AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF 3: ‘ಕೆಜಿಎಫ್ ಚಾಪ್ಟರ್ 2’ ಕೊನೆಯಲ್ಲಿ ಬಿಗ್ ಸರ್ಪ್ರೈಸ್ ನೋಡಿ ಥ್ರಿಲ್ ಆದ ಅಭಿಮಾನಿಗಳು; ಟ್ರೆಂಡ್ ಆಯ್ತು ‘ಕೆಜಿಎಫ್ 3’

KGF Chapter 3 | KGF Chapter 2 | Prashanth Neel: ‘ಕೆಜಿಎಫ್ ಚಾಪ್ಟರ್ 2’ ಚಿತ್ರ ನೋಡಿದ ಜನರು ಕೊನೆಯ ಕ್ರೆಡಿಟ್ಸ್ ದೃಶ್ಯಗಳನ್ನು ನೋಡಲು ಮರೆಯಬೇಡಿ ಎಂದು ಮನವಿ ಮಾಡುತ್ತಿದ್ದಾರೆ. ಇದಕ್ಕೆ ಕಾರಣ, ಅಭಿಮಾನಿಗಳಿಗೆ ಚಿತ್ರತಂಡ ದೊಡ್ಡದೊಂದು ಸರ್ಪ್ರೈಸ್ ನೀಡಿದೆ. ಇದರ ಬೆನ್ನಲ್ಲೇ ‘ಕೆಜಿಎಫ್ 3’ ಟ್ವಿಟರ್​ನಲ್ಲಿ ಟ್ರೆಂಡ್ ಆಗಿದೆ.

KGF 3: ‘ಕೆಜಿಎಫ್ ಚಾಪ್ಟರ್ 2’ ಕೊನೆಯಲ್ಲಿ ಬಿಗ್ ಸರ್ಪ್ರೈಸ್ ನೋಡಿ ಥ್ರಿಲ್ ಆದ ಅಭಿಮಾನಿಗಳು; ಟ್ರೆಂಡ್ ಆಯ್ತು ‘ಕೆಜಿಎಫ್ 3’
ಯಶ್, ಪ್ರಶಾಂತ್ ನೀಲ್
TV9 Web
| Updated By: shivaprasad.hs|

Updated on:Apr 14, 2022 | 11:47 AM

Share

‘ಕೆಜಿಎಫ್ ಚಾಪ್ಟರ್ 2’ (KGF Chapter 2) ವಿಶ್ವಾದ್ಯಂತ ದೊಡ್ಡ ಮಟ್ಟದಲ್ಲಿ ರಿಲೀಸ್ ಆಗಿದೆ. ಚಿತ್ರ ನೋಡಿದ ಪ್ರೇಕ್ಷಕರು ಫಿದಾ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಕೆಜೆಎಫ್ ಟ್ರೆಂಡ್ ಆಗಿದೆ. ನಿರ್ದೇಶಕ ಪ್ರಶಾಂತ್ ನೀಲ್ ಕುಸುರಿತನಕ್ಕೆ, ಕತೆ ಹೇಳುವ ಶೈಲಿಗೆ ಜನರು ಶಹಬ್ಬಾಸ್​ಗಿರಿ ನೀಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅದ್ಭುತವಾದ ಕ್ಲೈಮ್ಯಾಕ್ಸ್​ಅನ್ನು ಕೆಜಿಎಫ್ 2 ಒಳಗೊಂಡಿದೆ ಎನ್ನುವ ಅಭಿಪ್ರಾಯಗಳನ್ನು ನೆಟ್ಟಿಗರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ವಿಶೇಷವೆಂದರೆ ಚಿತ್ರ ನೋಡಿದ ಜನರು ಕೊನೆಯ ಕ್ರೆಡಿಟ್ಸ್ ದೃಶ್ಯಗಳನ್ನು ನೋಡಲು ಮರೆಯಬೇಡಿ ಎಂದು ಮನವಿ ಮಾಡುತ್ತಿದ್ದಾರೆ. ಇದಕ್ಕೆ ಕಾರಣ, ಚಿತ್ರತಂಡ ಅಭಿಮಾನಿಗಳಿಗೆ ದೊಡ್ಡದೊಂದು ಸರ್ಪ್ರೈಸ್ ನೀಡಿದೆ. ಹೌದು, ಚಿತ್ರದ ಕೊನೆಯಲ್ಲಿ ‘ಕೆಜಿಎಫ್ 3’ಯ (KGF 3) ಮುನ್ಸೂಚನೆಯನ್ನು ನೀಡಲಾಗಿದೆ. ಇದನ್ನು ನೋಡಿದ ಅಭಿಮಾನಿಗಳಿಗೆ ದೊಡ್ಡ ಮಟ್ಟದಲ್ಲಿ ನಿರೀಕ್ಷೆ ಮೂಡಿದೆ. ಸದ್ಯ ಈ ದೃಶ್ಯಗಳನ್ನು ಅಭಿಮಾನಿಗಳು ಟ್ವಿಟರ್​ನಲ್ಲಿ ಹಂಚಿಕೊಳ್ಳುತ್ತಿದ್ದು, ಈಗಲೇ ನಿರೀಕ್ಷೆ ಹೆಚ್ಚಿಸಿದೆ ಎಂದು ಬರೆದುಕೊಂಡಿದ್ದಾರೆ.

‘ಕೆಜಿಎಫ್ 3’ ಬಗ್ಗೆ ನೆಟ್ಟಿಗರು ಹಂಚಿಕೊಂಡಿರುವ ಟ್ವೀಟ್​ಗಳು:

ಬಾಕ್ಸಾಫೀಸ್ ವಿಶ್ಲೇಶಕ ಹಾಗೂ ಸಿನಿಮಾ ವಿಮರ್ಶಕ ತರಣ್ ಆದರ್ಶ್ ಕೂಡ ಈ ಬಗ್ಗೆ ಟ್ವೀಟ್ ಹಂಚಿಕೊಂಡಿದ್ದಾರೆ. ‘ಕೆಜಿಎಫ್ 3’ ಬರಲಿದೆ ಎಂಬರ್ಥದಲ್ಲಿ ಅವರು ಟ್ವೀಟ್ ಮಾಡಿದ್ದಾರೆ.

‘ಕೆಜಿಎಫ್ 3’ ಬಗ್ಗೆ ಪ್ರಶಾಂತ್ ನೀಲ್ ಹೇಳಿದ್ದೇನು?

‘ಕೆಜಿಎಫ್’ ಒಂದು ಚಿತ್ರವಾಗಿ ಬರಬೇಕಿದ್ದದ್ದು ಎರಡು ಭಾಗಗಳಲ್ಲಿ ತಯಾರಾಗಿತ್ತು. ಇತ್ತೀಚೆಗೆ ಮುಂಬೈನಲ್ಲಿ ನಡೆದ ‘ಕೆಜಿಎಫ್ 2’ ಪ್ರಚಾರದ ಸಂದರ್ಭದಲ್ಲಿ ನಿರ್ದೇಶಕ ಪ್ರಶಾಂತ್ ನೀಲ್​ಗೆ ಮುಂದಿನ ಭಾಗದ ಬಗ್ಗೆ ಪ್ರಶ್ನೆ ಎದುರಾಗಿತ್ತು. ಆದರೆ ಈ ಬಗ್ಗೆ ಖಚಿತ ಉತ್ತರವನ್ನು ಅವರು ನೀಡಿರಲಿಲ್ಲ. ಆದರೆ ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಪ್ರಶಾಂತ್ ನೀಲ್ ಈ ಬಗ್ಗೆ ಮೌನಮುರಿದಿದ್ದರು.

‘ಕೆಜಿಎಫ್ 3’ ಬರಬೇಕೋ ಬೇಡವೋ ಎನ್ನುವುದು ‘ಕೆಜಿಎಫ್ 2’ ನೋಡಿದ ಪ್ರೇಕ್ಷಕರು ನಿರ್ಧರಿಸಬೇಕು. ಈ ಸಂದರ್ಭದಲ್ಲಿ ನಮ್ಮ ಗಮನ ಕೆಜಿಎಫ್ 2 ಗೆ ಎಂದಿದ್ದರು. ಈ ಮೂಲಕ ಅವರು ಈ ಬಗ್ಗೆ ಗೌಪ್ಯತೆ ಕಾಯ್ದುಕೊಂಡಿದ್ದರು. ಇದೀಗ ‘ಕೆಜಿಎಫ್ 2’ ಕೊನೆಯಲ್ಲಿ ಮುಂದಿನ ಭಾಗದ ಮುನ್ಸೂಚನೆ ಇದೆ. ಜತೆಗೆ ಅಭಿಮಾನಿಗಳೂ ಈ ಬಗ್ಗೆ ಕುತೂಹಲಗೊಂಡಿದ್ದು, ‘ಕೆಜಿಎಫ್ 3’ ಬರಬೇಕು ಎಂದು ಅಪೇಕ್ಷಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯಶ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್​ನಲ್ಲಿ ಮುಂದಿನ ಭಾಗ ಬರಬಹುದೇ? ಬಂದರೆ ಯಾವಾಗ? ಎನ್ನುವುದು ಅಭಿಮಾನಿಗಳಿಗೆ ಕುತೂಹಲ ಮೂಡಿಸಿದೆ.

ಚಿತ್ರ ನೋಡಿ ‘ಕೆಜಿಎಫ್ 3’ ಬಗ್ಗೆ ಹೇಳಿದ ಅಭಿಮಾನಿಗಳು:

ಇದನ್ನೂ ಓದಿ: KGF Chapter 2 Review: ಕೆಜಿಎಫ್​ ಚಾಪ್ಟರ್​ 2 ವಿಮರ್ಶೆ; ಪ್ರಶಾಂತ್ ನೀಲ್ ಕೈಚಳಕ, ಯಶ್ ಫ್ಯಾನ್ಸ್​ಗೆ ಧಮಾಕ

ಕೆಜಿಎಫ್ ತಾಲೂಕಿನಲ್ಲಿ ರಿಲೀಸ್ ಆಗದ ‘ಕೆಜಿಎಫ್ ಚಾಪ್ಟರ್ 2’- ಕಾರಣವೇನು? ರಾಜ್ಯದ ವಿವಿಧೆಡೆ ಬಿಡುಗಡೆ ಸಂಭ್ರಮ ಹೇಗಿದೆ?

Published On - 11:25 am, Thu, 14 April 22

ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ