AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಓಂ ಶಿವಂ’ ಸಿನಿಮಾದ ಲಿರಿಕಲ್​ ಹಾಡು ರಿಲೀಸ್​; ಸಿಕ್ತು ಹಿರಿಯರ ಆಶೀರ್ವಾದ

ಭಾರ್ಗವ್ ಕೃಷ್ಣ ಮತ್ತು ವಿರಾಣಿಕಾ ಶೆಟ್ಟಿ ಅವರು ಜೋಡಿಯಾಗಿ ‘ಓಂ ಶಿವಂ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಕಾಕ್ರೋಜ್ ಸುಧೀ, ಯಶ್ ಶೆಟ್ಟಿ, ವರ್ಧನ್, ಅಪೂರ್ವಾ, ಲಕ್ಷ್ಮೀ ಮುಂತಾದವರು ಸಹ ಈ ಚಿತ್ರದಲ್ಲಿದ್ದಾರೆ. ಸಿನಿಮಾದ ಲಿರಿಕಲ್​ ಹಾಡು ಬಿಡುಗಡೆ ಆಗಿದೆ. ಅಲ್ವಿನ್​ ಅವರ ನಿರ್ದೇಶನ ಈ ಚಿತ್ರಕ್ಕಿದೆ. ಸುದ್ದಿಗೋಷ್ಠಿಯಲ್ಲಿ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಯಿತು.

‘ಓಂ ಶಿವಂ’ ಸಿನಿಮಾದ ಲಿರಿಕಲ್​ ಹಾಡು ರಿಲೀಸ್​; ಸಿಕ್ತು ಹಿರಿಯರ ಆಶೀರ್ವಾದ
‘ಓಂ ಶಿವಂ’ ಸಿನಿಮಾದ ಸಾಂಗ್​ ರಿಲೀಸ್​ ಕಾರ್ಯಕ್ರಮ
ಮದನ್​ ಕುಮಾರ್​
|

Updated on: Jul 21, 2024 | 11:22 PM

Share

ಚಂದನವನಕ್ಕೆ ಕಾಲಿಡುವ ಹೊಸ ಹೀರೋಗಳ ಸಾಲಿಗೆ ಭಾರ್ಗವ್ ಕೃಷ್ಣ ಅವರು ಸೇರ್ಪಡೆ ಆಗಿದ್ದಾರೆ. ‘ಓಂ ಶಿವಂ’ ಸಿನಿಮಾದಲ್ಲಿ ಅವರು ಹೀರೋ ಆಗಿದ್ದಾರೆ. ಇದು ಅವರು ನಟಿಸಿರುವ ಮೊದಲ ಸಿನಿಮಾ. ಇತ್ತೀಚೆಗೆ ‘ಓಂ ಶಿವಂ’ ಸಿನಿಮಾದ ಲಿರಿಕಲ್ ಸಾಂಗ್ ರಿಲೀಸ್​ ಮಾಡಲಾಯಿತು. ಭಾರ್ಗವ್ ಕೃಷ್ಣ ಅವರ ಕುಟುಂಬದ ಹಿರಿಯರು ಈ ಹಾಡನ್ನು ಬಿಡುಗಡೆ ಮಾಡಿದ್ದು ವಿಶೇಷ. ಅಜ್ಜಿ-ತಾತ ಬಂದು ಮೊಮ್ಮಗನ ಮೊದಲ ಸಿನಿಮಾಗೆ ವಿಶ್​ ಮಾಡಿದ್ದಾರೆ. ಭಾರ್ಗವ್ ಕೃಷ್ಣ ಅವರ ತಂದೆ ಕೃಷ್ಣ ಕೆ.ಎನ್. ಅವರೇ ‘ಓಂ ಶಿವಂ’ ಸಿನಿಮಾವನ್ನು ನಿರ್ಮಿಸಿದ್ದಾರೆ.

ಹಾಡಿನ ಬಿಡುಗಡೆ ನಂತರ ಸಿನಿಮಾ ಬಗ್ಗೆ ನಿರ್ಮಾಪಕ ಕೃಷ್ಣ ಮಾತಾಡಿದರು. ‘ಆಲ್ವಿನ್ ಅವರು ಉತ್ತಮವಾದ ಕಥೆ ರೆಡಿ ಮಾಡಿಕೊಂಡು ಬಂದು ವಿವರಿಸಿದರು. ಕಥೆ ಚೆನ್ನಾಗಿದ್ದರಿಂದ ಹೀರೋನ ಹುಡುಕಿ, ಸಿನಿಮಾದ ಕೆಲಸ ಶುರು ಮಾಡೋಣ ಅಂತ ಹೇಳಿದ್ದೆ. ಅದಕ್ಕೆ ಪ್ರತಿಕ್ರಿಯಿಸಿದ ಆಲ್ವಿನ್ ಅವರು, ಭಾರ್ಗವ್ ಈ ಕಥೆಗೆ ಸರಿ ಹೊಂದುತ್ತಾರೆ ಅವರೇ ನಮ್ಮ ಸಿನಿಮಾದ ಹೀರೋ ಅಂದರು. ಈಗ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಮುಂದಿನ ತಿಂಗಳಲ್ಲಿ ರಿಲೀಸ್​ ಮಾಡುವ ಗುರಿ ಇದೆ’ ಎಂದು ಕೃಷ್ಣ ಹೇಳಿದ್ದಾರೆ.

ಈ ಮೊದಲು ‘ರಾಜ್ ಬಹದ್ದೂರ್’ ಸಿನಿಮಾ ಮಾಡಿದ್ದ ಅಲ್ವಿನ್​ ಅವರು ಈಗ ‘ಓಂ ಶಿವಂ’ ಚಿತ್ರಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಇದು ಅವರ ಎರಡನೇ ಸಿನಿಮಾ. ‘ಇದು ಲವ್ ಜಾನರ್​ನ ಸಿನಮಾ. ಆದರೆ ಇದರಲ್ಲಿ ಲವ್ ಮಾತ್ರವಲ್ಲದೇ ಪ್ರೇಕ್ಷಕರಿಗೆ ಬೇಕಾದ ಎಲ್ಲ ಅಂಶಗಳೂ ಇವೆ. ನಮ್ಮ ಸಿನಿಮಾಗೆ 21 ವಯಸ್ಸಿನ ನಾಯಕ ಬೇಕಿತ್ತು. ಭಾರ್ಗವ್ ಅವರಿಗೂ ಅದೇ ವಯಸ್ಸು. ಆದ್ದರಿಂದ ಅವರನ್ನೇ ಈ ಸಿನಿಮಾದ ಹೀರೋ ಆಗಿ ಆಯ್ಕೆ ಮಾಡಿದೆವು’ ಎಂದಿದ್ದಾರೆ ನಿರ್ದೇಶಕರು.

ಇದನ್ನೂ ಓದಿ: ‘ಫಾರೆಸ್ಟ್’ ಹೊಕ್ಕ ಚಿಕ್ಕಣ್ಣ, ಅನೀಶ್, ಗುರುನಂದನ್, ರಂಗಾಯಣ ರಘು; ‘ಬ್ರಹ್ಮಚಾರಿ’ಯ ಹೊಸ ಸಿನಿಮಾ

‘ಚೊಚ್ಚಲ ಪ್ರಯತ್ನದಲ್ಲೇ ಭಾರ್ಗವ್ ಅವರು ಉತ್ತಮವಾಗಿ ನಟಿಸಿದ್ದಾರೆ. 4 ಹಾಡುಗಳು, ಅದ್ದೂರಿ ಸಾಹಸ ದೃಶ್ಯಗಳು ನಮ್ಮ ಸಿನಿಮಾದಲ್ಲಿವೆ’ ಎಂದು ಅಲ್ವಿನ್​ ಹೇಳಿದ್ದಾರೆ. ‘ಮೊದಲು ನನ್ನ ತಂದೆಗೆ ನಾನು ಧನ್ಯವಾದ ಹೇಳುತ್ತೇನೆ. ಮೊದಲ ಸಿನಿಮಾ ಆದ್ದರಿಂದ ಸಾಕಷ್ಟು ತಯಾರಿಯೊಂದಿಗೆ ಬಂದಿದ್ದೇನೆ’ ಎಂದಿದ್ದಾರೆ ಭಾರ್ಗವ್ ಕೃಷ್ಣ. ಅವರಿಗೆ ಜೋಡಿಯಾಗಿ ವಿರಾಣಿಕಾ ಶೆಟ್ಟಿ ನಟಿಸಿದ್ದಾರೆ. ವಿಜಯ್ ಯಾರ್ಡ್ಲೆ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ವೀರೇಶ್ ಅವರ ಛಾಯಾಗ್ರಾಹಣ, ಕೌರವ ವೆಂಕಟೇಶ್ ಅವರ ಸಾಹಸ ನಿರ್ದೇಶನ ಈ ಸಿನಿಮಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್