AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhajarangi 2: ಮತ್ತೆ ಟ್ರ್ಯಾಕ್​ಗೆ ಮರಳಿದ ‘ಭಜರಂಗಿ 2’; ಗೆಲುವಿನ ಹಾದಿ ಹಿಡಿದ ಶಿವಣ್ಣನ ಸಿನಿಮಾ ​

Bhajarangi 2 Collec tion:ಈ ವಾರದಿಂದ ನಿಧಾನವಾಗಿ ಸಿನಿಮಾದ ಕಲೆಕ್ಷನ್​ ಹೆಚ್ಚುವ ನಿರೀಕ್ಷೆ ಇದೆ. ಮೂಲಗಳ ಪ್ರಕಾರ ಈ ಸಿನಿಮಾಗೆ 15 ಕೋಟಿ ಖರ್ಚಾಗಿದೆ. ಸಿನಿಮಾದ ಹಿಂದಿ ಡಬ್ಬಿಂಗ್​ ಹಕ್ಕು 5 ಕೋಟಿ ರೂಪಾಯಿಗೆ ಮಾರಾಟವಾಗಿ ಎನ್ನಲಾಗಿದೆ.

Bhajarangi 2: ಮತ್ತೆ ಟ್ರ್ಯಾಕ್​ಗೆ ಮರಳಿದ ‘ಭಜರಂಗಿ 2’; ಗೆಲುವಿನ ಹಾದಿ ಹಿಡಿದ ಶಿವಣ್ಣನ ಸಿನಿಮಾ ​
ಶಿವರಾಜ್​ಕುಮಾರ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Nov 04, 2021 | 3:09 PM

Share

ಶಿವರಾಜ್​ಕುಮಾರ್​ ಹಾಗೂ ಎ.ಹರ್ಷ ಕಾಂಬಿನೇಷನ್​ನಲ್ಲಿ ಮೂಡಿ ಬಂದ ಮೂರನೇ ಸಿನಿಮಾ  ‘ಭಜರಂಗಿ 2’. ಈ ಚಿತ್ರದ ಮೇಲೆ ಸಾಕಷ್ಟು ಭರವಸೆ ಇಟ್ಟುಕೊಳ್ಳಲಾಗಿತ್ತು. ಆದರೆ, ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದಾಗ್ಯೂ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಲಿದೆ ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ, ಲೆಕ್ಕಾಚಾರ ತಲೆಕೆಳಗಾಗಿತ್ತು. ಪುನೀತ್​ ನಿಧನ ಹಿನ್ನೆಲೆಯಲ್ಲಿ ಚಿತ್ರಮಂದಿರದತ್ತ ಹೆಜ್ಜೆ ಹಾಕುವವರ ಸಂಖ್ಯೆ ಕಡಿಮೆ ಆಗಿತ್ತು. ಆದರೆ, ಈಗ ಮತ್ತೆ ಚಿತ್ರಮಂದಿರದತ್ತ ಜನರು ಬರುತ್ತಿದ್ದಾರೆ. ನಿಧಾನವಾಗಿ ಕಲೆಕ್ಷನ್​ ಹೆಚ್ಚುತ್ತಿದೆ.

ಅಕ್ಟೋಬರ್​ 29ರಂದು  ‘ಭಜರಂಗಿ 2’ ಸಿನಿಮಾ ತೆರೆಗೆ ಬಂದಿತ್ತು. 10 ಗಂಟೆ ಶೋ ಪೂರ್ಣಗೊಳ್ಳುವ ಮೊದಲೇ ಶಾಕಿಂಗ್​ ಸುದ್ದಿ ಹೊರಬಿದ್ದಿತ್ತು. ರಾಜ್​ಕುಮಾರ್​ ಕುಟುಂಬದ ಕುಡಿ ಪುನೀತ್​ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎನ್ನುವ ವಿಚಾರ ಕಾಡ್ಗಿಚ್ಚಿನಂತೆ ಹಬ್ಬಿತ್ತು. ಇದನ್ನು ಅನೇಕರ ಬಳಿ ನಂಬೋಕೆ ಸಾಧ್ಯವಾಗಲಿಲ್ಲ. ಮೊದಲ ದಿನ ಅನೇಕ ಕಡೆಗಳಲ್ಲಿ ಶೋ ಅರ್ಧಕ್ಕೆ ನಿಲ್ಲಿಸಲಾಯಿತು. ಹೀಗಾಗಿ, ಮೊದಲ ದಿನದ ಕಲೆಕ್ಷನ್​ ಮೇಲೆ ದೊಡ್ಡ ಬರೆ ಬಿದ್ದಿತ್ತು. ಶನಿವಾರ ಹಾಗೂ ಭಾನುವಾರ ಅಂತಿಮ ದರ್ಶನ ಹಾಗೂ ಅಂತ್ಯಸಂಸ್ಕಾರದ ಕಡೆ ಜನರ ಗಮನ ಹರಿಯಿತು. ಇನ್ನು, ಶಿವರಾಜ್​ಕುಮಾರ್​ ಅವರು ಸಂಪೂರ್ಣವಾಗಿ ಕುಗ್ಗಿ ಹೋಗಿದ್ದರು. ಅವರು ಸಿನಿಮಾ ಬಗ್ಗೆ ಆಲೋಚಿಸುವ ಸ್ಥಿತಿಯಲ್ಲಿ ಇರಲಿಲ್ಲ. ಸ್ಯಾಂಡಲ್​​ವುಡ್​ಗೆ ಸೂತಕದ ಛಾಯೆ ಇದ್ದಾಗ ಸಿನಿಮಾ ಬಗ್ಗೆ ಪ್ರಚಾರ ಮಾಡುವುದು ಸರಿಯಲ್ಲ ಎನ್ನುವ ಕಾರಣಕ್ಕೆ ಚಿತ್ರತಂಡ ಕೂಡ ಆ ಕಡೆ ಗಮನ ಹರಿಸಿಲ್ಲ. ಈ ಎಲ್ಲಾ ಕಾರಣಗಳಿಂದ ಚಿತ್ರದ ಕಲೆಕ್ಷನ್​ಗೆ ದೊಡ್ಡ ಹೊಡೆತ ಬಿದ್ದಿತ್ತು.

ಈ ವಾರದಿಂದ ನಿಧಾನವಾಗಿ ಸಿನಿಮಾದ ಕಲೆಕ್ಷನ್​ ಹೆಚ್ಚುವ ನಿರೀಕ್ಷೆ ಇದೆ. ಮೂಲಗಳ ಪ್ರಕಾರ ಈ ಸಿನಿಮಾಗೆ 15 ಕೋಟಿ ಖರ್ಚಾಗಿದೆ. ಸಿನಿಮಾದ ಹಿಂದಿ ಡಬ್ಬಿಂಗ್​ ಹಕ್ಕು 5 ಕೋಟಿ ರೂಪಾಯಿಗೆ ಮಾರಾಟವಾಗಿದೆ ಎನ್ನಲಾಗಿದೆ. ಇನ್ನು, ಆಡಿಯೋ ಹಕ್ಕು ಕೂಡ ದೊಡ್ಡ ಮೊತ್ತಕ್ಕೆ ಸೇಲ್​ ಆಗಿದೆಯಂತೆ. ಇದರ ಜತೆಗೆ ಟಿವಿ ಹಕ್ಕು, ಡಿಜಿಟಲ್​ ಹಕ್ಕಿನಿಂದ ನಿರ್ಮಾಪಕರಿಗೆ ದೊಡ್ಡ ಮೊತ್ತದ ಹಣ ಸಿಗಲಿದೆ. ಹೀಗಾಗಿ, ಹಾಕಿದ ಮೊತ್ತಕ್ಕೆ ಯಾವುದೇ ತೊಂದರೆ ಆಗಿಲ್ಲ. ಈಗ ಸಿನಿಮಾ ನೋಡೋಕೆ ಜನರು ಬರುತ್ತಿರುವುದರಿಂದ ನಿರ್ಮಾಪಕರಾದ ಜಯಣ್ಣ ಹಾಗೂ ಭೋಗೇಂದ್ರ ಮೊಗದಲ್ಲಿ ಮಂದಹಾಸ ಮೂಡಿದೆ.

ಇದನ್ನೂ ಓದಿ: Bhajarangi 2: ಪುನೀತ್​ ನಿಧನದಿಂದ ಅರ್ಧಕ್ಕೆ ನಿಂತಿದ್ದ ‘ಭಜರಂಗಿ 2’ ಪ್ರದರ್ಶನ ಈಗ ಹೇಗೆ ಸಾಗುತ್ತಿದೆ? ಇಲ್ಲಿದೆ ರಿಪೋರ್ಟ್​

‘ಸಿನಿಮಾಗೆ ರೆಸ್ಪಾನ್ಸ್ ಬರ್ತಿಲ್ಲ, ಭವಿಷ್ಯ ಇಲ್ಲಿಗೆ ಕೊನೆಯಾದ ಹಾಗೆ ಅನಿಸುತ್ತಿದೆ’; ‘ಭಜರಂಗಿ 2’ ಖಳನ ಕಣ್ಣೀರು

Published On - 1:50 pm, Thu, 4 November 21

ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ