AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಜರಂಗಿ ಲೋಕಿಗೆ ಖುಲಾಯಿಸಿದ ಅದೃಷ್ಟ, ತೆಲುಗಿನ ಮತ್ತೊಬ್ಬ ಸ್ಟಾರ್ ಜೊತೆ ಸಿನಿಮಾ

Bhajarangi Loki: ಸೌರವ್ ಲೋಕಿ ಅಲಿಯಾಸ್ ಭಜರಂಗಿ ಲೋಕಿಗೆ ಪರಭಾಷೆ ಸಿನಿಮಾಗಳು ಹೊಸವಲ್ಲ, ಇತ್ತೀಚೆಗೆ ‘ಸಲಾರ್’ ಸಿನಿಮಾದ ಪಾತ್ರದಿಂದ ಗಮನ ಸೆಳೆದಿರುವ ಲೋಕಿ, ಇದೀಗ ತೆಲುಗಿನ ಮತ್ತೊಬ್ಬ ಸೂಪರ್ ಸ್ಟಾರ್ ನಟನ ಸಿನಿಮಾಕ್ಕೆ ಆಯ್ಕೆ ಆಗಿದ್ದಾರೆ.

ಭಜರಂಗಿ ಲೋಕಿಗೆ ಖುಲಾಯಿಸಿದ ಅದೃಷ್ಟ, ತೆಲುಗಿನ ಮತ್ತೊಬ್ಬ ಸ್ಟಾರ್ ಜೊತೆ ಸಿನಿಮಾ
ಮಂಜುನಾಥ ಸಿ.
|

Updated on: Dec 28, 2023 | 9:27 PM

Share

ಸ್ವ-ಪರಿಶ್ರಮದಿಂದ ಚಿತ್ರರಂಗದಲ್ಲಿ ಒಂದೊಂದೆ ಮೆಟ್ಟಿಲುಗಳನ್ನು ಹತ್ತುತ್ತಾ ಸಾಗುತ್ತಿರುವ ನಟ ಸೌರವ್ ಲೋಕೇಶ್ (Sourav Lokesh) ಅಲಿಯಾಸ್ ಭಜರಂಗಿ ಲೋಕಿ. ಸಣ್ಣ-ಪುಟ್ಟ ಪಾತ್ರಗಳನ್ನು ಮಾಡುತ್ತಾ ಬಂದು ಬಳಿಕ ಸೈಡ್ ವಿಲನ್, ಮುಖ್ಯ ವಿಲನ್​ ಹೀಗೆ ಬಡ್ತಿ ಪಡೆಯುತ್ತಾ ಸಾಗುತ್ತಿದ್ದಾರೆ. ಇತ್ತೀಚೆಗೆ ತೆಲುಗು ಸಿನಿಮಾಗಳಲ್ಲಿಯೂ ನಟಿಸಿ ಅಲ್ಲಿಯೂ ಗಮನ ಸೆಳೆದು ಅವಕಾಶಗಳ ಮೇಲೆ ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ ಭಜರಂಗಿ ಲೋಕಿ.

ಇತ್ತೀಚೆಗೆ ಬಿಡುಗಡೆ ಆಗಿರುವ ‘ಸಲಾರ್’ ಸಿನಿಮಾದಲ್ಲಿ ‘ಗುರುಂಗ್’ ಪಾತ್ರದಲ್ಲಿ ಸಖತ್ ಆಗಿ ಮಿಂಚಿದ್ದಾರೆ ಲೋಕಿ. ಇದೀಗ ಮತ್ತೊಂದು ಬಿಗ್​ಬಜೆಟ್, ಸ್ಟಾರ್ ನಟರ ತೆಲುಗು ಸಿನಿಮಾಕ್ಕೆ ಆಯ್ಕೆ ಆಗಿದ್ದಾರೆ. ನಟ ಮೆಗಾಸ್ಟಾರ್ ಚಿರಂಜೀವಿ ನಟಿಸುತ್ತಿರುವ ಹೊಸ ಸಿನಿಮಾದಲ್ಲಿ ಭಜರಂಗಿ ಲೋಕಿಗೆ ಪ್ರಮುಖ ಪಾತ್ರ ದೊರೆತಿದೆ.

ಇದನ್ನೂ ಓದಿ:Shiva Rajkumar: ‘ಭಜರಂಗಿ 2’ ಚಿತ್ರದಲ್ಲಿ ಸರ್ಪ್ರೈಸ್ ನೀಡುವ ಪಾತ್ರ ಪರಿಚಯಿಸಿದ ಚಿತ್ರತಂಡ; ಯಾವ ಪಾತ್ರ? ಇಲ್ಲಿದೆ ಮಾಹಿತಿ

ಚಿರಂಜೀವಿ ಜೊತೆಗೆ ಲೋಕಿ ತೆರೆ ಹಂಚಿಕೊಳ್ಳುತ್ತಿರುವುದು ಇದು ಮೊದಲೇನೂ ಅಲ್ಲ. ಈ ಹಿಂದೆ ‘ಆಚಾರ್ಯ’ ಸಿನಿಮಾನಲ್ಲಿಯೂ ಭಜರಂಗಿ ಲೋಕಿ ನಟಿಸಿದ್ದರು. ಇದೀಗ ಮೆಗಾಸ್ಟಾರ್ ನಟನೆಯ 156ನೇ ಸಿನಿಮಾ ‘ವಿಶ್ವಾಂಭರ’ ಸಿನಿಮಾದಲ್ಲಿ ನಟಿಸುತ್ತಿದ್ದು, ಪೌರಾಣಿಕ ಕತೆಯುಳ್ಳ ಈ ಸಿನಿಮಾದಲ್ಲಿ ಭಜರಂಗಿ ಲೋಕಿ ಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಪೌರಾಣಿಕ ಅಥವಾ ಅತಿಮಾನುಷ ಕತೆಯುಳ್ಳ ಸಿನಿಮಾಗಳಲ್ಲಿ ಲೋಕಿಗೆ ನಟಿಸಿ ಅನುಭವವಿದೆ. ಅವರಿಗೆ ಹೆಸರು ತಂದುಕೊಟ್ಟಿದ್ದೇ ಅತಿಮಾನುಷ ಕತೆಯುಳ್ಳ ‘ಭಜರಂಗಿ’ ಸಿನಿಮಾ. ಇದೀಗ ಅದೇ ಮಾದರಿಯ ಕತೆಗೆ ಲೋಕಿ ಆಯ್ಕೆ ಆಗಿದ್ದು, ಅಲ್ಲಿಯೂ ಗಮನ ಸೆಳೆವ ವಿಶ್ವಾಸವಿದೆ. ಕೋವಿಡ್ ಸಮಯದಲ್ಲಿ ಗಾಯಗೊಂಡು ಆ ಬಳಿಕ ಸಿನಿಮಾಕ್ಕಾಗಿ ಮತ್ತೆ ಸತತ ಪರಿಶ್ರಮ ಹಾಕಿ ಫಿಟ್ ಆದ ಲೋಕಿ, ಈಗ ಮತ್ತೆ ಸಿನಿಮಾಗಳಲ್ಲಿ ಮಿಂಚುತ್ತಿರುವುದು ಅವರ ಅಭಿಮಾನಿಗಳಿಗೆ ಸಖತ್ ಖುಷಿಯ ವಿಚಾರ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ