ಣಾತೆ’ ಸಿನಿಮಾಗಳು ದೀಪಾವಳಿ ಪ್ರಯುಕ್ತ ರಿಲೀಸ್​ ಆಗಲಿವೆ. ಆ ಚಿತ್ರಗಳಿಗೂ ಸಹ ಅಲ್ಲು ಅರ್ಜುನ್​ ಆಲ್​ ದಿ ಬೆಸ್ಟ್​ ಎಂದಿದ್ದಾರೆ. ರಶ್ಮಿಕಾ ಮಂದಣ್ಣ ಮತ್ತು ಅಲ್ಲು ಅರ್ಜುನ್​ ಜೋಡಿಯ ‘ಪುಷ್ಪ’ ಚಿತ್ರ ಡಿ.17ರಂದು ಬಿಡುಗಡೆ ಆಗಲಿದೆ. ಆ ಚಿತ್ರಕ್ಕಾಗಿ ಸಿನಿಪ್ರಿಯರು ಕಾಯುತ್ತಿದ್ದಾರೆ.

ಇದನ್ನೂ ಓದಿ:

‘ಭಜರಂಗಿ 2’ ಗೆಲುವಿಗಾಗಿ ಪೂಜೆ ಸಲ್ಲಿಸಿದ ಅಭಿಮಾನಿಗಳು; ರಿಲೀಸ್​ಗೂ ಮೊದಲೇ ಹೆಚ್ಚಿದ ಕ್ರೇಜ್​​

Bhajarangi 2 Trailer: ‘ಭಜರಂಗಿ 2’ ಟ್ರೇಲರ್ ಮೂಲಕ ಮೋಡಿ ಮಾಡಿದ ಶಿವರಾಜ್​ಕುಮಾರ್​; ದುಪ್ಪಟ್ಟಾಯಿತು ನಿರೀಕ್ಷೆ

Published On - 12:50 pm, Thu, 28 October 21

ಸಾಂಪ್ರದಾಯಿಕ ಡ್ರೆಸ್ ತೊಟ್ಟು ಓಣಂ ಹಬ್ಬದೂಟ ಮಾಡಿದ ಮುದ್ದು ನಾಯಿ
ಸಾಂಪ್ರದಾಯಿಕ ಡ್ರೆಸ್ ತೊಟ್ಟು ಓಣಂ ಹಬ್ಬದೂಟ ಮಾಡಿದ ಮುದ್ದು ನಾಯಿ
ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ಗಣೇಶ ವಿಸರ್ಜನೆ ವೇಳೆ DJ ಬಂದ್ ಮಾಡಿಸಿದ ಪೊಲೀಸರು, ಗ್ರಾಮಸ್ಥರು ಮಾಡಿದ್ದೇನು
ಗಣೇಶ ವಿಸರ್ಜನೆ ವೇಳೆ DJ ಬಂದ್ ಮಾಡಿಸಿದ ಪೊಲೀಸರು, ಗ್ರಾಮಸ್ಥರು ಮಾಡಿದ್ದೇನು
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಪ್ರಿಯತಮನಿಗೋಸ್ಕರ ಮನೆ ಬಿಟ್ಟು ಓಡಿಹೋದ ಮೂರು ಮಕ್ಕಳ ತಾಯಿ: ಗೋಳಾಡಿದ ಪತಿ
ಪ್ರಿಯತಮನಿಗೋಸ್ಕರ ಮನೆ ಬಿಟ್ಟು ಓಡಿಹೋದ ಮೂರು ಮಕ್ಕಳ ತಾಯಿ: ಗೋಳಾಡಿದ ಪತಿ
ನಾಡೆಲ್ಲಾರಿಂದ ಸುಂದರ್ ಪಿಚ್ಚೈವರೆಗೆ ಟ್ರಂಪ್ ಔತಣ ಕೂಟದಲ್ಲಿ ಯಾರ್ಯಾರಿದ್ರು?
ನಾಡೆಲ್ಲಾರಿಂದ ಸುಂದರ್ ಪಿಚ್ಚೈವರೆಗೆ ಟ್ರಂಪ್ ಔತಣ ಕೂಟದಲ್ಲಿ ಯಾರ್ಯಾರಿದ್ರು?