AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭುವನ್​ ಪೊನ್ನಣ್ಣ​ ನಿಜವಾದ ಬಿಗ್​ ಬಾಸ್​; ಕೊವಿಡ್​ ಸಂಕಷ್ಟದಲ್ಲಿ ಮಾಡಿದ ಸಹಾಯ ನೆನೆದು ಭಾವುಕರಾದ ಹಿರಿಯ ನಟ

ಹಿರಿಯ ನಟ ಅಮರನಾಥ್​ ಆರಾಧ್ಯ ಅವರಿಗೆ ಭುವನ್​ ಫುಡ್​ಕಿಟ್​ ಹಾಗೂ ಮೆಡಿಸಿನ್​ ನೀಡಿದ್ದಾರೆ. ಈ ವಿಚಾರದ ಬಗ್ಗೆ ಅಮರನಾಥ್​ ಖುಷಿ ವ್ಯಕ್ತಪಡಿಸಿದ್ದಾರೆ.

ಭುವನ್​ ಪೊನ್ನಣ್ಣ​ ನಿಜವಾದ ಬಿಗ್​ ಬಾಸ್​; ಕೊವಿಡ್​ ಸಂಕಷ್ಟದಲ್ಲಿ ಮಾಡಿದ ಸಹಾಯ ನೆನೆದು ಭಾವುಕರಾದ ಹಿರಿಯ ನಟ
ಭುವನ್​ ಪೊನ್ನಣ್ಣ-ಅರವಿಂದ್​ ಆರಾಧ್ಯ
ರಾಜೇಶ್ ದುಗ್ಗುಮನೆ
|

Updated on: May 16, 2021 | 7:23 PM

Share

ಕೊರೊನಾ ವೈರಸ್​ ಹೆಚ್ಚುತ್ತಿರುವ ಮಧ್ಯೆಯೇ ಅನೇಕ ಸೆಲೆಬ್ರಿಟಿಗಳು ಜನಸಾಮಾನ್ಯರ ಸೇವೆಗೆ ನಿಂತಿದ್ದಾರೆ. ಕೆಲವರು ಮನೆಯಿಂದ ಹೊರ ಬಂದು ಸೇವೆ ನೀಡುತ್ತಿದ್ದರೆ, ಇನ್ನೂ ಕೆಲವರು ಮನೆಯಲ್ಲಿದ್ದುಕೊಂಡೇ ಆರ್ಥಿಕ ಸಹಾಯ ನೀಡುತ್ತಿದ್ದಾರೆ. ನಟ ಭುವನ್​​ ಪೊನ್ನಣ್ಣ ಹಾಗೂ ನಟಿ ಹರ್ಷಿಕಾ ಪೂಣಚ್ಚ ಕೂಡ ಕೊವಿಡ್​ ರೋಗಿಗಳ ಸಹಾಯಕ್ಕೆ ನಿಂತಿದ್ದಾರೆ. ಹೆಲ್ಪ್​​ಲೈನ್​ ಆರಂಭಿಸಿ ಎಲ್ಲರಿಗೂ ಸಹಾಯ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ಕಷ್ಟದಲ್ಲಿರುವ ಹಿರಿಯ ನಟರಿಗೆ ಭುವನ್​ ಸಹಾಯ ಮಾಡುತ್ತಿದ್ದಾರೆ.

ಹಿರಿಯ ನಟ ಅಮರನಾಥ್​ ಆರಾಧ್ಯ ಅವರಿಗೆ ಭುವನ್​ ಫುಡ್​ಕಿಟ್​ ಹಾಗೂ ಮೆಡಿಸಿನ್​ ನೀಡಿದ್ದಾರೆ. ಈ ವಿಚಾರದ ಬಗ್ಗೆ ಅಮರನಾಥ್​ ಖುಷಿ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ಹಿರಿಯ ನಟರನ್ನು ನೆನಪು ಮಾಡಿಕೊಂಡು ಅವರಿಗೆ ಸಹಾಯ ಮಾಡುತ್ತಿರುವ ಬಗ್ಗೆ ಅಮರನಾಥ್​ ಧನ್ಯತಾಭಾವ ವ್ಯಕ್ತಪಡಿಸಿದ್ದಾರೆ.

‘ನಾನು ಅಮರನಾಥ್​ ಆರಾಧ್ಯ. ಕೊವಿಡ್​ ಸಮಯದಲ್ಲಿ ನಮ್ಮಂಥ ಬಹಳಷ್ಟು ಹಿರಿಯ ನಟರು ತೊಂದರೆಗೆ ಸಿಲುಕಿಕೊಂಡಿದ್ದೇವೆ. ಶೂಟಿಂಗ್ ಇಲ್ಲದೆ ಆರ್ಥಿಕ ಪರಿಸ್ಥಿತಿ ಕಷ್ಟವಾಗಿದೆ. ಇಂಥ ಸಮಯದಲ್ಲಿ ಯಾರೂ ಸಹಾಯಕ್ಕೆ ಬರುವುದಿಲ್ಲ. ಚಿತ್ರರಂಗದಲ್ಲಿ ನಾನು 48 ವರ್ಷ ಸೇವೆ ಸಲ್ಲಿಸಿದ್ದೇನೆ. ನಮ್ಮ ಚಲನಚಿತ್ರರಂಗದಲ್ಲಿ ಕೊಡುಗೈ ದಾನಿ ಎಂದು ಹೆಸರು ಮಾಡಿದ್ದು ಅಂಬರೀಶ್​ ಒಬ್ಬರೇ ಎಂದುಕೊಂಡಿದ್ದೆ. ಅವರನ್ನು ಬಿಟ್ಟರೆ ಭುವನ್ ಮುಂದಿನ ಸ್ಥಾನದಲ್ಲಿ ನಿಲ್ಲುತ್ತಾರೆ’ ಎಂದರು ಅವರು​.

‘ಹಿರಿಯ ನಟರಿಗೆ ಸಮಸ್ಯೆ ಆಗುತ್ತಿದೆ. ಸಹಾಯ ಮಾಡಬೇಕು ಎಂದು ಕೋರಿದೆ. ಅವರು ಏನುಬೇಕು ಹೇಳಿ ಎಂದರು. ಅವರು ಕೇಳಿದ್ದು ಇಷ್ಟೇ. ಔಷಧ ಬೇಕಾ, ಫುಡ್​ಕಿಟ್​ ಬೇಕಾ? ಏನುಬೇಕು ಕೇಳಿ ಎಂದರು. ಫುಡ್​ ಕಿಟ್​, ಮೆಡಿಸಿನ್​ ಕೊಟ್ಟರು. ಭುವನ್​ ನಿಜಕ್ಕೂ ಬಿಗ್​ ಬಾಸ್​. ಅವರ ಮಾಡಿದ್ದು ಸಹಾಯ ಕಣ್ಣಂಚಲಿ ನೀರು ತರಿಸಿತು. ನಾನು ಅವರಿಗೆ ಆಭಾರಿಯಾಗಿದ್ದೇನೆ’ ಎಂದರು ಅಮರನಾಥ್​ ಆರಾಧ್ಯ.

ಇದನ್ನೂ ಓದಿ: ಕೊರೊನಾದಿಂದ ಉಂಟಾದ ಭೀಕರ ಸ್ಥಿತಿ ಹಾಗೂ ಸರ್ಕಾರದ ನಿಷ್ಕಾಳಜಿಯನ್ನು ಇಂಚಿಂಚು ವಿವರಿಸಿದ ನಟ ಭುವನ್ ಪೊನ್ನಣ್ಣ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ