ಕೊರೊನಾದಿಂದ ಉಂಟಾದ ಭೀಕರ ಸ್ಥಿತಿ ಹಾಗೂ ಸರ್ಕಾರದ ನಿಷ್ಕಾಳಜಿಯನ್ನು ಇಂಚಿಂಚು ವಿವರಿಸಿದ ನಟ ಭುವನ್ ಪೊನ್ನಣ್ಣ

ನಟಿ ಹರ್ಷಿಕಾ ಪೂಣಚ್ಚ, ಭುವನ್​ ಪೊನ್ನಣ್ಣ ಮೊದಲಾದವರು ಸೇರಿ ಕೊವಿಡ್ ಹೆಲ್ಪ್​ಲೈನ್​ ಒಂದನ್ನು ಆರಂಭಿಸಿದ್ದಾರೆ. ಇದಕ್ಕೆ ಕಳೆದ ಮೂರ್ನಾಲ್ಕು ದಿನಗಳಿಂದ ಸಾಕಷ್ಟು ಕರೆಗಳು ಬರುತ್ತಿವೆಯಂತೆ.

ಕೊರೊನಾದಿಂದ ಉಂಟಾದ ಭೀಕರ ಸ್ಥಿತಿ ಹಾಗೂ ಸರ್ಕಾರದ ನಿಷ್ಕಾಳಜಿಯನ್ನು ಇಂಚಿಂಚು ವಿವರಿಸಿದ ನಟ ಭುವನ್ ಪೊನ್ನಣ್ಣ
ಭುವನ್​ ಪೊನ್ನಣ್ಣ

Updated on: May 01, 2021 | 7:00 PM

ಕೊರೊನಾ ವೈರಸ್​ ಹೆಚ್ಚುತ್ತಿರುವ ಮಧ್ಯೆಯೇ ಅನೇಕ ಸೆಲೆಬ್ರಿಟಿಗಳು ಜನ ಸಾಮಾನ್ಯರ ಸೇವೆಗೆ ನಿಂತಿದ್ದಾರೆ. ಕೆಲವರು ಮನೆಯಿಂದ ಹೊರ ಬಂದು ಸೇವೆ ನೀಡುತ್ತಿದ್ದರೆ, ಇನ್ನೂ ಕೆಲವರು ಮನೆಯಲ್ಲಿದ್ದುಕೊಂಡೇ ಆರ್ಥಿಕ ಸಹಾಯ ನೀಡುತ್ತಿದ್ದಾರೆ. ನಟ ಭುವನ್​​ ಪೊನ್ನಣ್ಣ ಕೂಡ ಕೊವಿಡ್​ ರೋಗಿಗಳ ಸಹಾಯಕ್ಕೆ ನಿಂತಿದ್ದಾರೆ. ಕೊರೊನಾ ಭೀಕರ ಸ್ಥಿತಿ ಹಾಗೂ ಸರ್ಕಾರದ ನಿಷ್ಕಾಳಜಿ ಬಗ್ಗೆ ಅವರು ಇಂಚಿಂಚು ವಿವರಿಸಿದ್ದಾರೆ.

ನಟಿ ಹರ್ಷಿಕಾ ಪೂಣಚ್ಚ, ಭುವನ್​ ಪೊನ್ನಣ್ಣ ಮೊದಲಾದವರು ಸೇರಿ ಕೊವಿಡ್ ಹೆಲ್ಪ್​ಲೈನ್​ ಒಂದನ್ನು ಆರಂಭಿಸಿದ್ದಾರೆ. ಇದಕ್ಕೆ ಕಳೆದ ಮೂರ್ನಾಲ್ಕು ದಿನಗಳಿಂದ ಸಾಕಷ್ಟು ಕರೆಗಳು ಬರುತ್ತಿವೆಯಂತೆ. ಈ ಬಗ್ಗೆ ಮಾತನಾಡಿರುವ ಅವರು, ನಾಲ್ಕು ದಿನಗಳಲ್ಲಿ ಸುಮಾರು 9 ಸಾವಿರಕ್ಕೂ ಅಧಿಕ ಜನರು ಸಹಾಯ ಕೇಳಿದ್ದಾರೆ. ಶೇ. 90 ಜನರಿಗೆ ಬೆಂಗಳೂರಲ್ಲಿ ಐಸಿಯು ಬೆಡ್​ ಸಿಗುತ್ತಿಲ್ಲ. ಬೆಡ್​ ಸಿಗುತ್ತಿಲ್ಲ ಅಣ್ಣಾ ಎಂದು ಹೇಳುತ್ತಲೇ ಹುಡುಗನೊಬ್ಬ ಕೊನೆಯುಸಿರೆಳೆದ. ಇದಕ್ಕೆ ಯಾರು ಜವಾಬ್ದಾರಿ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಕೊರೊನಾ ರೋಗಿಗಳಿಗೆ ಸಹಾಯಕ್ಕೆ ಬರಲೆಂದು ಸರ್ಕಾರ ಸಾಕಷ್ಟು ಸಹಾಯವಾಣಿ ಸಂಖ್ಯೆ ಕೊಟ್ಟಿದೆ. ನಮ್ಮ ತಂಡ ಎಲ್ಲಾ ನಂಬರ್​​ಗಳಿಗೆ​ ಕರೆ ಮಾಡಿದೆ. ಆದರೆ, ಯಾರೂ ಕರೆ ಸ್ವೀಕರಿಸುತ್ತಿಲ್ಲ. ಏಕೆ ಹೀಗೆ ಎಂದು ಭುವನ್​ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ. ಇದರ ಜತೆಗೆ ಅವರು ಸರ್ಕಾರದ ಮುಂದೆ ಒಂದಷ್ಟು ಪ್ರಶ್ನೆಗಳನ್ನು ಇಟ್ಟಿದ್ದಾರೆ.

*ಜನರು ಸಾಯುತ್ತಾ ಇದ್ದರೂ ಕೂಡ ನಮ್ಮ ಜನ ಪ್ರತಿನಿಧಿಗಳು ಯಾವುದೇ ಮಾಹಿತಿಯನ್ನು ನೀಡುತ್ತಿಲ್ಲ ಏಕೆ?

*ಕೊರೊನಾ ಮೊದಲನೆ ಅಲೆ ಸಂದರ್ಭದಲ್ಲಿ 6 ಸಾವಿರ ಬೆಡ್​ ಹಾಕಿ ಕೊವಿಡ್​ ಸೆಂಟರ್​ ಸ್ಥಾಪಿಸಿದ್ದರು. ಈಗ ಬಡವರು ಸಾಯುತ್ತಾ ಇದಾರೆ. ಹೀಗಿದ್ದರೂ ಕೊವಿಡ್​ ಸೆಂಟರ್​ ಏಕೆ ತೆರೆದಿಲ್ಲ?

*ಜನರೇ ಪೆದ್ದರಾಗಬೇಡಿ. ಜನಪ್ರತಿನಿಧಿ ಬಳಿ ಸಹಾಯ ಬೇಕು ಎನ್ನಿ. ಸಹಾಯ ಮಾಡಲು ಆಗಲ್ಲ ಎಂದು ಅವರು ಹೇಳಿದರೆ ಮುಂದಿನ ಬಾರಿ ಎಲೆಕ್ಷನ್ ವೇಳೆ​ ಮನೆಗೆ ಬಂದು ವೋಟ್​ ಕೇಳಿದಾಗ ಬಯ್ದು ಕಳುಹಿಸಿ. ಜನರು ಏನನ್ನಾದರೂ ಮರೆಯಬಹುದು. ಆದರೆ, ಕುಟುಂಬದವರು ಮೃತಪಟ್ಟಿದ್ದಾರೆ ಎಂದರೆ ಅದನ್ನು ಮರೆಯಲ್ಲ.

*ರೆಮಿಡಿಸಿವಿರ್ ಇಂಜೆಕ್ಷನ್​ ಬ್ಲ್ಯಾಕ್​ ಮಾರ್ಕೆಟ್​ನಲ್ಲಿ 30 ಸಾವಿರ ರೂಪಾಯಿಗೆ ಮಾರಾಟ ಆಗುತ್ತಿದೆ. ಆಸ್ಪತ್ರೆಯಲ್ಲಿ ಈ ಇಂಜೆಕ್ಷನ್​ ಸಿಗುತ್ತಿಲ್ಲ. ಬಡವರ ಬಳಿ ಇಷ್ಟು ಹಣ ಎಲ್ಲಿಂದ ಬರಬೇಕು? ಇದಕ್ಕೆ ಸರ್ಕಾರ ಉತ್ತರ ನೀಡಬೇಕು.

ಇದನ್ನೂ ಓದಿ: ಖ್ಯಾತ ನಿರ್ದೇಶಕ-ಸಿನಿಮಾಟೋಗ್ರಫರ್ ಕೆ.ವಿ.ಆನಂದ್ ಅವರು ಕೊರೊನಾ ದಿಂದ ನಿಧನರಾಗಿದ್ದಾರೆ

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us