Bhajarangi 2: ಮತ್ತೆ ಟ್ರ್ಯಾಕ್​ಗೆ ಮರಳಿದ ‘ಭಜರಂಗಿ 2’; ಗೆಲುವಿನ ಹಾದಿ ಹಿಡಿದ ಶಿವಣ್ಣನ ಸಿನಿಮಾ ​

Bhajarangi 2 Collec tion:ಈ ವಾರದಿಂದ ನಿಧಾನವಾಗಿ ಸಿನಿಮಾದ ಕಲೆಕ್ಷನ್​ ಹೆಚ್ಚುವ ನಿರೀಕ್ಷೆ ಇದೆ. ಮೂಲಗಳ ಪ್ರಕಾರ ಈ ಸಿನಿಮಾಗೆ 15 ಕೋಟಿ ಖರ್ಚಾಗಿದೆ. ಸಿನಿಮಾದ ಹಿಂದಿ ಡಬ್ಬಿಂಗ್​ ಹಕ್ಕು 5 ಕೋಟಿ ರೂಪಾಯಿಗೆ ಮಾರಾಟವಾಗಿ ಎನ್ನಲಾಗಿದೆ.

Bhajarangi 2: ಮತ್ತೆ ಟ್ರ್ಯಾಕ್​ಗೆ ಮರಳಿದ ‘ಭಜರಂಗಿ 2’; ಗೆಲುವಿನ ಹಾದಿ ಹಿಡಿದ ಶಿವಣ್ಣನ ಸಿನಿಮಾ ​
ಶಿವರಾಜ್​ಕುಮಾರ್​
Follow us
| Updated By: ರಾಜೇಶ್ ದುಗ್ಗುಮನೆ

Updated on:Nov 04, 2021 | 3:09 PM

ಶಿವರಾಜ್​ಕುಮಾರ್​ ಹಾಗೂ ಎ.ಹರ್ಷ ಕಾಂಬಿನೇಷನ್​ನಲ್ಲಿ ಮೂಡಿ ಬಂದ ಮೂರನೇ ಸಿನಿಮಾ  ‘ಭಜರಂಗಿ 2’. ಈ ಚಿತ್ರದ ಮೇಲೆ ಸಾಕಷ್ಟು ಭರವಸೆ ಇಟ್ಟುಕೊಳ್ಳಲಾಗಿತ್ತು. ಆದರೆ, ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದಾಗ್ಯೂ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಲಿದೆ ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ, ಲೆಕ್ಕಾಚಾರ ತಲೆಕೆಳಗಾಗಿತ್ತು. ಪುನೀತ್​ ನಿಧನ ಹಿನ್ನೆಲೆಯಲ್ಲಿ ಚಿತ್ರಮಂದಿರದತ್ತ ಹೆಜ್ಜೆ ಹಾಕುವವರ ಸಂಖ್ಯೆ ಕಡಿಮೆ ಆಗಿತ್ತು. ಆದರೆ, ಈಗ ಮತ್ತೆ ಚಿತ್ರಮಂದಿರದತ್ತ ಜನರು ಬರುತ್ತಿದ್ದಾರೆ. ನಿಧಾನವಾಗಿ ಕಲೆಕ್ಷನ್​ ಹೆಚ್ಚುತ್ತಿದೆ.

ಅಕ್ಟೋಬರ್​ 29ರಂದು  ‘ಭಜರಂಗಿ 2’ ಸಿನಿಮಾ ತೆರೆಗೆ ಬಂದಿತ್ತು. 10 ಗಂಟೆ ಶೋ ಪೂರ್ಣಗೊಳ್ಳುವ ಮೊದಲೇ ಶಾಕಿಂಗ್​ ಸುದ್ದಿ ಹೊರಬಿದ್ದಿತ್ತು. ರಾಜ್​ಕುಮಾರ್​ ಕುಟುಂಬದ ಕುಡಿ ಪುನೀತ್​ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎನ್ನುವ ವಿಚಾರ ಕಾಡ್ಗಿಚ್ಚಿನಂತೆ ಹಬ್ಬಿತ್ತು. ಇದನ್ನು ಅನೇಕರ ಬಳಿ ನಂಬೋಕೆ ಸಾಧ್ಯವಾಗಲಿಲ್ಲ. ಮೊದಲ ದಿನ ಅನೇಕ ಕಡೆಗಳಲ್ಲಿ ಶೋ ಅರ್ಧಕ್ಕೆ ನಿಲ್ಲಿಸಲಾಯಿತು. ಹೀಗಾಗಿ, ಮೊದಲ ದಿನದ ಕಲೆಕ್ಷನ್​ ಮೇಲೆ ದೊಡ್ಡ ಬರೆ ಬಿದ್ದಿತ್ತು. ಶನಿವಾರ ಹಾಗೂ ಭಾನುವಾರ ಅಂತಿಮ ದರ್ಶನ ಹಾಗೂ ಅಂತ್ಯಸಂಸ್ಕಾರದ ಕಡೆ ಜನರ ಗಮನ ಹರಿಯಿತು. ಇನ್ನು, ಶಿವರಾಜ್​ಕುಮಾರ್​ ಅವರು ಸಂಪೂರ್ಣವಾಗಿ ಕುಗ್ಗಿ ಹೋಗಿದ್ದರು. ಅವರು ಸಿನಿಮಾ ಬಗ್ಗೆ ಆಲೋಚಿಸುವ ಸ್ಥಿತಿಯಲ್ಲಿ ಇರಲಿಲ್ಲ. ಸ್ಯಾಂಡಲ್​​ವುಡ್​ಗೆ ಸೂತಕದ ಛಾಯೆ ಇದ್ದಾಗ ಸಿನಿಮಾ ಬಗ್ಗೆ ಪ್ರಚಾರ ಮಾಡುವುದು ಸರಿಯಲ್ಲ ಎನ್ನುವ ಕಾರಣಕ್ಕೆ ಚಿತ್ರತಂಡ ಕೂಡ ಆ ಕಡೆ ಗಮನ ಹರಿಸಿಲ್ಲ. ಈ ಎಲ್ಲಾ ಕಾರಣಗಳಿಂದ ಚಿತ್ರದ ಕಲೆಕ್ಷನ್​ಗೆ ದೊಡ್ಡ ಹೊಡೆತ ಬಿದ್ದಿತ್ತು.

ಈ ವಾರದಿಂದ ನಿಧಾನವಾಗಿ ಸಿನಿಮಾದ ಕಲೆಕ್ಷನ್​ ಹೆಚ್ಚುವ ನಿರೀಕ್ಷೆ ಇದೆ. ಮೂಲಗಳ ಪ್ರಕಾರ ಈ ಸಿನಿಮಾಗೆ 15 ಕೋಟಿ ಖರ್ಚಾಗಿದೆ. ಸಿನಿಮಾದ ಹಿಂದಿ ಡಬ್ಬಿಂಗ್​ ಹಕ್ಕು 5 ಕೋಟಿ ರೂಪಾಯಿಗೆ ಮಾರಾಟವಾಗಿದೆ ಎನ್ನಲಾಗಿದೆ. ಇನ್ನು, ಆಡಿಯೋ ಹಕ್ಕು ಕೂಡ ದೊಡ್ಡ ಮೊತ್ತಕ್ಕೆ ಸೇಲ್​ ಆಗಿದೆಯಂತೆ. ಇದರ ಜತೆಗೆ ಟಿವಿ ಹಕ್ಕು, ಡಿಜಿಟಲ್​ ಹಕ್ಕಿನಿಂದ ನಿರ್ಮಾಪಕರಿಗೆ ದೊಡ್ಡ ಮೊತ್ತದ ಹಣ ಸಿಗಲಿದೆ. ಹೀಗಾಗಿ, ಹಾಕಿದ ಮೊತ್ತಕ್ಕೆ ಯಾವುದೇ ತೊಂದರೆ ಆಗಿಲ್ಲ. ಈಗ ಸಿನಿಮಾ ನೋಡೋಕೆ ಜನರು ಬರುತ್ತಿರುವುದರಿಂದ ನಿರ್ಮಾಪಕರಾದ ಜಯಣ್ಣ ಹಾಗೂ ಭೋಗೇಂದ್ರ ಮೊಗದಲ್ಲಿ ಮಂದಹಾಸ ಮೂಡಿದೆ.

ಇದನ್ನೂ ಓದಿ: Bhajarangi 2: ಪುನೀತ್​ ನಿಧನದಿಂದ ಅರ್ಧಕ್ಕೆ ನಿಂತಿದ್ದ ‘ಭಜರಂಗಿ 2’ ಪ್ರದರ್ಶನ ಈಗ ಹೇಗೆ ಸಾಗುತ್ತಿದೆ? ಇಲ್ಲಿದೆ ರಿಪೋರ್ಟ್​

‘ಸಿನಿಮಾಗೆ ರೆಸ್ಪಾನ್ಸ್ ಬರ್ತಿಲ್ಲ, ಭವಿಷ್ಯ ಇಲ್ಲಿಗೆ ಕೊನೆಯಾದ ಹಾಗೆ ಅನಿಸುತ್ತಿದೆ’; ‘ಭಜರಂಗಿ 2’ ಖಳನ ಕಣ್ಣೀರು

Published On - 1:50 pm, Thu, 4 November 21

ತಾಜಾ ಸುದ್ದಿ
ದಸರಾ ಉದ್ಘಾಟಕರ ಬಗ್ಗೆ ಸಚಿವ ಹೆಚ್​ಸಿ ಮಹದೇವಪ್ಪ ಹೇಳಿದ್ದಿಷ್ಟು?
ದಸರಾ ಉದ್ಘಾಟಕರ ಬಗ್ಗೆ ಸಚಿವ ಹೆಚ್​ಸಿ ಮಹದೇವಪ್ಪ ಹೇಳಿದ್ದಿಷ್ಟು?
ಚನ್ನಪಟ್ಟಣ ಉಪಚುನಾವಣೆ ಟಿಕೆಟ್​ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ನಿಖಿಲ್
ಚನ್ನಪಟ್ಟಣ ಉಪಚುನಾವಣೆ ಟಿಕೆಟ್​ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ನಿಖಿಲ್
‘ನನ್ನ ತಂದೆಗೆ ಮಾನಸಿಕ ಸಮಸ್ಯೆ ಇದೆ’; ಯುವಿ ಹೇಳಿಕೆಯ ವಿಡಿಯೋ ವೈರಲ್
‘ನನ್ನ ತಂದೆಗೆ ಮಾನಸಿಕ ಸಮಸ್ಯೆ ಇದೆ’; ಯುವಿ ಹೇಳಿಕೆಯ ವಿಡಿಯೋ ವೈರಲ್
ಸಿಂಗಾಪುರದಲ್ಲಿ ಪ್ರಧಾನಿ ಮೋದಿಯವರನ್ನು ನೋಡಲು ಮುಗಿಬಿದ್ದ ಭಾರತೀಯರು
ಸಿಂಗಾಪುರದಲ್ಲಿ ಪ್ರಧಾನಿ ಮೋದಿಯವರನ್ನು ನೋಡಲು ಮುಗಿಬಿದ್ದ ಭಾರತೀಯರು
ದರ್ಶನ್ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ; ರೇಣುಕಾ ಸ್ವಾಮಿ ತಂದೆ ರಿಯಾಕ್ಷನ್
ದರ್ಶನ್ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ; ರೇಣುಕಾ ಸ್ವಾಮಿ ತಂದೆ ರಿಯಾಕ್ಷನ್
ಸಿದ್ದರಾಮಯ್ಯಗೆ ರಾಜೀನಾಮೆ ಕೊಡುವ ಪರಿಸ್ಥಿತಿ ನೂರಕ್ಕೆ ನೂರು ಬರುತ್ತೆ
ಸಿದ್ದರಾಮಯ್ಯಗೆ ರಾಜೀನಾಮೆ ಕೊಡುವ ಪರಿಸ್ಥಿತಿ ನೂರಕ್ಕೆ ನೂರು ಬರುತ್ತೆ
ಭಾರೀ ಮಳೆಯಿಂದ ಕಣ್ಣೆದುರೇ ಕುಸಿದು ಬಿದ್ದ ಮನೆ; ವಿಡಿಯೋ ವೈರಲ್
ಭಾರೀ ಮಳೆಯಿಂದ ಕಣ್ಣೆದುರೇ ಕುಸಿದು ಬಿದ್ದ ಮನೆ; ವಿಡಿಯೋ ವೈರಲ್
ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯ ಮೇಲೆ ಹರಿತವಾದ ಆಯುಧದಿಂದ ಹಲ್ಲೆ
ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯ ಮೇಲೆ ಹರಿತವಾದ ಆಯುಧದಿಂದ ಹಲ್ಲೆ
ಸಿಂಗಾಪುರದಲ್ಲಿ ಡೋಲು ಬಾರಿಸಿ ಸಂಭ್ರಮಿಸಿದ ಪ್ರಧಾನಿ ಮೋದಿ
ಸಿಂಗಾಪುರದಲ್ಲಿ ಡೋಲು ಬಾರಿಸಿ ಸಂಭ್ರಮಿಸಿದ ಪ್ರಧಾನಿ ಮೋದಿ
ಮೈಸೂರು: ದಸರಾ ಆನೆಗಳ ಮಾವುತರ ಮಕ್ಕಳ ಜತೆ ವಾಲಿಬಾಲ್ ಆಡಿದ ಸಚಿವ ಮಹದೇವಪ್ಪ
ಮೈಸೂರು: ದಸರಾ ಆನೆಗಳ ಮಾವುತರ ಮಕ್ಕಳ ಜತೆ ವಾಲಿಬಾಲ್ ಆಡಿದ ಸಚಿವ ಮಹದೇವಪ್ಪ