AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯೋತ್ಸವದ ದಿನವೇ ಈ ಸೆಲೆಬ್ರಿಟಿಗಳಿಗೆ ಬರ್ತ್​ಡೇ ಸಂಭ್ರಮ; ಅಭಿಮಾನಿಗಳಿಂದ ಭರಪೂರ ವಿಶ್​

ಸ್ವಾತಂತ್ರ್ಯ ದಿನಾಚರಣೆ ದಿನವೇ (ಆ.15) ಈ ತಾರೆಯರು ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಎಲ್ಲರಿಂದ ಶುಭಾಶಯಗಳ ಸಂದೇಶ ಹರಿದುಬರುತ್ತಿದೆ.

ಸ್ವಾತಂತ್ರ್ಯೋತ್ಸವದ ದಿನವೇ ಈ ಸೆಲೆಬ್ರಿಟಿಗಳಿಗೆ ಬರ್ತ್​ಡೇ ಸಂಭ್ರಮ; ಅಭಿಮಾನಿಗಳಿಂದ ಭರಪೂರ ವಿಶ್​
ಸ್ವಾತಂತ್ರ್ಯೋತ್ಸವದ ದಿನವೇ ಈ ಸೆಲೆಬ್ರಿಟಿಗಳಿಗೆ ಬರ್ತ್​ಡೇ ಸಂಭ್ರಮ; ಅಭಿಮಾನಿಗಳಿಂದ ಭರಪೂರ ವಿಶ್​
Follow us
TV9 Web
| Updated By: ಮದನ್​ ಕುಮಾರ್​

Updated on:Aug 15, 2021 | 12:59 PM

ದೇಶದೆಲ್ಲೆಡೆ ಇಂದು (ಆ.15) 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಕಳೆಕಟ್ಟಿದೆ. ದ್ವಜಾರೋಹಣ ಮಾಡಿ, ರಾಷ್ಟ್ರಗೀತೆ ಹಾಡಿ, ದೇಶಭಕ್ತಿ ಮೆರೆಯಲಾಗುತ್ತಿದೆ. ದೇಶಕ್ಕಾಗಿ ತ್ಯಾಗ, ಬಲಿದಾನಗಳನ್ನು ಮಾಡಿದ ಅಸಂಖ್ಯಾತ ಜನರಿಗೆ ನಮನ ಸಲ್ಲಿಸಲಾಗುತ್ತಿದೆ. ಈ ಸಂಭ್ರಮದ ನಡುವೆಯೇ ಹಲವು ತಾರೆಯರಿಗೆ ಜನ್ಮದಿನದ ಸಡಗರ ಕೂಡ ಇದೆ. ಕನ್ನಡದ ಸಲೆಬ್ರಿಟಿಗಳಾದ ರಾಘವೇಂದ್ರ ರಾಜ್​ಕುಮಾರ್​, ನಿರ್ದೇಶಕ ಸಂತೋಷ್​ ಆನಂದ್​ರಾಮ್​, ಅರ್ಜುನ್​ ಸರ್ಜಾ, ನಾಗತಿಹಳ್ಳಿ ಚಂದ್ರಶೇಖರ್​, ಭಾರತಿ ವಿಷ್ಣುವರ್ಧನ್​, ಸುಹಾಸಿನಿ ಮುಂತಾದವರಿಗೆ ಈ ವಿಶೇಷ ದಿನದಂದು ಅಭಿಮಾನಿಗಳಿಂದ ಶುಭಾಶಯಗಳು ಹರಿದುಬರುತ್ತಿವೆ.

ಚಿತ್ರರಂಗದಲ್ಲಿ ನಟಿ ಭಾರತಿ ವಿಷ್ಣುವರ್ಧನ್​ ಅವರ ಕೊಡುಗೆ ಅಪಾರ. ಅವರ ಜರ್ನಿಯನ್ನು ಆಧರಿಸಿ ಅವರ ಅಳಿಯ ನಟ ಅನಿರುದ್ಧ ಅವರು ಒಂದು ಡಾಕ್ಯುಮೆಂಟರಿ ಮಾಡಿದ್ದು, ಅದಕ್ಕೆ ‘ಬಾಳೇ ಬಂಗಾರ’ ಎಂದು ಹೆಸರು ಇಡಲಾಗಿದೆ. ಭಾರತಿ ವಿಷ್ಣುವರ್ಧನ್​ ಅವರ ಜನ್ಮದಿನದ ಪ್ರಯುಕ್ತ ಅದರ ಟ್ರೇಲರ್​ ಇಂದು (ಆ.15) ಮಧ್ಯಾಹ್ನ ಮೂರು ಗಂಟೆಗೆ ಬಿಡುಗಡೆ ಆಗುತ್ತಿದೆ.

ಯುವರತ್ನ, ರಾಜಕುಮಾರ, ಮಿಸ್ಟರ್​ ಆ್ಯಂಡ್​ ಮಿಸಸ್​ ರಾಮಚಾರಿ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ಸಂಪಾದಿಸಿಕೊಂಡಿರುವ ನಿರ್ದೇಶಕ ಸಂತೋಷ್​ ಆನಂದ್​ರಾಮ್​ ಅವರಿಗೆ ಸ್ಯಾಂಡಲ್​ವುಡ್​ನ ಹಲವು ಸೆಲೆಬ್ರಿಟಿಗಳು ಹುಟ್ಟುಹಬ್ಬದ ಶುಭಕೋರಿದ್ದಾರೆ.

ಆನಾರೋಗ್ಯದ ಕಾರಣ ನಟ ರಾಘವೇಂದ್ರ ರಾಜ್​ಕುಮಾರ್​ ಅವರು ಚಿತ್ರರಂಗದಲ್ಲಿ ಒಂದಷ್ಟು ದಿನ ಬ್ರೇಕ್​ ಪಡೆದುಕೊಂಡಿದ್ದರು. ಆದರೆ ‘ಅಮ್ಮನ ಮನೆ’ ಸಿನಿಮಾ ಮೂಲಕ ಅವರು ಕಮ್​ಬ್ಯಾಕ್​ ಮಾಡಿದರು. ಧ್ರುವ ಸರ್ಜಾ ನಟನೆಯ ‘ಪೊಗರು’ ಚಿತ್ರದಲ್ಲಿ ರಾಘವೇಂದ್ರ ರಾಜ್​ಕುಮಾರ್​ ಅವರಿಗೆ ಒಂದು ವಿಶೇಷ ಪಾತ್ರವಿತ್ತು. ಈಗ ಅವರು ಅನೇಕ ಸಿನಿಮಾಗಳ ತೊಡಗಿಕೊಂಡಿದ್ದಾರೆ.

ಸ್ಯಾಂಡಲ್​ವುಡ್​ಗೆ ಅನೇಕ ಗಮನಾರ್ಹ​ ಸಿನಿಮಾಗಳನ್ನು ಕೊಟ್ಟ ನಾಗತಿಹಳ್ಳಿ ಚಂದ್ರಶೇಖರ್​ ಅವರಿಗೆ ಅನೇಕ ಅಭಿಮಾನಿಗಳಿದ್ದಾರೆ. ಅಮೆರಿಕ ಅಮೆರಿಕ, ಕೊಟ್ರೇಶಿ ಕನಸು ಮುಂತಾದ ಚಿತ್ರಗಳನ್ನು ನೀಡಿದ ಅವರನ್ನು ಸೆಲೆಬ್ರಿಟಿಗಳು ಕೂಡ ಪ್ರೀತಿಯಿಂದ ಮೇಷ್ಟ್ರು ಎಂದು ಕರೆಯುತ್ತಾರೆ. ನಾಗತಿಹಳ್ಳಿ ಚಂದ್ರಶೇಖರ್​ ಕೂಡ ಇಂದು ಹುಟ್ಟುಹಬ್ಬದ ಆಚರಿಸಿಕೊಳ್ಳುತ್ತಿದ್ದು ಅವರಿಗೆ ಎಲ್ಲರೂ ಶುಭಕೋರುತ್ತಿದ್ದಾರೆ.

ಅರ್ಜುನ್​ ಸರ್ಜಾ ಅವರಿಗೂ ಇಂದು ಹುಟ್ಟುಹಬ್ಬದ ಸಂಭ್ರಮ. ಇತ್ತೀಚೆಗೆ ಪಾತ್ರಗಳ ಆಯ್ಕೆಯಲ್ಲಿ ಅವರು ಚ್ಯೂಸಿ ಆಗಿದ್ದಾರೆ. ಮಲಯಾಳಂನ ‘ದಿ ಫೀಸ್ಟ್​’ ಚಿತ್ರದಲ್ಲಿ ಅವರು ನಟಿಸುತ್ತಿದ್ದು ಜನ್ಮದಿನದ ಪ್ರಯುಕ್ತ ಅವರ ಪಾತ್ರದ ಫಸ್ಟ್​ಲುಕ್​ ಬಿಡುಗಡೆ ಮಾಡಲಾಗಿದೆ. ಅವರು ಚೆನ್ನೈನಲ್ಲಿ ನಿರ್ಮಿಸಿರುವ ಬೃಹತ್​ ಆಂಜನೇಯ ಸ್ವಾಮಿ ದೇವಾಲಯ ಇತ್ತೀಚೆಗೆ ಲೋಕಾರ್ಪಣೆಗೊಂಡಿತು.

ಇದನ್ನೂ ಓದಿ:

ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೆ 5 ಅತ್ಯುತ್ತಮ ದೇಶಭಕ್ತಿ ಸಿನಿಮಾ: ಯಾವ ಓಟಿಟಿಯಲ್ಲಿ ವೀಕ್ಷಣೆಗೆ ಲಭ್ಯ?

Kannada Patriotic Movies: ದೇಶದ ಸ್ವಾತಂತ್ರ್ಯದ ಕುರಿತು ಮೈ ನವಿರೇಳಿಸುವ ಕನ್ನಡದ ದೇಶಭಕ್ತಿ ಸಿನಿಮಾಗಳು

Published On - 12:40 pm, Sun, 15 August 21

ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು