AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದ್ವೇಷ ಮಾಡೋಕೆ ಶುರು ಮಾಡಿದ್ರೆ, ದ್ವೇಷಿಸಿದವನ ಹೃದಯ ನಿಲ್ಲೋವರೆಗೂ ಬಿಡಲ್ಲ’; ಕಿರಣ್ ರಾಜ್ ಮಾಸ್​ ಎಂಟ್ರಿ

ಟೀಸರ್​ನಲ್ಲಿ ಕಿರಣ್ ರಾಜ್ ಎಂಟ್ರಿ ಸಖತ್ ಮಾಸ್​ ಆಗಿದೆ. ಈ ಸಿನಿಮಾದಲ್ಲಿ ಅವರು ಲವರ್ ಬಾಯ್​ ರೀತಿಯಲ್ಲೂ ಕಾಣಿಸಿಕೊಂಡಿದ್ದಾರೆ. ‘ಒಳ್ಳೆಯ ಟೀಸರ್, ಸಿನಿಮಾಗೆ ಒಳ್ಳೆಯದಾಗಲಿ. ಕಿರಣ್ ರಾಜ್ ಅವರಿಗೆ ಒಳ್ಳೆಯದಾಗಲಿ’ ಎಂದು ಅಭಿಮಾನಿಗಳು ಬರೆದುಕೊಂಡಿದ್ದಾರೆ.

‘ದ್ವೇಷ ಮಾಡೋಕೆ ಶುರು ಮಾಡಿದ್ರೆ, ದ್ವೇಷಿಸಿದವನ ಹೃದಯ ನಿಲ್ಲೋವರೆಗೂ ಬಿಡಲ್ಲ’; ಕಿರಣ್ ರಾಜ್ ಮಾಸ್​ ಎಂಟ್ರಿ
ಕಿರಣ್ ರಾಜ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Mar 08, 2022 | 2:22 PM

Share

ಕಿರಣ್​ ರಾಜ್​ (Kiran Raj) ಕಿರುತೆರೆಯಲ್ಲಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ.  ‘ಕನ್ನಡತಿ’ ಧಾರಾವಾಹಿಯಲ್ಲಿ (Kannadathi Serial) ಅವರ ಪಾತ್ರ ವೀಕ್ಷಕರಿಗೆ ಇಷ್ಟವಾಗಿದೆ. ಧಾರಾವಾಹಿಯಲ್ಲಿ ಕಿರಣ್​ ರಾಜ್​ ಲವರ್ ಬಾಯ್​ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈಗ ಸಿನಿಮಾಗಾಗಿ ಅವರು ಬದಲಾಗಿದ್ದಾರೆ. ‘ಭರ್ಜರಿ​ ಗಂಡು’ (Bharjari Gandu) ಚಿತ್ರದಲ್ಲಿ ಅವರ ಸ್ಟೈಲ್​, ಲುಕ್​ ಸಂಪೂರ್ಣ ಭಿನ್ನವಾಗಿದೆ. ಅವರ ಮೈಕಟ್ಟು ನೋಡಿ ಅನೇಕರು ಫಿದಾ ಆಗಿದ್ದಾರೆ. ಇನ್ನು, ಅವರ ಆ್ಯಕ್ಷನ್​ ದೃಶ್ಯಗಳನ್ನು ಕಣ್ತುಂಬಿಕೊಂಡು ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಇಂದು (ಮಾರ್ಚ್​ 8) ಚಿತ್ರದ ಟೀಸರ್ ರಿಲೀಸ್​ ಆಗಿದ್ದು, ಇದಕ್ಕೆ ನಾನಾ ರೀತಿಯಲ್ಲಿ ಮೆಚ್ಚುಗೆಯ ಕಮೆಂಟ್​ಗಳು ಬರುತ್ತಿವೆ.

ಟೀಸರ್​ನಲ್ಲಿ ಕಿರಣ್ ರಾಜ್ ಎಂಟ್ರಿ ಸಖತ್ ಮಾಸ್​ ಆಗಿದೆ. ಈ ಸಿನಿಮಾದಲ್ಲಿ ಅವರು ಲವರ್ ಬಾಯ್​ ರೀತಿಯಲ್ಲೂ ಕಾಣಿಸಿಕೊಂಡಿದ್ದಾರೆ. ‘ಪ್ರೀತಿ ಮಾಡೋಕೆ ಶುರು ಮಾಡಿದರೆ ಪ್ರೀತಿಸಿದವಳ ಹೃದಯ ಗೆಲ್ಲೋವರೆಗೂ ಬಿಡಲ್ಲ. ದ್ವೇಷ ಮಾಡೋಕೆ ಶುರು ಮಾಡಿದ್ರೆ, ದ್ವೇಷಿಸಿದವನ ಹೃದಯ ನಿಲ್ಲೋವರೆಗೂ ಬಿಡಲ್ಲ’ ಎನ್ನುವ ಡೈಲಾಗ್​ ಸಖತ್​ ಹೈಲೈಟ್​ ಆಗಿದೆ. ‘ಒಳ್ಳೆಯ ಟೀಸರ್, ಸಿನಿಮಾಗೆ ಒಳ್ಳೆಯದಾಗಲಿ. ಕಿರಣ್ ರಾಜ್ ಅವರಿಗೆ ಒಳ್ಳೆಯದಾಗಲಿ’ ಎಂದು ಅಭಿಮಾನಿಗಳು ಬರೆದುಕೊಂಡಿದ್ದಾರೆ.

ಸಿನಿಮಾದಲ್ಲಿ ಕ್ಲೈಮ್ಯಾಕ್ಸ್​ನಲ್ಲಿ ಬರೋ ಫೈಟ್​ಗೋಸ್ಕರ್​ ಕಿರಣ್​ ರಾಜ್​ ನಾಲ್ಕು ತಿಂಗಳ ಕಾಲ ಸತತವಾಗಿ ವರ್ಕೌಟ್​ ಮಾಡಿದ್ದಾರೆ. ‘ರಾತ್ರಿ 12ರಿಂದ ಮುಂಜಾನೆ 4:30ವರೆಗೆ ನಾನು ನಿರಂತರವಾಗಿ 4 ತಿಂಗಳು ವರ್ಕೌಟ್​ ಮಾಡಿದ್ದೇನೆ. ಅದು ಸಿನಿಮಾದಲ್ಲಿ ಬರುವ ಕ್ಲೈಮ್ಯಾಕ್ಸ್​ ದೃಶ್ಯಕ್ಕೋಸ್ಕರ. ಬೆಳಗ್ಗೆ ಧಾರಾವಾಹಿ ಶೂಟಿಂಗ್​, ಚ್ಯಾರಿಟಿ ಕೆಲಸಗಳು ಇರುತ್ತಿದ್ದವು. ಹೀಗಾಗಿ, ರಾತ್ರಿ ವರ್ಕೌಟ್​ ಮಾಡುತ್ತಿದ್ದೆ’ ಎಂದು ತಮ್ಮ ಶ್ರಮದ ಬಗ್ಗೆ ಕಿರಣ್​ ರಾಜ್​ ಈ ಮೊದಲು ಹೇಳಿಕೊಂಡಿದ್ದರು.

ಪ್ರಸಿದ್ಧ್​ ಅವರು ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಯಶಾ ಶಿವಕುಮಾರ್​ ಚಿತ್ರದ ನಾಯಕಿ. ಕಿಟ್ಟಿ ಕೌಶಿಕ್​ ಛಾಯಾಗ್ರಹಣ ಈ ಸಿನಿಮಾಗಿದೆ. ಪ್ರಸಿದ್ಧ್​ ಸಿನಿಮಾಸ್​ ಹಾಗೂ ಮೊದಲಾದವರು ‘ಭರ್ಜರಿ​ ಗಂಡು’ ಚಿತ್ರದ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ.

‘ಜೀವ್ನಾನೇ ನಾಟ್ಕ ಸಾಮಿ’ ಸಿನಿಮಾದಲ್ಲಿ ಕಿರಣ್ ರಾಜ್​ ಈ ಮೊದಲು ನಟಿಸಿದ್ದರು. ಕಳೆದ ವರ್ಷ ಸಿನಿಮಾ ತೆರೆಗೆ ಬಂದಿತ್ತು. ರಂಗಭೂಮಿ ಹಿನ್ನೆಲೆ ಹೊಂದಿರುವ ರಾಜು ಭಂಡಾರಿ ರಾಜವರ್ತ ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರ ಕಳೆದ ವರ್ಷ ತೆರೆ ಕಂಡಿತ್ತು. ಈಗ ‘ಭರ್ಜರಿ ಗಂಡು’ ಸಿನಿಮಾ ಮೂಲಕ ಮಾಸ್​ ಆಗಿ ಎಂಟ್ರಿ ನೀಡೋಕೆ ಕಿರಣ್​ ರಾಜ್​ ಸಿದ್ಧತೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ‘ಅವಕಾಶ ಇದ್ದಿದ್ರೆ ನಾನು ಒಂದು ಝೂ ಮಾಡ್ತಿದ್ದೆ’; ‘ಕನ್ನಡತಿ’ ನಟ ಕಿರಣ್​ ರಾಜ್​

ಮಂಗಳಮುಖಿಯರಿಗೆ ಕಿರಣ್ ರಾಜ್ ಸಹಾಯ; ಮನಸಾರೆ ನಟನಿಗೆ ಹರಸಿದ ತೃತೀಯ ಲಿಂಗಿಗಳು

Published On - 2:21 pm, Tue, 8 March 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!