Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಆಸ್ಪತ್ರೆಯಲ್ಲಿ ಡ್ಯಾನ್ಸ್​ ಮಾಡಿದ ನಟಿ ಹರ್ಷಿಕ ಪೂಣಚ್ಚ, ನಟ ಭುವನ್ ಪೊನ್ನಣ್ಣ; ರೋಗಿಗಳು ಫುಲ್​ ಖುಷ್

Harshika Poonacha - Bhuvan Ponnanna: ಕೊವಿಡ್​ ಬಂದ ನಂತರದಲ್ಲಿ ಅನೇಕರು ಆಸ್ಪತ್ರೆ ಸೇರುತ್ತಾರೆ. ಅಲ್ಲಿಗೆ ತೆರಳಿದ ನಂತರದಲ್ಲಿ ಕೆಲವರು ಭಯಕ್ಕೊಳಗಾಗುತ್ತಾರೆ. ವೈರಸ್​ ಅಂಟಿದವ ಆತ್ಮಸ್ಥೈರ್ಯವನ್ನು ಮತ್ತಷ್ಟು ಕುಗ್ಗಿಸುತ್ತದೆ.

ಕೊವಿಡ್​ ಆಸ್ಪತ್ರೆಯಲ್ಲಿ ಡ್ಯಾನ್ಸ್​ ಮಾಡಿದ ನಟಿ ಹರ್ಷಿಕ ಪೂಣಚ್ಚ, ನಟ ಭುವನ್ ಪೊನ್ನಣ್ಣ; ರೋಗಿಗಳು ಫುಲ್​ ಖುಷ್
ಕೊವಿಡ್​ ಆಸ್ಪತ್ರೆಯಲ್ಲಿ ಭುವನ್​-ಹರ್ಷಿಕಾ
Follow us
ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:May 31, 2021 | 8:01 PM

ಕೊವಿಡ್​ ಹಬ್ಬುತ್ತಿರುವ ವೇಗ ಕಂಡು ಅನೇಕರಿಗೆ ಭಯ ಆರಂಭವಾಗಿದೆ. ಇನ್ನು, ಕೊವಿಡ್​ ಎರಡನೇ ಅಲೆಯಿಂದ ಮೃತಪಡುವವರ ಸಂಖ್ಯೆ ಕೂಡ ಅಧಿಕವಾಗುತ್ತಿದ್ದು, ಜನರ ಆತಂಕ ಮತ್ತಷ್ಟು ಹೆಚ್ಚಾಗಿದೆ. ಇನ್ನು, ಕೊವಿಡ್​ ಬಂದು ಆಸ್ಪತ್ರೆ ಸೇರಿದರೆ ನರಕಯಾತನೆ ಅನುಭವಿಸಬೇಕಾಗುತ್ತದೆ ಎಂಬುದು ಅನೇಕರ ನಂಬಿಕೆ. ಕೊವಿಡ್​ ಪಾಸಿಟಿವ್​ ಬಂದು ಆಸ್ಪತ್ರೆ ಸೇರಿದ ನಂತರದಲ್ಲಿ ಅನೇಕರು ಜೀವನದ ಮೇಲೆ ಉತ್ಸಾಹವನ್ನೇ ಕಳೆದುಕೊಂಡು ಬಿಡುತ್ತಾರೆ. ಈಗ ನಟಿ ಹರ್ಷಿಕಾ ಪೂಣಚ್ಚ, ನಟ ಭುವನ್ ಪೊನ್ನಣ್ಣ ಕೊವಿಡ್ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳನ್ನು ರಂಜಿಸಿದ್ದಾರೆ. ಈ ಮೂಲಕ ಮತ್ತೆ ಅವರಲ್ಲಿ ಜೀವನೋತ್ಸಾಹ ತುಂಬಿದ್ದಾರೆ.

ಕೊವಿಡ್​ ಬಂದ ನಂತರದಲ್ಲಿ ಅನೇಕರು ಆಸ್ಪತ್ರೆ ಸೇರುತ್ತಾರೆ. ಅಲ್ಲಿಗೆ ತೆರಳಿದ ನಂತರದಲ್ಲಿ ಕೆಲವರು ಭಯಕ್ಕೊಳಗಾಗುತ್ತಾರೆ. ವೈರಸ್​ ಅಂಟಿದವರ ಆತ್ಮಸ್ಥೈರ್ಯವನ್ನು ಮತ್ತಷ್ಟು ಕುಗ್ಗಿಸುತ್ತದೆ. ಹೀಗಾಗಬಾರದು ಎನ್ನುವ ಉದ್ದೇಶದಿಂದ ಮಡಿಕೇರಿ ಸರ್ಕಾರಿ ಆಸ್ಪತ್ರೆಯ ಕೊರೊನ ವಾರ್ಡ್​​ಗಳಿಗೆ ಭೇಟಿ ನೀಡಿದ ಹರ್ಷಿಕ ಪೂಣಚ್ಚ, ನಟ ಭುವನ್ ಪೊನ್ನಣ್ಣ ರೋಗಿಗಳಿಗೆ ಧೈರ್ಯ ತುಂಬಿದ್ದಾರೆ.

ಕನ್ನಡದ ಹಾಡಿಗೆ ಹರ್ಷಿಕಾ ಹಾಗೂ ಭುವನ್​ ಹೆಜ್ಜೆ ಹಾಕಿದ್ದಾರೆ. ಈ ಮೂಲಕ ರೋಗಿಗಳಿಗೆ ಮನರಂಜನೆ ನೀಡಿದ್ದಾರೆ. ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. ಅಲ್ಲದೆ, ಇಬ್ಬರ ಕಾರ್ಯಕ್ಕೆ ಅನೇಕ ಕಡೆಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಕೊರೊನಾ ವೈರಸ್​ ಹೆಚ್ಚುತ್ತಿರುವ ಮಧ್ಯೆಯೇ ಅನೇಕ ಸೆಲೆಬ್ರಿಟಿಗಳು ಜನಸಾಮಾನ್ಯರ ಸೇವೆಗೆ ನಿಂತಿದ್ದಾರೆ. ಕೆಲವರು ಮನೆಯಿಂದ ಹೊರ ಬಂದು ಸೇವೆ ನೀಡುತ್ತಿದ್ದರೆ, ಇನ್ನೂ ಕೆಲವರು ಮನೆಯಲ್ಲಿದ್ದುಕೊಂಡೇ ಆರ್ಥಿಕ ಸಹಾಯ ನೀಡುತ್ತಿದ್ದಾರೆ. ನಟ ಭುವನ್​​ ಪೊನ್ನಣ್ಣ ಹಾಗೂ ನಟಿ ಹರ್ಷಿಕಾ ಪೂಣಚ್ಚ ಕೂಡ ಕೊವಿಡ್​ ರೋಗಿಗಳ ಸಹಾಯಕ್ಕೆ ನಿಂತಿದ್ದಾರೆ. ಹೆಲ್ಪ್​​ಲೈನ್​ ಆರಂಭಿಸಿ ಎಲ್ಲರಿಗೂ ಸಹಾಯ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ಕಷ್ಟದಲ್ಲಿರುವ ಹಿರಿಯ ನಟರಿಗೆ ಭುವನ್​ ಸಹಾಯ ಮಾಡಿದ್ದರು.

ಇದನ್ನೂ ಓದಿ: ಭುವನ್​ ಪೊನ್ನಣ್ಣ​ ನಿಜವಾದ ಬಿಗ್​ ಬಾಸ್​; ಕೊವಿಡ್​ ಸಂಕಷ್ಟದಲ್ಲಿ ಮಾಡಿದ ಸಹಾಯ ನೆನೆದು ಭಾವುಕರಾದ ಹಿರಿಯ ನಟ

Published On - 6:58 pm, Mon, 31 May 21

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ