AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದ್ವೇಷ ಮಾಡೋಕೆ ಶುರು ಮಾಡಿದ್ರೆ, ದ್ವೇಷಿಸಿದವನ ಹೃದಯ ನಿಲ್ಲೋವರೆಗೂ ಬಿಡಲ್ಲ’; ಕಿರಣ್ ರಾಜ್ ಮಾಸ್​ ಎಂಟ್ರಿ

ಟೀಸರ್​ನಲ್ಲಿ ಕಿರಣ್ ರಾಜ್ ಎಂಟ್ರಿ ಸಖತ್ ಮಾಸ್​ ಆಗಿದೆ. ಈ ಸಿನಿಮಾದಲ್ಲಿ ಅವರು ಲವರ್ ಬಾಯ್​ ರೀತಿಯಲ್ಲೂ ಕಾಣಿಸಿಕೊಂಡಿದ್ದಾರೆ. ‘ಒಳ್ಳೆಯ ಟೀಸರ್, ಸಿನಿಮಾಗೆ ಒಳ್ಳೆಯದಾಗಲಿ. ಕಿರಣ್ ರಾಜ್ ಅವರಿಗೆ ಒಳ್ಳೆಯದಾಗಲಿ’ ಎಂದು ಅಭಿಮಾನಿಗಳು ಬರೆದುಕೊಂಡಿದ್ದಾರೆ.

‘ದ್ವೇಷ ಮಾಡೋಕೆ ಶುರು ಮಾಡಿದ್ರೆ, ದ್ವೇಷಿಸಿದವನ ಹೃದಯ ನಿಲ್ಲೋವರೆಗೂ ಬಿಡಲ್ಲ’; ಕಿರಣ್ ರಾಜ್ ಮಾಸ್​ ಎಂಟ್ರಿ
ಕಿರಣ್ ರಾಜ್
TV9 Web
| Edited By: |

Updated on:Mar 08, 2022 | 2:22 PM

Share

ಕಿರಣ್​ ರಾಜ್​ (Kiran Raj) ಕಿರುತೆರೆಯಲ್ಲಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ.  ‘ಕನ್ನಡತಿ’ ಧಾರಾವಾಹಿಯಲ್ಲಿ (Kannadathi Serial) ಅವರ ಪಾತ್ರ ವೀಕ್ಷಕರಿಗೆ ಇಷ್ಟವಾಗಿದೆ. ಧಾರಾವಾಹಿಯಲ್ಲಿ ಕಿರಣ್​ ರಾಜ್​ ಲವರ್ ಬಾಯ್​ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈಗ ಸಿನಿಮಾಗಾಗಿ ಅವರು ಬದಲಾಗಿದ್ದಾರೆ. ‘ಭರ್ಜರಿ​ ಗಂಡು’ (Bharjari Gandu) ಚಿತ್ರದಲ್ಲಿ ಅವರ ಸ್ಟೈಲ್​, ಲುಕ್​ ಸಂಪೂರ್ಣ ಭಿನ್ನವಾಗಿದೆ. ಅವರ ಮೈಕಟ್ಟು ನೋಡಿ ಅನೇಕರು ಫಿದಾ ಆಗಿದ್ದಾರೆ. ಇನ್ನು, ಅವರ ಆ್ಯಕ್ಷನ್​ ದೃಶ್ಯಗಳನ್ನು ಕಣ್ತುಂಬಿಕೊಂಡು ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಇಂದು (ಮಾರ್ಚ್​ 8) ಚಿತ್ರದ ಟೀಸರ್ ರಿಲೀಸ್​ ಆಗಿದ್ದು, ಇದಕ್ಕೆ ನಾನಾ ರೀತಿಯಲ್ಲಿ ಮೆಚ್ಚುಗೆಯ ಕಮೆಂಟ್​ಗಳು ಬರುತ್ತಿವೆ.

ಟೀಸರ್​ನಲ್ಲಿ ಕಿರಣ್ ರಾಜ್ ಎಂಟ್ರಿ ಸಖತ್ ಮಾಸ್​ ಆಗಿದೆ. ಈ ಸಿನಿಮಾದಲ್ಲಿ ಅವರು ಲವರ್ ಬಾಯ್​ ರೀತಿಯಲ್ಲೂ ಕಾಣಿಸಿಕೊಂಡಿದ್ದಾರೆ. ‘ಪ್ರೀತಿ ಮಾಡೋಕೆ ಶುರು ಮಾಡಿದರೆ ಪ್ರೀತಿಸಿದವಳ ಹೃದಯ ಗೆಲ್ಲೋವರೆಗೂ ಬಿಡಲ್ಲ. ದ್ವೇಷ ಮಾಡೋಕೆ ಶುರು ಮಾಡಿದ್ರೆ, ದ್ವೇಷಿಸಿದವನ ಹೃದಯ ನಿಲ್ಲೋವರೆಗೂ ಬಿಡಲ್ಲ’ ಎನ್ನುವ ಡೈಲಾಗ್​ ಸಖತ್​ ಹೈಲೈಟ್​ ಆಗಿದೆ. ‘ಒಳ್ಳೆಯ ಟೀಸರ್, ಸಿನಿಮಾಗೆ ಒಳ್ಳೆಯದಾಗಲಿ. ಕಿರಣ್ ರಾಜ್ ಅವರಿಗೆ ಒಳ್ಳೆಯದಾಗಲಿ’ ಎಂದು ಅಭಿಮಾನಿಗಳು ಬರೆದುಕೊಂಡಿದ್ದಾರೆ.

ಸಿನಿಮಾದಲ್ಲಿ ಕ್ಲೈಮ್ಯಾಕ್ಸ್​ನಲ್ಲಿ ಬರೋ ಫೈಟ್​ಗೋಸ್ಕರ್​ ಕಿರಣ್​ ರಾಜ್​ ನಾಲ್ಕು ತಿಂಗಳ ಕಾಲ ಸತತವಾಗಿ ವರ್ಕೌಟ್​ ಮಾಡಿದ್ದಾರೆ. ‘ರಾತ್ರಿ 12ರಿಂದ ಮುಂಜಾನೆ 4:30ವರೆಗೆ ನಾನು ನಿರಂತರವಾಗಿ 4 ತಿಂಗಳು ವರ್ಕೌಟ್​ ಮಾಡಿದ್ದೇನೆ. ಅದು ಸಿನಿಮಾದಲ್ಲಿ ಬರುವ ಕ್ಲೈಮ್ಯಾಕ್ಸ್​ ದೃಶ್ಯಕ್ಕೋಸ್ಕರ. ಬೆಳಗ್ಗೆ ಧಾರಾವಾಹಿ ಶೂಟಿಂಗ್​, ಚ್ಯಾರಿಟಿ ಕೆಲಸಗಳು ಇರುತ್ತಿದ್ದವು. ಹೀಗಾಗಿ, ರಾತ್ರಿ ವರ್ಕೌಟ್​ ಮಾಡುತ್ತಿದ್ದೆ’ ಎಂದು ತಮ್ಮ ಶ್ರಮದ ಬಗ್ಗೆ ಕಿರಣ್​ ರಾಜ್​ ಈ ಮೊದಲು ಹೇಳಿಕೊಂಡಿದ್ದರು.

ಪ್ರಸಿದ್ಧ್​ ಅವರು ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಯಶಾ ಶಿವಕುಮಾರ್​ ಚಿತ್ರದ ನಾಯಕಿ. ಕಿಟ್ಟಿ ಕೌಶಿಕ್​ ಛಾಯಾಗ್ರಹಣ ಈ ಸಿನಿಮಾಗಿದೆ. ಪ್ರಸಿದ್ಧ್​ ಸಿನಿಮಾಸ್​ ಹಾಗೂ ಮೊದಲಾದವರು ‘ಭರ್ಜರಿ​ ಗಂಡು’ ಚಿತ್ರದ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ.

‘ಜೀವ್ನಾನೇ ನಾಟ್ಕ ಸಾಮಿ’ ಸಿನಿಮಾದಲ್ಲಿ ಕಿರಣ್ ರಾಜ್​ ಈ ಮೊದಲು ನಟಿಸಿದ್ದರು. ಕಳೆದ ವರ್ಷ ಸಿನಿಮಾ ತೆರೆಗೆ ಬಂದಿತ್ತು. ರಂಗಭೂಮಿ ಹಿನ್ನೆಲೆ ಹೊಂದಿರುವ ರಾಜು ಭಂಡಾರಿ ರಾಜವರ್ತ ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರ ಕಳೆದ ವರ್ಷ ತೆರೆ ಕಂಡಿತ್ತು. ಈಗ ‘ಭರ್ಜರಿ ಗಂಡು’ ಸಿನಿಮಾ ಮೂಲಕ ಮಾಸ್​ ಆಗಿ ಎಂಟ್ರಿ ನೀಡೋಕೆ ಕಿರಣ್​ ರಾಜ್​ ಸಿದ್ಧತೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ‘ಅವಕಾಶ ಇದ್ದಿದ್ರೆ ನಾನು ಒಂದು ಝೂ ಮಾಡ್ತಿದ್ದೆ’; ‘ಕನ್ನಡತಿ’ ನಟ ಕಿರಣ್​ ರಾಜ್​

ಮಂಗಳಮುಖಿಯರಿಗೆ ಕಿರಣ್ ರಾಜ್ ಸಹಾಯ; ಮನಸಾರೆ ನಟನಿಗೆ ಹರಸಿದ ತೃತೀಯ ಲಿಂಗಿಗಳು

Published On - 2:21 pm, Tue, 8 March 22

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?