AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕೆಂಡ್​ನಲ್ಲಿ ‘ಭೀಮ’ ಚಿತ್ರಕ್ಕೆ ಉತ್ತಮ ಕಲೆಕ್ಷನ್; ಒಟ್ಟೂ ಗಳಿಕೆ ಎಷ್ಟು?

Bheema Movie Collection: ದುನಿಯಾ ವಿಜಯ್ ನಟನೆಯ ‘ಭೀಮ’ ಸಿನಿಮಾ ಆಗಸ್ಟ್ 09ರಂದು ರಾಜ್ಯದಾದ್ಯಂತ ಬಿಡುಗಡೆ ಆಗಿದೆ. ಮಾದಕ ವಸ್ತುವಿನ ಪ್ರಸಾರ ಹಾಗೂ ಅದರ ಪರಿಣಾಮ ಯುವಕರ ಮೇಲೆ ಹೇಗೆ ಆಗುತ್ತಿದೆ ಎಂಬ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾ ಭರ್ಜರಿ ಪ್ರದರ್ಶನ ಕಂಡಿದೆ.

ವೀಕೆಂಡ್​ನಲ್ಲಿ ‘ಭೀಮ’ ಚಿತ್ರಕ್ಕೆ ಉತ್ತಮ ಕಲೆಕ್ಷನ್; ಒಟ್ಟೂ ಗಳಿಕೆ ಎಷ್ಟು?
ಭೀಮ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on:Aug 12, 2024 | 8:31 AM

Share

‘ಭೀಮ’ ಸಿನಿಮಾ ಆಗಸ್ಟ್ 9ರಂದು ರಿಲೀಸ್ ಆಯಿತು. ದುನಿಯಾ ವಿಜಯ್ ಅವರು ನಟಿಸಿ, ನಿರ್ದೇಶಿಸಿರುವ ಸಿನಿಮಾ ಇದು. ಈ ಕಾರಣಕ್ಕೆ ಚಿತ್ರದ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇತ್ತು. ಸಾಕಷ್ಟು ರಾ ಆಗಿ ಸಿನಿಮಾ ಮೂಡಿ ಬಂದಿದೆ ಎಂಬುದು ಹಲವರ ಅಭಿಪ್ರಾಯ. ಈ ಸಿನಿಮಾದ ಮೂರು ದಿನದ ಗಳಿಕೆ 10 ಕೋಟಿ ರೂಪಾಯಿ ದಾಟಿದೆ ಎಂದು ಬಾಕ್ಸ್ ಆಫೀಸ್ ಬಗ್ಗೆ ಲೆಕ್ಕ ಕೊಡುವ sacnilk ವರದಿ ಮಾಡಿದೆ. ಇದು ನಿರ್ಮಾಪಕರ ಮೊಗದಲ್ಲಿ ನಗು ಮೂಡಿಸಿದೆ. ಇತ್ತೀಚಿನ ದಿನಗಳಲ್ಲಿ ಕನ್ನಡದ ಯಾವುದೇ ಚಿತ್ರಗಳು ಗೆದ್ದು ಬೀಗಿರಲಿಲ್ಲ. ಈಗ ‘ಭೀಮ’ ಚಿತ್ರದಿಂದ ಸಿನಿಮಾ ಮಂದಿರಗಳಿಗೆ ಕಳೆ ಬಂದಿದೆ.

‘ಭೀಮ’ ಸಿನಿಮಾದಲ್ಲಿ ಸಮಾಜಕ್ಕೆ ಸಂದೇಶ ಸಾರುವ ಕಥೆ ಇಡಲಾಗಿದೆ. ಬೆಂಗಳೂರಲ್ಲಿ ನಡೆಯೋ ಮಾದಕವಸ್ತು ದಂಧೆಗಳ ಬಗ್ಗೆ ಬೆಳಕು ಚೆಲ್ಲುವ ಕೆಲಸ ಆಗಿದೆ. ಇದಕ್ಕೆ ದುನಿಯಾ ವಿಜಯ್ ಆಯ್ಕೆ ಮಾಡಿಕೊಂಡ ಭಾಷೆ ಸಖತ್ ರಗಡ್. ಈಗ ‘ಭೀಮ’ ಸಿನಿಮಾ ಮೂರು ದಿನಕ್ಕೆ 11.15 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ವರದಿ ಆಗಿದೆ.

ಮೊದಲ ದಿನ ‘ಭೀಮ’ ಚಿತ್ರ 3.95 ಕೋಟಿ ರೂಪಾಯಿ ಬಾಚಿಕೊಂಡಿತು. ಎರಡನೇ ದಿನ 3.4 ಕೋಟಿ ರೂಪಾಯಿ ಹಾಗೂ ಭಾನುವಾರ 3.80 ಕೋಟಿ ರೂಪಾಯಿ ಸಿನಿಮಾ ಗಳಿಕೆ ಮಾಡಿದೆ. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆ 11.15 ಕೋಟಿ ರೂಪಾಯಿ ಆಗಿದೆ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ. ಸಿನಿಮಾ ಮುಂದಿನ ದಿನಗಳಲ್ಲಿ ಮತ್ತಷ್ಟು ಕಲೆಕ್ಷನ್ ಮಾಡಲಿ ಎಂದು ಫ್ಯಾನ್ಸ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮೊದಲ ದಿನದ ಗಳಿಕೆಯಲ್ಲಿ ‘ಭೀಮ’ನ ಅಬ್ಬರ; ಸ್ಯಾಂಡಲ್​ವುಡ್​ಗೆ ಹೊಸ ಕಳೆ

ಆದರೆ, ಮುಂಬರುವ ದಿನಗಳು ಮತ್ತಷ್ಟು ಚಾಲೆಂಜಿಂಗ್ ಎನಿಸಿಕೊಂಡಿವೆ. ಅದಕ್ಕೆ ಕಾರಣವೂ ಇದೆ. ಆಗಸ್ಟ್ 15ರ ಪ್ರಯುಕ್ತ ಈ ಗುರುವಾರ ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ಹಲವು ಸಿನಿಮಾಗಳು ರಿಲೀಸ್ ಆಗುತ್ತಿವೆ. ಹೀಗಾಗಿ, ದೊಡ್ಡ ಮಟ್ಟದ ಸ್ಪರ್ಧೆ ಸಿನಿಮಾಗೆ ಏರ್ಪಡಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:58 am, Mon, 12 August 24

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ