AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhajarangi 2 First Half Review: ಶಿವರಾಜ್​ಕುಮಾರ್​ ನಟನೆಯ ‘ಭಜರಂಗಿ 2’ ಮೊದಲಾರ್ಧದಲ್ಲಿ ಏನೆಲ್ಲ ಇದೆ? ಇಲ್ಲಿದೆ ಉತ್ತರ

ಭಜರಂಗಿ 2 ಸಿನಿಮಾ ವಿಮರ್ಶೆ: ‘ಭಜರಂಗಿ 2’ ಚಿತ್ರದ ಮೊದಲಾರ್ಧ ಸಖತ್ ಥ್ರಿಲ್ಲಿಂಗ್ ಆಗಿದ್ದು, ಎಲ್ಲೂ ಬೋರ್ ಬರಿಸದೇ ಕತೆ ಸಾಗುತ್ತದೆ. ಮೊದಲಾರ್ಧದಲ್ಲಿ ಏನೆಲ್ಲಾ ಇದೆ? ಇಲ್ಲಿದೆ ಮಾಹಿತಿ.

Bhajarangi 2 First Half Review: ಶಿವರಾಜ್​ಕುಮಾರ್​ ನಟನೆಯ ‘ಭಜರಂಗಿ 2’ ಮೊದಲಾರ್ಧದಲ್ಲಿ ಏನೆಲ್ಲ ಇದೆ? ಇಲ್ಲಿದೆ ಉತ್ತರ
ಶಿವರಾಜ್​ಕುಮಾರ್​
TV9 Web
| Edited By: |

Updated on:Oct 29, 2021 | 6:36 AM

Share

ಶಿವರಾಜ್​ಕುಮಾರ್​ ನಟನೆಯ ‘ಭಜರಂಗಿ 2’ ಸಿನಿಮಾ ರಿಲೀಸ್​ಗೆ ಕೌಂಟ್​ಡೌನ್​ ಶುರುವಾಗಿದೆ. ಈ ಸಿನಿಮಾ ರಾಜ್ಯಾದ್ಯಂತ ಇಂದು (ಅಕ್ಟೋಬರ್​ 29) ಭರ್ಜರಿಯಾಗಿ ರಿಲೀಸ್​ ಆಗಿದೆ. ರಾಜ್ಯಾದ್ಯಂತ ಬರೋಬ್ಬರಿ 300 ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಬೆಂಗಳೂರಿನ ಜೆ.ಪಿ. ನಗರದ ಸಿದ್ದೇಶ್ವರ ಚಿತ್ರಮಂದಿರ ಹಾಗು ಗೌಡನ ಪಾಳ್ಯದ ಶ್ರೀನಿವಾಸ ಥಿಯೇಟರ್​​ನಲ್ಲಿ ಮುಂಜಾನೆ 5 ಘಂಟೆಗೆ ಸಿನಿಮಾ ಪ್ರದರ್ಶನ ಕಂಡಿದೆ. ಅಭಿಮಾನಿಗಳು ಶಿವಣ್ಣನ ಕಟೌಟ್​ಗೆ ಹಾಲಿನ ಅಭಿಷೇಕ ಮಾಡಿದ್ದಾರೆ. 

ಹಲವು ಕಾರಣಗಳಿಗಾಗಿ ‘ಭಜರಂಗಿ 2’ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ಸೂಪರ್​ ನ್ಯಾಚುರಲ್​ ಕಥೆ, ಬೃಹತ್​ ಸೆಟ್​ಗಳು, ಕಲಾವಿದರ ಭಿನ್ನ ವಿಭಿನ್ನ ಗೆಟಪ್​ಗಳು ಗಮನ ಸೆಳೆದಿತ್ತು. ಶಿವರಾಜ್​ಕುಮಾರ್​ ಮತ್ತು ನಿರ್ದೇಶಕ ಎ. ಹರ್ಷ ಕಾಂಬಿನೇಷನ್​ನಲ್ಲಿ ಮೂಡಿಬಂದಿರುವ ಮೂರನೇ ಸಿನಿಮಾ ಇದಾಗಿದ್ದು, ಸಾಕಷ್ಟು ಹೈಪ್​ ಸೃಷ್ಟಿ ಮಾಡಿದೆ.  ಹಾಗಾದರೆ ಸಿನಿಮಾದ ಮೊದಲಾರ್ಧ ಹೇಗಿದೆ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

  • ಶಿವರಾಜ್ ಕುಮಾರ್ ಅವರು ಟ್ರೈಲರ್​ನಲ್ಲಿ ಕಾಣಿಸಿಕೊಂಡಂತೆ ಮೊದಲಾರ್ಧದಲ್ಲಿ ಕಾಣಿಸಿಕೊಂಡಿಲ್ಲ. ಅವರ ಪಾತ್ರ ಸಖತ್ ಸರ್ಪ್ರೈಸಿಂಗ್ ಆಗಿದೆ.
  • ಶಿವರಾಜ್ ಕುಮಾರ್ ಸಿನಿಮಾ ಎಂದರೆ ಆಕ್ಷನ್ ಮಾಮೂಲಿ. ಆದರೆ ವಿಶೇಷ ಎಂದರೆ ಇಲ್ಲಿ ಮೊದಲಾರ್ಧದಲ್ಲಿ ಯಾವುದೇ ಆಕ್ಷನ್ ದೃಶ್ಯಗಳಿಲ್ಲ. ಎಲ್ಲೂ ಬೋರ್ ಬರಿಸದೇ ಬೇರೆಯದೇ ರೀತಿಯಲ್ಲಿ ಕತೆ ಸಾಗುತ್ತದೆ.
  • ಭಾವನಾ ಮೆನನ್ ಹಾಗೂ ಶಿವರಾಜ್ ಕುಮಾರ್ ಲವ್ ಸ್ಟೋರಿಯ ಎಳೆ ಮೊದಲಾರ್ಧದಲ್ಲೇ ಇದ್ದು, ವೀಕ್ಷಕರ ಮನಸೂರೆಗೊಳ್ಳೋದು ಪಕ್ಕಾ.
  • ಮಾಟ ಮಂತ್ರ ಮೊದಲಾದವುಗಳು ಮೊದಲಾರ್ಧದಲ್ಲಿ ಹೆಚ್ಚಾಗಿ ಪ್ರಸ್ತಾಪವಾಗಿದ್ದು, ನೋಡುಗರಿಗೆ ವಾವ್ ಅನ್ನಿಸುವಂತಿದೆ.
  • ‘ನೀ ಸಿಗೋವರೆಗೂ’ ಹಾಡು ಮೊದಲಾರ್ಧದಲ್ಲೇ ಇದ್ದು, ಬಹಳ ಭಿನ್ನವಾದ, ಸುಂದರವಾದ ಮೇಕಿಂಗ್​ನಿಂದ ಗಮನ ಸೆಳೆಯುತ್ತದೆ.
  • ಮೊದಲಾರ್ಧದಲ್ಲಿ ಅಕ್ಕ, ತಮ್ಮನ ಸೆಂಟಿಮೆಂಟ್ ಹೈಲೈಟ್ ಆಗಿದ್ದು, ವೀಕ್ಷಕರಿಗೆ ಇಷ್ಟವಾಗೋದು ಖಂಡಿತಾ.
  • ಮಧ್ಯಂತರದಲ್ಲಿ ಯಾರೂ ಊಹಿಸಿರದ ಟ್ವಿಸ್ಟ್ ಇದ್ದು, ಮುಂದೇನಾಗಲಿದೆ ಎಂಬ ಕುತೂಹಲವನ್ನು ನೋಡುಗರಲ್ಲಿ ಮೂಡಿಸುತ್ತದೆ. ಇದು ಚಿತ್ರದ ಬಹುದೊಡ್ಡ ಪ್ಲಸ್ ಪಾಯಿಂಟ್.
  • ಮೊದಲಾರ್ಧವು ಎಲ್ಲೂ ಬೋರ್ ಬರಿಸದೇ, ವೇಗವಾಗಿ ಸಾಗುತ್ತದೆ.

ಇದನ್ನೂ ಓದಿ: ಶಿವರಾಜ್​ಕುಮಾರ್​ ಕಟೌಟ್​, ಹಾಲಿನ ಅಭಿಷೇಕ, ಮುಂಜಾನೆ 5 ಗಂಟೆ ಶೋ; ‘ಭಜರಂಗಿ 2’ ರಿಲೀಸ್​​ಗೆ ಕೌಂಟ್​ಡೌನ್​

Published On - 6:29 am, Fri, 29 October 21

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು