AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗಿನ ‘ಭೀಮ್ಲಾ ನಾಯಕ್’​ ಸಿನಿಮಾಗೆ ಪುನೀತ್​ ರಾಜ್​ಕುಮಾರ್​ ಬೆಂಬಲ; ಧನ್ಯವಾದ ಹೇಳಿದ ಪವನ್ ​ಕಲ್ಯಾಣ್​ ಫ್ಯಾನ್ಸ್

ಮಲಯಾಳಂನ ‘ಅಯ್ಯಪ್ಪನುಮ್​ ಕೋಶಿಯುಮ್​’ ಸಿನಿಮಾದ ರಿಮೇಕ್​ ‘ಭಿಮ್ಲಾ ನಾಯಕ್’. ಪೊಲೀಸ್​ ಹಾಗೂ ಮಾಜಿ ಸೈನಿಕನ ನಡುವೆ ನಡೆಯುವ ಅಹಂನ ಕಥೆ ಇದಾಗಿದೆ.

ತೆಲುಗಿನ ‘ಭೀಮ್ಲಾ ನಾಯಕ್’​ ಸಿನಿಮಾಗೆ ಪುನೀತ್​ ರಾಜ್​ಕುಮಾರ್​ ಬೆಂಬಲ; ಧನ್ಯವಾದ ಹೇಳಿದ ಪವನ್ ​ಕಲ್ಯಾಣ್​ ಫ್ಯಾನ್ಸ್
ತೆಲುಗಿನ ‘ಭೀಮ್ಲಾ ನಾಯಕ್’​ ಸಿನಿಮಾಗೆ ಪುನೀತ್​ ರಾಜ್​ಕುಮಾರ್​ ಬೆಂಬಲ; ಧನ್ಯವಾದ ಹೇಳಿದ ಪವನ್​ ಫ್ಯಾನ್ಸ್
TV9 Web
| Edited By: |

Updated on: Sep 20, 2021 | 9:56 PM

Share

ತೆಲುಗಿನಲ್ಲಿ ಸಿದ್ಧಗೊಳ್ಳುತ್ತಿರುವ ‘ಭೀಮ್ಲಾ ನಾಯಕ್’ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಪವನ್​ ಕಲ್ಯಾಣ್​​ ಪೊಲೀಸ್​ ಆಗಿ ಕಾಣಿಸಿಕೊಂಡರೆ, ರಾಣಾ ದಗ್ಗುಬಾಟಿ ನೆಗೆಟಿವ್​ ಪಾತ್ರದಲ್ಲಿ ಪ್ರೇಕ್ಷಕರ ಎದುರು ಬರಲಿದ್ದಾರೆ. ಸಿನಿಮಾದಲ್ಲಿನ ರಾಣಾ ದಗ್ಗುಬಾಟಿ ಪಾತ್ರದ ಝಲಕ್​ಅನ್ನು ಪುನೀತ್​ ರಾಜ್​ಕುಮಾರ್​ ಇಂದು ರಿಲೀಸ್​ ಮಾಡಿದ್ದಾರೆ.  

ಮಲಯಾಳಂನ ‘ಅಯ್ಯಪ್ಪನುಮ್​ ಕೋಶಿಯುಮ್​’ ಸಿನಿಮಾದ ರಿಮೇಕ್​ ‘ಭಿಮ್ಲಾ ನಾಯಕ್’. ಪೊಲೀಸ್​ ಹಾಗೂ ಮಾಜಿ ಸೈನಿಕನ ನಡುವೆ ನಡೆಯುವ ಅಹಂನ ಕಥೆ ಇದಾಗಿದೆ. ಈ ಸಿನಿಮಾ ಮಲಯಾಳಂನಲ್ಲಿ ಮೆಚ್ಚುಗೆ ಪಡೆದುಕೊಂಡಿತ್ತು. ಪೃಥ್ವಿರಾಜ್​ ಹಾಗೂ ಬಿಜು ಮೆನನ್​ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಪೃಥ್ವಿರಾಜ್​ ಪಾತ್ರವನ್ನು ರಾಣಾ ದಗ್ಗುಬಾಟಿ ಹಾಗೂ ಬಿಜು ಮಾಡಿದ್ದ ಪಾತ್ರವನ್ನು ಪವನ್​ ಕಲ್ಯಾಣ್​ ನಿರ್ವಹಿಸುತ್ತಿದ್ದಾರೆ.

ಇಂದು (ಸೆಪ್ಟೆಂಬರ್​ 20) ಫಸ್ಟ್​ ಲುಕ್​ ಜತೆಗೆ ಸಣ್ಣ ವಿಡಿಯೋ ಕೂಡ ರಿಲೀಸ್​ ಆಗಿದೆ. ರಾಣಾ ಸಖತ್​ ಮಾಸ್​ ಆಗಿ ಕಾಣಿಸಿಕೊಂಡಿದ್ದಾರೆ. ಪವನ್​ ಕಲ್ಯಾಣ್​ ಹಾಗೂ ರಾಣಾ ಮುಖಾಮುಖಿ ಆಗುತ್ತಿರುವ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ. ‘ಬಾಹುಬಲಿ’ ಸಿನಿಮಾದಲ್ಲಿ ರಾಣಾ ನೆಗೆಟಿವ್​ ರೋಲ್​ನಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದರು. ಈಗ ಅವರು ಮತ್ತೊಂದು ಖಡಕ್​ ಪಾತ್ರ ಆಯ್ಕೆ ಮಾಡಿಕೊಂಡಿದ್ದಾರೆ.

ಪುನೀತ್​ ರಾಜ್​ಕುಮಾರ್​ ಈ ವಿಡಿಯೋ ಲಿಂಕ್​ ಶೇರ್​ ಮಾಡಿಕೊಂಡಿದ್ದಾರೆ. ಇದಕ್ಕೆ ಪವನ್​ ಕಲ್ಯಾಣ್​ ಫ್ಯಾನ್ಸ್​ ಖುಷಿಯಾಗಿದ್ದಾರೆ. ಅಲ್ಲದೆ, ಈ ವಿಡಿಯೋ ಹಂಚಿಕೊಂಡು ಬೆಂಬಲಿಸಿದ ಪುನೀತ್​ ರಾಜ್​ಕುಮಾರ್​ ಅವರಿಗೆ ಧನ್ಯವಾದ ಹೇಳಿದ್ದಾರೆ. ಪುನೀತ್​ ರಾಜ್​ಕುಮಾರ್​ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಸಿನಿಮಾಗಳನ್ನು ಬೆಂಬಲಿಸುತ್ತಿದ್ದಾರೆ. ಹೊಸಬರ ಸಿನಿಮಾಗೆ ಮೆಚ್ಚುಗೆಯ ಮಾತನ್ನು ಹೇಳುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್​ ಸದ್ಯ, ‘ಜೇಮ್ಸ್​’ ಹಾಗೂ ‘ದ್ವಿತ್ವ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜತೆಗೆ ಸಂತೋಷ್​ ಆನಂದ್​ರಾಮ್​ ಜತೆ ಹೊಸ ಸಿನಿಮಾ ಮಾಡುತ್ತಿದ್ದಾರೆ. ‘ಜೇಮ್ಸ್​ ಹಾಗೂ ‘ದ್ವಿತ್ವ’ ಸಿನಿಮಾ ಕೆಲಸಗಳು ಭರದಿಂದ ಸಾಗಿವೆ. ‘ರಾಜಕುಮಾರ’ ಹಾಗೂ ‘ಯುವರತ್ನ’ ನಂತರ ಪುನೀತ್​ ಮತ್ತು ಸಂತೋಷ್​ ಮತ್ತೆ ಒಂದಾಗುತ್ತಿದ್ದಾರೆ.

ಇದನ್ನೂ ಓದಿ: ಪುನೀತ್, ಸಂತೋಷ್ ಆನಂದರಾಮ್, ಹೊಂಬಾಳೆ ಫಿಲ್ಮ್ಸ್ ಕಾಂಬಿನೇಷನ್​ನಲ್ಲಿ ಹೊಸ ಚಿತ್ರ; ಸೆಟ್ಟೇರೋದು ಯಾವಾಗ?

ಹೊಂಬಾಳೆ ಫಿಲ್ಮ್ಸ್​ ಕಡೆಯಿಂದ ಮತ್ತೊಂದು ಸಿನಿಮಾ; ಸೆಪ್ಟೆಂಬರ್​​ 22ಕ್ಕೆ ಟೈಟಲ್​ ಲಾಂಚ್​

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’