AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಓಂ ಶಿವಂ’ ಸಿನಿಮಾದ ಲಿರಿಕಲ್​ ಹಾಡು ರಿಲೀಸ್​; ಸಿಕ್ತು ಹಿರಿಯರ ಆಶೀರ್ವಾದ

ಭಾರ್ಗವ್ ಕೃಷ್ಣ ಮತ್ತು ವಿರಾಣಿಕಾ ಶೆಟ್ಟಿ ಅವರು ಜೋಡಿಯಾಗಿ ‘ಓಂ ಶಿವಂ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಕಾಕ್ರೋಜ್ ಸುಧೀ, ಯಶ್ ಶೆಟ್ಟಿ, ವರ್ಧನ್, ಅಪೂರ್ವಾ, ಲಕ್ಷ್ಮೀ ಮುಂತಾದವರು ಸಹ ಈ ಚಿತ್ರದಲ್ಲಿದ್ದಾರೆ. ಸಿನಿಮಾದ ಲಿರಿಕಲ್​ ಹಾಡು ಬಿಡುಗಡೆ ಆಗಿದೆ. ಅಲ್ವಿನ್​ ಅವರ ನಿರ್ದೇಶನ ಈ ಚಿತ್ರಕ್ಕಿದೆ. ಸುದ್ದಿಗೋಷ್ಠಿಯಲ್ಲಿ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಯಿತು.

‘ಓಂ ಶಿವಂ’ ಸಿನಿಮಾದ ಲಿರಿಕಲ್​ ಹಾಡು ರಿಲೀಸ್​; ಸಿಕ್ತು ಹಿರಿಯರ ಆಶೀರ್ವಾದ
‘ಓಂ ಶಿವಂ’ ಸಿನಿಮಾದ ಸಾಂಗ್​ ರಿಲೀಸ್​ ಕಾರ್ಯಕ್ರಮ
ಮದನ್​ ಕುಮಾರ್​
|

Updated on: Jul 21, 2024 | 11:22 PM

Share

ಚಂದನವನಕ್ಕೆ ಕಾಲಿಡುವ ಹೊಸ ಹೀರೋಗಳ ಸಾಲಿಗೆ ಭಾರ್ಗವ್ ಕೃಷ್ಣ ಅವರು ಸೇರ್ಪಡೆ ಆಗಿದ್ದಾರೆ. ‘ಓಂ ಶಿವಂ’ ಸಿನಿಮಾದಲ್ಲಿ ಅವರು ಹೀರೋ ಆಗಿದ್ದಾರೆ. ಇದು ಅವರು ನಟಿಸಿರುವ ಮೊದಲ ಸಿನಿಮಾ. ಇತ್ತೀಚೆಗೆ ‘ಓಂ ಶಿವಂ’ ಸಿನಿಮಾದ ಲಿರಿಕಲ್ ಸಾಂಗ್ ರಿಲೀಸ್​ ಮಾಡಲಾಯಿತು. ಭಾರ್ಗವ್ ಕೃಷ್ಣ ಅವರ ಕುಟುಂಬದ ಹಿರಿಯರು ಈ ಹಾಡನ್ನು ಬಿಡುಗಡೆ ಮಾಡಿದ್ದು ವಿಶೇಷ. ಅಜ್ಜಿ-ತಾತ ಬಂದು ಮೊಮ್ಮಗನ ಮೊದಲ ಸಿನಿಮಾಗೆ ವಿಶ್​ ಮಾಡಿದ್ದಾರೆ. ಭಾರ್ಗವ್ ಕೃಷ್ಣ ಅವರ ತಂದೆ ಕೃಷ್ಣ ಕೆ.ಎನ್. ಅವರೇ ‘ಓಂ ಶಿವಂ’ ಸಿನಿಮಾವನ್ನು ನಿರ್ಮಿಸಿದ್ದಾರೆ.

ಹಾಡಿನ ಬಿಡುಗಡೆ ನಂತರ ಸಿನಿಮಾ ಬಗ್ಗೆ ನಿರ್ಮಾಪಕ ಕೃಷ್ಣ ಮಾತಾಡಿದರು. ‘ಆಲ್ವಿನ್ ಅವರು ಉತ್ತಮವಾದ ಕಥೆ ರೆಡಿ ಮಾಡಿಕೊಂಡು ಬಂದು ವಿವರಿಸಿದರು. ಕಥೆ ಚೆನ್ನಾಗಿದ್ದರಿಂದ ಹೀರೋನ ಹುಡುಕಿ, ಸಿನಿಮಾದ ಕೆಲಸ ಶುರು ಮಾಡೋಣ ಅಂತ ಹೇಳಿದ್ದೆ. ಅದಕ್ಕೆ ಪ್ರತಿಕ್ರಿಯಿಸಿದ ಆಲ್ವಿನ್ ಅವರು, ಭಾರ್ಗವ್ ಈ ಕಥೆಗೆ ಸರಿ ಹೊಂದುತ್ತಾರೆ ಅವರೇ ನಮ್ಮ ಸಿನಿಮಾದ ಹೀರೋ ಅಂದರು. ಈಗ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಮುಂದಿನ ತಿಂಗಳಲ್ಲಿ ರಿಲೀಸ್​ ಮಾಡುವ ಗುರಿ ಇದೆ’ ಎಂದು ಕೃಷ್ಣ ಹೇಳಿದ್ದಾರೆ.

ಈ ಮೊದಲು ‘ರಾಜ್ ಬಹದ್ದೂರ್’ ಸಿನಿಮಾ ಮಾಡಿದ್ದ ಅಲ್ವಿನ್​ ಅವರು ಈಗ ‘ಓಂ ಶಿವಂ’ ಚಿತ್ರಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಇದು ಅವರ ಎರಡನೇ ಸಿನಿಮಾ. ‘ಇದು ಲವ್ ಜಾನರ್​ನ ಸಿನಮಾ. ಆದರೆ ಇದರಲ್ಲಿ ಲವ್ ಮಾತ್ರವಲ್ಲದೇ ಪ್ರೇಕ್ಷಕರಿಗೆ ಬೇಕಾದ ಎಲ್ಲ ಅಂಶಗಳೂ ಇವೆ. ನಮ್ಮ ಸಿನಿಮಾಗೆ 21 ವಯಸ್ಸಿನ ನಾಯಕ ಬೇಕಿತ್ತು. ಭಾರ್ಗವ್ ಅವರಿಗೂ ಅದೇ ವಯಸ್ಸು. ಆದ್ದರಿಂದ ಅವರನ್ನೇ ಈ ಸಿನಿಮಾದ ಹೀರೋ ಆಗಿ ಆಯ್ಕೆ ಮಾಡಿದೆವು’ ಎಂದಿದ್ದಾರೆ ನಿರ್ದೇಶಕರು.

ಇದನ್ನೂ ಓದಿ: ‘ಫಾರೆಸ್ಟ್’ ಹೊಕ್ಕ ಚಿಕ್ಕಣ್ಣ, ಅನೀಶ್, ಗುರುನಂದನ್, ರಂಗಾಯಣ ರಘು; ‘ಬ್ರಹ್ಮಚಾರಿ’ಯ ಹೊಸ ಸಿನಿಮಾ

‘ಚೊಚ್ಚಲ ಪ್ರಯತ್ನದಲ್ಲೇ ಭಾರ್ಗವ್ ಅವರು ಉತ್ತಮವಾಗಿ ನಟಿಸಿದ್ದಾರೆ. 4 ಹಾಡುಗಳು, ಅದ್ದೂರಿ ಸಾಹಸ ದೃಶ್ಯಗಳು ನಮ್ಮ ಸಿನಿಮಾದಲ್ಲಿವೆ’ ಎಂದು ಅಲ್ವಿನ್​ ಹೇಳಿದ್ದಾರೆ. ‘ಮೊದಲು ನನ್ನ ತಂದೆಗೆ ನಾನು ಧನ್ಯವಾದ ಹೇಳುತ್ತೇನೆ. ಮೊದಲ ಸಿನಿಮಾ ಆದ್ದರಿಂದ ಸಾಕಷ್ಟು ತಯಾರಿಯೊಂದಿಗೆ ಬಂದಿದ್ದೇನೆ’ ಎಂದಿದ್ದಾರೆ ಭಾರ್ಗವ್ ಕೃಷ್ಣ. ಅವರಿಗೆ ಜೋಡಿಯಾಗಿ ವಿರಾಣಿಕಾ ಶೆಟ್ಟಿ ನಟಿಸಿದ್ದಾರೆ. ವಿಜಯ್ ಯಾರ್ಡ್ಲೆ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ವೀರೇಶ್ ಅವರ ಛಾಯಾಗ್ರಾಹಣ, ಕೌರವ ವೆಂಕಟೇಶ್ ಅವರ ಸಾಹಸ ನಿರ್ದೇಶನ ಈ ಸಿನಿಮಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!