AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜ್ಜಿಯ ಹೆಸರನ್ನೇ ಮಗಳಿಗೆ ಇಟ್ಟ ಭಾವನಾ ರಾಮಣ್ಣ; ಅದಕ್ಕಿದೆ ವಿಶೇಷ ಕಾರಣ

ಭಾವನಾ ರಾಮಣ್ಣ ಹಾಗೂ ಭಾವನ ಬೆಳಗೆರೆ ಮಧ್ಯೆ ಒಳ್ಳೆಯ ಗೆಳೆತನ ಇದೆ. ಹೀಗಾಗಿ, ಭಾವನಾ ಅವರು ತಮ್ಮ ಎರಡೂವರೆ ತಿಂಗಳ ಮಗುವಿನೊಂದಿಗೆ ಇತ್ತೀಚೆಗೆ ಭಾವನಾ ಬೆಳಗೆರೆ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಪ್ರೀತಿಯಿಂದ ಮಾತನಾಡಿದ್ದಾರೆ. ಜೊತೆಗೆ ಮಗಳಿಗೆ ರುಕ್ಮಿಣಿ ಹೆಸರು ಇಟ್ಟಿದ್ದೇಕೆ ಎಂಬ ಪ್ರಶ್ನೆಗೆ ಉತ್ತರ ನೀಡಿದ್ದಾರೆ.

ಅಜ್ಜಿಯ ಹೆಸರನ್ನೇ ಮಗಳಿಗೆ ಇಟ್ಟ ಭಾವನಾ ರಾಮಣ್ಣ; ಅದಕ್ಕಿದೆ ವಿಶೇಷ ಕಾರಣ
ಭಾವನಾ
ರಾಜೇಶ್ ದುಗ್ಗುಮನೆ
|

Updated on: Nov 29, 2025 | 10:38 AM

Share

ನಟಿ ಭಾವನಾ ರಾಮಣ್ಣ (Bhavana Ramanna) ಅವರು ಇತ್ತೀಚೆಗೆ ಮಗುವಿಗೆ ಜನ್ಮ ನೀಡಿದ್ದರು. ಅವರು ಐವಿಎಫ್ ತಂತ್ರಜ್ಞಾನದಿಂದ ತಾಯಿ ಆಗಿದ್ದಾರೆ. ಅವರಿಗೆ ಅವಳಿ ಮಕ್ಕಳು  ಜನಿಸಬೇಕಿತ್ತು. ಆದರೆ, ಒಂದು ಮಗು ಹುಟ್ಟುವ ಮೊದಲೇ ನಿಧನ ಹೊಂದಿತ್ತು. ಈಗ ಭಾವನಾ ಅವರು ಮಗಳಿಗೆ ರುಕ್ಮಿಣಿ ಎಂದು ಹೆಸರು ಇಟ್ಟಿದ್ದಾರೆ. ಇದಕ್ಕೆ ಕಾರಣ ಏನು ಎಂಬುದನ್ನು ಭಾವನಾ ರಾಮಣ್ಣ ಗೆಳತಿ ಭಾವನಾ ಬೆಳಗೆರೆ ಅವರು ವಿವರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದಾರೆ.

ಭಾವನಾ ರಾಮಣ್ಣ ಹಾಗೂ ಭಾವನ ಬೆಳಗೆರೆ ಮಧ್ಯೆ ಒಳ್ಳೆಯ ಗೆಳೆತನ ಇದೆ. ಹೀಗಾಗಿ, ಭಾವನಾ ಅವರು ತಮ್ಮ ಎರಡೂವರೆ ತಿಂಗಳ ಮಗುವಿನೊಂದಿಗೆ ಇತ್ತೀಚೆಗೆ ಭಾವನಾ ಬೆಳಗೆರೆ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಪ್ರೀತಿಯಿಂದ ಮಾತನಾಡಿದ್ದಾರೆ. ಜೊತೆಗೆ ಮಗಳಿಗೆ ರುಕ್ಮಿಣಿ ಹೆಸರು ಇಟ್ಟಿದ್ದೇಕೆ ಎಂಬ ಪ್ರಶ್ನೆಗೆ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ಅವಳಿ ಮಕ್ಕಳ ನಿರೀಕ್ಷೆಯಲ್ಲಿದ್ದ ಭಾವನಾ ರಾಮಣ್ಣಗೆ ಆಘಾತ

‘ಜನ ಯಾರು ಏನು ಮಾತನಾಡಿದ್ದಾರೋ ನನಗೆ ಗೊತ್ತಿಲ್ಲ. ಆದರೆ ನನ್ನನ್ನು ಇಷ್ಟಪಟ್ಟವರು ನನಗೆ ಆಶೀರ್ವಾದ ಮಾಡಿದ್ದಾರೆ. ಮಗುವಿಗೆ ತಿಳುವಳಿಕೆ ಬಂದಾಗ ಮಗುವಿಗೆ ಬೋಲ್ಡ್ ಆಗಿ ಹೇಳ್ತೀನಿ. ಐವಿಎಫ್ ಬೇಬಿ ನೀನು ಎಂದು ಅವಳಿಗೆ ಕನ್ವಿನ್ಸ್ ಮಾಡ್ತೀನಿ. ಆ ಧೈರ್ಯ ನನ್ನಲ್ಲಿದೆ. ಅದು ನನ್ನ ಮಗೂನೇ. ನನ್ನ ಅರ್ಧ ರಕ್ತ ಇದೆ. ನಾನು ಹೊಟ್ಟೆಯಲ್ಲಿ ಇಟ್ಟುಕೊಂಡು ಬೆಳೆಸಿದ್ದೇನೆ’ ಎಂದು ಭಾವನಾ ರಾಮಣ್ಣ ಅವರು ಭಾವನಾ ಬೆಳಗೆರೆ ಬಳಿ ಹೇಳಿದ್ದರಂತೆ. ‘ಏನು ಹೆಸರಿಡುತ್ತೀಯಾ? ಎಂದಿದ್ದಕ್ಕೆ ರುಕ್ಕಿಣಿ ಅಂದಳು. ಅದ್ಯಾಕೆ ಬೇರೆ ಹೊಸ ಹೆಸರು ಇಡಬಹುದಿತ್ತಲ್ಲಾ ಅಂದರೆ ಇಲ್ಲ, ರುಕ್ಮಿಣಿ ಅನ್ನೋದು ನನ್ನ ಅಜ್ಜಿ ಹೆಸರು. ಅವರು ತುಂಬ ರೆಬೆಲ್ ಆಗಿ, ಬೋಲ್ಡ್ ಆಗಿ ಬೆಳೆದವರು. ನಾನು ಅದೇ ಥರಾ ಅಂತ ನನ್ನನ್ನು ಗೇಲಿ ಮಾಡುತ್ತಿದ್ದರು. ಹಾಗಾಗಿ ನನ್ನ ಮಗಳೂ ಕೂಡ ಅಜ್ಜಿ ಥರ ಧೈರ್ಯವಂತೆ, ಬುದ್ಧಿವಂತೆ ಆಗಲಿ ಅಂತ ಆ ಹೆಸರು ಆಯ್ಕೆ ಮಾಡಿದ್ದಾಳಂತೆ. ಮನೆ ಕೆಲಸಕ್ಕೆ ಜನ ಇಟ್ಟುಕೊಂಡರೂ ಅವಳೇ ಮಗುವಿಗೆ ಮಸಾಜ್ ಮಾಡಿ, ಸ್ನಾನ ಮಾಡಿಸಿ ಆರೈಕೆ ಮಾಡುತ್ತಾಳೆ’ ಎಂದು ಭಾವನಾ ಬೆಳಗೆರೆ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ಸೋಷಿಯಲ್ ಮೀಡಿಯಾ ಗಿಮಿಕ್ ಮಾಡೋರೇ ಹುಷಾರ್: ಪೊಲೀಸ್ ಆಯುಕ್ತ ಖಡಕ್ ವಾರ್ನಿಂಗ್
ಸೋಷಿಯಲ್ ಮೀಡಿಯಾ ಗಿಮಿಕ್ ಮಾಡೋರೇ ಹುಷಾರ್: ಪೊಲೀಸ್ ಆಯುಕ್ತ ಖಡಕ್ ವಾರ್ನಿಂಗ್
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದ ಡಿಕೆಶಿ: ಹೇಳಿದ್ದೇನು ನೋಡಿ!
ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದ ಡಿಕೆಶಿ: ಹೇಳಿದ್ದೇನು ನೋಡಿ!
ಮಾ.03 ಚಂದ್ರಗ್ರಹಣ; ವೃಶ್ಚಿಕ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ವೃಶ್ಚಿಕ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಇದು ಕೆಸರು ಗದ್ದೆಯಲ್ಲ, ಹಾವೇರಿ-ಶಿರಸಿ ರಾಜ್ಯ ಹೆದ್ದಾರಿ!
ಇದು ಕೆಸರು ಗದ್ದೆಯಲ್ಲ, ಹಾವೇರಿ-ಶಿರಸಿ ರಾಜ್ಯ ಹೆದ್ದಾರಿ!
ಎಐಎಡಿಎಂಕೆಯ ಉಚ್ಚಾಟಿತ ನಾಯಕ ಪನ್ನೀರ್​​ಸೆಲ್ವಂ ಡಿಎಂಕೆಗೆ ಸೇರ್ಪಡೆ
ಎಐಎಡಿಎಂಕೆಯ ಉಚ್ಚಾಟಿತ ನಾಯಕ ಪನ್ನೀರ್​​ಸೆಲ್ವಂ ಡಿಎಂಕೆಗೆ ಸೇರ್ಪಡೆ
ಜಿಮ್ ಸೇರಿದ ವಾರದಲ್ಲೇ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಹೃದಯಾಘಾತದಿಂದ ಸಾವು
ಜಿಮ್ ಸೇರಿದ ವಾರದಲ್ಲೇ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಹೃದಯಾಘಾತದಿಂದ ಸಾವು
ಮಾ.03ರ ಚಂದ್ರಗ್ರಹಣದ ಬಳಿಕ ಈ ರಾಶಿಗೆ ಹಣ, ಸಂಪತ್ತು, ಖ್ಯಾತಿ ಅರಸಿ ಬರಲಿದೆ!
ಮಾ.03ರ ಚಂದ್ರಗ್ರಹಣದ ಬಳಿಕ ಈ ರಾಶಿಗೆ ಹಣ, ಸಂಪತ್ತು, ಖ್ಯಾತಿ ಅರಸಿ ಬರಲಿದೆ!
ರಸ್ತೆ ದಾಟುತ್ತಿದ್ದ ಹಸುವಿಗೆ ಗುದ್ದಿದ ಬೈಕ್
ರಸ್ತೆ ದಾಟುತ್ತಿದ್ದ ಹಸುವಿಗೆ ಗುದ್ದಿದ ಬೈಕ್