AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಸಿನಿಮಾದ ಪೋಸ್ಟರ್​ ಕದ್ದ ಬಾಲಿವುಡ್; ಸೋಶಿಯಲ್​ ಮೀಡಿಯಾದಲ್ಲಿ ಟ್ರೋಲ್​

‘ವಿಕ್ರಾಂತ್ ರೋಣ’ ಚಿತ್ರಕ್ಕಾಗಿ ಸುದೀಪ್​ ಭಿನ್ನ ಅವತಾರ ತಾಳಿದ್ದಾರೆ. ‘ರಂಗಿತರಂಗ’ ಖ್ಯಾತಿಯ ನಿರ್ದೇಶಕ ಅನೂಪ್​ ಭಂಡಾರಿ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಈ ಕಾರಣಕ್ಕೆ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ.

ಸುದೀಪ್​ ನಟನೆಯ 'ವಿಕ್ರಾಂತ್​ ರೋಣ’ ಸಿನಿಮಾದ ಪೋಸ್ಟರ್​ ಕದ್ದ ಬಾಲಿವುಡ್; ಸೋಶಿಯಲ್​ ಮೀಡಿಯಾದಲ್ಲಿ ಟ್ರೋಲ್​
ಸುದೀಪ್​ ನಟನೆಯ ವಿಕ್ರಾಂತ್​ ರೋಣ ಸಿನಿಮಾದ ಪೋಸ್ಟರ್​ ಕದ್ದ ಬಾಲಿವುಡ್; ಸೋಶಿಯಲ್​ ಮೀಡಿಯಾದಲ್ಲಿ ಟ್ರೋಲ್​
ರಾಜೇಶ್ ದುಗ್ಗುಮನೆ
|

Updated on:Jul 09, 2021 | 7:01 PM

Share

ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಕೇವಲ ಸ್ಯಾಂಡಲ್​ವುಡ್​ಗೆ ಸೀಮಿತವಾಗದೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ರಿಲೀಸ್​ ಆಗುತ್ತಿದೆ. ಈ ಮಧ್ಯೆ, ಬಾಲಿವುಡ್​ ಮಂದಿ ಈ​ ಸಿನಿಮಾದ ಪೋಸ್ಟರ್​ ಕಾಪಿ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ.

‘ವಿಕ್ರಾಂತ್ ರೋಣ’ ಚಿತ್ರಕ್ಕಾಗಿ ಸುದೀಪ್​ ಭಿನ್ನ ಅವತಾರ ತಾಳಿದ್ದಾರೆ. ‘ರಂಗಿತರಂಗ’ ಖ್ಯಾತಿಯ ನಿರ್ದೇಶಕ ಅನೂಪ್​ ಭಂಡಾರಿ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಈ ಕಾರಣಕ್ಕೆ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಕೆಲ ತಿಂಗಳ ಹಿಂದೆ ರಿಲೀಸ್​ ಆಗಿದ್ದ ಸಿನಿಮಾ ಪೋಸ್ಟರ್​ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಈಗ ಈ ಪೋಸ್ಟರ್​ಅನ್ನು ಕಾಪಿ ಮಾಡುವ ಕೆಲಸವನ್ನು ಬಾಲಿವುಡ್ ಮಂದಿ ಮಾಡಿದ್ದಾರೆ.

ಪವನ್​ ಕೃಪಲಾನಿ ನಿರ್ದೇಶನ ಮಾಡಿರುವ ಹಿಂದಿಯ ‘ಭೂತ್​ ಪೊಲೀಸ್​’ ತಂಡ ನಿತ್ಯ ಹೊಸ ಪೋಸ್ಟರ್​ಗಳನ್ನು ರಿಲೀಸ್ ಮಾಡುತ್ತಿದೆ. ಇತ್ತೀಚೆಗೆ ಬಿಡುಗಡೆಯಾಗಿದ್ದ ಸೈಫ್​ ಫಸ್ಟ್​ ಲುಕ್​ ವಿವಾದಕ್ಕೆ ತುತ್ತಾಗಿತ್ತು. ಹಿಂದೂ ಸಂತರನ್ನು ಬಳಕೆ ಮಾಡಿಕೊಂಡಿದ್ದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಈಗ ಚಿತ್ರದ ಯಾಮಿ ಗೌತಮ್​ ಹಾಗೂ ಜಾಕ್ವಲೀನ್​ ಫರ್ನಾಂಡೀಸ್ ಲುಕ್​ ಅನಾವರಣಗೊಂಡಿದೆ. ‘ವಿಕ್ರಾಂತ್ ರೋಣ’ ಚಿತ್ರದ ಪೋಸ್ಟರ್​ಗೂ ಇದಕ್ಕೂ ಸಾಮ್ಯತೆ ಇದೆ.

‘ವಿಕ್ರಾಂತ್ ರೋಣ’ ಸಿನಿಮಾದ ಪೋಸ್ಟರ್​ನಲ್ಲಿ ಸುದೀಪ್​ ಗುಹೆಯ ಬಳಿ ಬಲಗೈನಲ್ಲಿ ಪಂಜು ಹಾಗೂ ಎಡಗೈನಲ್ಲಿ ಛಾಟಿ ಹಿಡಿದು ನಿಂತಿದ್ದಾರೆ. ಯಾಮಿ ಗೌತಮ್​ ಲುಕ್​ನಲ್ಲಿ ಛಾಟಿ ಒಂದನ್ನು ಬಿಟ್ಟು ಉಳಿದೆಲ್ಲವೂ ಒಂದೇ ತೆರನಾಗಿದೆ. ಇನ್ನು, ಜಾಕ್ವಲೀನ್​ ಫರ್ನಾಂಡೀಸ್ ಪೋಸ್ಟರ್​ನಲ್ಲಿ ಕೈಯಲ್ಲಿ ಹಿಡಿದಿರುವ ಛಾಟಿ ವಿಕ್ರಾಂತ್​ ರೋಣ ಚಿತ್ರದಲ್ಲಿ ಬಳಕೆಯಾದ ಛಾಟಿ ರೀತಿಯಲ್ಲೇ ಇದೆ.

ಈ ವಿಚಾರದ ಬಗ್ಗೆ ಈಗ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಅನೇಕರು ಬಾಲಿವುಡ್​ ಮಂದಿ ನಮ್ಮ ಪೋಸ್ಟರ್​ ಕಾಪಿ ಮಾಡಿದ್ದಾರೆ ಎನ್ನುತ್ತಿದ್ದಾರೆ. ಇನ್ನೂ ಕೆಲವರು, ಬಾಲಿವುಡ್​ನವರು ಸ್ಯಾಂಡಲ್​​ವುಡ್​ನವರನ್ನು ಅನುಸರಿಸುವಂತಾಯಿತು ಎಂದು ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ಶಾಲಿನಿ ಮಂಜುನಾಥ್​ ಮತ್ತು ಅಲಂಕಾರ್ ಪಾಂಡಿಯನ್​ ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಚಿತ್ರ ಮೂಡಿಬರುತ್ತಿದೆ. ವಿಲಿಯಮ್​ ಡೇವಿಡ್​ ಛಾಯಾಗ್ರಹಣ, ಅಜನೀಶ್​ ಲೋಕನಾಥ್​ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಈಗಾಗಲೇ ಬಿಡುಗಡೆ ಆಗಿರುವ ಪೋಸ್ಟರ್​ ಮತ್ತು ಟೀಸರ್​ಗಳು ಸಿಕ್ಕಾಪಟ್ಟೆ ಕೌತುಕ ಮೂಡಿಸಿವೆ. ಸುದೀಪ್​ ಜೊತೆ ನೀತಾ ಅಶೋಕ್​, ನಿರೂಪ್​ ಭಂಡಾರಿ ಮುಂತಾದವರು ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ.

‘ಭೂತ್​ ಪೊಲೀಸ್​’ ಚಿತ್ರದಲ್ಲಿ ಅರ್ಜುನ್​ ಕಪೂರ್​, ಜಾಕ್ವಲೀನ್​ ಫರ್ನಾಂಡೀಸ್​, ಯಾಮಿ ಗೌತಮ್​ ಮುಂತಾದವರು ನಟಿಸುತ್ತಿದ್ದಾರೆ.

ಇದನ್ನೂ ಓದಿ: ಮತ್ತೆ ಹಿಂದೂಗಳ ಭಾವನೆಗೆ ಧಕ್ಕೆ ತಂದ ಸೈಫ್​ ಅಲಿ ಖಾನ್​; ಈ ಪೋಸ್ಟರ್​ನಲ್ಲಿ ಇರುವ ವಿವಾದ ಏನು?

‘ವಿಕ್ರಾಂತ್​ ರೋಣ’ ಬಜೆಟ್​ ಎಷ್ಟು? ನಂಬರ್​ ಹೇಳುವ ಬದಲು ನಿರ್ದೇಶಕರು ಹೇಳಿದ್ದೇ ಬೇರೆ​

Published On - 6:59 pm, Fri, 9 July 21

Follow Us
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್