AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಆಸ್ಪತ್ರೆಯಲ್ಲಿ ಡ್ಯಾನ್ಸ್​ ಮಾಡಿದ ನಟಿ ಹರ್ಷಿಕ ಪೂಣಚ್ಚ, ನಟ ಭುವನ್ ಪೊನ್ನಣ್ಣ; ರೋಗಿಗಳು ಫುಲ್​ ಖುಷ್

Harshika Poonacha - Bhuvan Ponnanna: ಕೊವಿಡ್​ ಬಂದ ನಂತರದಲ್ಲಿ ಅನೇಕರು ಆಸ್ಪತ್ರೆ ಸೇರುತ್ತಾರೆ. ಅಲ್ಲಿಗೆ ತೆರಳಿದ ನಂತರದಲ್ಲಿ ಕೆಲವರು ಭಯಕ್ಕೊಳಗಾಗುತ್ತಾರೆ. ವೈರಸ್​ ಅಂಟಿದವ ಆತ್ಮಸ್ಥೈರ್ಯವನ್ನು ಮತ್ತಷ್ಟು ಕುಗ್ಗಿಸುತ್ತದೆ.

ಕೊವಿಡ್​ ಆಸ್ಪತ್ರೆಯಲ್ಲಿ ಡ್ಯಾನ್ಸ್​ ಮಾಡಿದ ನಟಿ ಹರ್ಷಿಕ ಪೂಣಚ್ಚ, ನಟ ಭುವನ್ ಪೊನ್ನಣ್ಣ; ರೋಗಿಗಳು ಫುಲ್​ ಖುಷ್
ಕೊವಿಡ್​ ಆಸ್ಪತ್ರೆಯಲ್ಲಿ ಭುವನ್​-ಹರ್ಷಿಕಾ
ರಾಜೇಶ್ ದುಗ್ಗುಮನೆ
| Edited By: |

Updated on:May 31, 2021 | 8:01 PM

Share

ಕೊವಿಡ್​ ಹಬ್ಬುತ್ತಿರುವ ವೇಗ ಕಂಡು ಅನೇಕರಿಗೆ ಭಯ ಆರಂಭವಾಗಿದೆ. ಇನ್ನು, ಕೊವಿಡ್​ ಎರಡನೇ ಅಲೆಯಿಂದ ಮೃತಪಡುವವರ ಸಂಖ್ಯೆ ಕೂಡ ಅಧಿಕವಾಗುತ್ತಿದ್ದು, ಜನರ ಆತಂಕ ಮತ್ತಷ್ಟು ಹೆಚ್ಚಾಗಿದೆ. ಇನ್ನು, ಕೊವಿಡ್​ ಬಂದು ಆಸ್ಪತ್ರೆ ಸೇರಿದರೆ ನರಕಯಾತನೆ ಅನುಭವಿಸಬೇಕಾಗುತ್ತದೆ ಎಂಬುದು ಅನೇಕರ ನಂಬಿಕೆ. ಕೊವಿಡ್​ ಪಾಸಿಟಿವ್​ ಬಂದು ಆಸ್ಪತ್ರೆ ಸೇರಿದ ನಂತರದಲ್ಲಿ ಅನೇಕರು ಜೀವನದ ಮೇಲೆ ಉತ್ಸಾಹವನ್ನೇ ಕಳೆದುಕೊಂಡು ಬಿಡುತ್ತಾರೆ. ಈಗ ನಟಿ ಹರ್ಷಿಕಾ ಪೂಣಚ್ಚ, ನಟ ಭುವನ್ ಪೊನ್ನಣ್ಣ ಕೊವಿಡ್ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳನ್ನು ರಂಜಿಸಿದ್ದಾರೆ. ಈ ಮೂಲಕ ಮತ್ತೆ ಅವರಲ್ಲಿ ಜೀವನೋತ್ಸಾಹ ತುಂಬಿದ್ದಾರೆ.

ಕೊವಿಡ್​ ಬಂದ ನಂತರದಲ್ಲಿ ಅನೇಕರು ಆಸ್ಪತ್ರೆ ಸೇರುತ್ತಾರೆ. ಅಲ್ಲಿಗೆ ತೆರಳಿದ ನಂತರದಲ್ಲಿ ಕೆಲವರು ಭಯಕ್ಕೊಳಗಾಗುತ್ತಾರೆ. ವೈರಸ್​ ಅಂಟಿದವರ ಆತ್ಮಸ್ಥೈರ್ಯವನ್ನು ಮತ್ತಷ್ಟು ಕುಗ್ಗಿಸುತ್ತದೆ. ಹೀಗಾಗಬಾರದು ಎನ್ನುವ ಉದ್ದೇಶದಿಂದ ಮಡಿಕೇರಿ ಸರ್ಕಾರಿ ಆಸ್ಪತ್ರೆಯ ಕೊರೊನ ವಾರ್ಡ್​​ಗಳಿಗೆ ಭೇಟಿ ನೀಡಿದ ಹರ್ಷಿಕ ಪೂಣಚ್ಚ, ನಟ ಭುವನ್ ಪೊನ್ನಣ್ಣ ರೋಗಿಗಳಿಗೆ ಧೈರ್ಯ ತುಂಬಿದ್ದಾರೆ.

ಕನ್ನಡದ ಹಾಡಿಗೆ ಹರ್ಷಿಕಾ ಹಾಗೂ ಭುವನ್​ ಹೆಜ್ಜೆ ಹಾಕಿದ್ದಾರೆ. ಈ ಮೂಲಕ ರೋಗಿಗಳಿಗೆ ಮನರಂಜನೆ ನೀಡಿದ್ದಾರೆ. ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. ಅಲ್ಲದೆ, ಇಬ್ಬರ ಕಾರ್ಯಕ್ಕೆ ಅನೇಕ ಕಡೆಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಕೊರೊನಾ ವೈರಸ್​ ಹೆಚ್ಚುತ್ತಿರುವ ಮಧ್ಯೆಯೇ ಅನೇಕ ಸೆಲೆಬ್ರಿಟಿಗಳು ಜನಸಾಮಾನ್ಯರ ಸೇವೆಗೆ ನಿಂತಿದ್ದಾರೆ. ಕೆಲವರು ಮನೆಯಿಂದ ಹೊರ ಬಂದು ಸೇವೆ ನೀಡುತ್ತಿದ್ದರೆ, ಇನ್ನೂ ಕೆಲವರು ಮನೆಯಲ್ಲಿದ್ದುಕೊಂಡೇ ಆರ್ಥಿಕ ಸಹಾಯ ನೀಡುತ್ತಿದ್ದಾರೆ. ನಟ ಭುವನ್​​ ಪೊನ್ನಣ್ಣ ಹಾಗೂ ನಟಿ ಹರ್ಷಿಕಾ ಪೂಣಚ್ಚ ಕೂಡ ಕೊವಿಡ್​ ರೋಗಿಗಳ ಸಹಾಯಕ್ಕೆ ನಿಂತಿದ್ದಾರೆ. ಹೆಲ್ಪ್​​ಲೈನ್​ ಆರಂಭಿಸಿ ಎಲ್ಲರಿಗೂ ಸಹಾಯ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ಕಷ್ಟದಲ್ಲಿರುವ ಹಿರಿಯ ನಟರಿಗೆ ಭುವನ್​ ಸಹಾಯ ಮಾಡಿದ್ದರು.

ಇದನ್ನೂ ಓದಿ: ಭುವನ್​ ಪೊನ್ನಣ್ಣ​ ನಿಜವಾದ ಬಿಗ್​ ಬಾಸ್​; ಕೊವಿಡ್​ ಸಂಕಷ್ಟದಲ್ಲಿ ಮಾಡಿದ ಸಹಾಯ ನೆನೆದು ಭಾವುಕರಾದ ಹಿರಿಯ ನಟ

Published On - 6:58 pm, Mon, 31 May 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ