AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕೆಂಡ್​ನಲ್ಲಿ ‘ಭೀಮ’ ಚಿತ್ರಕ್ಕೆ ಉತ್ತಮ ಕಲೆಕ್ಷನ್; ಒಟ್ಟೂ ಗಳಿಕೆ ಎಷ್ಟು?

Bheema Movie Collection: ದುನಿಯಾ ವಿಜಯ್ ನಟನೆಯ ‘ಭೀಮ’ ಸಿನಿಮಾ ಆಗಸ್ಟ್ 09ರಂದು ರಾಜ್ಯದಾದ್ಯಂತ ಬಿಡುಗಡೆ ಆಗಿದೆ. ಮಾದಕ ವಸ್ತುವಿನ ಪ್ರಸಾರ ಹಾಗೂ ಅದರ ಪರಿಣಾಮ ಯುವಕರ ಮೇಲೆ ಹೇಗೆ ಆಗುತ್ತಿದೆ ಎಂಬ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾ ಭರ್ಜರಿ ಪ್ರದರ್ಶನ ಕಂಡಿದೆ.

ವೀಕೆಂಡ್​ನಲ್ಲಿ ‘ಭೀಮ’ ಚಿತ್ರಕ್ಕೆ ಉತ್ತಮ ಕಲೆಕ್ಷನ್; ಒಟ್ಟೂ ಗಳಿಕೆ ಎಷ್ಟು?
ಭೀಮ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on:Aug 12, 2024 | 8:31 AM

Share

‘ಭೀಮ’ ಸಿನಿಮಾ ಆಗಸ್ಟ್ 9ರಂದು ರಿಲೀಸ್ ಆಯಿತು. ದುನಿಯಾ ವಿಜಯ್ ಅವರು ನಟಿಸಿ, ನಿರ್ದೇಶಿಸಿರುವ ಸಿನಿಮಾ ಇದು. ಈ ಕಾರಣಕ್ಕೆ ಚಿತ್ರದ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇತ್ತು. ಸಾಕಷ್ಟು ರಾ ಆಗಿ ಸಿನಿಮಾ ಮೂಡಿ ಬಂದಿದೆ ಎಂಬುದು ಹಲವರ ಅಭಿಪ್ರಾಯ. ಈ ಸಿನಿಮಾದ ಮೂರು ದಿನದ ಗಳಿಕೆ 10 ಕೋಟಿ ರೂಪಾಯಿ ದಾಟಿದೆ ಎಂದು ಬಾಕ್ಸ್ ಆಫೀಸ್ ಬಗ್ಗೆ ಲೆಕ್ಕ ಕೊಡುವ sacnilk ವರದಿ ಮಾಡಿದೆ. ಇದು ನಿರ್ಮಾಪಕರ ಮೊಗದಲ್ಲಿ ನಗು ಮೂಡಿಸಿದೆ. ಇತ್ತೀಚಿನ ದಿನಗಳಲ್ಲಿ ಕನ್ನಡದ ಯಾವುದೇ ಚಿತ್ರಗಳು ಗೆದ್ದು ಬೀಗಿರಲಿಲ್ಲ. ಈಗ ‘ಭೀಮ’ ಚಿತ್ರದಿಂದ ಸಿನಿಮಾ ಮಂದಿರಗಳಿಗೆ ಕಳೆ ಬಂದಿದೆ.

‘ಭೀಮ’ ಸಿನಿಮಾದಲ್ಲಿ ಸಮಾಜಕ್ಕೆ ಸಂದೇಶ ಸಾರುವ ಕಥೆ ಇಡಲಾಗಿದೆ. ಬೆಂಗಳೂರಲ್ಲಿ ನಡೆಯೋ ಮಾದಕವಸ್ತು ದಂಧೆಗಳ ಬಗ್ಗೆ ಬೆಳಕು ಚೆಲ್ಲುವ ಕೆಲಸ ಆಗಿದೆ. ಇದಕ್ಕೆ ದುನಿಯಾ ವಿಜಯ್ ಆಯ್ಕೆ ಮಾಡಿಕೊಂಡ ಭಾಷೆ ಸಖತ್ ರಗಡ್. ಈಗ ‘ಭೀಮ’ ಸಿನಿಮಾ ಮೂರು ದಿನಕ್ಕೆ 11.15 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ವರದಿ ಆಗಿದೆ.

ಮೊದಲ ದಿನ ‘ಭೀಮ’ ಚಿತ್ರ 3.95 ಕೋಟಿ ರೂಪಾಯಿ ಬಾಚಿಕೊಂಡಿತು. ಎರಡನೇ ದಿನ 3.4 ಕೋಟಿ ರೂಪಾಯಿ ಹಾಗೂ ಭಾನುವಾರ 3.80 ಕೋಟಿ ರೂಪಾಯಿ ಸಿನಿಮಾ ಗಳಿಕೆ ಮಾಡಿದೆ. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆ 11.15 ಕೋಟಿ ರೂಪಾಯಿ ಆಗಿದೆ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ. ಸಿನಿಮಾ ಮುಂದಿನ ದಿನಗಳಲ್ಲಿ ಮತ್ತಷ್ಟು ಕಲೆಕ್ಷನ್ ಮಾಡಲಿ ಎಂದು ಫ್ಯಾನ್ಸ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮೊದಲ ದಿನದ ಗಳಿಕೆಯಲ್ಲಿ ‘ಭೀಮ’ನ ಅಬ್ಬರ; ಸ್ಯಾಂಡಲ್​ವುಡ್​ಗೆ ಹೊಸ ಕಳೆ

ಆದರೆ, ಮುಂಬರುವ ದಿನಗಳು ಮತ್ತಷ್ಟು ಚಾಲೆಂಜಿಂಗ್ ಎನಿಸಿಕೊಂಡಿವೆ. ಅದಕ್ಕೆ ಕಾರಣವೂ ಇದೆ. ಆಗಸ್ಟ್ 15ರ ಪ್ರಯುಕ್ತ ಈ ಗುರುವಾರ ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ಹಲವು ಸಿನಿಮಾಗಳು ರಿಲೀಸ್ ಆಗುತ್ತಿವೆ. ಹೀಗಾಗಿ, ದೊಡ್ಡ ಮಟ್ಟದ ಸ್ಪರ್ಧೆ ಸಿನಿಮಾಗೆ ಏರ್ಪಡಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:58 am, Mon, 12 August 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ